Homeಕರ್ನಾಟಕಮಾಜಿ ಸಚಿವ ಶ್ರೀರಾಮುಲುಗೆ ಬಂಧನ ವಾರೆಂಟ್ ನೀಡುವುದಾಗಿ ಎಚ್ಚರಿಕೆ ಕೊಟ್ಟ ಹೈಕೋರ್ಟ್‌

ಮಾಜಿ ಸಚಿವ ಶ್ರೀರಾಮುಲುಗೆ ಬಂಧನ ವಾರೆಂಟ್ ನೀಡುವುದಾಗಿ ಎಚ್ಚರಿಕೆ ಕೊಟ್ಟ ಹೈಕೋರ್ಟ್‌

- Advertisement -
- Advertisement -

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಂಬಂಧ ನಾಲ್ಕು ಬಾರಿ ಸಮನ್ಸ್‌ ನೀಡಿದ್ದರೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರಾಗದ ಮಾಜಿ ಸಚಿವ ಬಿ ಶ್ರೀರಾಮುಲು ಅವರನ್ನು ಶುಕ್ರವಾರ ತರಾಟೆಗೆ ತೆಗೆದುಕೊಂಡಿರುವ ಕರ್ನಾಟಕ ಹೈಕೋರ್ಟ್‌, ಮುಂದಿನ ವಿಚಾರಣೆಗೆ ಹಾಜರಾಗದಿದ್ದರೆ ಬಂಧನದ ಆದೇಶದ ಹೊರಡಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಖಾಸಗಿ ದೂರು ಮತ್ತು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ವಿಚಾರಣೆ ರದ್ದುಪಡಿಸಲು ಕೋರಿ ಬಿ ಶ್ರೀರಾಮುಲು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ನೇತೃತ್ವದ ಏಕಸದಸ್ಯ ಪೀಠ ಶುಕ್ರವಾರ ನಡೆಸಿತು.

ಅರ್ಜಿದಾರ ಶ್ರೀರಾಮುಲು ಪರ ವಕೀಲ ಗೌತಮ್‌ ಪ್ರಕರಣದ ಮಾಹಿತಿಯನ್ನು ಪೀಠಕ್ಕೆ ವಿವರಿಸಲು ಮುಂದಾದಾಗ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಅರ್ಜಿದಾರರು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮುಂದೆ ಹಾಜರಾಗಿದ್ದಾರೆಯೇ? ಎಂದು ಪ್ರಶ್ನಿಸಿದರು.

ವಕೀಲ ಗೌತಮ್‌ ಅವರು, ‘ಇಲ್ಲ’ ಎಂದು ಉತ್ತರಿಸಿದರು. ಆಗ ನ್ಯಾಯಮೂರ್ತಿಗಳು, ವಿಚಾರಣಾಧೀನ ನ್ಯಾಯಾಲಯ ನೋಟಿಸ್ ಅಥವಾ ಸಮನ್ಸ್ ಜಾರಿಗೊಳಿಸಲು ಆದೇಶಿಸಿಲ್ಲವೇ ಎಂದು ಮರು ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ಗೌತಮ್‌, ಹೌದು ಜಾರಿಗೊಳಿಸಿದೆ. ಆದರೆ, ನಮಗೆ ತಲುಪಿಲ್ಲ ಎಂದರು.

ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ ಎನ್ ಜಗದೀಶ್ ಅವರನ್ನು ಉದ್ದೇಶಿಸಿ, ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅರ್ಜಿದಾರರ ವಿರುದ್ಧ ಎಷ್ಟು ಬಾರಿ ಸಮನ್ಸ್ ಹೊರಡಿಸಿದೆ ಎಂದು ನ್ಯಾಯಮೂರ್ತಿಗಳು ಕೇಳಿದರು. ದಾಖಲೆಗಳನ್ನು ಪರಿಶೀಲಿಸಿದ ಜಗದೀಶ್ ಅವರು, ನಾಲ್ಕು ಬಾರಿ ಸಮನ್ಸ್‌ ನೀಡಲಾಗಿದೆ ಎಂದು ಉತ್ತರಿಸಿದರು.

