Homeಕರ್ನಾಟಕಧಾರ್ಮಿಕ ಸ್ಥಳಗಳಿಂದಾಗುತ್ತಿರುವ ಶಬ್ಧ ಮಾಲಿನ್ಯ ತಡೆಗೆ ಕ್ರಮಕೈಗೊಳ್ಳುವಂತೆ ಹೈಕೋರ್ಟ್‌ ನಿರ್ದೇಶನ

ಧಾರ್ಮಿಕ ಸ್ಥಳಗಳಿಂದಾಗುತ್ತಿರುವ ಶಬ್ಧ ಮಾಲಿನ್ಯ ತಡೆಗೆ ಕ್ರಮಕೈಗೊಳ್ಳುವಂತೆ ಹೈಕೋರ್ಟ್‌ ನಿರ್ದೇಶನ

- Advertisement -
- Advertisement -

ಧಾರ್ಮಿಕ ಸ್ಥಳಗಳಿಂದ ಉಂಟಾಗುತ್ತಿರುವ ಶಬ್ಧ ಮಾಲಿನ್ಯ ತಡೆಗೆ ಕ್ರಮಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್‌ ನಿನ್ನೆ ಪೊಲೀಸ್‌ ಇಲಾಖೆಗೆ ಕಠಿಣ ನಿರ್ದೇಶನಗಳನ್ನು ನೀಡಿದೆ. ಪದೇ ಪದೇ ಹೇಳಿದ್ದನೇ ಹೇಳುವಷ್ಟು ನ್ಯಾಯಾಲಯಕ್ಕೆ ವ್ಯವಧಾನವಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ ಹೈಕೋರ್ಟ್ ವಿಭಾಗೀಯ ಪೀಠ, ಪೊಲೀಸ್‌ ಇಲಾಖೆ ತ್ವರಿತವಾಗಿ ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದೆ.

ಈ ಹಿಂದೆ ಧಾರ್ಮಿಕ ಸ್ಥಳ ಮತ್ತು ಸಮಾರಂಭಗಳಲ್ಲಿ ಧ್ವನಿ ವರ್ಧಕ ಮತ್ತು ಡಿಜೆ ಸಂಗೀತಗಳು ಬಳಕೆಯಾಗುವ ಕುರಿತು ಸಾಕಷ್ಟು ಜನರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ದಾಖಲಿಸಿದ್ದರು. ಹೈಕೋರ್ಟ್‌ ಆನೇಕ ಬಾರಿ ಈ ಸಂಬಂಧ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರೂ ಪೊಲೀಸ್‌ ಇಲಾಖೆ ಮಾತ್ರ ಇದುವರೆಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ನಿನ್ನೆ ಬೆಂಗಳೂರು ನಗರ ಕಮಿಷನರ್ ಕಮಲ್ ಪಂತ್‌, “ಇದುವರೆಗೆ ಶಬ್ಧ ಮಾಲಿನ್ಯಕ್ಕೆ ಸಂಬಂಧಪಟ್ಟ ಹಾಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ (KSPCB) 11 ದೂರುಗಳು ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಪೊಲೀಸ್‌ ಇಲಾಖೆ ಠಾಣಾ ಮಟ್ಟದಲ್ಲಿ ಈ ಕುರಿತು ಕ್ರಮ ಕೈಗೊಳ್ಳುತ್ತಿದ್ದು ಪರಿಸರ ಸಂರಕ್ಷಣೆ ಕಾಯ್ದೆ ಮತ್ತು ಶಬ್ಧ ಮಾಲಿನ್ಯ ನಿಯಂತ್ರಣ ನಿಯಮಗಳು 2000 ಅಡಿಯಲ್ಲಿ ತನಿಖೆಯನ್ನು ಕೂಡ ನಡೆಸುತ್ತಿದೆ” ಎಂದು ಹೈಕೋರ್ಟ್‌ನಲ್ಲಿ ಅಫಿಡೆವಿಟ್‌ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಬದುಕುವ ಹಕ್ಕಿಗೆ ತೊಂದರೆಯಾದಾಗ ಧಾರ್ಮಿಕ ಹಕ್ಕನ್ನು ಹಿಂದಕ್ಕೆ ತಳ್ಳಬಹುದು: ಮದ್ರಾಸ್ ಹೈಕೋರ್ಟ್‌

