Homeಕರ್ನಾಟಕಹಾಸನ: ವರದಕ್ಷಿಣೆ ಕಿರುಕುಳಕ್ಕೆ ಮದುವೆಯಾದ ಮೂರೇ ವಾರಕ್ಕೆ ಯುವತಿ ಬಲಿ

ಹಾಸನ: ವರದಕ್ಷಿಣೆ ಕಿರುಕುಳಕ್ಕೆ ಮದುವೆಯಾದ ಮೂರೇ ವಾರಕ್ಕೆ ಯುವತಿ ಬಲಿ

- Advertisement -
- Advertisement -

ವರದಕ್ಷಿಣೆ ಈ ನಾಗರಿಕ ಸಮಾಜದ ಬಹುದೊಡ್ಡ ಕಪ್ಪುಚುಕ್ಕೆಯಾಗಿದೆ. ಜಗತ್ತು ಎಷ್ಟೇ ಮುಂದುವರೆದರೂ ಈ ಅನಿಷ್ಟ ಸಂಪ್ರದಾಯ ಇನ್ನೂ ಜೀವಂತವಾಗಿವೆ. ವರದಕ್ಷಿಣೆಯ ಸ್ವರೂಪ ದಿನದಿಂದ ದಿನಕ್ಕೆ ಬದಲಾಗುತ್ತಿದೆಯೇ ಹೊರತು. ಕೊನೆಗೊಳ್ಳುತ್ತಿಲ್ಲ. ವರದಕ್ಷಿಣೆ ಕಿರುಕುಳಕ್ಕೆ ಮಹಿಳೆಯರು ಬಲಿಯಾಗುತ್ತಲೇ ಇದ್ದಾರೆ. ಇದೇ ದೌರ್ಜನ್ಯದಿಂದಾಗಿ 22 ವರ್ಷದ ಯುವತಿಯೊಬ್ಬರು ಬಲಿಯಾಗಿರುವ ಘಟನೆ ಹಾಸನದಲ್ಲಿ ನಡೆದಿದೆ.

ಹಾಸನದ ಸಲೀಂ ನಗರದಲ್ಲಿ ಫಿಜಾ ಖನಂ ಎಂಬ ಯುವತಿ ಮದುವೆಯಾದ ಮೂರೇ ವಾರದಲ್ಲಿ ಸಾವನ್ನಪ್ಪಿದ್ದಾರೆ. ಆಕೆಯ ಪೋಷಕರು ವರದಕ್ಷಿಣೆ ಕಿರುಕುಳ ನೀಡಿ ತಮ್ಮ ಮಗಳನ್ನು ಗಂಡನ ಮನೆಯವರು ಕೊಲೆ ಮಾಡಿದ್ದಾರೆ ಎಂದು ಆರೋಪಿಸಿದ್ದಾರೆ.

ಹಾಸನ ಜಿಲ್ಲೆ ಅರಕಲಗೂಡು ತಾಲ್ಲೂಕಿನ ಹೊಳಲಗೋಡು ಗ್ರಾಮದ ಯುವತಿ ಫಿಜಾ ಖಾನಂ ಹಾಗೂ ಹಾಸನದ ಶಾಗಿಲ್ ಅಹಮದ್, ಇಬ್ಬರಿಗೂ ಡಿಸೆಂಬರ್ 2 ರಂದು ವಿವಾಹವಾಗಿತ್ತು. ಆದರೆ, ಮದುವೆಯಾದ 19ನೇ ದಿನಕ್ಕೆ ಫಿಜಾ ಖಾನಂ ಗಂಡನ ಮನೆಯಲ್ಲಿ ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ.

