Homeಕರ್ನಾಟಕಹುಬ್ಬಳ್ಳಿ ಗಲಭೆ ಸೇರಿದಂತೆ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಹುಬ್ಬಳ್ಳಿ ಗಲಭೆ ಸೇರಿದಂತೆ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್

- Advertisement -
- Advertisement -

ಹುಬ್ಬಳ್ಳಿ ಗಲಭೆ, ಹಾಲಿ ಕೇಂದ್ರ ಮತ್ತು ರಾಜ್ಯ ಸಚಿವರು, ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಶಾಸಕರು, ಕನ್ನಡಪರ ಹೋರಾಟಗಾರರು, ರೈತ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳಿಗೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯುವ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್‌ ಗುರುವಾರ (ಮೇ.29) ರದ್ದುಪಡಿಸಿದೆ.

ಸರ್ಕಾರಿ ಅಭಿಯೋಜಕರಿಗೆ ಅಪರಾಧ ಪ್ರಕ್ರಿಯಾ ಸಂಹಿತೆ ಸೆಕ್ಷನ್‌ 321ರ ಅಡಿ ರಾಜ್ಯದ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ 43 ಪ್ರಕರಣಗಳನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರವು 2024ರ ಅಕ್ಟೋಬರ್‌ 10ರಂದು ಮಾಡಿರುವ ಆದೇಶ ಬದಿಗೆ ಸರಿಸಲು ಕೋರಿ ಬೆಂಗಳೂರಿನ ವಕೀಲ ಗಿರೀಶ್‌ ಭಾರದ್ವಾಜ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ವಿಭಾಗೀಯ ಪೀಠ ಪುರಸ್ಕರಿಸಿದೆ ಎಂದು barandbench.com ವರದಿ ಮಾಡಿದೆ.

“ಸರ್ಕಾರದ ಆದೇಶವನ್ನು ಬದಿಗೆ ಸರಿಸಲಾಗಿದೆ. ಆರಂಭದಿಂದಲೂ ಆದೇಶ ಅಸಿಂಧುವಾಗಿದೆ. ಕಾನೂನಿನ ಪರಿಣಾಮಗಳು ಜಾರಿಯಾಗಲಿವೆ” ಎಂದು ನ್ಯಾಯಾಲಯ ಹೇಳಿರುವುದಾಗಿ ವರದಿ ವಿವರಿಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲ ವೆಂಕಟೇಶ್‌ ದಳವಾಯಿ ಅವರು “ರಾಜ್ಯ ಸರ್ಕಾರವು ಸರ್ಕಾರಿ ಅಭಿಯೋಜಕರಿಗೆ ನಿರ್ದೇಶನ ನೀಡಲಾಗದು. ಸಿಆರ್‌ಪಿಸಿ ಸೆಕ್ಷನ್‌ 321ರ ಅಡಿ ಸರ್ಕಾರಿ ಅಭಿಯೋಜಕರಿಗೆ ಅಂತಿಮ ನಿರ್ಣಯ ತೆಗೆದುಕೊಳ್ಳುವ ಅಧಿಕಾರವಿದೆ. ಸರ್ಕಾರಿ ಅಭಿಯೋಜಕರ ಕಚೇರಿಯು ಅಂಚೆ ಕಚೇರಿಯ ರೀತಿ ನಡೆದುಕೊಳ್ಳಲಾಗದು ಎಂದು ಸುಪ್ರೀಂ ಕೋರ್ಟ್‌ ತೀರ್ಪೊಂದರಲ್ಲಿ ಹೇಳಿದೆ. ಪ್ರಕರಣ ಹಿಂಡೆಯುವಂತೆ ಅಭಿಯೋಜಕರಿಗೆ ಸರ್ಕಾರ ಒತ್ತಡ ಹಾಕಲಾಗದು. ಪ್ರಕರಣಗಳನ್ನು ಹಿಂಪಡೆಯಲು ಅರ್ಹವಾಗಿಲ್ಲ ಎಂದು ಕಾನೂನು ಮತ್ತು ಅಭಿಯೋಜನಾ ಇಲಾಖೆಯು ಟಿಪ್ಪಣಿಯಲ್ಲಿ ಹೇಳಿವೆ. ಅದಾಗ್ಯೂ, ಸರ್ಕಾರ ಆದೇಶ ಮಾಡಿದೆ” ಎಂದು ಹೇಳಿದ್ದರು.

