Homeಕರ್ನಾಟಕಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ: ಕಡ್ಡಾಯ ಯಂತ್ರೋಪಕರಣ ಬಳಕೆಗೆ ಹೈಕೋರ್ಟ್ ಸೂಚನೆ

ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ: ಕಡ್ಡಾಯ ಯಂತ್ರೋಪಕರಣ ಬಳಕೆಗೆ ಹೈಕೋರ್ಟ್ ಸೂಚನೆ

ಕೊಳಚೆ ತೆಗೆಯುವ ವ್ಯಕ್ತಿಯ ರಕ್ಷಣೆಗಾಗಿ ಕಡ್ಡಾಯವಾಗಿ 40  ಹೆಚ್ಚು ರಕ್ಷಣಾತ್ಮಕ ಕ್ರಮ ಹಾಗೂ 14 ಯಂತ್ರೋಪಕರಣಗಳನ್ನು ಒದಗಿಸಬೇಕೆಂದು 2013ರ ಕಾನೂನು ಹೇಳಿದೆ.

- Advertisement -
- Advertisement -

ಸಫಾಯಿ ಕರ್ಮಚಾರಿಗಳ ನಿಯೋಜನೆ ನಿಷೇಧ ಹಾಗೂ ಸಫಾಯಿಗಳ ಪುನರ್ವಸತಿ ಅಧಿನಿಯಮ 2013ರನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಸ್ವಚ್ಛತಾ ಕಾರ್ಯದಲ್ಲಿ ಕಡ್ಡಾಯವಾಗಿ ಯಂತ್ರೋಪಕರಣ ಬಳಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಸೂಚಿಸಿದೆ.

2013ರ ಕಾನೂನಿನ ಅನ್ವಯ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ಒದಗಿಸಿರುವ ಯಂತ್ರೋಪಕರಣಗಳ ವರದಿ ಸಲ್ಲಿಸಬೇಕು. ಕಾನೂನು ಪಾಲನೆ ಆಗಿಲ್ಲದಿದ್ದರೆ ಕಾರಣವನ್ನು ನೀಡಬೇಕು ಎಂದು ಜಸ್ಟೀಸ್‌ ಸತೀಶ್‌ ಚಂದ್ರ ಹಾಗೂ ಜಸ್ಟೀಸ್‌ ಸಚಿನ್‌ ಶಂಕರ್‌ ಮಗದುಮ್‌ ಇದ್ದ ವಿಭಾಗೀಯ ಪೀಠ ನಿರ್ದೇಶಿಸಿದೆ.

ರಾಜ್ಯದಲ್ಲಿ ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ ಕಾನೂನು ಉಲ್ಲಂಘನೆಯಾಗುತ್ತಿರುವ ಸಂಬಂಧ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಅಥಾರಿಟಿ ಹಾಗೂ ಆಲ್‌ ಇಂಡಿಯಾ ಸೆಂಟ್ರಲ್‌ ಕೌನ್ಸಿಲ್‌ ಆಫ್‌ ಟ್ರೇಡ್‌ ಯೂನಿಯನ್ಸ್‌ (AICCTU) ಸಂಘಟನೆಗಳು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದವು.

