Homeಕರ್ನಾಟಕಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ: ಕಡ್ಡಾಯ ಯಂತ್ರೋಪಕರಣ ಬಳಕೆಗೆ ಹೈಕೋರ್ಟ್ ಸೂಚನೆ

ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ: ಕಡ್ಡಾಯ ಯಂತ್ರೋಪಕರಣ ಬಳಕೆಗೆ ಹೈಕೋರ್ಟ್ ಸೂಚನೆ

ಕೊಳಚೆ ತೆಗೆಯುವ ವ್ಯಕ್ತಿಯ ರಕ್ಷಣೆಗಾಗಿ ಕಡ್ಡಾಯವಾಗಿ 40  ಹೆಚ್ಚು ರಕ್ಷಣಾತ್ಮಕ ಕ್ರಮ ಹಾಗೂ 14 ಯಂತ್ರೋಪಕರಣಗಳನ್ನು ಒದಗಿಸಬೇಕೆಂದು 2013ರ ಕಾನೂನು ಹೇಳಿದೆ.

- Advertisement -
- Advertisement -

ಸಫಾಯಿ ಕರ್ಮಚಾರಿಗಳ ನಿಯೋಜನೆ ನಿಷೇಧ ಹಾಗೂ ಸಫಾಯಿಗಳ ಪುನರ್ವಸತಿ ಅಧಿನಿಯಮ 2013ರನ್ನು ಕಡ್ಡಾಯವಾಗಿ ಪಾಲಿಸಬೇಕು ಹಾಗೂ ಸ್ವಚ್ಛತಾ ಕಾರ್ಯದಲ್ಲಿ ಕಡ್ಡಾಯವಾಗಿ ಯಂತ್ರೋಪಕರಣ ಬಳಸಬೇಕು ಎಂದು ಕರ್ನಾಟಕ ಹೈಕೋರ್ಟ್‌ ಸೂಚಿಸಿದೆ.

2013ರ ಕಾನೂನಿನ ಅನ್ವಯ ರಾಜ್ಯ ಸರ್ಕಾರ ಸ್ಥಳೀಯ ಸಂಸ್ಥೆಗಳಿಗೆ ಒದಗಿಸಿರುವ ಯಂತ್ರೋಪಕರಣಗಳ ವರದಿ ಸಲ್ಲಿಸಬೇಕು. ಕಾನೂನು ಪಾಲನೆ ಆಗಿಲ್ಲದಿದ್ದರೆ ಕಾರಣವನ್ನು ನೀಡಬೇಕು ಎಂದು ಜಸ್ಟೀಸ್‌ ಸತೀಶ್‌ ಚಂದ್ರ ಹಾಗೂ ಜಸ್ಟೀಸ್‌ ಸಚಿನ್‌ ಶಂಕರ್‌ ಮಗದುಮ್‌ ಇದ್ದ ವಿಭಾಗೀಯ ಪೀಠ ನಿರ್ದೇಶಿಸಿದೆ.

ರಾಜ್ಯದಲ್ಲಿ ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ನಿಷೇಧ ಕಾನೂನು ಉಲ್ಲಂಘನೆಯಾಗುತ್ತಿರುವ ಸಂಬಂಧ ಕರ್ನಾಟಕ ರಾಜ್ಯ ಕಾನೂನು ಸೇವೆಗಳ ಅಥಾರಿಟಿ ಹಾಗೂ ಆಲ್‌ ಇಂಡಿಯಾ ಸೆಂಟ್ರಲ್‌ ಕೌನ್ಸಿಲ್‌ ಆಫ್‌ ಟ್ರೇಡ್‌ ಯೂನಿಯನ್ಸ್‌ (AICCTU) ಸಂಘಟನೆಗಳು ಸಾರ್ವಜನಿಕ ಹಿತಾಸಕ್ತಿ ಅರ್ಜಿ ಸಲ್ಲಿಸಿದ್ದವು.