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯು ಪೊಲೀಸ್‌ ಸಿಬ್ಬಂದಿಗಳಿಗೆ ಶಬ್ಧ ಹೊರಸೂಸುವಿಕೆ ಪ್ರಮಾಣವನ್ನು ಅಳೆಯುವ ತರಬೇತಿಯನ್ನು ನೀಡುತ್ತಿದ್ದು, ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ಶಬ್ಧ ಮಾಲಿನ್ಯದ ಪ್ರಮಾಣ ಅಳೆಯುವ ಉಪಕರಣಗಳನ್ನು ಪೊಲೀಸ್‌ ಇಲಾಖೆ ಪರಿಣಾಮಕಾರಿಯಾಗಿ ಬಳಸಿಕೊಳ್ಳುತ್ತಿದೆ ಎಂದು ಅಫಿಡೆವಿಟ್‌ನಲ್ಲಿ ಹೇಳಲಾಗಿದೆ.

ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್‌ ಪಂತ್‌ ಸಲ್ಲಿಸಿದ ಅಫಿಡೆವಿಟ್‌ ನಿಂದ ಸಮಾಧಾನಗೊಳ್ಳದ ಅಭಯ್ ಶ್ರೀನಿವಾಸ್ ಓಕಾ ನೇತೃತ್ವದ ಹೈಕೋರ್ಟ್‌ ವಿಭಾಗೀಯ ಪೀಠ ಹೆಚ್ಚುವರಿ ಅಫಿಡೆವಿಟ್‌ ಸಲ್ಲಿಸುವಂತೆ ಪೊಲೀಸ್‌ ಇಲಾಖೆಗೆ ನಿರ್ದೇಶನವನ್ನು ನೀಡಿತು. ಎಸಿಪಿಗಳಿಗೆ ಮಾಲಿನ್ಯ ನಿಯಂತ್ರಣ ಕಾಯ್ದೆಯ 19 ನೇ ಸೆಕ್ಷನ್‌ ಅಡಿ ಧಾರ್ಮಿಕ ಸ್ಥಳಗಳ ಮೇಲೆ ಕ್ರಮ ಕೈಗೊಳ್ಳಲು ಅಧಿಕಾರ ನೀಡಲಾಗಿದೆ ಎಂಬುದನ್ನು ನ್ಯಾಯಾಲಯದ ಮುಂದೆ ಸ್ಪಷ್ಟ ಪಡಿಸಿ ಎಂದು ಆದೇಶಿಸಿ ಪ್ರಕರಣದ ವಿಚಾರಣೆಯನ್ನು ಮುಂದೂಡಿತು.

ಗಿರೀಶ್ ಭಾರದ್ವಾಜ್ ಎಂಬುವವರು ಧಾರ್ಮಿಕ ಸ್ಥಳಗಳಲ್ಲಿ ಲೌಡ್‌ ಸ್ಪೀಕರ್ ಮುಂತಾದ ಉಪಕರಣಗಳನ್ನು ಅನುಮತಿ ನೀಡಿದ ಪ್ರಮಾಣಕ್ಕಿಂತಲೂ ಹೆಚ್ಚು ಬಳಸಲಾಗುತ್ತಿದೆ. ನಿಯಮಿತ ಪ್ರಮಾಣದಲ್ಲಿ ಮಾತ್ರ ಧ್ವನಿ ವರ್ಧಕಗಳ ಬಳಕೆಗೆ ಅವಕಾಶ ನೀಡಲಾಗಿದ್ದು ಸರ್ಕಾರದ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದ್ದರೂ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರದಿಂದ ಅನುಮತಿಯನ್ನು ಪಡೆಯದೇ ಅಕ್ರಮವಾಗಿ ಕೆಲವು ಧಾರ್ಮಿಕ ಸ್ಥಳಗಳು ಧ್ವನಿ ವರ್ಧಕಗಳನ್ನು ಬಳಸುತ್ತಿವೆ. ಇದರಿಂದಾಗಿ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಹೈಕೋರ್ಟ್‌ನಲ್ಲಿ ಸಾವರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು.


ಇದನ್ನೂ ಓದಿ: ಜಿಎಸ್‌ಟಿ ವಿಚಾರದಲ್ಲಿ ರಾಜ್ಯಗಳನ್ನು ವಂಚಿಸಿದ್ದಕ್ಕೆ ಸಂಭ್ರಮಿಸಬೇಕೆ?: ಕುಮಾರಸ್ವಾಮಿ ಆಕ್ರೋಶ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...