ಕೊಳಚೆ ತೆಗೆಯುವ ಕಾರ್ಯದಲ್ಲಿ ತೊಡಗಿರುವ ವ್ಯಕ್ತಿಯ ರಕ್ಷಣೆಗಾಗಿ ಕಡ್ಡಾಯವಾಗಿ 40  ಹೆಚ್ಚು ರಕ್ಷಣಾತ್ಮಕ ಕ್ರಮ ಹಾಗೂ ಸಲಕರಣೆಗಳನ್ನು ಒದಗಿಸಬೇಕೆಂದು 2013ರ ಕಾನೂನು ಹೇಳಿದೆ. ಸ್ಥಳೀಯ ಸಂಸ್ಥೆಗಳಲ್ಲಿ 14 ಯಂತ್ರೋಪಕರಣಗಳಾದರೂ ಇರಬೇಕು ಎಂದು ಕಾನೂನು ಹೇಳುತ್ತದೆ. ಈ ಸಂಬಂಧ 2013ರ ಡಿಸೆಂಬರ್‌ ನಲ್ಲಿ ಹೈಕೋರ್ಟ್‌ ಎಚ್ಚರಿಸಿತ್ತು. ಆದರೂ ಮಲದಗುಂಡಿಗೆ ಇಳಿದಿದ್ದ ಇಬ್ಬರು ಸಫಾಯಿ ಕರ್ಮಚಾರಿಗಳು ಸಾವನ್ನಪ್ಪಿದ್ದ ಪ್ರಕರಣಗಳು ಘಟಿಸಿದ್ದವು. ಜನವರಿಯಲ್ಲಿ ಕಲುಬುರಗಿ ಜಿಲ್ಲೆಯಲ್ಲಿ ಒಬ್ಬರು, ಜೂನ್‌ನಲ್ಲಿ ರಾಮನಗರ ಜಿಲ್ಲೆಯ ಒಬ್ಬರು ಸಾವನ್ನಪ್ಪಿದ್ದರು. ಇದನ್ನು ಪ್ರಸ್ತಾಪಿಸಿರುವ ಹೈಕೋರ್ಟ್‌, ಕಾನೂನು ಪಾಲನೆಯಲ್ಲಿ ಲೋಪವಾಗಿದ್ದಲ್ಲಿ ಅಕ್ಟೋಬರ್‌ 4ರಂದು ನಡೆಯುವ ವಿಚಾರಣೆಯಲ್ಲಿ ಈ ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕೆಂದು ಆದೇಶಿಸಿದೆ.

“ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ಸಂಬಂಧ ಮೊದಲು ಕಾನೂನು ಬಂದಿದ್ದು 1993ರಲ್ಲಿ. ಹೊಸ ಕಾನೂನು 2013ರಲ್ಲಿ ಬಂದಿತು. ಇಷ್ಟಾದರೂ ಸಫಾಯಿಗಳ ಸರ್ವೇ ಕಾರ್ಯ ನಡೆದಿಲ್ಲ. ಸಫಾಯಿಗಳನ್ನು ಗುರುತಿಸದಿದ್ದಲ್ಲಿ ಪುನರ್ವಸತಿ ಕಲ್ಪಿಸಲು ಸಾಧ್ಯವಾಗದು. ಅವರು ಆರ್ಥಿಕ ದುಸ್ಥಿತಿಯಿಂದಾಗಿ ಒತ್ತಾಯಪೂರ್ವಕವಾಗಿ ಈ ಕೆಲಸವನ್ನು ಮಾಡುತ್ತಾರೆ. ಯಂತ್ರಗಳನ್ನು ಬಳಸುತ್ತಿದ್ದರೂ ಇವರನ್ನು ಕಟ್ಟಕಡೆಯ ಕಾರ್ಮಿಕರನ್ನಾಗಿ ನೋಡಲಾಗುತ್ತದೆ. ಅತ್ಯಂತ ಕೆಳವರ್ಗದವರು ಈ ಕೆಲಸದಲ್ಲಿ ತೊಡಗುವುದರಿಂದ ಅಧಿಕಾರ ವರ್ಗ ಎಷ್ಟರ ಮಟ್ಟಿಗೆ ಕಾನೂನು ಪಾಲನೆ ಮಾಡುತ್ತಿದೆ ಎಂಬ ಪ್ರಶ್ನೆಯೂ ಏಳುತ್ತದೆ” ಎನ್ನುತ್ತಾರೆ ಸಾಮಾಜಿಕ ಕಾರ್ಯಕರ್ತೆ ಮತ್ತು AICCTU ಪದಾಧಿಕಾರಿ ಮೈತ್ರೇಯಿ ಕೃಷ್ಣನ್‌.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಎಫ್‌ಐಆರ್‌ ಆದರೂ ಮುಂದಿನ ಕ್ರಮಗಳು ಜರುಗುವುದಿಲ್ಲ. ಸಫಾಯಿ ಕಾರ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ನಿರ್ದೇಶನಗಳನ್ನು ಹೈಕೋರ್ಟ್‌ ನೀಡಿದೆ. ಸಫಾಯಿಗಳ ಸಮೀಕ್ಷೆ ಹೇಗೆ ಮಾಡಬೇಕೆಂದೂ ತಿಳಿಸಲಾಗಿದೆ. ನಾವು ಮುಖ್ಯವಾಗಿ ಗಮನಿಸಬೇಕಾದ ಅಂಶವೇನೆಂದರೆ ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ಹೊಸ ಹೊಸ ರೂಪದಲ್ಲಿ ಬರುತ್ತಿದೆ. ಸ್ವಚ್ಛ ಭಾರತ ಕಾರ್ಯಕ್ರಮದಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಯಿತು. ಆದರೆ ಒಳಚರಂಡಿ ವ್ಯವಸ್ಥೆಯನ್ನು ನಿರ್ಲಕ್ಷಿಸಲಾಯಿತು. ಈ ಮೂಲಕ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ಪ್ರೋತ್ಸಾಹಿಸಲಾಯಿತು. ಪೌರಕಾರ್ಮಿಕರನ್ನೂ ಸ್ಕ್ಯಾವೆಂಜಿಂಗ್‌ಗೆ ದೂಡಲಾಗುತ್ತಿದೆ. ಮಂಡ್ಯದಲ್ಲಿ ಒಬ್ಬರು ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದರು” ಎಂದು ವಿಷಾಧ ವ್ಯಕ್ತಪಡಿಸಿದರು.