ಇದನ್ನೂ ಓದಿ: ವರದಕ್ಷಿಣೆ ಅನಿಷ್ಟ ಕೊನೆಗೊಳಿಸಲು ಕಾನೂನುಗಳಿದ್ದರೂ ಕೂಡ, ಜನರು ತಮ್ಮೊಳಗೆ ಬದಲಾಗಬೇಕು: ಸುಪ್ರೀಂಕೋರ್ಟ್

’ತಮ್ಮ ಮಗಳು ಸ್ನಾನಕ್ಕೆ ಹೋದಾಗ ಗ್ಯಾಸ್ ಗೀಸರ್ ಆನ್ ಮಾಡಿ, ಬಾಗಿಲು ಮುಚ್ಚಿ ಕೊಲೆ ಮಾಡಲಾಗಿದೆ’ ಎಂದು ಫಿಜಾ ಖಾನಂ ಪೋಷಕರು ಆರೋಪಿಸಿದ್ದಾರೆ. ಹಾಸನದ ಪೆನ್ಷನ್ ಮೊಹಲ್ಲಾ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಫಿಜಾ ಖಾನಂ ಅವರು ಪತಿ ಶಾಗಿಲ್ ಅಹಮದ್ ಸೇರಿದಂತೆ ಆತನ ಸಹೋದರರು ಮತ್ತು ಶಾಗಿಲ್‌ನ ತಾಯಿಯ ವಿರುದ್ಧ ವರದಕ್ಷಿಣೆ ಕಿರುಕುಳ, ವರದಕ್ಷಿಣೆ ಸಾವುಗಳಿಗೆ ಸಂಬಂಧಿಸಿದ ಸೆಕ್ಷನ್‌ಗಳ ಅಡಿಯಲ್ಲಿ ಪೊಲೀಸರು ಪ್ರಕರಣ ದಾಖಲಿಸಿಕೊಂಡಿದ್ದಾರೆ. ತನಿಖೆ ನಡೆಯುತ್ತಿದೆ.

ವರದಕ್ಷಿಣೆ ಎಂಬ ಸಾಮಾಜಿಕ ಅನಿಷ್ಟ ಕೊನೆಗೊಳಿಸಲು ಕಾನೂನುಗಳು ಮುಖ್ಯವಾಗಿದ್ದರೂ, ಜನರು ಸಹ ಒಳಗಿನಿಂದ ಬದಲಾಗಬೇಕು ಮತ್ತು ಮಹಿಳೆಯರನ್ನು ಗೌರವದಿಂದ ನಡೆಸಿಕೊಳ್ಳುವುದನ್ನು ಕಲಿಯಬೇಕು ಎಂದು ಸುಪ್ರೀಂಕೋರ್ಟ್ ಡಿಸೆಂಬರ್ 6 ರಂದು ಹೇಳಿದೆ.

“ಕಾನೂನುಗಳು ಮುಖ್ಯ, ಆದರೆ ಬದಲಾವಣೆಯು ಜನರ ಒಳಗಿನಿಂದ ಬರಬೇಕು. ಮದುವೆಯ ಮೂಲಭೂತ ಸಾಮಾಜಿಕ ಮೌಲ್ಯದ ಬಗ್ಗೆ ತಿಳುವಳಿಕೆ ಇರಬೇಕು. ಒಂದು ಕುಟುಂಬಕ್ಕೆ ಬರುವ ಮಹಿಳೆಯನ್ನು ನಾವು ಹೇಗೆ ನಡೆಸಿಕೊಳ್ಳುತ್ತೇವೆ ಮತ್ತು ಮಹಿಳೆಯ ಸಾಮಾಜಿಕ ಪ್ರಾಮುಖ್ಯತೆಯನ್ನು ಹೇಗೆ ಪರಿಗಣಿಸುತ್ತೇವೆ ಎಂಬುದು ಕೂಡ ಮುಖ್ಯ” ಎಂದು ನ್ಯಾಯಮೂರ್ತಿ ಡಿವೈ ಚಂದ್ರಚೂಡ್ ಹೇಳಿದ್ದರು.


