Homeಕರ್ನಾಟಕಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ: ಕಡ್ಡಾಯ ಯಂತ್ರೋಪಕರಣ ಬಳಕೆಗೆ ಹೈಕೋರ್ಟ್ ಸೂಚನೆ

ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ: ಕಡ್ಡಾಯ ಯಂತ್ರೋಪಕರಣ ಬಳಕೆಗೆ ಹೈಕೋರ್ಟ್ ಸೂಚನೆ

ಕೊಳಚೆ ತೆಗೆಯುವ ವ್ಯಕ್ತಿಯ ರಕ್ಷಣೆಗಾಗಿ ಕಡ್ಡಾಯವಾಗಿ 40  ಹೆಚ್ಚು ರಕ್ಷಣಾತ್ಮಕ ಕ್ರಮ ಹಾಗೂ 14 ಯಂತ್ರೋಪಕರಣಗಳನ್ನು ಒದಗಿಸಬೇಕೆಂದು 2013ರ ಕಾನೂನು ಹೇಳಿದೆ.

- Advertisement -
- Advertisement -

ಸಫಾಯಿ ಕರ್ಮಚಾರಿಗಳ ನಿಯೋಜನೆ ನಿಷೇಧ ಹಾಗೂ ಸಫಾಯಿಗಳ ಪುನರ್ವಸತಿ ಅಧಿನಿಯಮ 2013ರನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಸ್ವಚ್ಛತಾ ಕಾರ್ಯದಲ್ಲಿ ಕಡ್ಡಾಯವಾಗಿ ಯಂತ್ರೋಪಕರಣ ಬಳಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಸೂಚಿಸಿದೆ.

2013ರ ಕಾನೂನಿನ ಅನ್ವಯ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ಒದಗಿಸಿರುವ ಯಂತ್ರೋಪಕರಣಗಳ ವರದಿ ಸಲ್ಲಿಸಬೇಕು. ಕಾನೂನು ಪಾಲನೆ ಆಗಿಲ್ಲದಿದ್ದರೆ ಕಾರಣವನ್ನು ನೀಡಬೇಕು ಎಂದು ಜಸ್ಟೀಸ್‌ ಸತೀಶ್‌ ಚಂದ್ರ ಹಾಗೂ ಜಸ್ಟೀಸ್‌ ಸಚಿನ್‌ ಶಂಕರ್‌ ಮಗದುಮ್‌ ಇದ್ದ ವಿಭಾಗೀಯ ಪೀಠ ನಿರ್ದೇಶಿಸಿದೆ.

ರಾಜ್ಯದಲ್ಲಿ ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ ಕಾನೂನು ಉಲ್ಲಂಘನೆಯಾಗುತ್ತಿರುವ ಸಂಬಂಧ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಅಥಾರಿಟಿ ಹಾಗೂ ಆಲ್‌ ಇಂಡಿಯಾ ಸೆಂಟ್ರಲ್‌ ಕೌನ್ಸಿಲ್‌ ಆಫ್‌ ಟ್ರೇಡ್‌ ಯೂನಿಯನ್ಸ್‌ (AICCTU) ಸಂಘಟನೆಗಳು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದವು.

ಕೊಳಚೆ ತೆಗೆಯುವ ಕಾರ್ಯದಲ್ಲಿ ತೊಡಗಿರುವ ವ್ಯಕ್ತಿಯ ರಕ್ಷಣೆಗಾಗಿ ಕಡ್ಡಾಯವಾಗಿ 40  ಹೆಚ್ಚು ರಕ್ಷಣಾತ್ಮಕ ಕ್ರಮ ಹಾಗೂ ಸಲಕರಣೆಗಳನ್ನು ಒದಗಿಸಬೇಕೆಂದು 2013ರ ಕಾನೂನು ಹೇಳಿದೆ. ಸ್ಥಳೀಯ ಸಂಸ್ಥೆಗಳಲ್ಲಿ 14 ಯಂತ್ರೋಪಕರಣಗಳಾದರೂ ಇರಬೇಕು ಎಂದು ಕಾನೂನು ಹೇಳುತ್ತದೆ. ಈ ಸಂಬಂಧ 2013ರ ಡಿಸೆಂಬರ್‌ ನಲ್ಲಿ ಹೈಕೋರ್ಟ್‌ ಎಚ್ಚರಿಸಿತ್ತು. ಆದರೂ ಮಲದಗುಂಡಿಗೆ ಇಳಿದಿದ್ದ ಇಬ್ಬರು ಸಫಾಯಿ ಕರ್ಮಚಾರಿಗಳು ಸಾವನ್ನಪ್ಪಿದ್ದ ಪ್ರಕರಣಗಳು ಘಟಿಸಿದ್ದವು. ಜನವರಿಯಲ್ಲಿ ಕಲುಬುರಗಿ ಜಿಲ್ಲೆಯಲ್ಲಿ ಒಬ್ಬರು, ಜೂನ್‌ನಲ್ಲಿ ರಾಮನಗರ ಜಿಲ್ಲೆಯ ಒಬ್ಬರು ಸಾವನ್ನಪ್ಪಿದ್ದರು. ಇದನ್ನು ಪ್ರಸ್ತಾಪಿಸಿರುವ ಹೈಕೋರ್ಟ್‌, ಕಾನೂನು ಪಾಲನೆಯಲ್ಲಿ ಲೋಪವಾಗಿದ್ದಲ್ಲಿ ಅಕ್ಟೋಬರ್‌ 4ರಂದು ನಡೆಯುವ ವಿಚಾರಣೆಯಲ್ಲಿ ಈ ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕೆಂದು ಆದೇಶಿಸಿದೆ.

“ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ಸಂಬಂಧ ಮೊದಲು ಕಾನೂನು ಬಂದಿದ್ದು 1993ರಲ್ಲಿ. ಹೊಸ ಕಾನೂನು 2013ರಲ್ಲಿ ಬಂದಿತು. ಇಷ್ಟಾದರೂ ಸಫಾಯಿಗಳ ಸರ್ವೇ ಕಾರ್ಯ ನಡೆದಿಲ್ಲ. ಸಫಾಯಿಗಳನ್ನು ಗುರುತಿಸದಿದ್ದಲ್ಲಿ ಪುನರ್ವಸತಿ ಕಲ್ಪಿಸಲು ಸಾಧ್ಯವಾಗದು. ಅವರು ಆರ್ಥಿಕ ದುಸ್ಥಿತಿಯಿಂದಾಗಿ ಒತ್ತಾಯಪೂರ್ವಕವಾಗಿ ಈ ಕೆಲಸವನ್ನು ಮಾಡುತ್ತಾರೆ. ಯಂತ್ರಗಳನ್ನು ಬಳಸುತ್ತಿದ್ದರೂ ಇವರನ್ನು ಕಟ್ಟಕಡೆಯ ಕಾರ್ಮಿಕರನ್ನಾಗಿ ನೋಡಲಾಗುತ್ತದೆ. ಅತ್ಯಂತ ಕೆಳವರ್ಗದವರು ಈ ಕೆಲಸದಲ್ಲಿ ತೊಡಗುವುದರಿಂದ ಅಧಿಕಾರ ವರ್ಗ ಎಷ್ಟರ ಮಟ್ಟಿಗೆ ಕಾನೂನು ಪಾಲನೆ ಮಾಡುತ್ತಿದೆ ಎಂಬ ಪ್ರಶ್ನೆಯೂ ಏಳುತ್ತದೆ” ಎನ್ನುತ್ತಾರೆ ಸಾಮಾಜಿಕ ಕಾರ್ಯಕರ್ತೆ ಮತ್ತು AICCTU ಪದಾಧಿಕಾರಿ ಮೈತ್ರೇಯಿ ಕೃಷ್ಣನ್‌.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಎಫ್‌ಐಆರ್‌ ಆದರೂ ಮುಂದಿನ ಕ್ರಮಗಳು ಜರುಗುವುದಿಲ್ಲ. ಸಫಾಯಿ ಕಾರ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ನಿರ್ದೇಶನಗಳನ್ನು ಹೈಕೋರ್ಟ್‌ ನೀಡಿದೆ. ಸಫಾಯಿಗಳ ಸಮೀಕ್ಷೆ ಹೇಗೆ ಮಾಡಬೇಕೆಂದೂ ತಿಳಿಸಲಾಗಿದೆ. ನಾವು ಮುಖ್ಯವಾಗಿ ಗಮನಿಸಬೇಕಾದ ಅಂಶವೇನೆಂದರೆ ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ಹೊಸ ಹೊಸ ರೂಪದಲ್ಲಿ ಬರುತ್ತಿದೆ. ಸ್ವಚ್ಛ ಭಾರತ ಕಾರ್ಯಕ್ರಮದಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಯಿತು. ಆದರೆ ಒಳಚರಂಡಿ ವ್ಯವಸ್ಥೆಯನ್ನು ನಿರ್ಲಕ್ಷಿಸಲಾಯಿತು. ಈ ಮೂಲಕ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ಪ್ರೋತ್ಸಾಹಿಸಲಾಯಿತು. ಪೌರಕಾರ್ಮಿಕರನ್ನೂ ಸ್ಕ್ಯಾವೆಂಜಿಂಗ್‌ಗೆ ದೂಡಲಾಗುತ್ತಿದೆ. ಮಂಡ್ಯದಲ್ಲಿ ಒಬ್ಬರು ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದರು” ಎಂದು ವಿಷಾಧ ವ್ಯಕ್ತಪಡಿಸಿದರು.

ಈಗ ಹೈಕೋರ್ಟ್ ಮ್ಯಾನುವಲ್ ಸ್ಕಾವೇಂಜಿಗ್ ನಿಷೇಧಿಸಿ, ಕಡ್ಡಾಯವಾಗಿ ಯಂತ್ರೋಪಕರಣಗಳನ್ನು ಬಳಸಬೇಕೆಂದು ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದೆ. ಅಲ್ಲದೇ ಮುಂದಿನ ವಿಚಾರಣೆಯ ದಿನ ಕರ್ತವ್ಯಲೋಪ ಎಸಗಿರುವ ಜಿಲ್ಲಾಧಿಕಾರಿಗಳು ಖುದ್ದು ಹಾಜರಿರಬೇಕೆಂದು ಸೂಚಿಸಿದೆ. ಇನ್ನಾದರೂ ಸರ್ಕಾರಗಳು, ಸ್ಥಳೀಯ ಆಡಳಿತಗಳು ಈ ಕುರಿತು ಎಚ್ಚೆತ್ತುಕೊಳ್ಳಬೇಕಿದೆ. ಪ್ರತಿಯೊಬ್ಬ ಕಾರ್ಮಿಕನಿಗೂ ಘನತೆಯ ಜೀವನ ನಡೆಸಲು ಅವಕಾಶ ನೀಡಬೇಕು ಮತ್ತು ಅನ್ಯಾಯದ ಸಾವುಗಳನ್ನು ತಡೆಗಟ್ಟಬೇಕಿದೆ.


ಇದನ್ನೂ ಓದಿ: LPG ಗ್ಯಾಸ್ ಬೆಲೆ ಮತ್ತೆ 25ರೂ ಹೆಚ್ಚಳ: 15 ದಿನಗಳಲ್ಲಿ ಎರಡು ಬಾರಿ ಬೆಲೆ ಏರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...