ಈಗ ಹೈಕೋರ್ಟ್ ಮ್ಯಾನುವಲ್ ಸ್ಕಾವೇಂಜಿಗ್ ನಿಷೇಧಿಸಿ, ಕಡ್ಡಾಯವಾಗಿ ಯಂತ್ರೋಪಕರಣಗಳನ್ನು ಬಳಸಬೇಕೆಂದು ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದೆ. ಅಲ್ಲದೇ ಮುಂದಿನ ವಿಚಾರಣೆಯ ದಿನ ಕರ್ತವ್ಯಲೋಪ ಎಸಗಿರುವ ಜಿಲ್ಲಾಧಿಕಾರಿಗಳು ಖುದ್ದು ಹಾಜರಿರಬೇಕೆಂದು ಸೂಚಿಸಿದೆ. ಇನ್ನಾದರೂ ಸರ್ಕಾರಗಳು, ಸ್ಥಳೀಯ ಆಡಳಿತಗಳು ಈ ಕುರಿತು ಎಚ್ಚೆತ್ತುಕೊಳ್ಳಬೇಕಿದೆ. ಪ್ರತಿಯೊಬ್ಬ ಕಾರ್ಮಿಕನಿಗೂ ಘನತೆಯ ಜೀವನ ನಡೆಸಲು ಅವಕಾಶ ನೀಡಬೇಕು ಮತ್ತು ಅನ್ಯಾಯದ ಸಾವುಗಳನ್ನು ತಡೆಗಟ್ಟಬೇಕಿದೆ.


ಇದನ್ನೂ ಓದಿ: LPG ಗ್ಯಾಸ್ ಬೆಲೆ ಮತ್ತೆ 25ರೂ ಹೆಚ್ಚಳ: 15 ದಿನಗಳಲ್ಲಿ ಎರಡು ಬಾರಿ ಬೆಲೆ ಏರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರದ ಉಪ ಮುಖ್ಯಮಂತ್ರಿಯಾಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಪ್ರಮಾಣ ವಚನ ಸ್ವೀಕಾರ

ಜನವರಿ 28ರಂದು ವಿಮಾನ ಅಪಘಾತದಲ್ಲಿ ನಿಧನರಾದ ಎನ್‌ಸಿಪಿ ನಾಯಕ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರು ಮಹಾರಾಷ್ಟ್ರದ ಉಪಮುಖ್ಯಮಂತ್ರಿಯಾಗಿ ಶನಿವಾರ (ಜ.31) ಪ್ರಮಾಣವಚನ ಸ್ವೀಕರಿಸಿದರು. ಮುಂಬೈನ ಲೋಕಭವನದಲ್ಲಿ ನಡೆದ ಸರಳ ಸಮಾರಂಭದಲ್ಲಿ...

