Homeಕರ್ನಾಟಕಮಾಜಿ ಸಚಿವ ಶ್ರೀರಾಮುಲುಗೆ ಬಂಧನ ವಾರೆಂಟ್ ನೀಡುವುದಾಗಿ ಎಚ್ಚರಿಕೆ ಕೊಟ್ಟ ಹೈಕೋರ್ಟ್‌

ಮಾಜಿ ಸಚಿವ ಶ್ರೀರಾಮುಲುಗೆ ಬಂಧನ ವಾರೆಂಟ್ ನೀಡುವುದಾಗಿ ಎಚ್ಚರಿಕೆ ಕೊಟ್ಟ ಹೈಕೋರ್ಟ್‌

- Advertisement -
- Advertisement -

ಚುನಾವಣಾ ನೀತಿ ಸಂಹಿತೆ ಉಲ್ಲಂಘನೆ ಆರೋಪ ಸಂಬಂಧ ನಾಲ್ಕು ಬಾರಿ ಸಮನ್ಸ್‌ ನೀಡಿದ್ದರೂ ಮ್ಯಾಜಿಸ್ಟ್ರೇಟ್ ನ್ಯಾಯಾಲಯದ ಮುಂದೆ ಹಾಜರಾಗದ ಮಾಜಿ ಸಚಿವ ಬಿ ಶ್ರೀರಾಮುಲು ಅವರನ್ನು ಶುಕ್ರವಾರ ತರಾಟೆಗೆ ತೆಗೆದುಕೊಂಡಿರುವ ಕರ್ನಾಟಕ ಹೈಕೋರ್ಟ್‌, ಮುಂದಿನ ವಿಚಾರಣೆಗೆ ಹಾಜರಾಗದಿದ್ದರೆ ಬಂಧನದ ಆದೇಶದ ಹೊರಡಿಸಲಾಗುವುದು ಎಂದು ಎಚ್ಚರಿಕೆ ನೀಡಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ ತಮ್ಮ ವಿರುದ್ಧದ ಖಾಸಗಿ ದೂರು ಮತ್ತು ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದ ವಿಚಾರಣೆ ರದ್ದುಪಡಿಸಲು ಕೋರಿ ಬಿ ಶ್ರೀರಾಮುಲು ಸಲ್ಲಿಸಿದ್ದ ಅರ್ಜಿ ವಿಚಾರಣೆಯನ್ನು ನ್ಯಾಯಮೂರ್ತಿ ಕೃಷ್ಣ ಎಸ್.ದೀಕ್ಷಿತ್ ಅವರ ನೇತೃತ್ವದ ಏಕಸದಸ್ಯ ಪೀಠ ಶುಕ್ರವಾರ ನಡೆಸಿತು.

ಅರ್ಜಿದಾರ ಶ್ರೀರಾಮುಲು ಪರ ವಕೀಲ ಗೌತಮ್‌ ಪ್ರಕರಣದ ಮಾಹಿತಿಯನ್ನು ಪೀಠಕ್ಕೆ ವಿವರಿಸಲು ಮುಂದಾದಾಗ ಪ್ರತಿಕ್ರಿಯಿಸಿದ ನ್ಯಾಯಮೂರ್ತಿಗಳು, ಅರ್ಜಿದಾರರು ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮುಂದೆ ಹಾಜರಾಗಿದ್ದಾರೆಯೇ? ಎಂದು ಪ್ರಶ್ನಿಸಿದರು.

ವಕೀಲ ಗೌತಮ್‌ ಅವರು, ‘ಇಲ್ಲ’ ಎಂದು ಉತ್ತರಿಸಿದರು. ಆಗ ನ್ಯಾಯಮೂರ್ತಿಗಳು, ವಿಚಾರಣಾಧೀನ ನ್ಯಾಯಾಲಯ ನೋಟಿಸ್ ಅಥವಾ ಸಮನ್ಸ್ ಜಾರಿಗೊಳಿಸಲು ಆದೇಶಿಸಿಲ್ಲವೇ ಎಂದು ಮರು ಪ್ರಶ್ನೆ ಮಾಡಿದರು. ಇದಕ್ಕೆ ಉತ್ತರಿಸಿದ ಗೌತಮ್‌, ಹೌದು ಜಾರಿಗೊಳಿಸಿದೆ. ಆದರೆ, ನಮಗೆ ತಲುಪಿಲ್ಲ ಎಂದರು.

ಹೆಚ್ಚುವರಿ ಸರ್ಕಾರಿ ಅಭಿಯೋಜಕ ಬಿ ಎನ್ ಜಗದೀಶ್ ಅವರನ್ನು ಉದ್ದೇಶಿಸಿ, ಮ್ಯಾಜಿಸ್ಟ್ರೇಟ್ ನ್ಯಾಯಾಲಯವು ಅರ್ಜಿದಾರರ ವಿರುದ್ಧ ಎಷ್ಟು ಬಾರಿ ಸಮನ್ಸ್ ಹೊರಡಿಸಿದೆ ಎಂದು ನ್ಯಾಯಮೂರ್ತಿಗಳು ಕೇಳಿದರು. ದಾಖಲೆಗಳನ್ನು ಪರಿಶೀಲಿಸಿದ ಜಗದೀಶ್ ಅವರು, ನಾಲ್ಕು ಬಾರಿ ಸಮನ್ಸ್‌ ನೀಡಲಾಗಿದೆ ಎಂದು ಉತ್ತರಿಸಿದರು.