ಇದನ್ನು ಕೇಳಿ ಕೋಪಗೊಂಡ ನ್ಯಾಯಮೂರ್ತಿಗಳು, “ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಎಂದರೆ‌ ನಿಮಗೆ ಅಷ್ಟೊಂದು ತಮಾಷೆಯಾ? ಮ್ಯಾಜಿಸ್ಟ್ರೇಟ್ ಮುಂದೆ ನಿಂತುಕೊಳ್ಳಲು ನಿಮ್ಮ ಅರ್ಜಿದಾರರಿಗೆ ಯಾವ ಅಂತಸ್ತು ಅಡ್ಡಿಯಾಗಿದೆ? ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಎಂದರೆ ಏನೆಂದುಕೊಂಡಿದ್ದೀರಿ? ವಿಚಾರಣಾಧೀನ ನ್ಯಾಯಾಲಯ ನಾಲ್ಕು ಬಾರಿ ಸಮನ್ಸ್ ಹೊರಡಿಸಿದ್ದರೂ ಏಕೆ ಹಾಜರಾಗಿಲ್ಲ?” ಎಂದು ಶ್ರೀರಾಮುಲು ಪರ ವಕೀಲರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮುಂದಿನ ವಿಚಾರಣೆಗೆ ಅರ್ಜಿದಾರ ಶ್ರೀರಾಮುಲು ಖುದ್ದು ಹಾಜರಾಗಬೇಕು. ತಪ್ಪಿದರೆ, ಅವರ ವಿರುದ್ಧ ಬಂಧನ ಆದೇಶ ಹೊರಡಿಸಲಾಗುವುದು ಎಂದು ನ್ಯಾಯಮೂರ್ತಿ ಎಚ್ಚರಿಕೆ ನೀಡಿದರು.

ಪ್ರಕರಣದ ಹಿನ್ನೆಲೆ : ಚುನಾವಣಾ ಅಧಿಕಾರಿಗಳ ಅನುಮತಿ ಪಡೆಯದೇ 2023ರ ಏಪ್ರಿಲ್‌ 28ರಂದು ಚಿತ್ರದುರ್ಗದ ಚಳ್ಳಕೆರೆ ವಿಧಾನಭಾ ಕ್ಷೇತ್ರದ ತುರವನೂರು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಆರ್‌ ಅನಿಲ್‌ ಕುಮಾರ್‌ ಪರ ಶ್ರೀರಾಮುಲು ಚುನಾವಣಾ ಪ್ರಚಾರ ಸಮಾವೇಶ ನಡೆಸಿದ್ದರು. ಈ ಸಂಬಂಧ ಶ್ರೀರಾಮುಲು ವಿರುದ್ಧ ಫ್ಲೈಯಿಂಗ್‌ ಸ್ಕ್ವಾಡ್‌ ತಂಡದ ಅಧಿಕಾರಿಯಾಗಿದ್ದ ಎಂ ತಿಪ್ಪೇಸ್ವಾಮಿ, ಚಿತ್ರದುರ್ಗದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ 2023ರ ಏಪ್ರಿಲ್‌ 29ರಂದು ಖಾಸಗಿ ದೂರು ಸಲ್ಲಿಸಿದ್ದರು. ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ 2023ರ ಮೇ 5ರಂದು ಶ್ರೀರಾಮುಲುಗೆ ಸಮನ್ಸ್‌ ಜಾರಿಗೊಳಿಸಿತ್ತು. ಇದರ ವಿರುದ್ಧ ಶ್ರೀರಾಮುಲು ಹೈಕೋರ್ಟ್‌ ಮೊರೆ ಹೋಗಿದ್ದರು.

