Homeಕರ್ನಾಟಕಓಲಾ ಕ್ಯಾಬ್‌ನಲ್ಲಿ ಲೈಂಗಿಕ ಕಿರುಕುಳ ಪ್ರಕರಣ : ಸಂತ್ರಸ್ತೆಗೆ ಪರಿಹಾರ ಪಾವತಿಸುವ ಆದೇಶಕ್ಕೆ ಹೈಕೋರ್ಟ್ ತಡೆ

ಓಲಾ ಕ್ಯಾಬ್‌ನಲ್ಲಿ ಲೈಂಗಿಕ ಕಿರುಕುಳ ಪ್ರಕರಣ : ಸಂತ್ರಸ್ತೆಗೆ ಪರಿಹಾರ ಪಾವತಿಸುವ ಆದೇಶಕ್ಕೆ ಹೈಕೋರ್ಟ್ ತಡೆ

- Advertisement -
- Advertisement -

ಓಲಾ ಕ್ಯಾಬ್‌ನಲ್ಲಿ ಪ್ರಯಾಣಿಸುವ ವೇಳೆ ಚಾಲಕನಿಂದ ಲೈಂಗಿಕ ದೌರ್ಜನ್ಯಕ್ಕೆ ಒಳಗಾದ ಯುವತಿಗೆ ಪರಿಹಾರ ರೂಪದಲ್ಲಿ 5 ಲಕ್ಷ ರೂಪಾಯಿ ಪಾವತಿಸುವಂತೆ ಓಲಾ ಕ್ಯಾಬ್‌ ಮಾತೃ ಸಂಸ್ಥೆ ಎಎನ್‌ಐ ಟೆಕ್ನಾಲಜೀಸ್ ಪ್ರೈವೆಟ್ ಲಿಮಿಟೆಡ್‌ಗೆ ಆದೇಶಿಸಿದ್ದ ಕರ್ನಾಟಕ ಹೈಕೋರ್ಟ್‌ನ ಏಕಸದಸ್ಯ ಪೀಠದ ಆದೇಶಕ್ಕೆ ರಜಾಕಾಲೀನ ವಿಭಾಗೀಯ ಪೀಠ ಶುಕ್ರವಾರ ತಡೆ ನೀಡಿದೆ.

ಎಎನ್‌ಐ ಟೆಕ್ನಾಲಜೀಸ್‌ ಸಲ್ಲಿಸಿದ್ದ ಮೇಲ್ಮನವಿಯ ವಿಚಾರಣೆಯನ್ನು ನ್ಯಾಯಮೂರ್ತಿಗಳಾದ ಎಸ್‌ ಆರ್‌ ಕೃಷ್ಣ ಕುಮಾರ್‌ ಮತ್ತು ಎಂ ಜಿ ಉಮಾ ಅವರ ವಿಭಾಗೀಯ ಪೀಠವು ನಡೆಸಿತು.

ಮೇಲ್ಮನವಿದಾರರ ಪರವಾಗಿ ವಾದಿಸಿದ ಹಿರಿಯ ವಕೀಲ ಧ್ಯಾನ್‌ ಚಿನ್ನಪ್ಪ ಅವರು “ಇದು 5 ಲಕ್ಷ ರೂ. ಪರಿಹಾರ ಪಾವತಿಸುವ ವಿಚಾರವಲ್ಲ. ಕೆಲಸದ ಸ್ಥಳದಲ್ಲಿ ಮಹಿಳೆಯರಿಗೆ ಲೈಂಗಿಕ ಕಿರುಕುಳ (ನಿಷೇಧ, ತಡೆ ಮತ್ತು ಪರಿಹಾರ) ಕಾಯ್ದೆ- 2013ರ ವ್ಯಾಖ್ಯಾನಕ್ಕೆ ಸಂಬಂಧಿಸಿದ ವಿಚಾರವಾಗಿದೆ. ನಾವು ಚಾಲಕರಿಗೆ ಉದ್ಯೋಗ ನೀಡಿಲ್ಲ. ಓಲಾ ಸೇವೆಯನ್ನು ಚಾಲಕರು ಬಳಸಿಕೊಳ್ಳುತ್ತಾರೆ. ಚಾಲಕರು ಸ್ವತಂತ್ರ ಗುತ್ತಿಗೆದಾರರಾಗಿದ್ದಾರೆ” ಎಂದಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ಪೀಠ, ಪ್ರಕರಣದ ವಿಚಾರಣೆ ಅಗತ್ಯವಿದೆ. ಹೀಗಾಗಿ, ಸದ್ಯಕ್ಕೆ ಏಕಸದಸ್ಯ ಪೀಠದ ಆದೇಶಕ್ಕೆ ತಡೆ ನೀಡಲಾಗಿದೆ. ಪ್ರತಿವಾದಿಗಳಿಗೆ ನೋಟಿಸ್‌ ಜಾರಿ ಮಾಡಲಾಗಿದೆ. ಅಕ್ಟೋಬರ್‌ 28ಕ್ಕೆ ವಿಚಾರಣೆ ಮುಂದೂಡಲಾಗಿದೆ ಎಂದು ಹೇಳಿದೆ.