ಕೊಳಚೆ ತೆಗೆಯುವ ಕಾರ್ಯದಲ್ಲಿ ತೊಡಗಿರುವ ವ್ಯಕ್ತಿಯ ರಕ್ಷಣೆಗಾಗಿ ಕಡ್ಡಾಯವಾಗಿ 40  ಹೆಚ್ಚು ರಕ್ಷಣಾತ್ಮಕ ಕ್ರಮ ಹಾಗೂ ಸಲಕರಣೆಗಳನ್ನು ಒದಗಿಸಬೇಕೆಂದು 2013ರ ಕಾನೂನು ಹೇಳಿದೆ. ಸ್ಥಳೀಯ ಸಂಸ್ಥೆಗಳಲ್ಲಿ 14 ಯಂತ್ರೋಪಕರಣಗಳಾದರೂ ಇರಬೇಕು ಎಂದು ಕಾನೂನು ಹೇಳುತ್ತದೆ. ಈ ಸಂಬಂಧ 2013ರ ಡಿಸೆಂಬರ್‌ ನಲ್ಲಿ ಹೈಕೋರ್ಟ್‌ ಎಚ್ಚರಿಸಿತ್ತು. ಆದರೂ ಮಲದಗುಂಡಿಗೆ ಇಳಿದಿದ್ದ ಇಬ್ಬರು ಸಫಾಯಿ ಕರ್ಮಚಾರಿಗಳು ಸಾವನ್ನಪ್ಪಿದ್ದ ಪ್ರಕರಣಗಳು ಘಟಿಸಿದ್ದವು. ಜನವರಿಯಲ್ಲಿ ಕಲುಬುರಗಿ ಜಿಲ್ಲೆಯಲ್ಲಿ ಒಬ್ಬರು, ಜೂನ್‌ನಲ್ಲಿ ರಾಮನಗರ ಜಿಲ್ಲೆಯ ಒಬ್ಬರು ಸಾವನ್ನಪ್ಪಿದ್ದರು. ಇದನ್ನು ಪ್ರಸ್ತಾಪಿಸಿರುವ ಹೈಕೋರ್ಟ್‌, ಕಾನೂನು ಪಾಲನೆಯಲ್ಲಿ ಲೋಪವಾಗಿದ್ದಲ್ಲಿ ಅಕ್ಟೋಬರ್‌ 4ರಂದು ನಡೆಯುವ ವಿಚಾರಣೆಯಲ್ಲಿ ಈ ಎರಡು ಜಿಲ್ಲೆಗಳ ಜಿಲ್ಲಾಧಿಕಾರಿಗಳು ಕಡ್ಡಾಯವಾಗಿ ಹಾಜರಿರಬೇಕೆಂದು ಆದೇಶಿಸಿದೆ.

“ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ಸಂಬಂಧ ಮೊದಲು ಕಾನೂನು ಬಂದಿದ್ದು 1993ರಲ್ಲಿ. ಹೊಸ ಕಾನೂನು 2013ರಲ್ಲಿ ಬಂದಿತು. ಇಷ್ಟಾದರೂ ಸಫಾಯಿಗಳ ಸರ್ವೇ ಕಾರ್ಯ ನಡೆದಿಲ್ಲ. ಸಫಾಯಿಗಳನ್ನು ಗುರುತಿಸದಿದ್ದಲ್ಲಿ ಪುನರ್ವಸತಿ ಕಲ್ಪಿಸಲು ಸಾಧ್ಯವಾಗದು. ಅವರು ಆರ್ಥಿಕ ದುಸ್ಥಿತಿಯಿಂದಾಗಿ ಒತ್ತಾಯಪೂರ್ವಕವಾಗಿ ಈ ಕೆಲಸವನ್ನು ಮಾಡುತ್ತಾರೆ. ಯಂತ್ರಗಳನ್ನು ಬಳಸುತ್ತಿದ್ದರೂ ಇವರನ್ನು ಕಟ್ಟಕಡೆಯ ಕಾರ್ಮಿಕರನ್ನಾಗಿ ನೋಡಲಾಗುತ್ತದೆ. ಅತ್ಯಂತ ಕೆಳವರ್ಗದವರು ಈ ಕೆಲಸದಲ್ಲಿ ತೊಡಗುವುದರಿಂದ ಅಧಿಕಾರ ವರ್ಗ ಎಷ್ಟರ ಮಟ್ಟಿಗೆ ಕಾನೂನು ಪಾಲನೆ ಮಾಡುತ್ತಿದೆ ಎಂಬ ಪ್ರಶ್ನೆಯೂ ಏಳುತ್ತದೆ” ಎನ್ನುತ್ತಾರೆ ಸಾಮಾಜಿಕ ಕಾರ್ಯಕರ್ತೆ ಮತ್ತು AICCTU ಪದಾಧಿಕಾರಿ ಮೈತ್ರೇಯಿ ಕೃಷ್ಣನ್‌.