ಇದನ್ನೂ ಓದಿ: ಹಿಂದೂ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ: ಬಿಜೆಪಿ ನಾಯಕರ ಆರೋಪಗಳಿಗೆ ತಿರುಗೇಟು ಕೊಟ್ಟ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಆಪರೇಷನ್ ಡೆಮಾಲಿಶ್‌ಮೆಂಟ್ ಅಡಿಯಲ್ಲಿ 200ಕ್ಕೂ ಹೆಚ್ಚು ನಕ್ಸಲ್ ಸ್ಮಾರಕಗಳನ್ನು ನೆಲಸಮಗೊಳಿಸಿದ ಭದ್ರತಾ ಪಡೆಗಳು 

ನವದೆಹಲಿ: ನಕ್ಸಲ್ ಚಟುವಟಿಕೆಗಳ ವಿರುದ್ಧ ತೀವ್ರಗೊಂಡ ಕಾರ್ಯಾಚರಣೆ ನಿರ್ಣಾಯಕ ಹಂತವನ್ನು ಪ್ರವೇಶಿಸಿರುವುದಾಗಿ ಭದ್ರತಾಪಡೆಯ ಅಧಿಕಾರಿಗಳು ತಿಳಿಸಿದ್ದಾರೆ.  ಆಪರೇಷನ್ ಡೆಮಾಲಿಶ್‌ಮೆಂಟ್ ಎಂದು ಕರೆಯಲ್ಪಡುವ ಇತ್ತೀಚಿನ ಕಾರ್ಯಾಚರಣೆಯ ಅಡಿಯಲ್ಲಿ ನಕ್ಸಲ್ ಕಾರ್ಯಕರ್ತರು ತಮ್ಮ ನಾಯಕರನ್ನು ಸ್ಮರಿಸಲು ಮತ್ತು...

ಮುಸ್ಲಿಮರಿಗೆ ನೀಡಿದ್ದ 5% ಮೀಸಲಾತಿ ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಕ್ರಮ ಪ್ರಶ್ನಿಸಿ ಬಾಂಬೆ ಹೈಕೋರ್ಟ್ ಗೆ ಅರ್ಜಿ 

ಶಿಕ್ಷಣ ಮತ್ತು ಸರ್ಕಾರಿ ಉದ್ಯೋಗಗಳಲ್ಲಿ ಮುಸ್ಲಿಮರಿಗೆ 5% ಮೀಸಲಾತಿಯನ್ನು ರದ್ದುಗೊಳಿಸಿದ ಮಹಾರಾಷ್ಟ್ರ ಸರ್ಕಾರದ ಇತ್ತೀಚಿನ ನಿರ್ಧಾರವನ್ನು ಮುಂಬೈ ಮೂಲದ ವಕೀಲರು ಬಾಂಬೆ ಹೈಕೋರ್ಟ್‌ನಲ್ಲಿ ಪ್ರಶ್ನಿಸಿದ್ದಾರೆ. ವಕೀಲ ಸೈಯದ್ ಎಜಾಜ್ ಅಬ್ಬಾಸ್ ನಖ್ವಿ ಅವರು ವಕೀಲ...

ವಿಧಾನಸಭಾ ಚುನಾವಣೆಯಲ್ಲಿ ನೇಮಮ್ ನಿಂದ ಸ್ಪರ್ಧಿಸುವ ಬಯಕೆಯನ್ನು ಪುನರುಚ್ಚರಿಸಿದ ಬಿಜೆಪಿ ಕೇರಳ ಅಧ್ಯಕ್ಷ ರಾಜೀವ್ ಚಂದ್ರಶೇಖರ್ 

ತಿರುವನಂತಪುರಂ: ಮುಂಬರುವ ವಿಧಾನಸಭಾ ಚುನಾವಣೆಯಲ್ಲಿ ಕೇರಳದ ನೇಮಮ್ ಕ್ಷೇತ್ರದಿಂದ ಸ್ಪರ್ಧಿಸುವ ತಮ್ಮ ಇಚ್ಛೆಯನ್ನು ಬಿಜೆಪಿ ರಾಜ್ಯಾಧ್ಯಕ್ಷ ರಾಜೀವ್ ಚಂದ್ರಶೇಖರ್ ಭಾನುವಾರ ಪುನರುಚ್ಚರಿಸಿದ್ದಾರೆ. ನೇಮಮ್‌ನಲ್ಲಿ ಬಿಜೆಪಿಯ ಚುನಾವಣಾ ಗೋಡೆ ಬರಹ ಅಭಿಯಾನಕ್ಕೆ ಚಾಲನೆ ನೀಡಿದ ನಂತರ...

