Homeಕರ್ನಾಟಕಪೋಕ್ಸೊ ಪ್ರಕರಣದಲ್ಲಿ ಅಮಾನವೀಯ ವರ್ತನೆ: ನ್ಯಾಯಾಧೀಶರಿಗೆ ತರಬೇತಿ ಪಡೆಯಲು ಸೂಚಿಸಿದ ಹೈಕೋರ್ಟ್

ಪೋಕ್ಸೊ ಪ್ರಕರಣದಲ್ಲಿ ಅಮಾನವೀಯ ವರ್ತನೆ: ನ್ಯಾಯಾಧೀಶರಿಗೆ ತರಬೇತಿ ಪಡೆಯಲು ಸೂಚಿಸಿದ ಹೈಕೋರ್ಟ್

- Advertisement -
- Advertisement -

ಎಂಟು ವರ್ಷದ ಬಾಲಕಿಯ ಮೇಲೆ ನಡೆದ ಲೈಂಗಿಕ ದೌರ್ಜನ್ಯ ಪ್ರಕರಣದ ಸಾಕ್ಷ್ಯಗಳ ವಿಚಾರಣೆ ನಡೆಸುವಲ್ಲಿ ‘ಅಮಾನವೀಯ’ ಮತ್ತು ‘ಸಂವೇದನಾರಹಿತ’ ವಾಗಿ ವರ್ತಿಸಿದ್ದಕ್ಕಾಗಿ ಕರ್ನಾಟಕ ಹೈಕೋರ್ಟ್ ಇತ್ತೀಚೆಗೆ ವಿಚಾರಣಾ ನ್ಯಾಯಾಲಯದ ನ್ಯಾಯಾಧೀಶರೊಬ್ಬರನ್ನು ತರಾಟೆಗೆ ತೆಗೆದುಕೊಂಡಿದೆ.

ಹೈಕೋರ್ಟ್‌ ನ್ಯಾಯಮೂರ್ತಿ ಹಂಚಾಟೆ ಸಂಜೀವ್ ಕುಮಾರ್ ಅವರು, ಅಪ್ರಾಪ್ತ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪಿ ವೆಂಕಟೇಶ್‌ನನ್ನು ಖುಲಾಸೆಗೊಳಿಸಿದ ಕೆಳ ನ್ಯಾಯಾಲಯದ ಆದೇಶವನ್ನು ವಜಾಗೊಳಿಸಿ ಐದು ವರ್ಷಗಳ ಕಠಿಣ ಜೈಲು ಶಿಕ್ಷೆ ವಿಧಿಸಿದ್ದಾರೆ ಎಂದು ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ಆರೋಪಿಯನ್ನು ಖುಲಾಸೆಗೊಳಿಸಿದ ಕೆಳ ನ್ಯಾಯಾಲಯದ ನ್ಯಾಯಾಧೀಶರು, ಪ್ರಾಸಿಕ್ಯೂಷನ್ ಸಾಕ್ಷ್ಯಗಳ ವಿಚಾರಣೆ ವೇಳೆ ‘ಅತೀವ ಸಂವೇದನಾರಾಹಿತ್ಯತೆ’ ಮತ್ತು ‘ವೃತ್ತಿಪರತೆಯ ಕೊರತೆ’ ತೋರಿದ್ದಾರೆ ಎಂದು ಹೈಕೋರ್ಟ್‌ ಹೇಳಿದೆ.

“ಈ ರೀತಿಯ ತೀರ್ಪು ನೀಡಿದ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರಿಗೆ ಕರ್ನಾಟಕ ನ್ಯಾಯಾಂಗ ಅಕಾಡೆಮಿಯಲ್ಲಿ ತರಬೇತಿ ನೀಡುವ ಅಗತ್ಯವಿದೆ. ಆದ್ದರಿಂದ, ತೀರ್ಪು ನೀಡಿದ ಪೋಕ್ಸೊ ನ್ಯಾಯಾಲಯದ ನ್ಯಾಯಾಧೀಶರು ಕರ್ನಾಟಕ ನ್ಯಾಯಾಂಗ ಅಕಾಡೆಮಿಯಲ್ಲಿ ತರಬೇತಿ ಪಡೆಯುವಂತೆ ನ್ಯಾಯಾಲಯ ಈ ಮೂಲಕ ಶಿಫಾರಸು ಮಾಡುತ್ತಿದೆ” ಎಂದು ಹೈಕೋರ್ಟ್‌ ಪೀಠ ಆದೇಶಿಸಿದೆ.