ಈ ಕುರಿತು ನಾನುಗೌರಿ.ಕಾಂ ಜೊತೆ ಮಾತನಾಡಿದ ಅವರು, “ಎಫ್‌ಐಆರ್‌ ಆದರೂ ಮುಂದಿನ ಕ್ರಮಗಳು ಜರುಗುವುದಿಲ್ಲ. ಸಫಾಯಿ ಕಾರ್ಯಕ್ಕೆ ಸಂಬಂಧಿಸಿದಂತೆ ಈಗಾಗಲೇ ಹಲವು ನಿರ್ದೇಶನಗಳನ್ನು ಹೈಕೋರ್ಟ್‌ ನೀಡಿದೆ. ಸಫಾಯಿಗಳ ಸಮೀಕ್ಷೆ ಹೇಗೆ ಮಾಡಬೇಕೆಂದೂ ತಿಳಿಸಲಾಗಿದೆ. ನಾವು ಮುಖ್ಯವಾಗಿ ಗಮನಿಸಬೇಕಾದ ಅಂಶವೇನೆಂದರೆ ಮ್ಯಾನ್ಯುಯಲ್‌ ಸ್ಕ್ಯಾವೆಂಜಿಂಗ್‌ ಹೊಸ ಹೊಸ ರೂಪದಲ್ಲಿ ಬರುತ್ತಿದೆ. ಸ್ವಚ್ಛ ಭಾರತ ಕಾರ್ಯಕ್ರಮದಲ್ಲಿ ಶೌಚಾಲಯಗಳನ್ನು ನಿರ್ಮಿಸಲಾಯಿತು. ಆದರೆ ಒಳಚರಂಡಿ ವ್ಯವಸ್ಥೆಯನ್ನು ನಿರ್ಲಕ್ಷಿಸಲಾಯಿತು. ಈ ಮೂಲಕ ಮ್ಯಾನ್ಯುಯಲ್ ಸ್ಕ್ಯಾವೆಂಜಿಂಗ್‌ ಪ್ರೋತ್ಸಾಹಿಸಲಾಯಿತು. ಪೌರಕಾರ್ಮಿಕರನ್ನೂ ಸ್ಕ್ಯಾವೆಂಜಿಂಗ್‌ಗೆ ದೂಡಲಾಗುತ್ತಿದೆ. ಮಂಡ್ಯದಲ್ಲಿ ಒಬ್ಬರು ಆತ್ಮಹತ್ಯೆಯನ್ನೂ ಮಾಡಿಕೊಂಡಿದ್ದರು” ಎಂದು ವಿಷಾಧ ವ್ಯಕ್ತಪಡಿಸಿದರು.

ಈಗ ಹೈಕೋರ್ಟ್ ಮ್ಯಾನುವಲ್ ಸ್ಕಾವೇಂಜಿಗ್ ನಿಷೇಧಿಸಿ, ಕಡ್ಡಾಯವಾಗಿ ಯಂತ್ರೋಪಕರಣಗಳನ್ನು ಬಳಸಬೇಕೆಂದು ಸರ್ಕಾರಕ್ಕೆ ಸ್ಪಷ್ಟ ನಿರ್ದೇಶನ ನೀಡಿದೆ. ಅಲ್ಲದೇ ಮುಂದಿನ ವಿಚಾರಣೆಯ ದಿನ ಕರ್ತವ್ಯಲೋಪ ಎಸಗಿರುವ ಜಿಲ್ಲಾಧಿಕಾರಿಗಳು ಖುದ್ದು ಹಾಜರಿರಬೇಕೆಂದು ಸೂಚಿಸಿದೆ. ಇನ್ನಾದರೂ ಸರ್ಕಾರಗಳು, ಸ್ಥಳೀಯ ಆಡಳಿತಗಳು ಈ ಕುರಿತು ಎಚ್ಚೆತ್ತುಕೊಳ್ಳಬೇಕಿದೆ. ಪ್ರತಿಯೊಬ್ಬ ಕಾರ್ಮಿಕನಿಗೂ ಘನತೆಯ ಜೀವನ ನಡೆಸಲು ಅವಕಾಶ ನೀಡಬೇಕು ಮತ್ತು ಅನ್ಯಾಯದ ಸಾವುಗಳನ್ನು ತಡೆಗಟ್ಟಬೇಕಿದೆ.


