Homeಕರ್ನಾಟಕಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ: ಕಡ್ಡಾಯ ಯಂತ್ರೋಪಕರಣ ಬಳಕೆಗೆ ಹೈಕೋರ್ಟ್ ಸೂಚನೆ

ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ: ಕಡ್ಡಾಯ ಯಂತ್ರೋಪಕರಣ ಬಳಕೆಗೆ ಹೈಕೋರ್ಟ್ ಸೂಚನೆ

ಕೊಳಚೆ ತೆಗೆಯುವ ವ್ಯಕ್ತಿಯ ರಕ್ಷಣೆಗಾಗಿ ಕಡ್ಡಾಯವಾಗಿ 40  ಹೆಚ್ಚು ರಕ್ಷಣಾತ್ಮಕ ಕ್ರಮ ಹಾಗೂ 14 ಯಂತ್ರೋಪಕರಣಗಳನ್ನು ಒದಗಿಸಬೇಕೆಂದು 2013ರ ಕಾನೂನು ಹೇಳಿದೆ.

- Advertisement -
- Advertisement -

ಸಫಾಯಿ ಕರ್ಮಚಾರಿಗಳ ನಿಯೋಜನೆ ನಿಷೇಧ ಹಾಗೂ ಸಫಾಯಿಗಳ ಪುನರ್ವಸತಿ ಅಧಿನಿಯಮ 2013ರನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಸ್ವಚ್ಛತಾ ಕಾರ್ಯದಲ್ಲಿ ಕಡ್ಡಾಯವಾಗಿ ಯಂತ್ರೋಪಕರಣ ಬಳಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಸೂಚಿಸಿದೆ.

2013ರ ಕಾನೂನಿನ ಅನ್ವಯ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ಒದಗಿಸಿರುವ ಯಂತ್ರೋಪಕರಣಗಳ ವರದಿ ಸಲ್ಲಿಸಬೇಕು. ಕಾನೂನು ಪಾಲನೆ ಆಗಿಲ್ಲದಿದ್ದರೆ ಕಾರಣವನ್ನು ನೀಡಬೇಕು ಎಂದು ಜಸ್ಟೀಸ್‌ ಸತೀಶ್‌ ಚಂದ್ರ ಹಾಗೂ ಜಸ್ಟೀಸ್‌ ಸಚಿನ್‌ ಶಂಕರ್‌ ಮಗದುಮ್‌ ಇದ್ದ ವಿಭಾಗೀಯ ಪೀಠ ನಿರ್ದೇಶಿಸಿದೆ.

ರಾಜ್ಯದಲ್ಲಿ ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ ಕಾನೂನು ಉಲ್ಲಂಘನೆಯಾಗುತ್ತಿರುವ ಸಂಬಂಧ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಅಥಾರಿಟಿ ಹಾಗೂ ಆಲ್‌ ಇಂಡಿಯಾ ಸೆಂಟ್ರಲ್‌ ಕೌನ್ಸಿಲ್‌ ಆಫ್‌ ಟ್ರೇಡ್‌ ಯೂನಿಯನ್ಸ್‌ (AICCTU) ಸಂಘಟನೆಗಳು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದವು.

ಕೊಳಚೆ ತೆಗೆಯುವ ಕಾರ್ಯದಲ್ಲಿ ತೊಡಗಿರುವ ವ್ಯಕ್ತಿಯ ರಕ್ಷಣೆಗಾಗಿ ಕಡ್ಡಾಯವಾಗಿ 40  ಹೆಚ್ಚು ರಕ್ಷಣಾತ್ಮಕ ಕ್ರಮ ಹಾಗೂ ಸಲಕರಣೆಗಳನ್ನು ಒದಗಿಸಬೇಕೆಂದು 2013ರ ಕಾನೂನು ಹೇಳಿದೆ. ಸ್ಥಳೀಯ ಸಂಸ್ಥೆಗಳಲ್ಲಿ 14 ಯಂತ್ರೋಪಕರಣಗಳಾದರೂ ಇರಬೇಕು ಎಂದು ಕಾನೂನು ಹೇಳುತ್ತದೆ. ಈ ಸಂಬಂಧ 2013ರ ಡಿಸೆಂಬರ್‌ ನಲ್ಲಿ ಹೈಕೋರ್ಟ್‌ ಎಚ್ಚರಿಸಿತ್ತು. ಆದರೂ ಮಲದಗುಂಡಿಗೆ ಇಳಿದಿದ್ದ ಇಬ್ಬರು ಸಫಾಯಿ ಕರ್ಮಚಾರಿಗಳು ಸಾವನ್ನಪ್ಪಿದ್ದ ಪ್ರಕರಣಗಳು ಘಟಿಸಿದ್ದವು. ಜನವರಿಯಲ್ಲಿ ಕಲುಬುರಗಿ ಜಿಲ್ಲೆಯಲ್ಲಿ ಒಬ್ಬರು, ಜೂನ್‌ನಲ್ಲಿ ರಾಮನಗರ ಜಿಲ್ಲೆಯ ಒಬ್ಬರು ಸಾವನ್ನಪ್ಪಿದ್ದರು. ಇದನ್ನು ಪ್ರಸ್ತಾಪಿಸಿರುವ ಹೈಕೋರ್ಟ್‌, ಕಾನೂನು ಪಾಲನೆಯಲ್ಲಿ ಲೋಪವಾಗಿದ್ದಲ್ಲಿ ಅಕ್ಟೋಬರ್‌ 4ರಂದು ನಡೆಯುವ ವಿಚಾರಣೆಯಲ್ಲಿ ಈ ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕೆಂದು ಆದೇಶಿಸಿದೆ.

“ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ಸಂಬಂಧ ಮೊದಲು ಕಾನೂನು ಬಂದಿದ್ದು 1993ರಲ್ಲಿ. ಹೊಸ ಕಾನೂನು 2013ರಲ್ಲಿ ಬಂದಿತು. ಇಷ್ಟಾದರೂ ಸಫಾಯಿಗಳ ಸರ್ವೇ ಕಾರ್ಯ ನಡೆದಿಲ್ಲ. ಸಫಾಯಿಗಳನ್ನು ಗುರುತಿಸದಿದ್ದಲ್ಲಿ ಪುನರ್ವಸತಿ ಕಲ್ಪಿಸಲು ಸಾಧ್ಯವಾಗದು. ಅವರು ಆರ್ಥಿಕ ದುಸ್ಥಿತಿಯಿಂದಾಗಿ ಒತ್ತಾಯಪೂರ್ವಕವಾಗಿ ಈ ಕೆಲಸವನ್ನು ಮಾಡುತ್ತಾರೆ. ಯಂತ್ರಗಳನ್ನು ಬಳಸುತ್ತಿದ್ದರೂ ಇವರನ್ನು ಕಟ್ಟಕಡೆಯ ಕಾರ್ಮಿಕರನ್ನಾಗಿ ನೋಡಲಾಗುತ್ತದೆ. ಅತ್ಯಂತ ಕೆಳವರ್ಗದವರು ಈ ಕೆಲಸದಲ್ಲಿ ತೊಡಗುವುದರಿಂದ ಅಧಿಕಾರ ವರ್ಗ ಎಷ್ಟರ ಮಟ್ಟಿಗೆ ಕಾನೂನು ಪಾಲನೆ ಮಾಡುತ್ತಿದೆ ಎಂಬ ಪ್ರಶ್ನೆಯೂ ಏಳುತ್ತದೆ” ಎನ್ನುತ್ತಾರೆ ಸಾಮಾಜಿಕ ಕಾರ್ಯಕರ್ತೆ ಮತ್ತು AICCTU ಪದಾಧಿಕಾರಿ ಮೈತ್ರೇಯಿ ಕೃಷ್ಣನ್‌.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಎಫ್‌ಐಆರ್‌ ಆದರೂ ಮುಂದಿನ ಕ್ರಮಗಳು ಜರುಗುವುದಿಲ್ಲ. ಸಫಾಯಿ ಕಾರ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ನಿರ್ದೇಶನಗಳನ್ನು ಹೈಕೋರ್ಟ್‌ ನೀಡಿದೆ. ಸಫಾಯಿಗಳ ಸಮೀಕ್ಷೆ ಹೇಗೆ ಮಾಡಬೇಕೆಂದೂ ತಿಳಿಸಲಾಗಿದೆ. ನಾವು ಮುಖ್ಯವಾಗಿ ಗಮನಿಸಬೇಕಾದ ಅಂಶವೇನೆಂದರೆ ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ಹೊಸ ಹೊಸ ರೂಪದಲ್ಲಿ ಬರುತ್ತಿದೆ. ಸ್ವಚ್ಛ ಭಾರತ ಕಾರ್ಯಕ್ರಮದಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಯಿತು. ಆದರೆ ಒಳಚರಂಡಿ ವ್ಯವಸ್ಥೆಯನ್ನು ನಿರ್ಲಕ್ಷಿಸಲಾಯಿತು. ಈ ಮೂಲಕ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ಪ್ರೋತ್ಸಾಹಿಸಲಾಯಿತು. ಪೌರಕಾರ್ಮಿಕರನ್ನೂ ಸ್ಕ್ಯಾವೆಂಜಿಂಗ್‌ಗೆ ದೂಡಲಾಗುತ್ತಿದೆ. ಮಂಡ್ಯದಲ್ಲಿ ಒಬ್ಬರು ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದರು” ಎಂದು ವಿಷಾಧ ವ್ಯಕ್ತಪಡಿಸಿದರು.

ಈಗ ಹೈಕೋರ್ಟ್ ಮ್ಯಾನುವಲ್ ಸ್ಕಾವೇಂಜಿಗ್ ನಿಷೇಧಿಸಿ, ಕಡ್ಡಾಯವಾಗಿ ಯಂತ್ರೋಪಕರಣಗಳನ್ನು ಬಳಸಬೇಕೆಂದು ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದೆ. ಅಲ್ಲದೇ ಮುಂದಿನ ವಿಚಾರಣೆಯ ದಿನ ಕರ್ತವ್ಯಲೋಪ ಎಸಗಿರುವ ಜಿಲ್ಲಾಧಿಕಾರಿಗಳು ಖುದ್ದು ಹಾಜರಿರಬೇಕೆಂದು ಸೂಚಿಸಿದೆ. ಇನ್ನಾದರೂ ಸರ್ಕಾರಗಳು, ಸ್ಥಳೀಯ ಆಡಳಿತಗಳು ಈ ಕುರಿತು ಎಚ್ಚೆತ್ತುಕೊಳ್ಳಬೇಕಿದೆ. ಪ್ರತಿಯೊಬ್ಬ ಕಾರ್ಮಿಕನಿಗೂ ಘನತೆಯ ಜೀವನ ನಡೆಸಲು ಅವಕಾಶ ನೀಡಬೇಕು ಮತ್ತು ಅನ್ಯಾಯದ ಸಾವುಗಳನ್ನು ತಡೆಗಟ್ಟಬೇಕಿದೆ.


ಇದನ್ನೂ ಓದಿ: LPG ಗ್ಯಾಸ್ ಬೆಲೆ ಮತ್ತೆ 25ರೂ ಹೆಚ್ಚಳ: 15 ದಿನಗಳಲ್ಲಿ ಎರಡು ಬಾರಿ ಬೆಲೆ ಏರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...