Homeಕರ್ನಾಟಕಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ: ಕಡ್ಡಾಯ ಯಂತ್ರೋಪಕರಣ ಬಳಕೆಗೆ ಹೈಕೋರ್ಟ್ ಸೂಚನೆ

ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ: ಕಡ್ಡಾಯ ಯಂತ್ರೋಪಕರಣ ಬಳಕೆಗೆ ಹೈಕೋರ್ಟ್ ಸೂಚನೆ

ಕೊಳಚೆ ತೆಗೆಯುವ ವ್ಯಕ್ತಿಯ ರಕ್ಷಣೆಗಾಗಿ ಕಡ್ಡಾಯವಾಗಿ 40  ಹೆಚ್ಚು ರಕ್ಷಣಾತ್ಮಕ ಕ್ರಮ ಹಾಗೂ 14 ಯಂತ್ರೋಪಕರಣಗಳನ್ನು ಒದಗಿಸಬೇಕೆಂದು 2013ರ ಕಾನೂನು ಹೇಳಿದೆ.

- Advertisement -
- Advertisement -

ಸಫಾಯಿ ಕರ್ಮಚಾರಿಗಳ ನಿಯೋಜನೆ ನಿಷೇಧ ಹಾಗೂ ಸಫಾಯಿಗಳ ಪುನರ್ವಸತಿ ಅಧಿನಿಯಮ 2013ರನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಸ್ವಚ್ಛತಾ ಕಾರ್ಯದಲ್ಲಿ ಕಡ್ಡಾಯವಾಗಿ ಯಂತ್ರೋಪಕರಣ ಬಳಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಸೂಚಿಸಿದೆ.

2013ರ ಕಾನೂನಿನ ಅನ್ವಯ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ಒದಗಿಸಿರುವ ಯಂತ್ರೋಪಕರಣಗಳ ವರದಿ ಸಲ್ಲಿಸಬೇಕು. ಕಾನೂನು ಪಾಲನೆ ಆಗಿಲ್ಲದಿದ್ದರೆ ಕಾರಣವನ್ನು ನೀಡಬೇಕು ಎಂದು ಜಸ್ಟೀಸ್‌ ಸತೀಶ್‌ ಚಂದ್ರ ಹಾಗೂ ಜಸ್ಟೀಸ್‌ ಸಚಿನ್‌ ಶಂಕರ್‌ ಮಗದುಮ್‌ ಇದ್ದ ವಿಭಾಗೀಯ ಪೀಠ ನಿರ್ದೇಶಿಸಿದೆ.

ರಾಜ್ಯದಲ್ಲಿ ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ ಕಾನೂನು ಉಲ್ಲಂಘನೆಯಾಗುತ್ತಿರುವ ಸಂಬಂಧ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಅಥಾರಿಟಿ ಹಾಗೂ ಆಲ್‌ ಇಂಡಿಯಾ ಸೆಂಟ್ರಲ್‌ ಕೌನ್ಸಿಲ್‌ ಆಫ್‌ ಟ್ರೇಡ್‌ ಯೂನಿಯನ್ಸ್‌ (AICCTU) ಸಂಘಟನೆಗಳು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದವು.

