Homeಕರ್ನಾಟಕʼಒಂದೇ ದೇಶ, ಒಂದೇ ಭಾಷೆʼ ಎಂಬ ಕರಾಳ ನೀತಿಯ ಮೂಲಕ ಹಿಂದಿ ಹೇರಿಕೆ: ಎಚ್.ಡಿ.ಕುಮಾರಸ್ವಾಮಿ

ʼಒಂದೇ ದೇಶ, ಒಂದೇ ಭಾಷೆʼ ಎಂಬ ಕರಾಳ ನೀತಿಯ ಮೂಲಕ ಹಿಂದಿ ಹೇರಿಕೆ: ಎಚ್.ಡಿ.ಕುಮಾರಸ್ವಾಮಿ

- Advertisement -
- Advertisement -

ʼಒಂದೇ ದೇಶ, ಒಂದೇ ಭಾಷೆʼ ಎನ್ನುವ ಕರಾಳ ನೀತಿಯ ಮೂಲಕ ಒಕ್ಕೂಟ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿದೆ. ಆಕಾಶವಾಣಿ ಮತ್ತು ದೂರದರ್ಶನದ ಪ್ರಾದೇಶಿಕ ಕೇಂದ್ರಗಳಿಗೆ ಬೀಗ ಜಡಿಯುವ ಹೇಯ ಕೃತ್ಯಕ್ಕೆ ಕೈಹಾಕಿದೆ ಎಂದು ಮಾಜಿ ಮುಖ್ಯಮಂತ್ರಿ ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.

ಈ ಕುರಿತು ಪತ್ರಿಕೆಯೊಂದರ ವರದಿ ಹಂಚಿಕೊಂಡಿರುವ ಅವರ ಸರಣಿ ಟ್ವೀಟ್‌ಗಳ ಮೂಲಕ ಒಕ್ಕೂಟ ಸರ್ಕಾರದ ಕ್ರಮಕ್ಕೆ ಖಂಡನೆ ವ್ಯಕ್ತಪಡಿಸಿದ್ದಾರೆ.

“ʼಒಂದೇ ದೇಶ, ಒಂದೇ ಭಾಷೆʼ ಎನ್ನುವ ಕರಾಳ ನೀತಿಯ ಮೂಲಕ ಒಕ್ಕೂಟ ಸರ್ಕಾರ ಹಿಂದಿ ಹೇರಿಕೆ ಮಾಡುತ್ತಿರುವ ಕೇಂದ್ರದ ನರೇಂದ್ರ ಮೋದಿ ಸರಕಾರವು ಈಗ ನಮ್ಮ ನಾಡಿನ ಗ್ರಾಮೀಣ, ಜಾನಪದ, ಸಾಂಸ್ಕೃತಿಕ ಸೊಗಡಿನ ದನಿಯಾಗಿರುವ ಆಕಾಶವಾಣಿ ಮತ್ತು ದೂರದರ್ಶನದ ಪ್ರಾದೇಶಿಕ ಕೇಂದ್ರಗಳಿಗೆ ಬೀಗ ಜಡಿಯುವ ಹೇಯ ಕೃತ್ಯಕ್ಕೆ ಕೈಹಾಕಿರುವುದು ಖಂಡನೀಯ” ಎಂದಿದ್ದಾರೆ.

ಇದನ್ನೂ ಓದಿ: ‘#ಕನ್ನಡದಲ್ಲಿUPSC’ ಟ್ವಿಟರ್‌ನಲ್ಲಿ ಟ್ರೆಂಡ್‌; ಅಭಿಯಾನ ಬೆಂಬಲಿಸಲು ಕನ್ನಡಿಗರ ಕರೆ