ಇದನ್ನೂ ಓದಿ: LPG ಗ್ಯಾಸ್ ಬೆಲೆ ಮತ್ತೆ 25ರೂ ಹೆಚ್ಚಳ: 15 ದಿನಗಳಲ್ಲಿ ಎರಡು ಬಾರಿ ಬೆಲೆ ಏರಿಕೆ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಇಂದಿರಾ ಗಾಂಧಿಯಂತೆ ನೇರವಾಗಿ ನಿಲ್ಲಿ, ಟ್ರಂಪ್ ಮುಂದೆ ಮಂಡಿಯೂರುತ್ತಿದ್ದೀರಿ: ‘UPI ಟ್ಯಾಕ್ಸ್’ ಬಗ್ಗೆ ಮೋದಿ ವಿರುದ್ಧ ರಾಹುಲ್ ವಾಗ್ದಾಳಿ!

ಯುಪಿಐ (UPI) ವಹಿವಾಟುಗಳಿಗೆ ಸಂಬಂಧಿಸಿದಂತೆ ಜಾರಿಯಾಗುತ್ತಿರುವ ಹೊಸ 'ಮರ್ಚೆಂಟ್ ಡಿಸ್ಕೌಂಟ್ ರೇಟ್' (MDR) ವ್ಯವಸ್ಥೆ ಇದೀಗ ತೀವ್ರ ರಾಜಕೀಯ ಸಂಘರ್ಷಕ್ಕೆ ಕಾರಣವಾಗಿದೆ. ಇದನ್ನು "ಬ್ಯಾಂಕ್‌ಗಳು ವಿಧಿಸುವ ಸೇವಾ ಶುಲ್ಕ" ಎಂದು ಸರ್ಕಾರ ಸಮರ್ಥಿಸಿಕೊಳ್ಳುತ್ತಿದ್ದರೂ,...

ಲಿಯೋನೆಲ್ ಮೆಸ್ಸಿ ಕೇರಳ ಭೇಟಿ ಪ್ರಕರಣ: ಕೊಚ್ಚಿಯ ‘ರಿಪೋರ್ಟರ್ ಟಿವಿ’ ಕಚೇರಿಯಲ್ಲಿ ಪೊಲೀಸರಿಂದ ಶೋಧ

ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ಕೊಚ್ಚಿ ಪ್ರಧಾನ ಕಚೇರಿಯಲ್ಲಿ ಬುಧವಾರ (ಸೆ.16) ಮುಂಜಾನೆ ಪೊಲೀಸ್ ತಂಡವೊಂದು ಶೋಧ ಕಾರ್ಯ ನಡೆಸಿದ್ದು, ಇದರಿಂದಾಗಿ ತನ್ನ ಸುದ್ದಿ ಪ್ರಸಾರ ಕಾರ್ಯಾಚರಣೆಗೆ ಅಡಚಣೆಯಾಗಿದೆ ಎಂದು ವಾಹಿನಿ...

‘ಏಕರೂಪತೆ ಸಮಾನತೆಯಲ್ಲ’: 2029ಕ್ಕೂ ಮುನ್ನ 21 ರಾಜ್ಯಗಳಲ್ಲಿ ಯುಸಿಸಿ ಜಾರಿ ಘೋಷಿಸಿದ ಅಮಿತ್ ಶಾಗೆ ಪ್ರತಿಪಕ್ಷಗಳ ತೀವ್ರ ತಿರುಗೇಟು

ನವದೆಹಲಿ/ಮುಂಬೈ: 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ನೇತೃತ್ವದ ಎನ್‌ಡಿಎ ಸರ್ಕಾರಗಳಿರುವ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತರಲಾಗುವುದು ಎಂಬ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ...