ಸಂತ್ರಸ್ತೆ 5 ಲಕ್ಷ ರೂ. ಪರಿಹಾರ ಹಣ ಮಾತ್ರವಲ್ಲದೆ, ವ್ಯಾಜ್ಯ ವೆಚ್ಚವಾಗಿ ಹೆಚ್ಚುವರಿ 50 ಸಾವಿರ ರೂ. ಮೊತ್ತವನ್ನು ಕಂಪನಿ ಪಾವತಿಸಬೇಕು. ಇದಲ್ಲದೆ ಕರ್ನಾಟಕ ರಾಜ್ಯ ಸಾರಿಗೆ ಪ್ರಾಧಿಕಾರದ ಹೆಚ್ಚುವರಿ ಕಾರ್ಯದರ್ಶಿ ಹಾಗೂ ಕಾರ್ಯದರ್ಶಿಯವರು ವೈಯಕ್ತಿಕವಾಗಿ 1 ಲಕ್ಷ ರೂ. ಹಣವನ್ನು ಕರ್ನಾಟಕ ಕಾನೂನು ಸೇವಾ ಪ್ರಾಧಿಕಾರಕ್ಕೆ ಪಾವತಿಸಬೇಕು. ಸಂತ್ರಸ್ತೆ ನೀಡಿದ ದೂರಿನ ಕುರಿತು ಕಂಪನಿಯ ಆಂತರಿಕ ದೂರುಗಳ ಸಮಿತಿ ವಿಚಾರಣೆ ನಡೆಸಬೇಕು. ಆ ವಿಚಾರಣಾ ಪ್ರಕ್ರಿಯೆಯನ್ನು 90 ದಿನಗಳಲ್ಲಿ ಪೂರ್ಣಗೊಳಿಸಬೇಕು. ಬೆಂಗಳೂರು ನಗರ ಜಿಲ್ಲಾಧಿಕಾರಿ ಸಮಿತಿಯ ವರದಿಯನ್ನು ನ್ಯಾಯಾಲಯಕ್ಕೆ ಸಲ್ಲಿಸಬೇಕು ಎಂದು ಆದೇಶಿಸಿತ್ತು.

ಪ್ರಕರಣದ ಹಿನ್ನೆಲೆ : 2019ರಲ್ಲಿ ಓಲಾ ಕ್ಯಾಬ್‌ನಲ್ಲಿ ಪ್ರಯಾಣಿಸುವಾಗ ಚಾಲಕನಿಂದ ಲೈಂಗಿಕ ಕಿರುಕುಳಕ್ಕೆ ಒಳಗಾಗಿದ್ದು, ಚಾಲಕನ ವಿರುದ್ಧ ಕ್ರಮ ಜರುಗಿಸುವಂತೆ ಕೋರಿ ಸಂತ್ರಸ್ತೆಯು ಎಎನ್‌ಐ ಟೆಕ್ನಾಲಜೀಸ್‌ಗೆ ದೂರು ನೀಡಿದ್ದರು. ಆಂತರಿಕ ದೂರುಗಳ ಸಮಿತಿಯು ತಮ್ಮ ದೂರನ್ನು ಪರಿಗಣಿಸಿ ಅದರ ಬಗ್ಗೆ ವಿಚಾರಣೆ ನಡೆಸುವ ಅಧಿಕಾರ ಹೊಂದಿಲ್ಲ ಎಂದು ಕಂಪನಿ ಸಂತ್ರಸ್ತೆಗೆ ತಿಳಿಸಿತ್ತು. ಇದನ್ನು ಪ್ರಶ್ನಿಸಿ ಸಂತ್ರಸ್ತೆ ಹೈಕೋರ್ಟ್ ಮೆಟ್ಟಿಲೇರಿದ್ದರು.

