Homeಕರ್ನಾಟಕಎಸ್ಸಿ-ಎಸ್ಟಿ ವಸತಿ ನಿಲಯಗಳಲ್ಲಿ ವಾರ್ಡನ್‌ಗಳ ಕೊರತೆ: ವರದಿ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ಸೂಚನೆ

ಎಸ್ಸಿ-ಎಸ್ಟಿ ವಸತಿ ನಿಲಯಗಳಲ್ಲಿ ವಾರ್ಡನ್‌ಗಳ ಕೊರತೆ: ವರದಿ ಸಲ್ಲಿಸಲು ಸರಕಾರಕ್ಕೆ ಹೈಕೋರ್ಟ್ ಸೂಚನೆ

- Advertisement -
- Advertisement -

ಪರಿಶಿಷ್ಟ ಜಾತಿ ಮತ್ತು ಪಂಗಡಗಳ ವಿದ್ಯಾರ್ಥಿಗಳ ಸರಕಾರಿ ವಸತಿ ನಿಲಯಗಳಲ್ಲಿನ ವಾರ್ಡನ್ ಮತ್ತು ಮೇಲ್ವಿಚಾರಕರ ಹುದ್ದೆಗಳ ಭರ್ತಿಗೆ ಸಂಬಂಧಿಸಿದಂತೆ ಕೈಗೊಂಡಿರುವ ಕ್ರಮಗಳ ಬಗ್ಗೆ ವರದಿ ಸಲ್ಲಿಸುವಂತೆ ಹೈಕೋರ್ಟ್ ರಾಜ್ಯ ಸರಕಾರಕ್ಕೆ ಸೂಚನೆ ನೀಡಿದೆ.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠವು ಸ್ವಯಂ ಪ್ರೇರಿತ ಅರ್ಜಿಯ ವಿಚಾರಣೆ ನಡೆಸಿ ವರದಿ ಸಲ್ಲಿಸಲು ಸರ್ಕಾರಕ್ಕೆ ಎರಡು ವಾರಗಳ ಕಾಲಾವಕಾಶ ನೀಡಿದೆ.

ರಾಜ್ಯದಲ್ಲಿ ಸಮಾಜ ಕಲ್ಯಾಣ ಇಲಾಖೆ ಅಧೀನದಲ್ಲಿರುವ ಎಸ್ಸಿ, ಎಸ್ಟಿ ಹಾಸ್ಟೆಲ್‍ಗಳಲ್ಲಿ ಸಿಬ್ಬಂದಿ ಕೊರತೆಯ ಕುರಿತಂತೆ ಮಾದ್ಯಮಗಳ ವರದಿ ಆಧರಿಸಿ ಸ್ವಹಿತಾಸಕ್ತಿ ಅರ್ಜಿ ವಿಚಾರಣೆಯನ್ನು ಹೈಕೋರ್ಟ್ ವಿಭಾಗೀಯ ಪೀಠ ನಡೆಸಿದೆ.

ಅರ್ಜಿ ವಿಚಾರಣೆ ವೇಳೆ ಹಾಸ್ಟೆಲ್‍ಗಳಲ್ಲಿ ಸಿಬ್ಬಂದಿ ಕೊರತೆಯಿಂದ ವಿದ್ಯಾರ್ಥಿಗಳ ಶೈಕ್ಷಣಿಕ ಬೆಳವಣಿಗೆಗೆ  ತೊಂದರೆಯಾಗಲಿದೆ. ಮಕ್ಕಳ ಹಕ್ಕುಗಳ ರಕ್ಷಣೆ ಮಾಡುವ ವಿಚಾರದಲ್ಲಿ ಸಿಬ್ಬಂದಿಗಳ ಕೊರತೆ ಒಂದು ಗಂಭಿರ ಸಮಸ್ಯೆ ಎನ್ನುವುದನ್ನು ಕೋರ್ಟ್‌ ಗಮನಿಸಿದೆ.