KPSC ಅಧ್ಯಕ್ಷರ ಪುತ್ರಿಯ ನಕಲಿ ಪ್ರಮಾಣಪತ್ರ ಹಗರಣ: ಅಕ್ರಮಕ್ಕೆ ಸಾಥ್ ನೀಡಿದ್ದ ಅಧಿಕಾರಿಯ ಜಾಮೀನು ಅರ್ಜಿ ವಜಾ

ಕೆಪಿಎಸ್‌ಸಿ (KPSC) ಅಧ್ಯಕ್ಷರ ಪುತ್ರಿಗೆ ಅಕ್ರಮವಾಗಿ ನಕಲಿ ಆದಾಯ ಪ್ರಮಾಣಪತ್ರ ನೀಡಿದ ಆರೋಪ ಎದುರಿಸುತ್ತಿರುವ ಕಂದಾಯ ಅಧಿಕಾರಿಯ ನಿರೀಕ್ಷಣಾ ಜಾಮೀನು ಅರ್ಜಿಯನ್ನು ಬೆಂಗಳೂರಿನ ನಗರ ಸಿವಿಲ್ ಮತ್ತು ಸೆಷನ್ಸ್ ನ್ಯಾಯಾಲಯ ಮಂಗಳವಾರ ವಜಾಗೊಳಿಸಿದೆ....

ಬಂಗಾಳದಲ್ಲಿ ಬಿಜೆಪಿ ಸರ್ಕಾರದ ನಿರ್ಬಂಧ; ನೆಲಕಚ್ಚಿದ ದನದ ಮಾಂಸ ವ್ಯಾಪಾರ

ಪಶು ಹತ್ಯೆಯ ಕುರಿತು ಮುಖ್ಯಮಂತ್ರಿ ಸುವೇಂಧು ಅಧಿಕಾರಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಸೂಚನೆ ಹೊರಡಿಸಿದ ನಂತರ, ಮಾಂಸದ ವ್ಯಾಪಾರಿ ಮುಷ್ತಾಕ್ ಕಳೆದ ಮೂರು ತಿಂಗಳಿನಿಂದ ಒಂದು ಪೈಸೆಯನ್ನೂ ಗಳಿಸಿಲ್ಲ. "ಚುನಾವಣೆಯ ಕಾರಣದಿಂದ...

ತೀವ್ರಗೊಂಡ ಸೌದಿ-ಹೌತಿ ಸಂಘರ್ಷ : ಮಕ್ಕಾ ಗುರಿಯಾಗಿಸಿದ್ದ ಡ್ರೋನ್ ಹೊಡೆದುರುಳಿಸಿದ್ದೇವೆ ಎಂದ ಸೌದಿ; ತಳ್ಳಿಹಾಕಿದ ಹೌತಿ

ಯೆಮನ್‌ನ ರೆಬೆಲ್ ಗ್ರೂಪ್ ಹೌತಿ ಮತ್ತು ಸೌದಿ ಬೆಂಬಲಿತ ಪಡೆಗಳ ಸಂಘರ್ಷ ತೀವ್ರಗೊಂಡಿದ್ದು, ಇತಿಹಾಸದಲ್ಲೇ ಮೊದಲ ಬಾರಿಗೆ ಮುಸ್ಲಿಮರ ಪವಿತ್ರ ನಗರ ಮಕ್ಕಾದಲ್ಲಿ ಸೌದಿ ಅರೇಬಿಯಾದ ನಾಗರಿಕ ರಕ್ಷಣಾ (ಸಿವಿಲ್ ಡಿಫೆನ್ಸ್) ಇಲಾಖೆಯು...

ಸೌದಿಗೆ ಪ್ರಯಾಣಿಸುವ ತನ್ನ ನಾಗರಿಕರಿಗೆ ಎಚ್ಚರಿಕೆ ನೀಡಿದ ಅಮೆರಿಕ

ಸೌದಿ ಅರೇಬಿಯಾ ಬೆಂಬಲಿತ ಪಡೆಗಳು ಮತ್ತು ಯೆಮೆನ್‌ನ ಹೌದಿ ಬಂಡುಕೋರರ ನಡುವಿನ ಸಂಘರ್ಷ ತೀವ್ರಗೊಂಡಿದ್ದು, ಸೌದಿ ಯುದ್ಧ ವಿಮಾನವೊಂದನ್ನು ಹೊಡೆದುರುಳಿಸಿರುವುದಾಗಿ ಹೌದಿ ಪಡೆಗಳು ಪ್ರತಿಪಾದಿಸಿವೆ. ಮತ್ತೊಂದೆಡೆ, ಪವಿತ್ರ ನಗರಿ ಮಕ್ಕಾದ ದಕ್ಷಿಣ ಭಾಗದಲ್ಲಿ...