ಸೌಜನ್ಯ : ಬಾರ್ & ಬೆಂಚ್ 

ಇದನ್ನೂ ಓದಿ : ಸಚಿವ ಸಂಪುಟದಲ್ಲಿ ಚರ್ಚಿಸಿ ಒಳ ಮೀಸಲಾತಿ ಜಾರಿ ತೀರ್ಮಾನ : ಸಿಎಂ ಸಿದ್ದರಾಮಯ್ಯ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಬಾಲ ಕಾರ್ಮಿಕ’ ಶಂಕೆಯ ಮೇಲೆ 155 ಮುಸ್ಲಿಂ ವಿದ್ಯಾರ್ಥಿಗಳ ಬಂಧನ: ಧಾರ್ಮಿಕ ಗುರುತಿನ ಕಾರಣಕ್ಕೆ ಬಂಧಿಸಿರುವುದಾಗಿ ಪೋಷಕರ ಆರೋಪ

ಮಧ್ಯಪ್ರದೇಶದ ಕಟ್ನಿಯಲ್ಲಿ ಸರ್ಕಾರಿ ರೈಲ್ವೆ ಪೊಲೀಸರು (GRP) 155 ಮುಸ್ಲಿಂ ವಿದ್ಯಾರ್ಥಿಗಳು ಮತ್ತು ಎಂಟು ಶಿಕ್ಷಕರನ್ನು "ಬಾಲ ಕಾರ್ಮಿಕ" ಶಂಕೆಯ ಮೇಲೆ ಬಂಧಿಸಿದ ನಂತರ, ಪೋಷಕರು ಮುಸ್ಲಿಂ ವಿರೋಧಿ ಪಕ್ಷಪಾತವನ್ನು ಹೊಂದಿದ್ದಾರೆಂದು ಆರೋಪಿಸಿದ್ದಾರೆ....

ಜನಿವಾರದ ಹಿಂದೆ ಬಿದ್ದಿರುವ ವಿರೋಧ ಪಕ್ಷ ಮತ್ತು ಮಾಧ್ಯಮಗಳು

ಏಪ್ರಿಲ್ 23, 2026 ರಂದು ನಡೆದ ಕರ್ನಾಟಕ ಸಾಮಾನ್ಯ ಪ್ರವೇಶ ಪರೀಕ್ಷೆ (KCET) ವೇಳೆ ಬೆಂಗಳೂರಿನ ಕೋರಮಂಗಲದಲ್ಲಿರುವ ಕೃಪಾನಿಧಿ ಪಿಯು ಕಾಲೇಜಿನಲ್ಲಿ ಐವರು ಬ್ರಾಹ್ಮಣ ವಿದ್ಯಾರ್ಥಿಗಳ ಜನಿವಾರವನ್ನು ಬಲವಂತವಾಗಿ ತೆಗೆಸಿದ ಘಟನೆ ರಾಜಕೀಯ...

ಒಡಿಶಾ| ಸಾವಿನ ದಾಖಲೆ ಕೇಳಿದ ಬ್ಯಾಂಕ್‌ ಸಿಬ್ಬಂದಿ; ಸಮಾದಿ ಅಗೆದು ಸಹೋದರಿಯ ಅಸ್ಥಿಪಂಜರ ತಂದ ಬುಡಕಟ್ಟು ವ್ಯಕ್ತಿ

ಒಡಿಶಾದ ಕಿಯೋಂಜಾರ್ ಜಿಲ್ಲೆಯಲ್ಲಿ, ಬುಡಕಟ್ಟು ವ್ಯಕ್ತಿಯೊಬ್ಬ ತನ್ನ ಮೃತ ಸಹೋದರಿಯ ಅಸ್ಥಿಪಂಜರವನ್ನು ಅಗೆದು ಗ್ರಾಮೀಣ ಬ್ಯಾಂಕ್‌ಗೆ ತೆಗೆದುಕೊಂಡು ಹೋಗಿದ್ದಾನೆ. ಆಕೆಯ ಸಾವನ್ನು ಸಾಬೀತುಪಡಿಸುವ ಮೂಲಕ ಆಕೆಯ ಖಾತೆಯಲ್ಲಿ ಜಮಾ ಮಾಡಿದ ಹಣವನ್ನು ಪಡೆಯಲು...

