Homeಕರ್ನಾಟಕಹುಬ್ಬಳ್ಳಿ ಗಲಭೆ ಸೇರಿದಂತೆ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್

ಹುಬ್ಬಳ್ಳಿ ಗಲಭೆ ಸೇರಿದಂತೆ 43 ಕ್ರಿಮಿನಲ್ ಪ್ರಕರಣಗಳನ್ನು ಹಿಂಪಡೆದ ಸರ್ಕಾರದ ಆದೇಶ ರದ್ದುಗೊಳಿಸಿದ ಹೈಕೋರ್ಟ್

- Advertisement -
- Advertisement -

ಹುಬ್ಬಳ್ಳಿ ಗಲಭೆ, ಹಾಲಿ ಕೇಂದ್ರ ಮತ್ತು ರಾಜ್ಯ ಸಚಿವರು, ಮಾಜಿ ಸಚಿವರು, ಹಾಲಿ ಮತ್ತು ಮಾಜಿ ಶಾಸಕರು, ಕನ್ನಡಪರ ಹೋರಾಟಗಾರರು, ರೈತ ಮುಖಂಡರು, ವಿವಿಧ ಸಂಘಟನೆಗಳ ಪದಾಧಿಕಾರಿಗಳಿಗೆ ಸಂಬಂಧಿಸಿದಂತೆ ರಾಜ್ಯದ ವಿವಿಧ ಪೊಲೀಸ್‌ ಠಾಣೆಗಳಲ್ಲಿ ದಾಖಲಾಗಿರುವ 43 ಕ್ರಿಮಿನಲ್‌ ಪ್ರಕರಣಗಳನ್ನು ಹಿಂಪಡೆಯುವ ರಾಜ್ಯ ಸರ್ಕಾರದ ಆದೇಶವನ್ನು ಹೈಕೋರ್ಟ್‌ ಗುರುವಾರ (ಮೇ.29) ರದ್ದುಪಡಿಸಿದೆ.

ಸರ್ಕಾರಿ ಅಭಿಯೋಜಕರಿಗೆ ಅಪರಾಧ ಪ್ರಕ್ರಿಯಾ ಸಂಹಿತೆ ಸೆಕ್ಷನ್‌ 321ರ ಅಡಿ ರಾಜ್ಯದ ವಿವಿಧ ಠಾಣೆಗಳಲ್ಲಿ ದಾಖಲಾಗಿರುವ 43 ಪ್ರಕರಣಗಳನ್ನು ಹಿಂಪಡೆಯುವಂತೆ ರಾಜ್ಯ ಸರ್ಕಾರವು 2024ರ ಅಕ್ಟೋಬರ್‌ 10ರಂದು ಮಾಡಿರುವ ಆದೇಶ ಬದಿಗೆ ಸರಿಸಲು ಕೋರಿ ಬೆಂಗಳೂರಿನ ವಕೀಲ ಗಿರೀಶ್‌ ಭಾರದ್ವಾಜ್‌ ಅವರು ಸಲ್ಲಿಸಿದ್ದ ಅರ್ಜಿಯನ್ನು ಮುಖ್ಯ ನ್ಯಾಯಮೂರ್ತಿ ಎನ್‌ ವಿ ಅಂಜಾರಿಯಾ ಮತ್ತು ನ್ಯಾಯಮೂರ್ತಿ ಕೆ ವಿ ಅರವಿಂದ್‌ ಅವರ ವಿಭಾಗೀಯ ಪೀಠ ಪುರಸ್ಕರಿಸಿದೆ ಎಂದು barandbench.com ವರದಿ ಮಾಡಿದೆ.

“ಸರ್ಕಾರದ ಆದೇಶವನ್ನು ಬದಿಗೆ ಸರಿಸಲಾಗಿದೆ. ಆರಂಭದಿಂದಲೂ ಆದೇಶ ಅಸಿಂಧುವಾಗಿದೆ. ಕಾನೂನಿನ ಪರಿಣಾಮಗಳು ಜಾರಿಯಾಗಲಿವೆ” ಎಂದು ನ್ಯಾಯಾಲಯ ಹೇಳಿರುವುದಾಗಿ ವರದಿ ವಿವರಿಸಿದೆ.

