Homeಕರ್ನಾಟಕಧಾರ್ಮಿಕ ಸ್ಥಳಗಳಿಂದಾಗುತ್ತಿರುವ ಶಬ್ಧ ಮಾಲಿನ್ಯ ತಡೆಗೆ ಕ್ರಮಕೈಗೊಳ್ಳುವಂತೆ ಹೈಕೋರ್ಟ್‌ ನಿರ್ದೇಶನ

ಧಾರ್ಮಿಕ ಸ್ಥಳಗಳಿಂದಾಗುತ್ತಿರುವ ಶಬ್ಧ ಮಾಲಿನ್ಯ ತಡೆಗೆ ಕ್ರಮಕೈಗೊಳ್ಳುವಂತೆ ಹೈಕೋರ್ಟ್‌ ನಿರ್ದೇಶನ

- Advertisement -
- Advertisement -

ಧಾರ್ಮಿಕ ಸ್ಥಳಗಳಿಂದ ಉಂಟಾಗುತ್ತಿರುವ ಶಬ್ಧ ಮಾಲಿನ್ಯ ತಡೆಗೆ ಕ್ರಮಕೈಗೊಳ್ಳುವಂತೆ ಕರ್ನಾಟಕ ಹೈಕೋರ್ಟ್‌ ನಿನ್ನೆ ಪೊಲೀಸ್‌ ಇಲಾಖೆಗೆ ಕಠಿಣ ನಿರ್ದೇಶನಗಳನ್ನು ನೀಡಿದೆ. ಪದೇ ಪದೇ ಹೇಳಿದ್ದನೇ ಹೇಳುವಷ್ಟು ನ್ಯಾಯಾಲಯಕ್ಕೆ ವ್ಯವಧಾನವಿಲ್ಲ ಎಂದು ಖಾರವಾಗಿ ಪ್ರತಿಕ್ರಿಯಿಸಿದ ಹೈಕೋರ್ಟ್ ವಿಭಾಗೀಯ ಪೀಠ, ಪೊಲೀಸ್‌ ಇಲಾಖೆ ತ್ವರಿತವಾಗಿ ಕ್ರಮ ಕೈಗೊಂಡು ನ್ಯಾಯಾಲಯಕ್ಕೆ ವರದಿ ಸಲ್ಲಿಸುವಂತೆ ನಿರ್ದೇಶನ ನೀಡಿದೆ.

ಈ ಹಿಂದೆ ಧಾರ್ಮಿಕ ಸ್ಥಳ ಮತ್ತು ಸಮಾರಂಭಗಳಲ್ಲಿ ಧ್ವನಿ ವರ್ಧಕ ಮತ್ತು ಡಿಜೆ ಸಂಗೀತಗಳು ಬಳಕೆಯಾಗುವ ಕುರಿತು ಸಾಕಷ್ಟು ಜನರು ಹೈಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳನ್ನು ದಾಖಲಿಸಿದ್ದರು. ಹೈಕೋರ್ಟ್‌ ಆನೇಕ ಬಾರಿ ಈ ಸಂಬಂಧ ಕ್ರಮಕೈಗೊಳ್ಳುವಂತೆ ಸೂಚಿಸಿದ್ದರೂ ಪೊಲೀಸ್‌ ಇಲಾಖೆ ಮಾತ್ರ ಇದುವರೆಗೆ ಯಾವುದೇ ಕ್ರಮ ಕೈಗೊಂಡಿರಲಿಲ್ಲ.

ನಿನ್ನೆ ಬೆಂಗಳೂರು ನಗರ ಕಮಿಷನರ್ ಕಮಲ್ ಪಂತ್‌, “ಇದುವರೆಗೆ ಶಬ್ಧ ಮಾಲಿನ್ಯಕ್ಕೆ ಸಂಬಂಧಪಟ್ಟ ಹಾಗೆ ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯಿಂದ (KSPCB) 11 ದೂರುಗಳು ನಗರದ ವಿವಿಧ ಪೊಲೀಸ್ ಠಾಣೆಯಲ್ಲಿ ದಾಖಲಾಗಿವೆ. ಪೊಲೀಸ್‌ ಇಲಾಖೆ ಠಾಣಾ ಮಟ್ಟದಲ್ಲಿ ಈ ಕುರಿತು ಕ್ರಮ ಕೈಗೊಳ್ಳುತ್ತಿದ್ದು ಪರಿಸರ ಸಂರಕ್ಷಣೆ ಕಾಯ್ದೆ ಮತ್ತು ಶಬ್ಧ ಮಾಲಿನ್ಯ ನಿಯಂತ್ರಣ ನಿಯಮಗಳು 2000 ಅಡಿಯಲ್ಲಿ ತನಿಖೆಯನ್ನು ಕೂಡ ನಡೆಸುತ್ತಿದೆ” ಎಂದು ಹೈಕೋರ್ಟ್‌ನಲ್ಲಿ ಅಫಿಡೆವಿಟ್‌ ಸಲ್ಲಿಸಿದ್ದಾರೆ.