ಜಾತಿ ಕಿರುಕುಳಕ್ಕೆ ದಲಿತ ವಿದ್ಯಾರ್ಥಿ ಸಾವು ಪ್ರಕರಣ: ಇಂದು ಸಂಜೆ 6 ರವರೆಗೆ ಕೇರಳ ಬಂದ್

ಜಾತಿ ಆಧಾರಿತ ಕಿರುಕುಳದಿಂದ ಮನನೊಂದಿದ್ದ ಕೇರಳದ ಅಂಚರಕಂಡಿಯ ಕಣ್ಣೂರು ದಂತ ಕಾಲೇಜಿನಲ್ಲಿ ಪ್ರಥಮ ವರ್ಷದ ಬಿಡಿಎಸ್ ವಿದ್ಯಾರ್ಥಿ ಆರ್.ಎಲ್. ನಿತಿನ್ ರಾಜ್ ಆತ್ಮಹತ್ಯೆಗೆ ರಾಜ್ಯದಾದ್ಯಂತ ಆಕ್ರೋಶ ವ್ಯಕ್ತವಾಗಿದೆ. ಕಾಲೇಜು ಕಟ್ಟಡದಿಂದ ಹಾರಿ ಆತ್ಮಹತ್ಯೆ...

‘ಹೊತ್ತಿ ಉರಿಯುತ್ತಿರುವ ಮಣಿಪುರ’: ಶತಮಾನದ ಬೆಂಕಿಗೆ ತುಪ್ಪ ಸುರಿದ ಬಿಜೆಪಿಯ ಕೋಮುರಾಜಕಾರಣ

ಭಾರತದ ಈಶಾನ್ಯ ರಾಜ್ಯ ಮಣಿಪುರ ಅಕ್ಷರಶಃ ಹೊತ್ತಿ ಉರಿಯುತ್ತಿದೆ. ಶತಮಾನಗಳಿಂದ ಹೊಗೆಯಾಡುತ್ತಿದ್ದ ಹಗೆತನಕ್ಕೆ ಕೋಮುರಾಜಕಾರಣದ ಬಣ್ಣ ಬಳಿದ ಬಿಜೆಪಿ ಮತ್ತು ಕೇಂದ್ರ ಸರ್ಕಾರ ಮಣಿಪುರದ ಜನರತ್ತ ತಿರುಗಿಯೂ ನೋಡುತ್ತಿಲ್ಲ. 2023ರಲ್ಲಿ ಭುಗಿಲೆದ್ದ ಉದ್ವಿಗ್ನತೆ...

ಮಧ್ಯಪ್ರದೇಶ| ದಲಿತ ದಂಪತಿಗೆ ಹನುಮಾನ್ ದೇಗುಲ ಪ್ರವೇಶ ನಿರಾಕರಣೆ; ಸಾಮಾಜಿಕ ಬಹಿಷ್ಕಾರ

ಮಧ್ಯಪ್ರದೇಶದ ಖಾರ್ಗೋನ್ ಜಿಲ್ಲೆಯ ಹನುಮಾನ್ ದೇವಸ್ಥಾನಕ್ಕೆ ನವವಿವಾಹಿತ ದಲಿತ ದಂಪತಿಗೆ ಪ್ರವೇಶ ನಿರಾಕರಿಸಲಾಗಿದೆ ಎಂಬ ಆರೋಪ ಕೇಳಿಬಂದಿದ್ದು, ಇದು ಗ್ರಾಮದಲ್ಲಿ ಉದ್ವಿಗ್ನತೆಯನ್ನು ಉಂಟುಮಾಡಿದೆ. ಈ ಘಟನೆಯು ಜಾತಿ ಆಧಾರಿತ ತಾರತಮ್ಯದ ಕುರಿತು ಕಳವಳ...

ಬಂಗಾಳ SIR : ನ್ಯಾಯಮಂಡಳಿಗಳಿಂದ ಪರಿಹಾರ ಪಡೆದವರು ಕೇವಲ 0.01% ಜನ

ಪಶ್ಚಿಮ ಬಂಗಾಳದಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಲ್ಲಿ ಉಂಟಾದ ವಿವಾದಗಳನ್ನು ಬಗೆಹರಿಸಲು ಮೇಲ್ಮನವಿ ನ್ಯಾಯಮಂಡಳಿಗಳನ್ನು ಸ್ಥಾಪಿಸಲಾಗಿದೆ. ಎಸ್‌ಐಆರ್ ಪ್ರಕ್ರಿಯೆಯ ನಂತರ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದರ ಅಥವಾ...

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...