ಕೊಳಚೆ ತೆಗೆಯುವ ಕಾರ್ಯದಲ್ಲಿ ತೊಡಗಿರುವ ವ್ಯಕ್ತಿಯ ರಕ್ಷಣೆಗಾಗಿ ಕಡ್ಡಾಯವಾಗಿ 40  ಹೆಚ್ಚು ರಕ್ಷಣಾತ್ಮಕ ಕ್ರಮ ಹಾಗೂ ಸಲಕರಣೆಗಳನ್ನು ಒದಗಿಸಬೇಕೆಂದು 2013ರ ಕಾನೂನು ಹೇಳಿದೆ. ಸ್ಥಳೀಯ ಸಂಸ್ಥೆಗಳಲ್ಲಿ 14 ಯಂತ್ರೋಪಕರಣಗಳಾದರೂ ಇರಬೇಕು ಎಂದು ಕಾನೂನು ಹೇಳುತ್ತದೆ. ಈ ಸಂಬಂಧ 2013ರ ಡಿಸೆಂಬರ್‌ ನಲ್ಲಿ ಹೈಕೋರ್ಟ್‌ ಎಚ್ಚರಿಸಿತ್ತು. ಆದರೂ ಮಲದಗುಂಡಿಗೆ ಇಳಿದಿದ್ದ ಇಬ್ಬರು ಸಫಾಯಿ ಕರ್ಮಚಾರಿಗಳು ಸಾವನ್ನಪ್ಪಿದ್ದ ಪ್ರಕರಣಗಳು ಘಟಿಸಿದ್ದವು. ಜನವರಿಯಲ್ಲಿ ಕಲುಬುರಗಿ ಜಿಲ್ಲೆಯಲ್ಲಿ ಒಬ್ಬರು, ಜೂನ್‌ನಲ್ಲಿ ರಾಮನಗರ ಜಿಲ್ಲೆಯ ಒಬ್ಬರು ಸಾವನ್ನಪ್ಪಿದ್ದರು. ಇದನ್ನು ಪ್ರಸ್ತಾಪಿಸಿರುವ ಹೈಕೋರ್ಟ್‌, ಕಾನೂನು ಪಾಲನೆಯಲ್ಲಿ ಲೋಪವಾಗಿದ್ದಲ್ಲಿ ಅಕ್ಟೋಬರ್‌ 4ರಂದು ನಡೆಯುವ ವಿಚಾರಣೆಯಲ್ಲಿ ಈ ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕೆಂದು ಆದೇಶಿಸಿದೆ.

“ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ಸಂಬಂಧ ಮೊದಲು ಕಾನೂನು ಬಂದಿದ್ದು 1993ರಲ್ಲಿ. ಹೊಸ ಕಾನೂನು 2013ರಲ್ಲಿ ಬಂದಿತು. ಇಷ್ಟಾದರೂ ಸಫಾಯಿಗಳ ಸರ್ವೇ ಕಾರ್ಯ ನಡೆದಿಲ್ಲ. ಸಫಾಯಿಗಳನ್ನು ಗುರುತಿಸದಿದ್ದಲ್ಲಿ ಪುನರ್ವಸತಿ ಕಲ್ಪಿಸಲು ಸಾಧ್ಯವಾಗದು. ಅವರು ಆರ್ಥಿಕ ದುಸ್ಥಿತಿಯಿಂದಾಗಿ ಒತ್ತಾಯಪೂರ್ವಕವಾಗಿ ಈ ಕೆಲಸವನ್ನು ಮಾಡುತ್ತಾರೆ. ಯಂತ್ರಗಳನ್ನು ಬಳಸುತ್ತಿದ್ದರೂ ಇವರನ್ನು ಕಟ್ಟಕಡೆಯ ಕಾರ್ಮಿಕರನ್ನಾಗಿ ನೋಡಲಾಗುತ್ತದೆ. ಅತ್ಯಂತ ಕೆಳವರ್ಗದವರು ಈ ಕೆಲಸದಲ್ಲಿ ತೊಡಗುವುದರಿಂದ ಅಧಿಕಾರ ವರ್ಗ ಎಷ್ಟರ ಮಟ್ಟಿಗೆ ಕಾನೂನು ಪಾಲನೆ ಮಾಡುತ್ತಿದೆ ಎಂಬ ಪ್ರಶ್ನೆಯೂ ಏಳುತ್ತದೆ” ಎನ್ನುತ್ತಾರೆ ಸಾಮಾಜಿಕ ಕಾರ್ಯಕರ್ತೆ ಮತ್ತು AICCTU ಪದಾಧಿಕಾರಿ ಮೈತ್ರೇಯಿ ಕೃಷ್ಣನ್‌.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಎಫ್‌ಐಆರ್‌ ಆದರೂ ಮುಂದಿನ ಕ್ರಮಗಳು ಜರುಗುವುದಿಲ್ಲ. ಸಫಾಯಿ ಕಾರ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ನಿರ್ದೇಶನಗಳನ್ನು ಹೈಕೋರ್ಟ್‌ ನೀಡಿದೆ. ಸಫಾಯಿಗಳ ಸಮೀಕ್ಷೆ ಹೇಗೆ ಮಾಡಬೇಕೆಂದೂ ತಿಳಿಸಲಾಗಿದೆ. ನಾವು ಮುಖ್ಯವಾಗಿ ಗಮನಿಸಬೇಕಾದ ಅಂಶವೇನೆಂದರೆ ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ಹೊಸ ಹೊಸ ರೂಪದಲ್ಲಿ ಬರುತ್ತಿದೆ. ಸ್ವಚ್ಛ ಭಾರತ ಕಾರ್ಯಕ್ರಮದಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಯಿತು. ಆದರೆ ಒಳಚರಂಡಿ ವ್ಯವಸ್ಥೆಯನ್ನು ನಿರ್ಲಕ್ಷಿಸಲಾಯಿತು. ಈ ಮೂಲಕ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ಪ್ರೋತ್ಸಾಹಿಸಲಾಯಿತು. ಪೌರಕಾರ್ಮಿಕರನ್ನೂ ಸ್ಕ್ಯಾವೆಂಜಿಂಗ್‌ಗೆ ದೂಡಲಾಗುತ್ತಿದೆ. ಮಂಡ್ಯದಲ್ಲಿ ಒಬ್ಬರು ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದರು” ಎಂದು ವಿಷಾಧ ವ್ಯಕ್ತಪಡಿಸಿದರು.