2018ರ ಫೆಬ್ರವರಿಯಲ್ಲಿ ಬಾಲಕಿಯ ಮೇಲೆ ಲೈಂಗಿಕ ದೌರ್ಜನ್ಯ ನಡೆದಿತ್ತು. ಆರೋಪಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ (ಪೋಕ್ಸೊ) ಕಾಯಿದೆ ಮತ್ತು ಐಪಿಸಿ ಸೆಕ್ಷನ್‌ಗಳಡಿ ವಿಚಾರಣೆ ಎದುರಿಸಿದ್ದ. ಯಾವುದೇ ಸ್ವತಂತ್ರ ಸಾಕ್ಷಿಗಳನ್ನು ಹಾಜರುಪಡಿಸಿಲ್ಲ ಮತ್ತು ಸಂತ್ರಸ್ತೆಗೆ ಯಾವುದೇ ಗಾಯವಾಗಿಲ್ಲ ಎಂದು ವೈದ್ಯರ ಪುರಾವೆಗಳು ಬಹಿರಂಗಪಡಿಸಿವೆ ಎಂಬ ಆಧಾರದ ಮೇಲೆ ವಿಚಾರಣಾ ನ್ಯಾಯಾಲಯ ಡಿಸೆಂಬರ್ 2020ರಲ್ಲಿ ಆರೋಪಿಯನ್ನು ಖುಲಾಸೆಗೊಳಿಸಿತ್ತು. ಈ ತೀರ್ಪನ್ನು ಸರ್ಕಾರ ಹೈಕೋರ್ಟ್‌ನಲ್ಲಿ ಪ್ರಶ್ನಿಸಿತ್ತು.

ಪೋಕ್ಸೊ ನ್ಯಾಯಾಲಯ ಸಾಕ್ಷ್ಯಗಳನ್ನು “ತಾಂತ್ರಿಕವಾಗಿ ಪರಾಮರ್ಶಿಸಿದೆಯೇ ವಿನಾ, ಸೂಕ್ತ ರೀತಿಯಲ್ಲಿ ಅಲ್ಲ ಎಂದು ಹೈಕೋರ್ಟ್‌ ನ್ಯಾಯಮೂರ್ತಿ ಸಂಜೀವ್ ಕುಮಾರ್ ಅಭಿಪ್ರಾಯಪಟ್ಟಿದ್ದಾರೆ. ವಿಚಾರಣಾ ನ್ಯಾಯಾಲಯದ ಕ್ರಮ “ಸಂಪೂರ್ಣವಾಗಿ ತಪ್ಪು, ವಿಕೃತ ಮತ್ತು ಅಮಾನವೀಯ” ಎಂದು ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ಅಪ್ರಾಪ್ತ ಬಾಲಕಿ ಮತ್ತು ಆಕೆಯ ಪೋಷಕರ ಪುರಾವೆಗಳು ಪ್ರಸ್ತುತವಾಗಿದ್ದು ನಂಬಲರ್ಹವೆಂದು ಅರ್ಹತೆಯ ಆಧಾರದ ಮೇಲೆ ಹೈಕೋರ್ಟ್ ಕಂಡುಕೊಂಡಿದೆ. ಉಳಿದ ಸಂಬಂಧಿಕರ ಸಾಕ್ಷ್ಯಗಳನ್ನು ವಿಶ್ಲೇಷಿಸಿದ ನಂತರ, ಆರೋಪಿ ಕೃತ್ಯ ಎಸಗಿರುವುದು ಸಾಬೀತಾಗಿದೆ ಎಂದು ನ್ಯಾಯಾಲಯ ಹೇಳಿದೆ.

ಅಪರಾಧಿಗೆ ಐದು ವರ್ಷಗಳ ಜೈಲು ಶಿಕ್ಷೆಯ ಜೊತೆಗೆ, ಕರ್ನಾಟಕ ಸಂತ್ರಸ್ತರ ಪರಿಹಾರ ಯೋಜನೆಯಡಿ ಅಪ್ರಾಪ್ತ ಬಾಲಕಿಗೆ 5 ಲಕ್ಷ ರೂಗಳ ಪರಿಹಾರ ನೀಡಬೇಕು ಎಂದು ಜಿಲ್ಲಾ ಕಾನೂನು ಸೇವಾ ಪ್ರಾಧಿಕಾರಕ್ಕೆ ನ್ಯಾಯಾಲಯ ಆದೇಶಿಸಿದೆ.