ಇದನ್ನೂ ಓದಿ: 2021 ಸಿನಿಮಾ ಲೋಕ: ಜಾತಿ ದೌರ್ಜನ್ಯವನ್ನು ಪ್ರಶ್ನಿಸಿದ, ಚಿಂತನೆಗೆ ಹಚ್ಚಿದ ಚಲನಚಿತ್ರಗಳ ಪಟ್ಟಿ ಇಲ್ಲಿದೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿಗೆ ಬಂದಿಳಿದ ಕಾಕ್ರೋಚ್ ಪಾರ್ಟಿ ಸಂಸ್ಥಾಪಕ ಅಭಿಜೀತ್ ದೀಪ್ಕೆ : ಜಂತರ್‌ ಮಂತರ್‌ನಲ್ಲಿ ಪ್ರತಿಭಟಿಸಲು ಪೊಲೀಸರಿಂದ ಅನುಮತಿ

ಶನಿವಾರ (ಜೂ.6) ಬೆಳಿಗ್ಗೆ ದೆಹಲಿಗೆ ಆಗಮಿಸಿದ ಕಾಕ್ರೋಚ್ ಜನತಾ ಪಾರ್ಟಿಯ (ಸಿಜೆಪಿ) ಸಂಸ್ಥಾಪಕ ಅಭಿಜೀತ್ ದೀಪ್ಕೆ, ಪ್ರತಿಭಟನೆಗೆ ದೆಹಲಿ ಪೊಲೀಸರು ಅನುಮತಿ ನೀಡಿದ್ದಾರೆ ಎಂದು ತಿಳಿಸಿದ್ದು, ಯೋಜಿತ ಆಂದೋಲನಕ್ಕಾಗಿ ನೇರವಾಗಿ ಜಂತರ್ ಮಂತರ್‌ನಲ್ಲಿ...

ಜಾಗತಿಕವಾಗಿ ಮೂರು ವರ್ಷಗಳಲ್ಲಿ 600 ಪರಿಸರ ರಕ್ಷಕರ ಹತ್ಯೆ: ವಿಶ್ವಸಂಸ್ಥೆ ತೀವ್ರ ಕಳವಳ: ಜಾಗತಿಕ ತಾಪಮಾನಕ್ಕೆ ಸಾಕ್ಷಿಯಾಗುತ್ತಿರುವ ಭಾರತ

ಜೂನ್ 5 ವಿಶ್ವ ಪರಿಸರ ದಿನ. ಜಗತ್ತಿನಾದ್ಯಂತ ಗಿಡ ನೆಡುವ, ಹಸಿರು ಭಾಷಣ ಬಿಗಿಯುವ ಮತ್ತು ಪರಿಸರ ಕಾಳಜಿಯ ಸಡಗರದ ಆಚರಣೆಗಳು ಎಲ್ಲೆಡೆ ವಿಭಿನ್ನ ರೀತಿಗಳಲ್ಲಿ ವಿಜೃಂಭಿಸುತ್ತಿವೆ. ಆದರೆ, ಇದೇ ಹೊತ್ತಿನಲ್ಲಿ ವಿಶ್ವಸಂಸ್ಥೆಯು...

ಮಣಿಪುರ ಎಸ್‌ಐಆರ್ ವಿರೋಧಿಸಿದ ಕುಕಿ-ಝೋ ಗುಂಪುಗಳು

ಮಣಿಪುರ ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆ ವಿರುದ್ಧ ಪ್ರತಿಭಟನೆ ವ್ಯಕ್ತವಾಗಿದೆ. ಕುಕಿ-ಝೋ ಬುಡಕಟ್ಟು ಜನಾಂಗದ ಸಾಂಪ್ರದಾಯಿಕ ಗುಂಪಾದ ಕುಕಿ ಇನ್ಪಿ ಮಣಿಪುರ (ಕೆಐಎಂ) ಮತದಾರರ ಪಟ್ಟಿ...

ಹೇಗಿತ್ತು ‘ಕಾಕ್ರೋಚ್ ಜನತಾ ಪಕ್ಷ’ದ ಮೊದಲ ಸುದ್ದಿಗೋಷ್ಠಿ…? ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಕರೆ

ಜೂನ್ 6, 2026 ರಂದು ಜಂತರ್ ಮಂತರ್‌ನಲ್ಲಿ ನಡೆಯಲಿರುವ 'ಶಾಂತಿಯುತ ಪ್ರತಿಭಟನೆ'ಗೆ ಮುನ್ನ ಜಿರಳೆ ಜನತಾ ಪಕ್ಷ (ಸಿಜೆಪಿ) ತನ್ನ ಮೊದಲ ಪತ್ರಿಕಾಗೋಷ್ಠಿಯನ್ನು ನಡೆಸಿದೆ. ಬುಧವಾರ ಸಂಜೆ (ಜೂ.3) ಸಿಜೆಪಿಯ ಮೂವರು ವಕ್ತಾರರು...