ಅರ್ಜಿದಾರರ ಪರ ವಾದ ಮಂಡಿಸಿದ್ದ ವಕೀಲ ವೆಂಕಟೇಶ್‌ ದಳವಾಯಿ ಅವರು “ರಾಜ್ಯ ಸರ್ಕಾರವು ಸರ್ಕಾರಿ ಅಭಿಯೋಜಕರಿಗೆ ನಿರ್ದೇಶನ ನೀಡಲಾಗದು. ಸಿಆರ್‌ಪಿಸಿ ಸೆಕ್ಷನ್‌ 321ರ ಅಡಿ ಸರ್ಕಾರಿ ಅಭಿಯೋಜಕರಿಗೆ ಅಂತಿಮ ನಿರ್ಣಯ ತೆಗೆದುಕೊಳ್ಳುವ ಅಧಿಕಾರವಿದೆ. ಸರ್ಕಾರಿ ಅಭಿಯೋಜಕರ ಕಚೇರಿಯು ಅಂಚೆ ಕಚೇರಿಯ ರೀತಿ ನಡೆದುಕೊಳ್ಳಲಾಗದು ಎಂದು ಸುಪ್ರೀಂ ಕೋರ್ಟ್‌ ತೀರ್ಪೊಂದರಲ್ಲಿ ಹೇಳಿದೆ. ಪ್ರಕರಣ ಹಿಂಡೆಯುವಂತೆ ಅಭಿಯೋಜಕರಿಗೆ ಸರ್ಕಾರ ಒತ್ತಡ ಹಾಕಲಾಗದು. ಪ್ರಕರಣಗಳನ್ನು ಹಿಂಪಡೆಯಲು ಅರ್ಹವಾಗಿಲ್ಲ ಎಂದು ಕಾನೂನು ಮತ್ತು ಅಭಿಯೋಜನಾ ಇಲಾಖೆಯು ಟಿಪ್ಪಣಿಯಲ್ಲಿ ಹೇಳಿವೆ. ಅದಾಗ್ಯೂ, ಸರ್ಕಾರ ಆದೇಶ ಮಾಡಿದೆ” ಎಂದು ಹೇಳಿದ್ದರು.

“ಹಲವು ಆರೋಪಿಗಳ ಮೇಲೆ ದೊಂಬಿ, ಕೊಲೆ ಪ್ರಯತ್ನ, ಪೊಲೀಸ್‌ ಅಧಿಕಾರಿಗಳ ಮೇಲೆ ಹಲ್ಲೆ ಮತ್ತು ಅತಿಕ್ರಮ ಪ್ರವೇಶದಂಥ ಗಂಭೀರ ಆರೋಪಗಳಿವೆ. ಸಾಮಾಜಿಕ ಮಾಧ್ಯಮದಲ್ಲಿನ ಪೋಸ್ಟ್‌ಗೆ ಆಕ್ಷೇಪಿಸಿ ಹುಬ್ಬಳ್ಳಿಯಲ್ಲಿ ಒಂದು ಕೋಮಿನವರು ಹಳೇಹುಬ್ಬಳ್ಳಿ ಠಾಣೆಯ ಮೇಲೆ ಕಲ್ಲು ತೂರಾಟ ನಡೆಸಿದ್ದ ಸಂಬಂಧ ದಾಖಲಾಗಿರುವ ಪ್ರಕರಣವೂ ಇದರಲ್ಲಿ ಸೇರಿದೆ” ಎಂದಿದ್ದರು.

ಯಾರದ್ದೆಲ್ಲ ಪ್ರಕರಣ ಹಿಂಪಡೆಯಲಾಗಿತ್ತು?

barandbench.com ವರದಿಯ ಪ್ರಕಾರ, ಉನ್ನತ ಶಿಕ್ಷಣ ಸಚಿವ ಡಾ. ಎಂ.ಸಿ ಸುಧಾಕರ್‌, ಕೇಂದ್ರ ರೈಲ್ವೆ ಖಾತೆ ರಾಜ್ಯ ಸಚಿವ ವಿ ಸೋಮಣ್ಣ, ವಿಧಾನಪರಿಷತ್‌ ಸದಸ್ಯ ಸಿ.ಟಿ ರವಿ, ನರಗುಂದದ ಬಿ.ಆರ್‌ ಯಾವಗಲ್‌, ಹಿರೇಕೆರೂರು ಶಾಸಕ ಯು. ಬಿ ಬಣಕಾರ್‌, ಕಾಂಗ್ರೆಸ್‌ ಕಲಬುರಗಿ ಜಿಲ್ಲಾ ಘಟಕದ ಅಧ್ಯಕ್ಷ ಜಗದೇವ ಗುತ್ತೇದಾರ, ಗುಜರಾತ್‌ ಶಾಸಕ ಜಿಗ್ನೇಶ್‌ ಮೇವಾನಿ, ಮಾಜಿ ಶಾಸಕರಾದ ದಾವಣಗೆರೆಯ ಎಸ್‌.ಎ ರವೀಂದ್ರನಾಥ್‌, ಬೆಳಗಾವಿಯ ಸಂಜಯ್‌ ಪಾಟೀಲ್, ಬಾಗಲಕೋಟೆಯ ಡಾ. ವೀರಣ್ಣ ಚರಂತಿಮಠ ಅವರ ವಿರುದ್ದ ಪ್ರಕರಣ ಹಿಂಪಡೆಯಲು ಸರ್ಕಾರ ಆದೇಶಿಸಿತ್ತು.