ಈಗ ಹೈಕೋರ್ಟ್ ಮ್ಯಾನುವಲ್ ಸ್ಕಾವೇಂಜಿಗ್ ನಿಷೇಧಿಸಿ, ಕಡ್ಡಾಯವಾಗಿ ಯಂತ್ರೋಪಕರಣಗಳನ್ನು ಬಳಸಬೇಕೆಂದು ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದೆ. ಅಲ್ಲದೇ ಮುಂದಿನ ವಿಚಾರಣೆಯ ದಿನ ಕರ್ತವ್ಯಲೋಪ ಎಸಗಿರುವ ಜಿಲ್ಲಾಧಿಕಾರಿಗಳು ಖುದ್ದು ಹಾಜರಿರಬೇಕೆಂದು ಸೂಚಿಸಿದೆ. ಇನ್ನಾದರೂ ಸರ್ಕಾರಗಳು, ಸ್ಥಳೀಯ ಆಡಳಿತಗಳು ಈ ಕುರಿತು ಎಚ್ಚೆತ್ತುಕೊಳ್ಳಬೇಕಿದೆ. ಪ್ರತಿಯೊಬ್ಬ ಕಾರ್ಮಿಕನಿಗೂ ಘನತೆಯ ಜೀವನ ನಡೆಸಲು ಅವಕಾಶ ನೀಡಬೇಕು ಮತ್ತು ಅನ್ಯಾಯದ ಸಾವುಗಳನ್ನು ತಡೆಗಟ್ಟಬೇಕಿದೆ.


ಇದನ್ನೂ ಓದಿ: LPG ಗ್ಯಾಸ್ ಬೆಲೆ ಮತ್ತೆ 25ರೂ ಹೆಚ್ಚಳ: 15 ದಿನಗಳಲ್ಲಿ ಎರಡು ಬಾರಿ ಬೆಲೆ ಏರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವೆನೆಜುವೆಲಾದ ತೈಲ ಖರೀದಿಗೆ ಅಮೆರಿಕದ ಅನುಮತಿ ಪಡೆಯಲು ರಿಲಯನ್ಸ್ ಮಾತುಕತೆ : ವರದಿ

ಭಾರತದ ರಿಲಯನ್ಸ್ ಇಂಡಸ್ಟ್ರೀಸ್ ವೆನೆಜುವೆಲಾದ ಕಚ್ಚಾ ತೈಲ ಖರೀದಿಯನ್ನು ಪುನರಾರಂಭಿಸಲು ಅಮೆರಿಕದ ಅನುಮೋದನೆಯನ್ನು ಕೋರುತ್ತಿದೆ ಎಂದು ಈ ವಿಷಯದ ಬಗ್ಗೆ ಗೊತ್ತಿರುವ ಎರಡು ಮೂಲಗಳು ಶುಕ್ರವಾರ ತಿಳಿಸಿವೆ ಎಂದು ಸುದ್ದಿ ಸಂಸ್ಥೆ ರಾಯಿಟರ್ಸ್...

