Homeಮುಖಪುಟಪ್ರಭಾಕರ್‌ ಭಟ್‌ನ್ನು ಬಂಧಿಸಲ್ಲ, ಅವರ ಹೇಳಿಕೆ ಬಗ್ಗೆ ತನಿಖೆ ನಡೆಸಲಾಗುವುದು: ಹೈಕೋರ್ಟ್‌ಗೆ ತಿಳಿಸಿದ ಸರಕಾರ

ಪ್ರಭಾಕರ್‌ ಭಟ್‌ನ್ನು ಬಂಧಿಸಲ್ಲ, ಅವರ ಹೇಳಿಕೆ ಬಗ್ಗೆ ತನಿಖೆ ನಡೆಸಲಾಗುವುದು: ಹೈಕೋರ್ಟ್‌ಗೆ ತಿಳಿಸಿದ ಸರಕಾರ

- Advertisement -
- Advertisement -

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿದೆ. ಜಾಮೀನು ಅರ್ಜಿ ವಿಚಾರಣೆ ವೇಳೆ ಪ್ರಭಾಕರ್‌ ಭಟ್‌ ಹೇಳಿಕೆ ಬಗ್ಗೆ ತನಿಖೆ ನಡೆಸಲಾಗುವುದು, ಅವರನ್ನು ಬಂಧಿಸುವುದಿಲ್ಲ ಎಂದು ಸರಕಾರ ಹೈಕೋರ್ಟ್‌ಗೆ ಹೇಳಿದೆ.

ಡಿ.24ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮ ಜಯಂತಿ ಅಂಗವಾಗಿ ನಡೆದ ‘ಸಂಕೀರ್ತನಾ ಯಾತ್ರೆ’ಯಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಭಾಕರ ಭಟ್ ವಿರುದ್ದ ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಝೀರ್ ಚಿಕ್ಕನೇರಳೆ ಶ್ರೀರಂಗಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಪ್ರಭಾಕರ ಭಟ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

ಎಫ್ಐಆರ್ ದಾಖಲಾಗುತ್ತಿದ್ದಂತೆ, ಹೈಕೋರ್ಟ್ ನಲ್ಲಿ ಮೊಕದ್ದಮೆ ರದ್ದತಿ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ವೇಳೆ ಪ್ರಭಾಕರ್ ಭಟ್ ಪರ ವಕೀಲರು, ಇದು ರಾಜಕೀಯ ಪ್ರೇರಿತ ದೂರು. ಆರೋಪಿ ವಯೋ ವೃದ್ದರು. ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರನ್ನು ಬಂಧಿಸುವ ಸಾಧ್ಯತೆಯಿದೆ. ಹಾಗಾಗಿ ಎಫ್ಐಆರ್ ಗೆ ತಡೆ ನೀಡಬೇಕು ಎಂದು ವಾದ ಮಂಡಿಸಿದ್ದರು.

ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ದೂರುದಾರರ ಪರ ವಕೀಲ ಎಸ್ ಬಾಲನ್, ಆರೋಪಿ ಹೇಳಿಕೆಯನ್ನು ನ್ಯಾಯಾಲಯ ಗಮನಿಸಬೇಕು. ಮುಸ್ಲಿಂ ಮಹಿಳೆಯರಿಗೆ ಒಬ್ಬ ಗಂಡ ಅಲ್ಲ. ದಿನಕ್ಕೊಬ್ಬ ಗಂಡಂದಿರು ಎಂದಿದ್ದಾರೆ. ಇದು ಸಮಾಜದಲ್ಲಿ ಅಶಾಂತಿ ಹುಟ್ಟಿಸುತ್ತಿದೆ. ಎಲ್ಲಾ ಕಡೆ ಪ್ರತಿಭಟನೆಗಳು ನಡೆಯುತ್ತಿದೆ. ಆರೋಪಿ ಈ ಹಿಂದೆಯೂ ಇಂತಹ ಕೃತ್ಯ ಮಾಡಿದ್ದಾನೆ.  ಸುಪ್ರಿಂಕೋರ್ಟ್ ಈ ರೀತಿ ದ್ವೇಷಭಾಷಣ ಮಾಡುವವರ ವಿರುದ್ದ ಹಲವು ಜಡ್ಜ್ ಮೆಂಟ್ ಕೊಟ್ಟಿದೆ. ಈಗ ಆರೋಪಿ ಬಗ್ಗೆ ಹೆಚ್ಚಿನ ತನಿಖೆ ಆಗಬೇಕಿದೆ. ಪೊಲೀಸರು ಹಾಕಿರುವ ಎಲ್ಲಾ ಸೆಕ್ಷನ್‌ಗಳು ಸರಿಯಾಗಿವೆ. ಈ ಪ್ರಕರಣದ ಸಂಪೂರ್ಣ ತನಿಖೆ ನಡೆಯಬೇಕು. ಹಾಗಾಗಿ ಕಾನೂನು ಅದರ ಕೆಲಸ ಮಾಡಲಿ ಎಂದು ಹೇಳಿದ್ದಾರೆ.