ಪತ್ರಿಕೆಯೊಂದರಲ್ಲಿ ಪ್ರಕಟವಾಗಿರುವ ವರದಿ ಹಂಚಿಕೊಂಡಿರುವ ಅವರು, “ಪತ್ರಿಕೆಯಲ್ಲಿ ಪ್ರಕಟವಾಗಿರುವ ವರ ಮತ್ತು ಸಂಪಾದಕೀಯ ಅತ್ಯಂತ ಕಳವಳಕಾರಿ. ವಿವಿಧತೆಯಲ್ಲಿ ಏಕತೆಯನ್ನು ಮೈದುಂಬಿಕೊಂಡು ಜಗತ್ತಿಗೆ ʼಬಹುತ್ವತೆಯ ಆದರ್ಶʼ ಆಗಿರುವ ಭಾರತದ ಪ್ರಾದೇಶಿಕ ವೈವಿಧ್ಯಮಯ ಅನನ್ಯ ಸಾಂಸ್ಕೃತಿಕ, ಜಾನಪದ ಸಂಪತ್ತಿಗೆ ಕೇಂದ್ರ ಸರಕಾರ ಕೊಳ್ಳಿ ಇಡಲು ಹೊರಟಿದೆ” ಎಂದು ಎಚ್.ಡಿ.ಕುಮಾರಸ್ವಾಮಿ ಆರೋಪಿಸಿದ್ದಾರೆ.
 “ಈಗಾಗಲೇ ಡಿಡಿ, ಆಕಾಶವಾಣಿಯ ಒಂದೊಂದೇ ಪ್ರಾದೇಶಿಕ ಕಾರ್ಯಕ್ರಮ ಸ್ಥಗಿತಗೊಳಿಸಿದ ನಂತರ ಪ್ರಾದೇಶಿಕ ಪ್ರಸಾರ ಕೇಂದ್ರಗಳನ್ನೂ ಮುಚ್ಚುವ ಹುನ್ನಾರ ನಡೆಸಿದೆ. ಅಕ್ಟೋಬರ್‌ 31ರಿಂದ ಕಲಬುರಗಿ ಪ್ರಾದೇಶಿಕ ಕೇಂದ್ರಕ್ಕೂ ಬೀಗ ಜಡಿಯಲು ಪ್ರಸಾರ ಭಾರತಿ ಹೊರಟಿದೆ. ಇದು ಕನ್ನಡ ವಿರೋಧಿ ನಡೆ, ಪ್ರಾದೇಶಿಕ ಭಾಷೆಗಳಿಗೆ ಚರಮಗೀತೆ ಹಾಡುವ ದಮನ ನೀತಿ” ಎಂದು ಕಿಡಿಕಾರಿದ್ದಾರೆ.
“ರಾಷ್ಟ್ರೀಯ ಮಾನಸಿಕ ಆರೋಗ್ಯ ಮತ್ತು ನರರೋಗ ವಿಜ್ಞಾನ ಸಂಸ್ಥೆ (ನಿಮ್ಹಾನ್ಸ್) 25ನೇ ಘಟಿಕೋತ್ಸವದಲ್ಲಿ ಹಿಂದಿಗೆ ಅಗ್ರಸ್ಥಾನ! ಇಂಗ್ಲೀಷ್ʼಗೆ ದ್ವಿತೀಯ ಸ್ಥಾನ! ಕನ್ನಡಕ್ಕೆ ಮೂರನೇ ಸ್ಥಾನ!! ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ ಎನ್ನುವುದಕ್ಕೆ ಇದಕ್ಕಿಂತ ನಿದರ್ಶನ ಇನ್ನೊಂದಿಲ್ಲ” ಎಂದು ಟ್ವೀಟ್ ಮಾಡಿದ್ದರು.

ಇದನ್ನೂ ಓದಿ: ಅಯ್ಯೋ.. ಕನ್ನಡ ಕಟುಕರ ಕೈಯ್ಯಲ್ಲಿ ಸಿಕ್ಕಿಕೊಂಡಿದೆ!- ಎಚ್.ಡಿ.ಕುಮಾರಸ್ವಾಮಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...