“ಹಲವು ಆರೋಪಿಗಳ ಮೇಲೆ ದೊಂಬಿ, ಕೊಲೆ ಪ್ರಯತ್ನ, ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ ಮತ್ತು ಅತಿಕ್ರಮ ಪ್ರವೇಶದಂಥ ಗಂಭೀರ ಆರೋಪಗಳಿವೆ. ಸಾಮಾಜಿಕ ಮಾಧ್ಯಮದಲ್ಲಿನ ಪೋಸ್ಟ್‌ಗೆ ಆಕ್ಷೇಪಿಸಿ ಹುಬ್ಬಳ್ಳಿಯಲ್ಲಿ ಒಂದು ಕೋಮಿನವರು ಹಳೇಹುಬ್ಬಳ್ಳಿ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದ ಸಂಬಂಧ ದಾಖಲಾಗಿರುವ ಪ್ರಕರಣವೂ ಇದರಲ್ಲಿ ಸೇರಿದೆ” ಎಂದಿದ್ದರು.

ಯಾರದ್ದೆಲ್ಲ ಪ್ರಕರಣ ಹಿಂಪಡೆಯಲಾಗಿತ್ತು?

barandbench.com ವರದಿಯ ಪ್ರಕಾರ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್‌, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ, ವಿಧಾನಪರಿಷತ್‌ ಸದಸ್ಯ ಸಿ.ಟಿ ರವಿ, ನರಗುಂದದ ಬಿ.ಆರ್‌ ಯಾವಗಲ್‌, ಹಿರೇಕೆರೂರು ಶಾಸಕ ಯು. ಬಿ ಬಣಕಾರ್‌, ಕಾಂಗ್ರೆಸ್‌ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ ಗುತ್ತೇದಾರ, ಗುಜರಾತ್‌ ಶಾಸಕ ಜಿಗ್ನೇಶ್‌ ಮೇವಾನಿ, ಮಾಜಿ ಶಾಸಕರಾದ ದಾವಣಗೆರೆಯ ಎಸ್‌.ಎ ರವೀಂದ್ರನಾಥ್‌, ಬೆಳಗಾವಿಯ ಸಂಜಯ್‌ ಪಾಟೀಲ್, ಬಾಗಲಕೋಟೆಯ ಡಾ. ವೀರಣ್ಣ ಚರಂತಿಮಠ ಅವರ ವಿರುದ್ದ ಪ್ರಕರಣ ಹಿಂಪಡೆಯಲು ಸರ್ಕಾರ ಆದೇಶಿಸಿತ್ತು.

ಅಲ್ಲದೆ, ಹೊನ್ನಾಳಿಯ ಎಂ.ಪಿ ರೇಣುಕಾಚಾರ್ಯ, ಬೆಳಗಾವಿಯ ಅನಿಲ ಬೆನಕೆ, ಡಾ. ಎಸ್‌ ಸಿದ್ದಯ್ಯ, ಬೆಂಗಳೂರು ಗಾಮಾಂತರ ಜಿಲ್ಲೆಯ ಬಿ ಶಿವಣ್ಣ, ಭದ್ರಾವತಿಯ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಎಚ್‌. ಆರ್‌ ಬಸವರಾಜಪ್ಪ, ತುಮಕೂರಿನ ಯುವ ಕಾಂಗ್ರೆಸ್‌ ಅಧ್ಯಕ್ಷ ಶಶಿ ಹುಲಿಕುಂಟೆ, ಕಲಬುರಗಿ ಜಿಲ್ಲೆಯ ದರ್ಗಾ ಹಜರತ್‌ ಮಲಿಕುಲ್‌ ಮಶಾಲ್‌ಕಹ್‌ ಮಕ್ದೂಮ್‌ ಲಾಡಿ ಅನ್ಸಾರಿ (ಸುನ್ನಿ) ಅಧ್ಯಕ್ಷರು ಮತ್ತು ಕಾರ್ಯದರ್ಶಿ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘ, ಅಖಿಲ ಕರ್ನಾಟಕ ಡಿ.ಕೆ ಶಿವಕುಮಾರ್‌ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಎಂ.ಎಸ್‌ ಅಂಗಡಿ, ಮೈಸೂರಿನ ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎನ್‌. ಭಾಸ್ಕರ್‌, ಭೀಮ್‌ ಆರ್ಮಿ ಜಿಲ್ಲಾ ಸಮಿತಿಯ ಅಧ್ಯಕ್ಷ ರಾಘು ಚಾಕ್ರಿ ಅವರ ವಿರುದ್ಧದ ಪ್ರಕರಣಗಳನ್ನೂ ಹಿಂಪಡೆಯಲು ಆದೇಶಿಸಲಾಗಿತ್ತು.

ಸೌಜನ್ಯ : barandbench.com

ಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...