ಪ್ರಜ್ವಲ್ ಪ್ರಕರಣ ಮುಂದಿಟ್ಟುಕೊಂಡು ‘ದೇವೇಗೌಡರ ಕುಟುಂಬದ ಧ್ವನಿ ಅಡಗಿಸಲು ಅಸಾಧ್ಯ’: ಸರ್ಕಾರದ ವಿರುದ್ಧ ಕುಮಾರಸ್ವಾಮಿ ವಾಗ್ದಾಳಿ

ಹೊಳೆನರಸೀಪುರ: ಪ್ರಜ್ವಲ್ ರೇವಣ್ಣ ಪ್ರಕರಣದ ನೆಪದಲ್ಲಿ ದೇವೇಗೌಡರ ಕುಟುಂಬದ ಧ್ವನಿಯನ್ನು ಅಡಗಿಸಲು ಸಾಧ್ಯವಿಲ್ಲ ಎಂದು ಕೇಂದ್ರ ಸಚಿವ ಎಚ್‌.ಡಿ. ಕುಮಾರಸ್ವಾಮಿ ಹೇಳಿದ್ದಾರೆ. ಜೈಲಿನಲ್ಲಿದ್ದ ಸಂದರ್ಭದಲ್ಲಿ ಪ್ರಜ್ವಲ್ ರೇವಣ್ಣ ಅವರಿಗೆ ಮೊಬೈಲ್‌ ಫೋನ್ ಹಾಗೂ...

ಭೂಮಿ, ಆಕಾಶದ ಬಳಿಕ ಈಗ ಬಾಹ್ಯಾಕಾಶವೇ ಯುದ್ಧಭೂಮಿ: ಕಕ್ಷೆಯಲ್ಲಿ ಶಸ್ತ್ರಾಸ್ತ್ರ ನಿಯೋಜನೆ ಒಪ್ಪಿಕೊಂಡ ಅಮೆರಿಕ

ಭವಿಷ್ಯದಲ್ಲಿ ಬೃಹತ್ ಯುದ್ಧವೇನಾದರೂ ಸಂಭವಿಸಿದರೆ ಅದು ಕೇವಲ ಭೂಮಿ, ಸಮುದ್ರ ಮತ್ತು ವಾಯುಮಾರ್ಗಕ್ಕೆ ಮಾತ್ರ ಸೀಮಿತವಾಗದೆ ಬಾಹ್ಯಾಕಾಶಕ್ಕೂ ವಿಸ್ತರಿಸಲಿದೆ ಎಂಬುದನ್ನು ಸಾಬೀತುಪಡಿಸುವ ರೀತಿಯಲ್ಲಿ ಅಮೆರಿಕ ಹೇಳಿಕೊಂಡಿದೆ. ಭೂಮಿಯ ಕಕ್ಷೆಯಲ್ಲಿ ತಾನು ಮಿಲಿಟರಿ ಶಸ್ತ್ರಾಸ್ತ್ರಗಳನ್ನು...

14 ವರ್ಷದೊಳಗಿನ ಮಕ್ಕಳ ಧಾರ್ಮಿಕ ಶಿಕ್ಷಣ ನಿಯಂತ್ರಣಕ್ಕೆ ಅರ್ಜಿ: ಕೇಂದ್ರ ಶಿಕ್ಷಣ ಕಾರ್ಯದರ್ಶಿಗೆ ಸುಪ್ರೀಂ ಕೋರ್ಟ್ ನೋಟಿಸ್

14 ವರ್ಷಕ್ಕಿಂತ ಕಡಿಮೆ ವಯಸ್ಸಿನ ಮಕ್ಕಳಿಗೆ ಧಾರ್ಮಿಕ ಶಿಕ್ಷಣ ನೀಡುತ್ತಿರುವ ಸಂಸ್ಥೆಗಳ ನೋಂದಣಿ, ಮೇಲ್ವಿಚಾರಣೆ ಮತ್ತು ನಿಯಂತ್ರಣಕ್ಕೆ ಸಂಬಂಧಿಸಿದಂತೆ ಸಲ್ಲಿಸಲಾದ ಅರ್ಜಿಯನ್ನು ಪರಿಗಣಿಸುವಲ್ಲಿ ವಿಳಂಬವಾಗಿದೆ ಎಂಬ ಆರೋಪದ ಹಿನ್ನೆಲೆಯಲ್ಲಿ ಕೇಂದ್ರ ಶಿಕ್ಷಣ ಕಾರ್ಯದರ್ಶಿ...