ಇದನ್ನೂ ಓದಿ: ಬದುಕುವ ಹಕ್ಕಿಗೆ ತೊಂದರೆಯಾದಾಗ ಧಾರ್ಮಿಕ ಹಕ್ಕನ್ನು ಹಿಂದಕ್ಕೆ ತಳ್ಳಬಹುದು: ಮದ್ರಾಸ್ ಹೈಕೋರ್ಟ್‌

ಕರ್ನಾಟಕ ಮಾಲಿನ್ಯ ನಿಯಂತ್ರಣ ಮಂಡಳಿಯು ಪೊಲೀಸ್‌ ಸಿಬ್ಬಂದಿಗಳಿಗೆ ಶಬ್ಧ ಹೊರಸೂಸುವಿಕೆ ಪ್ರಮಾಣವನ್ನು ಅಳೆಯುವ ತರಬೇತಿಯನ್ನು ನೀಡುತ್ತಿದ್ದು, ಬೆಂಗಳೂರು ನಗರ ಸೇರಿದಂತೆ ರಾಜ್ಯದ ಹಲವು ನಗರಗಳಲ್ಲಿ ಶಬ್ಧ ಮಾಲಿನ್ಯದ ಪ್ರಮಾಣ ಅಳೆಯುವ ಉಪಕರಣಗಳನ್ನು ಪೊಲೀಸ್‌ ಇಲಾಖೆ ಪರಿಣಾಮಕಾರಿಯಾಗಿ ಬಳಸಿಕೊಳ್ಳುತ್ತಿದೆ ಎಂದು ಅಫಿಡೆವಿಟ್‌ನಲ್ಲಿ ಹೇಳಲಾಗಿದೆ.

ಬೆಂಗಳೂರು ನಗರ ಪೊಲೀಸ್ ಕಮಿಷನರ್ ಕಮಲ್‌ ಪಂತ್‌ ಸಲ್ಲಿಸಿದ ಅಫಿಡೆವಿಟ್‌ ನಿಂದ ಸಮಾಧಾನಗೊಳ್ಳದ ಅಭಯ್ ಶ್ರೀನಿವಾಸ್ ಓಕಾ ನೇತೃತ್ವದ ಹೈಕೋರ್ಟ್‌ ವಿಭಾಗೀಯ ಪೀಠ ಹೆಚ್ಚುವರಿ ಅಫಿಡೆವಿಟ್‌ ಸಲ್ಲಿಸುವಂತೆ ಪೊಲೀಸ್‌ ಇಲಾಖೆಗೆ ನಿರ್ದೇಶನವನ್ನು ನೀಡಿತು. ಎಸಿಪಿಗಳಿಗೆ ಮಾಲಿನ್ಯ ನಿಯಂತ್ರಣ ಕಾಯ್ದೆಯ 19 ನೇ ಸೆಕ್ಷನ್‌ ಅಡಿ ಧಾರ್ಮಿಕ ಸ್ಥಳಗಳ ಮೇಲೆ ಕ್ರಮ ಕೈಗೊಳ್ಳಲು ಅಧಿಕಾರ ನೀಡಲಾಗಿದೆ ಎಂಬುದನ್ನು ನ್ಯಾಯಾಲಯದ ಮುಂದೆ ಸ್ಪಷ್ಟ ಪಡಿಸಿ ಎಂದು ಆದೇಶಿಸಿ ಪ್ರಕರಣದ ವಿಚಾರಣೆಯನ್ನು ಮುಂದೂಡಿತು.

ಗಿರೀಶ್ ಭಾರದ್ವಾಜ್ ಎಂಬುವವರು ಧಾರ್ಮಿಕ ಸ್ಥಳಗಳಲ್ಲಿ ಲೌಡ್‌ ಸ್ಪೀಕರ್ ಮುಂತಾದ ಉಪಕರಣಗಳನ್ನು ಅನುಮತಿ ನೀಡಿದ ಪ್ರಮಾಣಕ್ಕಿಂತಲೂ ಹೆಚ್ಚು ಬಳಸಲಾಗುತ್ತಿದೆ. ನಿಯಮಿತ ಪ್ರಮಾಣದಲ್ಲಿ ಮಾತ್ರ ಧ್ವನಿ ವರ್ಧಕಗಳ ಬಳಕೆಗೆ ಅವಕಾಶ ನೀಡಲಾಗಿದ್ದು ಸರ್ಕಾರದ ಎಲ್ಲಾ ನಿಯಮಗಳನ್ನು ಗಾಳಿಗೆ ತೂರಲಾಗುತ್ತಿದ್ದರೂ ಪೊಲೀಸ್ ಇಲಾಖೆ ಕ್ರಮ ಕೈಗೊಳ್ಳುತ್ತಿಲ್ಲ. ಸರ್ಕಾರದಿಂದ ಅನುಮತಿಯನ್ನು ಪಡೆಯದೇ ಅಕ್ರಮವಾಗಿ ಕೆಲವು ಧಾರ್ಮಿಕ ಸ್ಥಳಗಳು ಧ್ವನಿ ವರ್ಧಕಗಳನ್ನು ಬಳಸುತ್ತಿವೆ. ಇದರಿಂದಾಗಿ ಮೂಲಭೂತ ಹಕ್ಕುಗಳ ಉಲ್ಲಂಘನೆಯಾಗಿದೆ ಎಂದು ಹೈಕೋರ್ಟ್‌ನಲ್ಲಿ ಸಾವರ್ವಜನಿಕ ಹಿತಾಸಕ್ತಿ ಅರ್ಜಿ ದಾಖಲಿಸಿದ್ದರು.


ಇದನ್ನೂ ಓದಿ: ಜಿಎಸ್‌ಟಿ ವಿಚಾರದಲ್ಲಿ ರಾಜ್ಯಗಳನ್ನು ವಂಚಿಸಿದ್ದಕ್ಕೆ ಸಂಭ್ರಮಿಸಬೇಕೆ?: ಕುಮಾರಸ್ವಾಮಿ ಆಕ್ರೋಶ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...