ಐ-ಪ್ಯಾಕ್‌ ಮೇಲೆ ದಾಳಿ | ಇಡಿ ಅಧಿಕಾರಿಗಳ ವಿರುದ್ಧ ತನಿಖೆ ಪ್ರಾರಂಭಿಸಿದ ಕೋಲ್ಕತ್ತಾ ಪೊಲೀಸರು : ಸುಪ್ರೀಂ ಕೋರ್ಟ್‌ನಲ್ಲಿ ಕೇವಿಯಟ್ ಸಲ್ಲಿಸಿದ ಪ. ಬಂಗಾಳ ಸರ್ಕಾರ

ಐ-ಪ್ಯಾಕ್ ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ದಾಳಿ ನಡೆಸಿದ ಸಂದರ್ಭದಲ್ಲಿ ದಾಖಲೆಗಳ ಕಳ್ಳತನದ ಆರೋಪದ ಮೇಲೆ ಕೋಲ್ಕತ್ತಾ ಪೊಲೀಸರು ಶನಿವಾರ (ಜ.10)...

ಟ್ರಂಪ್ ಸಂಚಿಗೆ ತಿರುಗೇಟು : ನಾವು ಯಾರ ಅಡಿಯಾಳಾಗಲು ಸಿದ್ದರಿಲ್ಲ ಎಂದ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು

ವೆನೆಜುವೆಲಾ ಬಳಿಕ ಖನಿಜ-ಸಮೃದ್ಧ ಡ್ಯಾನಿಶ್ (ಡೆನ್ಮಾರ್ಕ್‌) ಸ್ವಾಯತ್ತ ಪ್ರದೇಶವಾದ ಗ್ರೀನ್‌ ಲ್ಯಾಂಡ್‌ ಮೇಲೆ ಬಲಪ್ರಯೋಗ ಮಾಡಲು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಯೋಜಿಸುತ್ತಿದ್ದಾರೆ. ಈ ಬಗ್ಗೆ ಪ್ರತಿಕ್ರಿಯೆ ನೀಡಿರುವ ಗ್ರೀನ್‌ಲ್ಯಾಂಡ್‌ನ ರಾಜಕೀಯ ಪಕ್ಷಗಳು...

ಮತ್ತೆ ಒಂದಾದ ಎನ್‌ಸಿಪಿ ಬಣಗಳು : ಸುಪ್ರಿಯಾ ಸುಳೆ ಜೊತೆ ವೇದಿಕೆ ಹಂಚಿಕೊಂಡ ಅಜಿತ್ ಪವಾರ್, ಜಂಟಿ ಪ್ರಣಾಳಿಕೆ ಬಿಡುಗಡೆ

ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಅಜಿತ್ ಪವಾರ್ ನೇತೃತ್ವದ ಎನ್‌ಸಿಪಿ ಮತ್ತು ಅವರ ಚಿಕ್ಕಪ್ಪ ಶರದ್ ಪವಾರ್ ನೇತೃತ್ವದ ಎನ್‌ಸಿಪಿ (ಎಸ್‌ಪಿ) ಶನಿವಾರ (ಜ.10) ಪುಣೆ ಮಹಾನಗರ ಪಾಲಿಕೆಗೆ ನಡೆಯಲಿರುವ ಚುನಾವಣೆಗೆ ಜಂಟಿ ಪ್ರಣಾಳಿಕೆಯನ್ನು ಬಿಡುಗಡೆ...

