Homeಕರ್ನಾಟಕಬೆಂಗಳೂರು ವಕೀಲರ ಸಂಘದಲ್ಲಿ ಶೇ.33 ಮಹಿಳಾ ಮೀಸಲಾತಿ ಕೋರಿ ಅರ್ಜಿ : ಎಎಬಿ, ರಾಜ್ಯ ಸರ್ಕಾರಕ್ಕೆ...

ಬೆಂಗಳೂರು ವಕೀಲರ ಸಂಘದಲ್ಲಿ ಶೇ.33 ಮಹಿಳಾ ಮೀಸಲಾತಿ ಕೋರಿ ಅರ್ಜಿ : ಎಎಬಿ, ರಾಜ್ಯ ಸರ್ಕಾರಕ್ಕೆ ಹೈಕೋರ್ಟ್ ನೋಟಿಸ್

- Advertisement -
- Advertisement -

ಬೆಂಗಳೂರು ವಕೀಲರ ಸಂಘ (ಎಎಬಿ)ದ ಆಡಳಿತ ಮಂಡಳಿ ಮತ್ತು ಕಾರ್ಯಕಾರಿಣಿಯ ವಿವಿಧ ಹುದ್ದೆಗಳಲ್ಲಿ ಮಹಿಳಾ ವಕೀಲರಿಗೆ ಶೇಖಡ 33ರಷ್ಟು ಮೀಸಲಾತಿ ನೀಡುವಂತೆ ಕೋರಿ ವಕೀಲರೊಬ್ಬರು ಸಲ್ಲಿಸಿರುವ ಅರ್ಜಿಗೆ ಸಂಬಂಧಿಸಿದಂತೆ ಎಎಬಿ, ರಾಜ್ಯ ವಕೀಲರ ಪರಿಷತ್ತು ಮತ್ತು ರಾಜ್ಯ ಸರ್ಕಾರಕ್ಕೆ ನೋಟಿಸ್ ಜಾರಿ ಮಾಡಲು ಹೈಕೋರ್ಟ್ ಬುಧವಾರ (ಜ.1) ಆದೇಶಿಸಿದೆ. ವಿಚಾರಣೆಯನ್ನು ಜನವರಿ 6ಕ್ಕೆ ಮುಂದೂಡಿದೆ.

ಎಎಬಿ ಸದಸ್ಯೆ, 26 ವರ್ಷದ ವಕೀಲೆ ದೀಕ್ಷಾ ಎನ್.ಅಮೃತೇಶ್ ಅವರು ಸಲ್ಲಿಸಿರುವ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ಸೂರಜ್ ಗೋವಿಂದರಾಜ್ ಅವರು, ಈ ಆದೇಶ ಹೊರಡಿಸಿದ್ದಾರೆ.

ಸುಪ್ರೀಂ ಕೋರ್ಟ್ ಬಾರ್ ಅಸೋಸಿಯೇಷನ್ ​​(ಎಸ್‌ಸಿಬಿಎ)ನಲ್ಲಿ ಮಹಿಳಾ ವಕೀಲರಿಗೆ ವಿವಿಧ ಹುದ್ದೆಗಳನ್ನು ಮೀಸಲಿಡಲು ಮೇ 2024ರಲ್ಲಿ ಸುಪ್ರೀಂ ಕೋರ್ಟ್ ನೀಡಿದ ನಿರ್ದೇಶನಗಳ ಆಧಾರದ ಮೇಲೆ ಎಎಬಿಯಲ್ಲಿಯೂ ಶೇ. 33ರಷ್ಟು ಹುದ್ದೆಗಳನ್ನು ಮಹಿಳಾ ವಕೀಲರಿಗೆ ಮೀಸಲಿಡಲು ನಿರ್ದೇಶನ ನೀಡುವಂತೆ ಅರ್ಜಿದಾರರು ಕೋರಿದ್ದಾರೆ.

ಬೆಂಗಳೂರು ವಕೀಲರ ಸಂಘದ ಹಾಲಿ ಪದಾಧಿಕಾರಿಗಳ ಅಧಿಕಾರವಧಿ 2024ರ ಡಿಸೆಂಬರ್ 19ರಂದು ಕೊನೆಗೊಂಡಿದೆ. 2025ರ ಫೆಬ್ರವರಿ 2ರಂದು ಚುನಾವಣೆ ನಡೆಯಲಿದೆ. ಈ ಹಿನ್ನೆಲೆಯಲ್ಲಿ ಮಹಿಳೆಯರಿಗೆ ಶೇ 33ರಷ್ಟು ಮೀಸಲು ನಿಗದಿಪಡಿಸುವಂತೆ ಬೆಂಗಳೂರು ವಕೀಲರ ಸಂಘ ಸೇರಿದಂತೆ ಅರ್ಜಿಯಲ್ಲಿ ಉಲ್ಲೇಖಿಸಿರುವ ಇತರೆ ಪ್ರತಿವಾದಿಗಳಿಗೆ ನಾವು 2024ರ ಡಿಸೆಂಬರ್ 23ರಂದು ಮನವಿ ಸಲ್ಲಿಸಿದ್ದೇವೆ. ಆದರೆ, ಅದನ್ನು ಪರಿಗಣಿಸಿಲ್ಲ ಎಂದು ವಕೀಲೆ ದೀಕ್ಷಾ ಎನ್.ಅಮೃತೇಶ್ ತಮ್ಮ ಅರ್ಜಿಯಲ್ಲಿ ಆರೋಪಿಸಿದ್ದಾರೆ.