ಡೊನಾಲ್ಡ್ ಟ್ರಂಪ್, ಎಲಾನ್ ಮಸ್ಕ್‌ನಿಂದ ಬಿಲ್ ಗೇಟ್ಸ್‌ವರೆಗೆ : ಅಂತಿಮ ಎಪ್‌ಸ್ಟೀನ್‌ ಫೈಲ್‌ಗಳಲ್ಲಿ ಹಲವು ಪ್ರಮುಖರ ಹೆಸರು

ಅಮೆರಿಕದ ಸಂಸತ್ತು ಅಂಗೀಕರಿಸಿದ ಎಪ್‌ಸ್ಟೀನ್ ಫೈಲ್ಸ್ ಟ್ರಾನ್ಸ್‌ಪೆರೆನ್ಸಿ ಆಕ್ಟ್ (Epstein Files Transparency Act) ನಿಯಮದಂತೆ ಅಮೆರಿಕದ ನ್ಯಾಯ ಇಲಾಖೆ (ಡಿಒಜಿ) ಲೈಂಗಿಕ ದೌರ್ಜನ್ಯ ಪ್ರಕರಣದ ಅಪರಾಧಿ ಜೆಫ್ರಿ ಎಪ್‌ಸ್ಟೀನ್‌ಗೆ ಸಂಬಂಧಿಸಿದ ಅಂತಿಮ...

ಲಂಚ ಪ್ರಕರಣ : ಎಸ್‌ಇಸಿ ಸಮನ್ಸ್ ಸ್ವೀಕರಿಸಲು ಅದಾನಿ ಒಪ್ಪಿಗೆ

ಲಂಚ ಪ್ರಕರಣದಲ್ಲಿ ಅಮೆರಿಕದ ಸೆಕ್ಯುರಿಟೀಸ್ ಆ್ಯಂಡ್ ಎಕ್ಸ್‌ಚೇಂಜ್ ಕಮಿಷನ್ (ಎಸ್‌ಇಸಿ) ನ ಸಮನ್ಸ್‌ಗಳನ್ನು ಸ್ವೀಕರಿಸಲು ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಪ್ಪಿಕೊಂಡಿದ್ದಾರೆ ಎಂದು ವರದಿಯಾಗಿದೆ. ನ್ಯೂಯಾರ್ಕ್‌ನ ಬ್ರೂಕ್ಲಿನ್‌ನಲ್ಲಿರುವ ಫೆಡರಲ್...

ಬೀದರ್‌ : ಮೊಳಕೇರಾ ಗ್ರಾಮದಲ್ಲಿ ಸ್ಫೋಟ ಪ್ರಕರಣ ; ಸಮಗ್ರ ತನಿಖೆಗೆ ಸಚಿವ ಈಶ್ವರ್ ಖಂಡ್ರೆ ಆದೇಶ

ಬೀದರ್ ಜಿಲ್ಲೆ ಹುಮನಾಬಾದ್ ತಾಲೂಕಿನ ಮೊಳಕೇರಾ ಗ್ರಾಮದ ಮೋಳಗಿ ಮಾರಯ್ಯ ದೇವಸ್ಥಾನ ರಸ್ತೆಯಲ್ಲಿ ಅನುಮಾನಾಸ್ಪದ ವಸ್ತು ಸ್ಫೋಟಗೊಂಡು, ಶಾಲೆಗೆ ತೆರಳುತ್ತಿದ್ದ ಮಕ್ಕಳೂ ಸೇರಿ 6 ಜನರು ಗಾಯಗೊಂಡಿರುವ ಘಟನೆ ಬಗ್ಗೆ ಆಘಾತ ವ್ಯಕ್ತಪಡಿಸಿರುವ...