ಇದನ್ನು ಕೇಳಿ ಕೋಪಗೊಂಡ ನ್ಯಾಯಮೂರ್ತಿಗಳು, “ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಎಂದರೆ‌ ನಿಮಗೆ ಅಷ್ಟೊಂದು ತಮಾಷೆಯಾ? ಮ್ಯಾಜಿಸ್ಟ್ರೇಟ್ ಮುಂದೆ ನಿಂತುಕೊಳ್ಳಲು ನಿಮ್ಮ ಅರ್ಜಿದಾರರಿಗೆ ಯಾವ ಅಂತಸ್ತು ಅಡ್ಡಿಯಾಗಿದೆ? ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಎಂದರೆ ಏನೆಂದುಕೊಂಡಿದ್ದೀರಿ? ವಿಚಾರಣಾಧೀನ ನ್ಯಾಯಾಲಯ ನಾಲ್ಕು ಬಾರಿ ಸಮನ್ಸ್ ಹೊರಡಿಸಿದ್ದರೂ ಏಕೆ ಹಾಜರಾಗಿಲ್ಲ?” ಎಂದು ಶ್ರೀರಾಮುಲು ಪರ ವಕೀಲರನ್ನು ತೀವ್ರ ತರಾಟೆಗೆ ತೆಗೆದುಕೊಂಡರು.

ಮ್ಯಾಜಿಸ್ಟ್ರೇಟ್ ನ್ಯಾಯಾಲಯ ಮುಂದಿನ ವಿಚಾರಣೆಗೆ ಅರ್ಜಿದಾರ ಶ್ರೀರಾಮುಲು ಖುದ್ದು ಹಾಜರಾಗಬೇಕು. ತಪ್ಪಿದರೆ, ಅವರ ವಿರುದ್ಧ ಬಂಧನ ಆದೇಶ ಹೊರಡಿಸಲಾಗುವುದು ಎಂದು ನ್ಯಾಯಮೂರ್ತಿ ಎಚ್ಚರಿಕೆ ನೀಡಿದರು.

ಪ್ರಕರಣದ ಹಿನ್ನೆಲೆ : ಚುನಾವಣಾ ಅಧಿಕಾರಿಗಳ ಅನುಮತಿ ಪಡೆಯದೇ 2023ರ ಏಪ್ರಿಲ್‌ 28ರಂದು ಚಿತ್ರದುರ್ಗದ ಚಳ್ಳಕೆರೆ ವಿಧಾನಭಾ ಕ್ಷೇತ್ರದ ತುರವನೂರು ಗ್ರಾಮದಲ್ಲಿ ಬಿಜೆಪಿ ಅಭ್ಯರ್ಥಿ ಆರ್‌ ಅನಿಲ್‌ ಕುಮಾರ್‌ ಪರ ಶ್ರೀರಾಮುಲು ಚುನಾವಣಾ ಪ್ರಚಾರ ಸಮಾವೇಶ ನಡೆಸಿದ್ದರು. ಈ ಸಂಬಂಧ ಶ್ರೀರಾಮುಲು ವಿರುದ್ಧ ಫ್ಲೈಯಿಂಗ್‌ ಸ್ಕ್ವಾಡ್‌ ತಂಡದ ಅಧಿಕಾರಿಯಾಗಿದ್ದ ಎಂ ತಿಪ್ಪೇಸ್ವಾಮಿ, ಚಿತ್ರದುರ್ಗದ ಮ್ಯಾಜಿಸ್ಟ್ರೇಟ್‌ ನ್ಯಾಯಾಲಯದಲ್ಲಿ 2023ರ ಏಪ್ರಿಲ್‌ 29ರಂದು ಖಾಸಗಿ ದೂರು ಸಲ್ಲಿಸಿದ್ದರು. ಮ್ಯಾಜಿಸ್ಟ್ರೇಟ್‌ ನ್ಯಾಯಾಲಯ 2023ರ ಮೇ 5ರಂದು ಶ್ರೀರಾಮುಲುಗೆ ಸಮನ್ಸ್‌ ಜಾರಿಗೊಳಿಸಿತ್ತು. ಇದರ ವಿರುದ್ಧ ಶ್ರೀರಾಮುಲು ಹೈಕೋರ್ಟ್‌ ಮೊರೆ ಹೋಗಿದ್ದರು.

ಇದನ್ನೂ ಓದಿ: ಹಿಂದೂ ಧಾರ್ಮಿಕ ದತ್ತಿ ತಿದ್ದುಪಡಿ ವಿಧೇಯಕ: ಬಿಜೆಪಿ ನಾಯಕರ ಆರೋಪಗಳಿಗೆ ತಿರುಗೇಟು ಕೊಟ್ಟ ಸಿಎಂ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...