“ಎಎಬಿಯ ಆಡಳಿತ ಮಂಡಳಿಯು ಐತಿಹಾಸಿಕವಾಗಿ ಪುರುಷ ವಕೀಲರ ಪ್ರಾಬಲ್ಯ ಹೊಂದಿದ್ದು, ಮಹಿಳೆಯರ ಪ್ರಾತಿನಿಧ್ಯ ಬಹಳ ಕಡಿಮೆಯಿದೆ. 2021-24ರಲ್ಲಿ 29 ಆಡಳಿತ ಮಂಡಳಿ ಸದಸ್ಯರ ಪೈಕಿ ಇಬ್ಬರು ಮಾತ್ರ ಮಹಿಳೆಯರಿದ್ದರು. ಈ ವೈವಿಧ್ಯತೆಯ ಕೊರತೆಯು ವಕೀಲ ವೃತ್ತಿಯು ಎತ್ತಿಹಿಡಿಯಲು ಬಯಸುವ ಸಮಾನತೆ ಮತ್ತು ಒಳಗೊಳ್ಳುವಿಕೆಯ ತತ್ವಗಳನ್ನು ದುರ್ಬಲಗೊಳಿಸುತ್ತದೆ. ಲಿಂಗ-ಆಧಾರಿತ ಮೀಸಲಾತಿಗಳನ್ನು ಅನುಷ್ಠಾನಗೊಳಿಸುವ ವಿಫಲತೆಯು ವ್ಯವಸ್ಥಿತ ಅಸಮಾನತೆಗಳನ್ನು ಶಾಶ್ವತಗೊಳಿಸುತ್ತದೆ ಮತ್ತು ಮಹಿಳಾ ವಕೀಲರು ಸಂಘದ ನಾಯಕತ್ವ ಮತ್ತು ನಿರ್ಧಾರ ತೆಗೆದುಕೊಳ್ಳುವ ಪ್ರಕ್ರಿಯೆಗಳಿಗೆ ಕೊಡುಗೆ ನೀಡುವ ಅವಕಾಶವನ್ನು ನಿರಾಕರಿಸುತ್ತದೆ” ಎಂದು ಅರ್ಜಿಯಲ್ಲಿ ಹೇಳಿದ್ದಾರೆ. ಮೀಸಲಾತಿ ಕಲ್ಪಿಸಲು ನಿರ್ದೇಶನ ನೀಡುವಂತೆ ಕೋರಿದ್ದಾರೆ.

ಇದನ್ನೂ ಓದಿ : ಪುರುಷ ಭಕ್ತರು ಮೇಲಂಗಿ ತೆಗೆಯುವ ಪದ್ಧತಿ ಕೈಬಿಡಲು ದೇವಸ್ವಂ ಬೋರ್ಡ್ ಮುಂದಾಗಿದೆ : ಕೇರಳ ಸಿಎಂ ಪಿಣರಾಯಿ ವಿಜಯನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...

ಗಾಜಾದಲ್ಲಿ ಇಸ್ರೇಲ್ ನಡೆಸಿದ ಹೊಸ ಕದನ ವಿರಾಮ ಉಲ್ಲಂಘನೆಯಲ್ಲಿ ಮಕ್ಕಳು ಸೇರಿದಂತೆ 31 ಮಂದಿ ಸಾವು

ಮೇ 2024ರ ನಂತರ ಇಸ್ರೇಲ್ ಮೊದಲ ಬಾರಿಗೆ ಈಜಿಪ್ಟ್‌ನೊಂದಿಗೆ ರಫಾ ಕ್ರಾಸಿಂಗ್ ಅನ್ನು ಮತ್ತೆ ತೆರೆಯಲು ಸಜ್ಜಾಗುತ್ತಿರುವ ಒಂದು ದಿನ ಮೊದಲು, ಅಲ್ ಜಜೀರಾ ಜೊತೆ ಮಾತನಾಡಿದ ವೈದ್ಯಕೀಯ ಮೂಲಗಳು, ಬೆಳಗಿನ ಜಾವದಿಂದ...

ಶಬರಿಮಲೆ ಚಿನ್ನ ಕಳವು ಪ್ರಕರಣ: ಎರಡನೇ ಪ್ರಕರಣದಲ್ಲೂ ಜಾಮೀನು ಕೋರಿ ಅರ್ಜಿ ಸಲ್ಲಿಸಿದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ

ಕೊಲ್ಲಂ (ಕೇರಳ): ಶಬರಿಮಲೆ ಚಿನ್ನ ಕಳವು ಪ್ರಕರಣದ ಪ್ರಮುಖ ಆರೋಪಿ ಉನ್ನಿಕೃಷ್ಣನ್ ಪೊಟ್ಟಿ, ತಮ್ಮ ವಿರುದ್ಧ ದಾಖಲಾಗಿರುವ ಎರಡನೇ ಪ್ರಕರಣದಲ್ಲಿ ಶಾಸನಬದ್ಧ ಜಾಮೀನು ಕೋರಿ ನ್ಯಾಯಾಲಯಕ್ಕೆ ಅರ್ಜಿ ಸಲ್ಲಿಸಿದ್ದಾರೆ. ದ್ವಾರಪಾಲಕ (ರಕ್ಷಕ ದೇವತೆ) ವಿಗ್ರಹ...