ಯುವತಿಯನ್ನು ಬಂಧಿಸಿಟ್ಟು ಚಿತ್ರಹಿಂಸೆ : ಆರೋಪಿಯ ಬಂಧನ

ಯುವಕನೋರ್ವ ತನ್ನ ಲಿವ್-ಇನ್ ಸಂಗಾತಿಯಾದ 19 ವರ್ಷದ ಯುವತಿಯನ್ನು ಕೊಠಡಿಯಲ್ಲಿ ಬಂಧಿಸಿಟ್ಟು ಚಿತ್ರಹಿಂಸೆ ನೀಡಿರುವ ಘಟನೆ ಗುರುಗಾಂವ್‌ನ ಸೆಕ್ಟರ್ 69ರಲ್ಲಿ ನಡೆದಿದೆ. ಆರೋಪಿಯನ್ನು ದೆಹಲಿಯ ನರೇಲಾ ನಿವಾಸಿ 19 ವರ್ಷದ ಶಿವಂ ಎಂದು ಗುರುತಿಸಲಾಗಿದೆ....

ಕೋಝಿಕ್ಕೋಡ್‌: ಆಹಾರ ಸೇವಿಸಿ, ಬಿಲ್ ಪಾವತಿಸಲು ನಿರಾಕರಿಸಿದ ಮೂವರ ತಂಡದಿಂದ ರೆಸ್ಟೋರೆಂಟ್ ಧ್ವಂಸ

ಕೋಝಿಕ್ಕೋಡ್ (ಕೇರಳ): ಆಹಾರ ಸೇವಿಸಿ, ಹಣ ನೀಡಲು ನಿರಾಕರಿಸಿದ ಮೂವರು ಸದಸ್ಯರ ಗುಂಪೊಂದು ಬಿಲ್ ಕೇಳಿದ್ದಕ್ಕೆ ರೆಸ್ಟೋರೆಂಟ್ ಅನ್ನು ಧ್ವಂಸಗೊಳಿಸಿದೆ ಎಂದು ಪೊಲೀಸರು ಭಾನುವಾರ ತಿಳಿಸಿದ್ದಾರೆ. ಪ್ರಕರಣ ಸಂಬಂಧ ಒಬ್ಬ ವ್ಯಕ್ತಿಯನ್ನು ವಶಕ್ಕೆ ತೆಗೆದುಕೊಳ್ಳಲಾಗಿದ್ದು,...

ಲೈಂಗಿಕ ದೌರ್ಜನ್ಯ ಆರೋಪ : ಸ್ವಾಮಿ ಅವಿಮುಕ್ತೇಶ್ವರಾನಂದ ವಿರುದ್ಧ ಎಫ್‌ಐಆರ್ ದಾಖಲಿಸಲು ಕೋರ್ಟ್ ಆದೇಶ

ಇಬ್ಬರು ಬಾಲಕರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದ ಮೇಲೆ ಜ್ಯೋತಿಷ್ ಪೀಠದ ಸ್ವಾಮಿ ಅವಿಮುಕ್ತೇಶ್ವರಾನಂದ ಸರಸ್ವತಿ ಮತ್ತು ಅವರ ಶಿಷ್ಯ ಮುಕುಂದಾನಂದ ಬ್ರಹ್ಮಚಾರಿ ವಿರುದ್ಧ ಎಫ್‌ಐಆರ್ ದಾಖಲಿಸಲು ಉತ್ತರ ಪ್ರದೇಶದ ಪ್ರಯಾಗ್‌ರಾಜ್‌ನ ವಿಶೇಷ ಪೋಕ್ಸೋ ನ್ಯಾಯಾಲಯ...

ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಶಿಕ್ಷಕಿಯಿಂದ ಹಲ್ಲೆ

ಶಾಲಾ ಶೌಚಾಲಯ ತೊಳೆಯಲು ನಿರಾಕರಿಸಿದ ದಲಿತ ಬಾಲಕಿ ಮೇಲೆ ಹಲ್ಲೆ ನಡೆಸಿದ ಶಿಕ್ಷಕಿ, ಆಕೆಯ ಹೆಸರನ್ನು ದಾಖಲಾತಿಯಿಂದ ತೆಗೆದು ಹಾಕುವುದಾಗಿ ಬೆದರಿಕೆ ಹಾಕಿರುವ ಆರೋಪ ಕೇಳಿ ಬಂದಿದೆ. ಉತ್ತರ ಪ್ರದೇಶದ ಅಲೀಗಢ ಜಿಲ್ಲೆಯ...