‘ಇದು ಆತ್ಮಹತ್ಯೆಯಲ್ಲ, ಮೋದಿ ಸರ್ಕಾರದ ಭ್ರಷ್ಟ ವ್ಯವಸ್ಥೆ ಮಾಡಿದ ಕೊಲೆ’: ನೀಟ್ ಆಕಾಂಕ್ಷಿಯ ಸಾವಿಗೆ ರಾಹುಲ್ ಗಾಂಧಿ ಆಕ್ರೋಶ

ದೇಶದ ವೈದ್ಯಕೀಯ ಪ್ರವೇಶ ಪರೀಕ್ಷೆಯಾದ ‘ನೀಟ್-ಯುಜಿ’ (NEET-UG) ವಿವಾದ ಮತ್ತು ವಿದ್ಯಾರ್ಥಿಗಳ ಸಾವುಗಳು ಭಾರತದ ಒಟ್ಟಾರೆ ಶಿಕ್ಷಣ ವ್ಯವಸ್ಥೆಯ ದಯನೀಯ ಸ್ಥಿತಿಗೆ ಕನ್ನಡಿ ಹಿಡಿದಿವೆ. ಪರೀಕ್ಷಾ ಅಕ್ರಮಗಳು, ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು...

ತಕ್ಷಣವೇ ‘SIR ಹೆಲ್ಪ್‌ ಡೆಸ್ಕ್‌’ ಸ್ಥಾಪಿಸುವಂತೆ ಅಧಿಕಾರಿಗಳಿಗೆ ಸಿಎಂ ಸೂಚನೆ

ರಾಜ್ಯದಲ್ಲಿ ಭಾರತೀಯ ಚುನಾವಣಾ ಆಯೋಗದಿಂದ ನಡೆಯುತ್ತಿರುವ ಎಸ್‌ಐಆರ್ (Special Electoral Roll Purification) ಪ್ರಕ್ರಿಯೆ ಸಂದರ್ಭದಲ್ಲಿ ರಾಜ್ಯದ ಯಾವುದೇ ಪ್ರಜೆಯೂ ತನ್ನ ಅತ್ಯಮೂಲ್ಯವಾದ ಮತದಾನದ ಹಕ್ಕನ್ನು ಕಳೆದುಕೊಳ್ಳಬಾರದು ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್...

ವಿಷಾಹಾರಕ್ಕೆ ಜಾಗತಿಕವಾಗಿ ವರ್ಷಕ್ಕೆ 15 ಲಕ್ಷ ಜನರು ಬಲಿ: ಮಕ್ಕಳಿಗೆ ಹೆಚ್ಚಿನ ಅಪಾಯ: ಭಾರತದ ಸ್ಥಿತಿಯೂ ಆತಂಕಕಾರಿ! 

ನಾವು ದಿನನಿತ್ಯ ಸೇವಿಸುವ ಆಹಾರವೇ ನಮ್ಮ ಜೀವಕ್ಕೆ ಕಂಟಕವಾಗುತ್ತಿದೆಯೇ? ಹೌದು ಎನ್ನುತ್ತದೆ ವಿಶ್ವ ಆರೋಗ್ಯ ಸಂಸ್ಥೆಯ (WHO) ಇತ್ತೀಚಿನ ಆಘಾತಕಾರಿ ವರದಿ. ಜಾಗತಿಕವಾಗಿ ಅಸುರಕ್ಷಿತ ಮತ್ತು ಕಲುಷಿತ ಆಹಾರದ ಸೇವನೆಯಿಂದಾಗಿ ಪ್ರತಿ ವರ್ಷ...

