Homeಮುಖಪುಟಪ್ರಭಾಕರ್‌ ಭಟ್‌ನ್ನು ಬಂಧಿಸಲ್ಲ, ಅವರ ಹೇಳಿಕೆ ಬಗ್ಗೆ ತನಿಖೆ ನಡೆಸಲಾಗುವುದು: ಹೈಕೋರ್ಟ್‌ಗೆ ತಿಳಿಸಿದ ಸರಕಾರ

ಪ್ರಭಾಕರ್‌ ಭಟ್‌ನ್ನು ಬಂಧಿಸಲ್ಲ, ಅವರ ಹೇಳಿಕೆ ಬಗ್ಗೆ ತನಿಖೆ ನಡೆಸಲಾಗುವುದು: ಹೈಕೋರ್ಟ್‌ಗೆ ತಿಳಿಸಿದ ಸರಕಾರ

- Advertisement -
- Advertisement -

ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಕರಣಕ್ಕೆ ಸಂಬಂಧಿಸಿ ಆರೆಸ್ಸೆಸ್ ಮುಖಂಡ ಕಲ್ಲಡ್ಕ ಪ್ರಭಾಕರ ಭಟ್‌ಗೆ ಹೈಕೋರ್ಟ್‌ ಮಧ್ಯಂತರ ಜಾಮೀನು ನೀಡಿದೆ. ಜಾಮೀನು ಅರ್ಜಿ ವಿಚಾರಣೆ ವೇಳೆ ಪ್ರಭಾಕರ್‌ ಭಟ್‌ ಹೇಳಿಕೆ ಬಗ್ಗೆ ತನಿಖೆ ನಡೆಸಲಾಗುವುದು, ಅವರನ್ನು ಬಂಧಿಸುವುದಿಲ್ಲ ಎಂದು ಸರಕಾರ ಹೈಕೋರ್ಟ್‌ಗೆ ಹೇಳಿದೆ.

ಡಿ.24ರಂದು ಮಂಡ್ಯ ಜಿಲ್ಲೆಯ ಶ್ರೀರಂಗಪಟ್ಟಣದಲ್ಲಿ ಹನುಮ ಜಯಂತಿ ಅಂಗವಾಗಿ ನಡೆದ ‘ಸಂಕೀರ್ತನಾ ಯಾತ್ರೆ’ಯಲ್ಲಿ ಮುಸ್ಲಿಂ ಮಹಿಳೆಯರ ವಿರುದ್ಧ ಅವಹೇಳನಕಾರಿ ಹೇಳಿಕೆ ನೀಡಿದ್ದ ಪ್ರಭಾಕರ ಭಟ್ ವಿರುದ್ದ ಸಾಮಾಜಿಕ ಹೋರಾಟಗಾರ್ತಿ ನಜ್ಮಾ ನಝೀರ್ ಚಿಕ್ಕನೇರಳೆ ಶ್ರೀರಂಗಪಟ್ಟಣ ಠಾಣೆಯಲ್ಲಿ ದೂರು ದಾಖಲಿಸಿದ್ದರು. ದೂರಿನನ್ವಯ ಪ್ರಭಾಕರ ಭಟ್‌ ವಿರುದ್ಧ ಎಫ್‌ಐಆರ್‌ ದಾಖಲಾಗಿತ್ತು.

ಎಫ್ಐಆರ್ ದಾಖಲಾಗುತ್ತಿದ್ದಂತೆ, ಹೈಕೋರ್ಟ್ ನಲ್ಲಿ ಮೊಕದ್ದಮೆ ರದ್ದತಿ ಕೋರಿ ಅರ್ಜಿ ಸಲ್ಲಿಸಲಾಗಿತ್ತು. ಈ ಅರ್ಜಿ ವಿಚಾರಣೆ ವೇಳೆ ಪ್ರಭಾಕರ್ ಭಟ್ ಪರ ವಕೀಲರು, ಇದು ರಾಜಕೀಯ ಪ್ರೇರಿತ ದೂರು. ಆರೋಪಿ ವಯೋ ವೃದ್ದರು. ಅನಾರೋಗ್ಯದಿಂದ ಬಳಲುತ್ತಿದ್ದಾರೆ. ಅವರನ್ನು ಬಂಧಿಸುವ ಸಾಧ್ಯತೆಯಿದೆ. ಹಾಗಾಗಿ ಎಫ್ಐಆರ್ ಗೆ ತಡೆ ನೀಡಬೇಕು ಎಂದು ವಾದ ಮಂಡಿಸಿದ್ದರು.