ಮಹಾರಾಷ್ಟ್ರ : ಲೈಂಗಿಕ ದೌರ್ಜನ್ಯ ಪ್ರಕರಣದ ಆರೋಪಿಯನ್ನು ಕೌನ್ಸಿಲರ್ ಮಾಡಿದ ಬಿಜೆಪಿ

ಬದ್ಲಾಪುರ ಲೈಂಗಿಕ ದೌರ್ಜನ್ಯ ಪ್ರಕರಣದ ಸಹ ಆರೋಪಿ ಮತ್ತು ಶಾಲೆಯೊಂದರ ಮಾಜಿ ಕಾರ್ಯದರ್ಶಿ ತುಷಾರ್ ಆಪ್ಟೆ ಎಂಬಾತನನ್ನು ಥಾಣೆ ಜಿಲ್ಲೆಯ ಕುಲ್ಗಾಂವ್-ಬದ್ಲಾಪುರ ಮುನ್ಸಿಪಲ್ ಕೌನ್ಸಿಲ್‌ಗೆ ಬಿಜೆಪಿ ನಾಮನಿರ್ದೇಶನ ಮಾಡಿದೆ. ಮುನ್ಸಿಪಲ್ ಕೌನ್ಸಿಲ್ ಅಧ್ಯಕ್ಷೆ ರುಚಿತಾ...

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಜೈಲಿಗಟ್ಟಿದ ಪೊಲೀಸರು : ಸಂತ್ರಸ್ತಗೆ 14 ಲಕ್ಷ ರೂ. ಪರಿಹಾರ ನೀಡಲು ಕೋರ್ಟ್ ಆದೇಶ

ಕಳ್ಳನೆಂದು ಸುಳ್ಳಾರೋಪ ಹೊರಿಸಿ ಪೊಲೀಸರು ಜೈಲಿಗಟ್ಟಿದ ವ್ಯಕ್ತಿಗೆ 14 ಲಕ್ಷ ರೂಪಾಯಿ ಪರಿಹಾರ ಒದಗಿಸುವಂತೆ ಕೇರಳ ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿದೆ. ಕಣ್ಣೂರು ಮೂಲದ ವಿ.ಕೆ ತಾಜುದ್ದೀನ್ ಕಾನೂನು ಹೋರಾಟದಲ್ಲಿ ಗೆದ್ದು ಪರಿಹಾರ ಪಡೆದ ವ್ಯಕ್ತಿ....

ಇರಾನ್‌ನಲ್ಲಿ ತೀವ್ರಗೊಂಡ ಆಡಳಿತ ವಿರೋಧಿ ಪ್ರತಿಭಟನೆ : ಟ್ರಂಪ್ ಮಧ್ಯಪ್ರವೇಶ ಕೋರಿದ ಮಾಜಿ ದೊರೆಯ ಮಗ

ಇರಾನ್‌ನಲ್ಲಿ ಭುಗಿಲೆದ್ದಿರುವ ಆಡಳಿತ ವಿರೋಧಿ ಪ್ರತಿಭಟನೆ ತೀವ್ರ ಸ್ವರೂಪ ಪಡೆದುಕೊಂಡಿದೆ. 2025ರ ಡಿಸೆಂಬರ್ 28ರಂದು ಪ್ರಾರಂಭಗೊಂಡ ಪ್ರತಿಭಟನೆಗಳು ಹಿಂಸಾಚಾರ ರೂಪ ಪಡೆದುಕೊಂಡು 13ನೇ ದಿನವೂ ಮುಂದುವರಿದಿದೆ. ಆರ್ಥಿಕ ಬಿಕ್ಕಟ್ಟಿನ ವಿರುದ್ದ (ರಿಯಾಲ್ ಕರೆನ್ಸಿ ಮೌಲ್ಯ...

ಮತದಾರರ ಹೆಸರು ಅಳಿಸಲು ಯತ್ನ : ಬಿಜೆಪಿ ವಿರುದ್ಧ 5 ವಿಪಕ್ಷಗಳಿಂದ ದೂರು ದಾಖಲು

ಅಸ್ಸಾಂನ ಐದು ವಿರೋಧ ಪಕ್ಷಗಳು ಶುಕ್ರವಾರ (ಜ.9) ಪೊಲೀಸ್ ದೂರು ದಾಖಲಿಸಿದ್ದು, ಆಡಳಿತಾರೂಢ ಭಾರತೀಯ ಜನತಾ ಪಾರ್ಟಿ (ಬಿಜೆಪಿ) ರಾಜ್ಯದ ಮತದಾರರ ಪಟ್ಟಿಯಿಂದ ಹೆಚ್ಚಿನ ಸಂಖ್ಯೆಯ ನಿಜವಾದ ಮತದಾರರ ಹೆಸರನ್ನು ಅಳಿಸಲು ಸಂಚು...

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...