ವಿಚಾರಣೆ ವೇಳೆ ಪ್ರಕರಣದಲ್ಲಿ ಅಮಿಕಸ್ ಕ್ಯೂರಿ ನಿತಿನ್ ರಮೇಶ್ ಹಾಜರಾಗಿ, ವಿದ್ಯಾರ್ಥಿ ನಿಲಯಗಳ ನಿರ್ವಹಣೆಗೆ ಸಂಬಂಧಿಸಿದಂತೆ ರಾಜ್ಯ ಸರಕಾರ ಕೈಗೊಳ್ಳಬೇಕಾದ ಕ್ರಮಗಳ ಬಗ್ಗೆ ರಾಷ್ಟ್ರೀಯ ಮಕ್ಕಳ ಹಕ್ಕುಗಳ ರಕ್ಷಣಾ ಆಯೋಗ ಮಾರ್ಗಸೂಚಿಗಳನ್ನು ಬಿಡುಗಡೆ ಮಾಡಿರುವ ಬಗ್ಗೆ ಕೋರ್ಟ್‌ಗೆ ಮಾಹಿತಿ ನೀಡಿದ್ದಾರೆ.

ನಿತಿನ್ ರಮೇಶ್ ಮುಖ್ಯವಾದ ಅಂಶವನ್ನು ಗಮನಕ್ಕೆ ತಂದಿದ್ದಾರೆ, ಈ ಅಂಶಗಳ ಬಗ್ಗೆ ರಾಜ್ಯ ಸರ್ಕಾರದ ಪ್ರತಿಕ್ರಿಯೆಯನ್ನು ನಾವು ನಿರೀಕ್ಷಿಸುತ್ತೇವೆ. ಈ ಬಗ್ಗೆ ಸಮಗ್ರವಾದ ವಿವರಣೆಯುಳ್ಳ ವರದಿ ಸಲ್ಲಿಸಬೇಕು ಎಂದು ಸರಕಾರದ ಪರ ವಕೀಲರಿಗೆ ತಿಳಿಸಿದ್ದಾರೆ. ಅಲ್ಲದೆ, ಈ ಕುರಿತ ವರದಿಯನ್ನು ಅಮಿಕಸ್ ಕ್ಯೂರಿ ಅವರಿಗೆ ಒಂದು ಪ್ರತಿಯನ್ನು ಅರ್ಜಿ ವಿಚಾರಣೆಗೂ ಬರುವ ಮುನ್ನ ಸಲ್ಲಿಸಬೇಕು. ಅದರಂತೆ ನಾವು ಪ್ರತಿಕ್ರಿಯೆಗೆ ಎರಡು ವಾರಗಳ ಕಾಲಾವಕಾಶ ನೀಡುತ್ತೇವೆ ಎಂದು ಕೋರ್ಟ್‌ ಹೇಳಿದೆ.

ಡಿಸೆಂಬರ್ 7, 2023ರ ಸುದ್ದಿ ವರದಿಯನ್ನು ಆಧರಿಸಿ ಈ ಕುರಿತು ನ್ಯಾಯಾಲಯವು ಸ್ವಯಂ ಪ್ರೇರಿತವಾಗಿ ಅರ್ಜಿ ವಿಚಾರಣೆಯನ್ನು ಕೈಗೆತ್ತಿಕೊಂಡಿತ್ತು. ಇದರಲ್ಲಿ ನೇಮಕಾತಿಗೆ ನಿರ್ದಿಷ್ಟ ಮಾರ್ಗಸೂಚಿಗಳ ಹೊರತಾಗಿಯೂ ಸಮಾಜ ಕಲ್ಯಾಣ ಇಲಾಖೆಗಳು ಸಿಬ್ಬಂದಿಯನ್ನು ನೇಮಿಸಿಲ್ಲ ಎಂದು ಹೇಳಲಾಗಿದೆ. 1,296 ಮೆಟ್ರಿಕ್ ಪೂರ್ವ ಹಾಸ್ಟೆಲ್‌ಗಳು ಮತ್ತು 1,165 ಮೆಟ್ರಿಕ್ ನಂತರದ ಹಾಸ್ಟೆಲ್‌ಗಳಿವೆ ಆದರೆ ಸೂಪರಿಂಟೆಂಡೆಂಟ್‌ಗಳು ಮತ್ತು ವಾರ್ಡನ್‌ಗಳ ಸಂಖ್ಯೆ 1,200 ಕ್ಕಿಂತ ಕಡಿಮೆಯಿರುವುದರಿಂದ ಅಗತ್ಯ ಮಾನವ ಸಂಪನ್ಮೂಲದ ಕೊರತೆ ಉಂಟಾಗುತ್ತದೆ. ಇದು ವಿದ್ಯಾರ್ಥಿಗಳ ಶೈಕ್ಷಣದ ಮೇಲೆ ಪ್ರಭಾವ ಬೀರಲಿದೆ ಎಂದು ವರದಿಯಲ್ಲಿ ಉಲ್ಲೇಖಿಸಲಾಗಿತ್ತು.