ಜೈಲಿನಲ್ಲಿರುವ ಹೋರಾಟಗಾರ ಸೋನಮ್ ವಾಂಗ್‌ಚುಕ್‌ಗೆ ಅನಾರೋಗ್ಯ : ಜೋಧ್‌ಪುರದ ಏಮ್ಸ್‌ನಲ್ಲಿ ವೈದ್ಯಕೀಯ ಪರೀಕ್ಷೆ

ನ್ಯಾಯಾಂಗ ಬಂಧನದಲ್ಲಿರುವ ಲಡಾಖ್‌ನ ಹೋರಾಟಗಾರ ಹಾಗೂ ವಿಜ್ಞಾನಿ ಸೋನಮ್ ವಾಂಗ್‌ಚುಕ್ ಅವರ ಆರೋಗ್ಯ ಹದೆಗೆಟ್ಟಿದ್ದು, ಸುಪ್ರೀಂ ಕೋರ್ಟ್ ನಿರ್ದೇಶನ ಅನುಸಾರ ಜೋಧ್‌ಪುರದ ಏಮ್ಸ್‌ನಲ್ಲಿ ಅವರಿಗೆ ವೈದ್ಯಕೀಯ ಪರೀಕ್ಷೆ ನಡೆಸಲಾಗಿದೆ. ಪೊಲೀಸರು ವಾಂಗ್‌ಚುಕ್ ಅವರನ್ನು ಜೋಧ್‌ಪುರ...

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ ತಿದ್ದುಪಡಿ : ಬಲವಂತದ ವಿವಾಹ, ಲಿವ್‌ಇನ್ ಸಂಬಂಧಕ್ಕೆ 7 ವರ್ಷ ಜೈಲು

ಉತ್ತರಾಖಂಡ ಏಕರೂಪ ನಾಗರಿಕ ಸಂಹಿತೆ (ತಿದ್ದುಪಡಿ) ಸುಗ್ರೀವಾಜ್ಞೆಗೆ ರಾಜ್ಯಪಾಲ ಹಾಗೂ ನಿವೃತ್ತ ಲೆಫ್ಟಿನೆಂಟ್ ಜನರಲ್ ಗುರ್ಮೀತ್ ಸಿಂಗ್ ಅವರು ಅಂಕಿತ ಹಾಕಿದ್ದಾರೆ. ಈ ತಿದ್ದುಪಡಿಯ ಪರಿಣಾಮ, ರಾಜ್ಯದಲ್ಲಿ ವಿವಾಹ ಹಾಗೂ ಲಿವ್‌ಇನ್ ಸಂಬಂಧಗಳಿಗೆ...

ಮಹಾರಾಷ್ಟ್ರದ ಡಿಸಿಎಂ ಆಗಿ ಅಜಿತ್ ಪವಾರ್ ಪತ್ನಿ ಸುನೇತ್ರಾ ಪವಾರ್ ಆಯ್ಕೆ : ಇಂದು ಸಂಜೆ ಪ್ರಮಾಣ ವಚನ ಸ್ವೀಕಾರ; ವರದಿ

ಅಜಿತ್ ಪವಾರ್ ಅವರ ಅಕಾಲಿಕ ಸಾವಿನಿಂದ ತೆರವಾದ ಮಹಾರಾಷ್ಟ್ರದ ಉಪಮುಖ್ಯಮಂತ್ರಿ ಸ್ಥಾನಕ್ಕೆ ಅಜಿತ್ ಪವಾರ್ ಅವರ ಪತ್ನಿ ಸುನೇತ್ರಾ ಪವಾರ್ ಅವರನ್ನು ನೇಮಿಸಲು ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿ (ಎನ್‌ಸಿಪಿ) ನಿರ್ಧರಿಸಿದೆ ಎಂದು ವರದಿಯಾಗಿದೆ....

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...