ಚಿಕ್ಕಮಗಳೂರಿನಲ್ಲಿ ಒಂದೇ ವಾರದಲ್ಲಿ ಕಾಡಾನೆ ದಾಳಿಗೆ ಎರಡನೇ ಸಾವು; ಆನೆ ಸೆರೆ; ಸರ್ಕಾರದ ವಿರುದ್ಧ ಸ್ಥಳೀಯರ ಪ್ರತಿಭಟನೆ

ಚಿಕ್ಕಮಗಳೂರಿನ ವ್ಯಾಪ್ತಿಯಲ್ಲಿ ದಿನದಿಂದ ದಿನಕ್ಕೆ ಮಾನವ ಹಾಗೂ ಪ್ರಾಣಿಗಳ ಸಂಘರ್ಷ ಹೆಚ್ಚಾಗುತ್ತಿದ್ದು, ಒಂದೇ ವಾರದಲ್ಲಿ ಕಾಡಾನೆ ದಾಳಿಯಿಂದ ಇಬ್ಬರು ಮೃತಪಟ್ಟಿದ್ದಾರೆ. ಭಾನುವಾರ ಬೆಳಗ್ಗೆ ತೋಟದ ಕೆಲಸಕ್ಕೆ ತೆರಳಿದಾಗ ಹೊಸಪೇಟೆ ಮೂಲದ ಬೋರಮ್ಮ(34), ಕಾಡಾನೆ...

ಬಿಜೆಪಿ ಸೇರ್ಪಡೆಯಾದ ಅಸ್ಸಾಂ ಕಾಂಗ್ರೆಸ್ ಮಾಜಿ ಅಧ್ಯಕ್ಷ ಭೂಪೇನ್ ಬೋರಾ

ವಿಧಾನಸಭೆ ಚುನಾವಣೆಯ ಹೊಸ್ತಿಲಲ್ಲಿ ಅಸ್ಸಾಂ ಕಾಂಗ್ರೆಸ್‌ನ ಮಾಜಿ ರಾಜ್ಯಾಧ್ಯಕ್ಷ ಭೂಪೇನ್ ಬೋರಾ ಭಾನುವಾರ (ಫೆ.22) ಬಿಜೆಪಿಗೆ ಸೇರ್ಪಡೆಗೊಂಡಿದ್ದಾರೆ. ಬೋರಾ ಫೆ. 16ರಂದು ಕಾಂಗ್ರೆಸ್ ಪಕ್ಷದ ಪ್ರಾಥಮಿಕ ಸದಸ್ಯತ್ವಕ್ಕೆ ರಾಜೀನಾಮೆ ನೀಡಿದ್ದರು. ಪಕ್ಷದಲ್ಲಿ ತಮ್ಮನ್ನು ನಿರ್ಲಕ್ಷಿಸಲಾಗುತ್ತಿದೆ...

ದೆಹಲಿಯಲ್ಲಿ ಭಯೋತ್ಪಾದನಾ ಸಂಚು ಆರೋಪ: ಬಾಂಗ್ಲಾದೇಶಿ ಪ್ರಜೆಗಳು ಸೇರಿ ಎಂಟು ಮಂದಿ ಬಂಧನ

ನವದೆಹಲಿ: ಪಾಕಿಸ್ತಾನದ ಐಎಸ್‌ಐ ಮತ್ತು ಬಾಂಗ್ಲಾದೇಶ ಮೂಲದ ಉಗ್ರಗಾಮಿ ಸಂಘಟನೆಗಳ ಸೂಚನೆಯ ಮೇರೆಗೆ ದೆಹಲಿಯಲ್ಲಿ ಪ್ರಮುಖ ಭಯೋತ್ಪಾದಕ ಪಿತೂರಿ ನಡೆಸಲು ಸಂಚು ರೂಪಿಸಿದ್ದ ಆರೋಪದ ಮೇಲೆ ಎಂಟು ಶಂಕಿತರನ್ನು ಬಂಧಿಸಲಾಗಿದೆ ಎಂದು ಪೊಲೀಸ್...