ಇದನ್ನು ಓದಿ: ‘ಹಿಂದುತ್ವ ವಾಚ್’ ಎಕ್ಸ್‌ ಖಾತೆಗೆ ಭಾರತದಲ್ಲಿ ನಿರ್ಬಂಧ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗುಜರಾತ್: ‘ಲವ್ ಜಿಹಾದ್’ ತಡೆಗೆ ವಿವಾಹ ನೋಂದಣಿ ಪ್ರಕ್ರಿಯೆಯಲ್ಲಿ ಗಮನಾರ್ಹ ಬದಲಾವಣೆಗಳನ್ನು ಮಾಡುತ್ತೇವೆ; ಡಿಸಿಎಂ ಹರ್ಷ ಸಾಂಘವಿ ಘೋಷಣೆ

ಅಹಮದಾಬಾದ್: ಗುಜರಾತ್‌ನ ಉಪಮುಖ್ಯಮಂತ್ರಿ ಹರ್ಷ ಸಾಂಘವಿ ಶುಕ್ರವಾರ, ರಾಜ್ಯ ಸರ್ಕಾರವು ವಿವಾಹ ನೋಂದಣಿ ಕಾರ್ಯವಿಧಾನದಲ್ಲಿ ಬದಲಾವಣೆಗಳನ್ನು ತರಲಿದೆ ಎಂದು ಘೋಷಿಸಿದ್ದು, "ಸಮಾಜ ವಿರೋಧಿ ಶಕ್ತಿಗಳು", ವಿಶೇಷವಾಗಿ ಗುಜರಾತ್‌ನ ಹೆಣ್ಣುಮಕ್ಕಳನ್ನು "ಲವ್ ಜಿಹಾದ್" ಗಾಗಿ...

ಬಂಗಾಳ ಎಸ್ಐಆರ್ ಪ್ರಕ್ರಿಯೆ: ಚುನಾವಣಾ ಆಯೋಗದ ಸಹಾಯಕ್ಕೆ ನ್ಯಾಯಾಂಗ ಅಧಿಕಾರಿಗಳನ್ನು ನೇಮಿಸಲು ಕಲ್ಕತ್ತಾ ಹೈಕೋರ್ಟ್‌ಗೆ ಸುಪ್ರೀಂ ಸೂಚನೆ

ನವದೆಹಲಿ: ಪಶ್ಚಿಮ ಬಂಗಾಳ ಸರ್ಕಾರ ಮತ್ತು ಚುನಾವಣಾ ಆಯೋಗದ ನಡುವೆ ಮತದಾರರ ಪಟ್ಟಿ ಶುದ್ಧೀಕರಣ ಅಭಿಯಾನಕ್ಕೆ ಸಂಬಂಧಿಸಿದಂತೆ ದುರದೃಷ್ಟಕರ ಆರೋಪದ ಆಟ ನಡೆಯುತ್ತಿದೆ ಎಂದು ಪ್ರತಿಕ್ರಿಯಿಸಿರುವ ಸುಪ್ರೀಂ ಕೋರ್ಟ್, ವಿಶೇಷ ತೀವ್ರ ಪರಿಷ್ಕರಣೆ...

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...