ಅಲ್ಲದೆ, ಹೊನ್ನಾಳಿಯ ಎಂ.ಪಿ ರೇಣುಕಾಚಾರ್ಯ, ಬೆಳಗಾವಿಯ ಅನಿಲ ಬೆನಕೆ, ಡಾ. ಎಸ್‌ ಸಿದ್ದಯ್ಯ, ಬೆಂಗಳೂರು ಗಾಮಾಂತರ ಜಿಲ್ಲೆಯ ಬಿ ಶಿವಣ್ಣ, ಭದ್ರಾವತಿಯ ರಾಜ್ಯ ರೈತ ಸಂಘ ಹಾಗೂ ಹಸಿರು ಸೇನೆಯ ರಾಜ್ಯಾಧ್ಯಕ್ಷ ಎಚ್‌. ಆರ್‌ ಬಸವರಾಜಪ್ಪ, ತುಮಕೂರಿನ ಯುವ ಕಾಂಗ್ರೆಸ್‌ ಅಧ್ಯಕ್ಷ ಶಶಿ ಹುಲಿಕುಂಟೆ, ಕಲಬುರಗಿ ಜಿಲ್ಲೆಯ ದರ್ಗಾ ಹಜರತ್‌ ಮಲಿಕುಲ್‌ ಮಶಾಲ್‌ಕಹ್‌ ಮಕ್ದೂಮ್‌ ಲಾಡಿ ಅನ್ಸಾರಿ (ಸುನ್ನಿ) ಅಧ್ಯಕ್ಷರು ಮತ್ತು ಕಾರ್ಯದರ್ಶಿ, ರಾಜ್ಯ ಕಬ್ಬು ಬೆಳೆಗಾರರ ಸಂಘದ ಅಧ್ಯಕ್ಷ ಕುರುಬೂರು ಶಾಂತಕುಮಾರ್‌, ಕರ್ನಾಟಕ ರಾಜ್ಯ ರಸ್ತೆ ಸಾರಿಗೆ ನೌಕರರ ಸಂಘ, ಅಖಿಲ ಕರ್ನಾಟಕ ಡಿ.ಕೆ ಶಿವಕುಮಾರ್‌ ಅಭಿಮಾನಿಗಳ ಸಂಘದ ರಾಜ್ಯಾಧ್ಯಕ್ಷ ಎಂ.ಎಸ್‌ ಅಂಗಡಿ, ಮೈಸೂರಿನ ಸಂವಿಧಾನ ಸಂರಕ್ಷಣಾ ಹೋರಾಟ ಸಮಿತಿ ರಾಜ್ಯಾಧ್ಯಕ್ಷ ಎನ್‌. ಭಾಸ್ಕರ್‌, ಭೀಮ್‌ ಆರ್ಮಿ ಜಿಲ್ಲಾ ಸಮಿತಿಯ ಅಧ್ಯಕ್ಷ ರಾಘು ಚಾಕ್ರಿ ಅವರ ವಿರುದ್ಧದ ಪ್ರಕರಣಗಳನ್ನೂ ಹಿಂಪಡೆಯಲು ಆದೇಶಿಸಲಾಗಿತ್ತು.

ಸೌಜನ್ಯ : barandbench.com

ಬೆಂಗಳೂರು| ರಾತ್ರೋರಾತ್ರಿ ದಲಿತರ ಮನೆ, ದೇವಸ್ಥಾನ ಧ್ವಂಸ ಆರೋಪ: ಪ್ರಕರಣ ದಾಖಲು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...