ಸರಕಾರದ ಪರವಾಗಿ ಹಾಜರಿದ್ದ ವಕೀಲರು, ಕಲ್ಲಡ್ಕ ಪ್ರಭಾಕರ್‌ ಭಟ್‌ ಹೇಳಿಕೆಯ ಬಗ್ಗೆ ತನಿಖೆ ನಡೆಸಲಾಗುವುದು. ಈ ಪ್ರಕರಣದಲ್ಲಿ ನಾವು ಪ್ರಭಾಕರ ಭಟ್‌ಗೆ ಬಂಧಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.  ಈಗಾಗಿ ನ್ಯಾಯಾಧೀಶರು ಸರ್ಕಾರವೇ ಆರೋಪಿಯನ್ನು ಬಂಧಿಸಲ್ಲ ಎಂದಾದರೆ ತಡೆ ನೀಡುವ ಅಗತ್ಯ ಇಲ್ಲ ಎಂದು ಹೇಳಿದೆ.

ದೂರುದಾರರ ಪರ ವಕೀಲ ಬಾಲನ್ ಅವರು, ಆರೋಪಿಯನ್ನು ಬಂಧಿಸಿ ತನಿಖೆ ನಡೆಸುವ ಅಗತ್ಯ ಇದೆ. ಆರೋಪಿ ಕೋಮುಗಲಭೆ ಮಾಡುವ ಹುನ್ನಾರ ಹೊಂದಿದ್ದಾನೆ ಎಂದರು. ಆಗ ನ್ಯಾಯಮೂರ್ತಿ ರಾಜೇಶ್‌ ರೈ ಕೆ ಅವರ ನೇತೃತ್ವದ ರಜಾಕಾಲೀನ ಪೀಠ ಸರ್ಕಾರಕ್ಕೆ ಬಂಧನದ ಅಗತ್ಯ ಇಲ್ಲ ಎಂದ ಮೇಲೆ ಈ ವಿಚಾರದಲ್ಲಿ ಚರ್ಚೆ ಬೇಡ ಎಂದು ಹೇಳಿದೆ. ಮುಂದಿನ ವಿಚಾರಣೆಯನ್ನು ಜ.09, 2024ಕ್ಕೆ ಮುಂದೂಡಿದೆ.

ಪ್ರಭಾಕರ್‌ ಭಟ್‌ಗೆ ಮಧ್ಯಂತರ ಜಾಮೀನು ನೀಡಿರುವ ಬಗ್ಗೆ ವಕೀಲ ಮತ್ತು ಕರ್ನಾಟಕದ ಮಾಜಿ ಅಡ್ವೋಕೇಟ್ ಜನರಲ್ ಅರುಣಾ ಶ್ಯಾಮ್ ತಮ್ಮ ಸಾಮಾಜಿಕ ಮಾಧ್ಯಮದ ಮೂಲಕ ಖಚಿತಪಡಿಸಿದ್ದಾರೆ.

 

 

ಈ ಸಂಬಂಧ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಪತ್ರಕರ್ತ ನವೀನ್ ಸೂರಿಂಜೆ, “ಪ್ರಭಾಕರ ಭಟ್ಟರನ್ನು ಬಂಧಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ :ಬಿಜೆಪಿಯವರು ಸತ್ಯದ ತಲೆ ಮೇಲೆ ಹೊಡೆದಂತೆ ‘ಬುರುಡೆ’ ಬಿಡ್ತಾರೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...