ಅದಕ್ಕೆ ಆಕ್ಷೇಪ ವ್ಯಕ್ತಪಡಿಸಿದ ದೂರುದಾರರ ಪರ ವಕೀಲ ಎಸ್ ಬಾಲನ್, ಆರೋಪಿ ಹೇಳಿಕೆಯನ್ನು ನ್ಯಾಯಾಲಯ ಗಮನಿಸಬೇಕು. ಮುಸ್ಲಿಂ ಮಹಿಳೆಯರಿಗೆ ಒಬ್ಬ ಗಂಡ ಅಲ್ಲ. ದಿನಕ್ಕೊಬ್ಬ ಗಂಡಂದಿರು ಎಂದಿದ್ದಾರೆ. ಇದು ಸಮಾಜದಲ್ಲಿ ಅಶಾಂತಿ ಹುಟ್ಟಿಸುತ್ತಿದೆ. ಎಲ್ಲಾ ಕಡೆ ಪ್ರತಿಭಟನೆಗಳು ನಡೆಯುತ್ತಿದೆ. ಆರೋಪಿ ಈ ಹಿಂದೆಯೂ ಇಂತಹ ಕೃತ್ಯ ಮಾಡಿದ್ದಾನೆ.  ಸುಪ್ರಿಂಕೋರ್ಟ್ ಈ ರೀತಿ ದ್ವೇಷಭಾಷಣ ಮಾಡುವವರ ವಿರುದ್ದ ಹಲವು ಜಡ್ಜ್ ಮೆಂಟ್ ಕೊಟ್ಟಿದೆ. ಈಗ ಆರೋಪಿ ಬಗ್ಗೆ ಹೆಚ್ಚಿನ ತನಿಖೆ ಆಗಬೇಕಿದೆ. ಪೊಲೀಸರು ಹಾಕಿರುವ ಎಲ್ಲಾ ಸೆಕ್ಷನ್‌ಗಳು ಸರಿಯಾಗಿವೆ. ಈ ಪ್ರಕರಣದ ಸಂಪೂರ್ಣ ತನಿಖೆ ನಡೆಯಬೇಕು. ಹಾಗಾಗಿ ಕಾನೂನು ಅದರ ಕೆಲಸ ಮಾಡಲಿ ಎಂದು ಹೇಳಿದ್ದಾರೆ.

ಸರಕಾರದ ಪರವಾಗಿ ಹಾಜರಿದ್ದ ವಕೀಲರು, ಕಲ್ಲಡ್ಕ ಪ್ರಭಾಕರ್‌ ಭಟ್‌ ಹೇಳಿಕೆಯ ಬಗ್ಗೆ ತನಿಖೆ ನಡೆಸಲಾಗುವುದು. ಈ ಪ್ರಕರಣದಲ್ಲಿ ನಾವು ಪ್ರಭಾಕರ ಭಟ್‌ಗೆ ಬಂಧಿಸುವುದಿಲ್ಲ ಎಂದು ಹೇಳಿಕೆ ನೀಡಿದ್ದಾರೆ.  ಈಗಾಗಿ ನ್ಯಾಯಾಧೀಶರು ಸರ್ಕಾರವೇ ಆರೋಪಿಯನ್ನು ಬಂಧಿಸಲ್ಲ ಎಂದಾದರೆ ತಡೆ ನೀಡುವ ಅಗತ್ಯ ಇಲ್ಲ ಎಂದು ಹೇಳಿದೆ.

ದೂರುದಾರರ ಪರ ವಕೀಲ ಬಾಲನ್ ಅವರು, ಆರೋಪಿಯನ್ನು ಬಂಧಿಸಿ ತನಿಖೆ ನಡೆಸುವ ಅಗತ್ಯ ಇದೆ. ಆರೋಪಿ ಕೋಮುಗಲಭೆ ಮಾಡುವ ಹುನ್ನಾರ ಹೊಂದಿದ್ದಾನೆ ಎಂದರು. ಆಗ ನ್ಯಾಯಮೂರ್ತಿ ರಾಜೇಶ್‌ ರೈ ಕೆ ಅವರ ನೇತೃತ್ವದ ರಜಾಕಾಲೀನ ಪೀಠ ಸರ್ಕಾರಕ್ಕೆ ಬಂಧನದ ಅಗತ್ಯ ಇಲ್ಲ ಎಂದ ಮೇಲೆ ಈ ವಿಚಾರದಲ್ಲಿ ಚರ್ಚೆ ಬೇಡ ಎಂದು ಹೇಳಿದೆ. ಮುಂದಿನ ವಿಚಾರಣೆಯನ್ನು ಜ.09, 2024ಕ್ಕೆ ಮುಂದೂಡಿದೆ.

ಪ್ರಭಾಕರ್‌ ಭಟ್‌ಗೆ ಮಧ್ಯಂತರ ಜಾಮೀನು ನೀಡಿರುವ ಬಗ್ಗೆ ವಕೀಲ ಮತ್ತು ಕರ್ನಾಟಕದ ಮಾಜಿ ಅಡ್ವೋಕೇಟ್ ಜನರಲ್ ಅರುಣಾ ಶ್ಯಾಮ್ ತಮ್ಮ ಸಾಮಾಜಿಕ ಮಾಧ್ಯಮದ ಮೂಲಕ ಖಚಿತಪಡಿಸಿದ್ದಾರೆ.

 

 

ಈ ಸಂಬಂಧ ಫೇಸ್‌ಬುಕ್‌ನಲ್ಲಿ ಬರೆದುಕೊಂಡಿರುವ ಪತ್ರಕರ್ತ ನವೀನ್ ಸೂರಿಂಜೆ, “ಪ್ರಭಾಕರ ಭಟ್ಟರನ್ನು ಬಂಧಿಸುವುದಿಲ್ಲ ಎಂದು ರಾಜ್ಯ ಸರ್ಕಾರ ಹೈಕೋರ್ಟ್‌ಗೆ ತಿಳಿಸಿದೆ ಎಂದು ಹೇಳಿದ್ದಾರೆ.

ಇದನ್ನೂ ಓದಿ :ಬಿಜೆಪಿಯವರು ಸತ್ಯದ ತಲೆ ಮೇಲೆ ಹೊಡೆದಂತೆ ‘ಬುರುಡೆ’ ಬಿಡ್ತಾರೆ: ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...