Homeಕರ್ನಾಟಕಓಲಾ ಕ್ಯಾಬ್‌ನಲ್ಲಿ ಲೈಂಗಿಕ ಕಿರುಕುಳ ಪ್ರಕರಣ : ಸಂತ್ರಸ್ತೆಗೆ ಪರಿಹಾರ ಪಾವತಿಸುವ ಆದೇಶಕ್ಕೆ ಹೈಕೋರ್ಟ್ ತಡೆ

ಓಲಾ ಕ್ಯಾಬ್‌ನಲ್ಲಿ ಲೈಂಗಿಕ ಕಿರುಕುಳ ಪ್ರಕರಣ : ಸಂತ್ರಸ್ತೆಗೆ ಪರಿಹಾರ ಪಾವತಿಸುವ ಆದೇಶಕ್ಕೆ ಹೈಕೋರ್ಟ್ ತಡೆ

- Advertisement -
- Advertisement -

ಓಲಾ ಕ್ಯಾಬ್‌ನಲ್ಲಿ ಪ್ರಯಾಣಿಸುವ ವೇಳೆ ಚಾಲಕನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಯುವತಿಗೆ ಪರಿಹಾರ ರೂಪದಲ್ಲಿ 5 ಲಕ್ಷ ರೂಪಾಯಿ ಪಾವತಿಸುವಂತೆ ಓಲಾ ಕ್ಯಾಬ್‌ ಮಾತೃ ಸಂಸ್ಥೆ ಎಎನ್‌ಐ ಟೆಕ್ನಾಲಜೀಸ್ ಪ್ರೈವೆಟ್ ಲಿಮಿಟೆಡ್‌ಗೆ ಆದೇಶಿಸಿದ್ದ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶಕ್ಕೆ ರಜಾಕಾಲೀನ ವಿಭಾಗೀಯ ಪೀಠ ಶುಕ್ರವಾರ ತಡೆ ನೀಡಿದೆ.

ಎಎನ್‌ಐ ಟೆಕ್ನಾಲಜೀಸ್‌ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಎಸ್‌ ಆರ್‌ ಕೃಷ್ಣ ಕುಮಾರ್‌ ಮತ್ತು ಎಂ ಜಿ ಉಮಾ ಅವರ ವಿಭಾಗೀಯ ಪೀಠವು ನಡೆಸಿತು.

ಮೇಲ್ಮನವಿದಾರರ ಪರವಾಗಿ ವಾದಿಸಿದ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ ಅವರು “ಇದು 5 ಲಕ್ಷ ರೂ. ಪರಿಹಾರ ಪಾವತಿಸುವ ವಿಚಾರವಲ್ಲ. ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ನಿಷೇಧ, ತಡೆ ಮತ್ತು ಪರಿಹಾರ) ಕಾಯ್ದೆ- 2013ರ ವ್ಯಾಖ್ಯಾನಕ್ಕೆ ಸಂಬಂಧಿಸಿದ ವಿಚಾರವಾಗಿದೆ. ನಾವು ಚಾಲಕರಿಗೆ ಉದ್ಯೋಗ ನೀಡಿಲ್ಲ. ಓಲಾ ಸೇವೆಯನ್ನು ಚಾಲಕರು ಬಳಸಿಕೊಳ್ಳುತ್ತಾರೆ. ಚಾಲಕರು ಸ್ವತಂತ್ರ ಗುತ್ತಿಗೆದಾರರಾಗಿದ್ದಾರೆ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಪ್ರಕರಣದ ವಿಚಾರಣೆ ಅಗತ್ಯವಿದೆ. ಹೀಗಾಗಿ, ಸದ್ಯಕ್ಕೆ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲಾಗಿದೆ. ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಅಕ್ಟೋಬರ್‌ 28ಕ್ಕೆ ವಿಚಾರಣೆ ಮುಂದೂಡಲಾಗಿದೆ ಎಂದು ಹೇಳಿದೆ.

ಸಂತ್ರಸ್ತೆ 5 ಲಕ್ಷ ರೂ. ಪರಿಹಾರ ಹಣ ಮಾತ್ರವಲ್ಲದೆ, ವ್ಯಾಜ್ಯ ವೆಚ್ಚವಾಗಿ ಹೆಚ್ಚುವರಿ 50 ಸಾವಿರ ರೂ. ಮೊತ್ತವನ್ನು ಕಂಪನಿ ಪಾವತಿಸಬೇಕು. ಇದಲ್ಲದೆ ಕರ್ನಾಟಕ ರಾಜ್ಯ ಸಾರಿಗೆ ಪ್ರಾಧಿಕಾರದ ಹೆಚ್ಚುವರಿ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಯವರು ವೈಯಕ್ತಿಕವಾಗಿ 1 ಲಕ್ಷ ರೂ. ಹಣವನ್ನು ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರಕ್ಕೆ ಪಾವತಿಸಬೇಕು. ಸಂತ್ರಸ್ತೆ ನೀಡಿದ ದೂರಿನ ಕುರಿತು ಕಂಪನಿಯ ಆಂತರಿಕ ದೂರುಗಳ ಸಮಿತಿ ವಿಚಾರಣೆ ನಡೆಸಬೇಕು. ಆ ವಿಚಾರಣಾ ಪ್ರಕ್ರಿಯೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸಬೇಕು. ಬೆಂಗಳೂರು ನಗರ ಜಿಲ್ಲಾಧಿಕಾರಿ ಸಮಿತಿಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಆದೇಶಿಸಿತ್ತು.

ಪ್ರಕರಣದ ಹಿನ್ನೆಲೆ : 2019ರಲ್ಲಿ ಓಲಾ ಕ್ಯಾಬ್‌ನಲ್ಲಿ ಪ್ರಯಾಣಿಸುವಾಗ ಚಾಲಕನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದು, ಚಾಲಕನ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ಸಂತ್ರಸ್ತೆಯು ಎಎನ್‌ಐ ಟೆಕ್ನಾಲಜೀಸ್‌ಗೆ ದೂರು ನೀಡಿದ್ದರು. ಆಂತರಿಕ ದೂರುಗಳ ಸಮಿತಿಯು ತಮ್ಮ ದೂರನ್ನು ಪರಿಗಣಿಸಿ ಅದರ ಬಗ್ಗೆ ವಿಚಾರಣೆ ನಡೆಸುವ ಅಧಿಕಾರ ಹೊಂದಿಲ್ಲ ಎಂದು ಕಂಪನಿ ಸಂತ್ರಸ್ತೆಗೆ ತಿಳಿಸಿತ್ತು. ಇದನ್ನು ಪ್ರಶ್ನಿಸಿ ಸಂತ್ರಸ್ತೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಸೌಜನ್ಯ : ಬಾರ್ & ಬೆಂಚ್ 

ಇದನ್ನೂ ಓದಿ : ಸಚಿವ ಸಂಪುಟದಲ್ಲಿ ಚರ್ಚಿಸಿ ಒಳ ಮೀಸಲಾತಿ ಜಾರಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...