ಡಿಕೆಶಿ ಸಂಪುಟದಲ್ಲಿ ಅಲ್ಪಸಂಖ್ಯಾತರಿಗೆ ಸಿಗುತ್ತಾ ಸೂಕ್ತ ಪ್ರಾತಿನಿಧ್ಯ?

ಮಹತ್ವದ ರಾಜಕೀಯ ಬೆಳವಣಿಗೆಯಲ್ಲಿ ರಾಜ್ಯದ ಮುಖ್ಯಮಂತ್ರಿ ಸ್ಥಾನಕ್ಕೆ ಸಿದ್ದರಾಮಯ್ಯ ಅವರು ರಾಜೀನಾಮೆ ನೀಡಿ, ಡಿ.ಕೆ ಶಿವಕುಮಾರ್ ಹೊಸ ಮುಖ್ಯಮಂತ್ರಿಯಾಗಿ ಅಧಿಕಾರ ವಹಿಸಿಕೊಂಡಾಗಿದೆ. ಈ ಮೂಲಕ ಕಳೆದ ಒಂದು ವರ್ಷದಿಂದ ನಡೆಯುತ್ತಿದ್ದ ಸಿಎಂ ಬದಲಾವಣೆಯ...

‘ಕರ್ನಾಟಕದಲ್ಲಿ SIR’ ಮತ ಉಳಿಸಿಕೊಳ್ಳುವಂತೆ ಕಾರ್ಯಕರ್ತರಿಗೆ CM ಡಿ.ಕೆ ಶಿವಕುಮಾರ್ ಕರೆ!

ಕರ್ನಾಟಕ ರಾಜಕಾರಣದಲ್ಲಿ ಹೊಸ ಯುಗ ಆರಂಭವಾಗಿದೆ. ರಾಜ್ಯದ 25ನೇ ಮುಖ್ಯಮಂತ್ರಿಯಾಗಿ ಡಿ.ಕೆ. ಶಿವಕುಮಾರ್ ಅವರು ಪ್ರಮಾಣವಚನ ಸ್ವೀಕರಿಸಿದ್ದಾರೆ. ಅಧಿಕಾರ ವಹಿಸಿಕೊಂಡ ಬೆನ್ನಲ್ಲೇ ಕೆಲಸ ಮಾಡದಿರುವ ಸಚಿವ ಮತ್ತು ಶಾಸಕರನ್ನು ಸುಮ್ಮನೆ ಬಿಡುವುದಿಲ್ಲ ಎಂದು...

ವೋಟರ್ ಐಡಿ, ಆಧಾರ್ ಇದ್ದರೂ ನೆಮ್ಮದಿ ಇಲ್ಲ, ಪಶ್ಚಿಮ ಬಂಗಾಳದಲ್ಲಿ ಶುರುವಾಯ್ತು ‘ಹೋಲ್ಡಿಂಗ್ ಸೆಂಟರ್’ಗಳ ಭಯ

ಪಶ್ಚಿಮ ಬಂಗಾಳದಲ್ಲಿ "ಯಾರು ಈಗಾಗಲೇ ಮತದಾರರ ಪಟ್ಟಿಯಿಂದ ಹೊರಗುಳಿದಿದ್ದಾರೋ ಮತ್ತು ಟ್ರಿಬ್ಯೂನಲ್‌ನ (ನ್ಯಾಯಮಂಡಳಿ) ಅನುಮೋದನೆಗಾಗಿ ಕಾಯುತ್ತಿದ್ದಾರೋ, ಅಂತಹವರಲ್ಲಿ ಹೊಸ ಪೊಲೀಸ್ ವ್ಯವಸ್ಥೆ ಮತ್ತು ಬಂಧನ ಕೇಂದ್ರಗಳು (ಡಿಟೆಂಷನ್ ಸೆಂಟರ್) ತಮ್ಮನ್ನು ವಿದೇಶಿಯರಂತೆ ನಡೆಸಿಕೊಳ್ಳಲ್ಪಡಬಹುದು...