ಇದನ್ನೂ ಓದಿ : ಶಾಲೆಯಲ್ಲಿ ಮಕ್ಕಳಿಂದ ಶೌಚಾಲಯ ಸ್ವಚ್ಛತೆ ಮಾಡಿಸುವಂತಿಲ್ಲ: ಸುತ್ತೋಲೆ ಹೊರಡಿಸಿದ ಶಿಕ್ಷಣ ಇಲಾಖೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕ್ಯಾಬಿನೆಟ್‌ನಲ್ಲಿ ಮಹಿಳೆಯರಿಗಿಲ್ಲ ಸ್ಥಾನ: ಸಿಎಂ ಡಿ.ಕೆ. ಶಿವಕುಮಾರ್ ಗೆ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆಯಿಂದ ಬಹಿರಂಗ ಪತ್ರ

ಕರ್ನಾಟಕದ ನೂತನ ಸಚಿವ ಸಂಪುಟದಲ್ಲಿ ಒಬ್ಬರೇ ಒಬ್ಬರು ಮಹಿಳಾ ಶಾಸಕರಿಗೆ ಅವಕಾಶ ನೀಡದಿರುವುದನ್ನು ತೀವ್ರವಾಗಿ ಖಂಡಿಸಿರುವ ರಾಜ್ಯದ ಪ್ರಮುಖ ಮಹಿಳಾ ಹಾಗೂ ಜನಪರ ಸಂಘಟನೆಗಳ ಒಕ್ಕೂಟ ‘ನಾವೆದ್ದು ನಿಲ್ಲದಿದ್ದರೆ-ಕರ್ನಾಟಕ’ ಸಂಘಟನೆ ಮುಖ್ಯಮಂತ್ರಿಗಳಿಗೆ ಬಹಿರಂಗ...

ಜಾರ್ಖಂಡ್ | ಜೆಪಿಎಸ್‌ಸಿ, ಜೆಎಸ್‌ಎಸ್‌ಸಿ ಪರೀಕ್ಷಾ ಅಕ್ರಮಗಳ ವಿರುದ್ಧ ತೀವ್ರಗೊಂಡ ಪ್ರತಿಭಟನೆ : ಆರು ಮಂದಿಯಿಂದ ಉಪವಾಸ ಸತ್ಯಾಗ್ರಹ

ಜಾರ್ಖಂಡ್ ಲೋಕ ಸೇವಾ ಆಯೋಗ (ಜೆಪಿಎಸ್‌ಸಿ) ಮತ್ತು ಜಾರ್ಖಂಡ್ ಸಿಬ್ಬಂದಿ ಆಯ್ಕೆ ಆಯೋಗ (ಜೆಎಸ್ಎಸ್‌ಸಿ) ನಡೆಸಿದ ವಿವಿಧ ನೇಮಕಾತಿ ಪರೀಕ್ಷೆಗಳಲ್ಲಿ ನಡೆದಿರುವ ಆಪಾದಿತ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಅಕ್ರಮಗಳ ವಿರುದ್ಧದ ಪ್ರತಿಭಟನೆಯು ತೀವ್ರ...

ಸಚಿವ ಸ್ಥಾನ ಸಿಗದಿದ್ದಕ್ಕೆ, ಶಾಸಕ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ ಎಂಬುದು ಸುಳ್ಳು: ಶಾಸಕ ಬಿ. ಆರ್‌ ಪಾಟೀಲ್‌ ಸ್ಪಷ್ಟನೆ

ಕರ್ನಾಟಕ ರಾಜ್ಯ ನೀತಿ ಮತ್ತು ಯೋಜನಾ ಆಯೋಗದ ಉಪಾಧ್ಯಕ್ಷ ಸ್ಥಾನಕ್ಕೆ ನಾನು ರಾಜೀನಾಮೆ ಸಲ್ಲಿಸಿರುವುದು ನಿಜ. ಆದರೆ, ಶಾಸಕ ಸ್ಥಾನಕ್ಕೂ ರಾಜೀನಾಮೆ ನೀಡುತ್ತಿದ್ದೇನೆ ಎಂದು ಮಾಧ್ಯಮಗಳು ಹಾಗೂ ಸಾಮಾಜಿಕ ಜಾಲತಾಣಗಳಲ್ಲಿ ಹರಡುತ್ತಿರುವ ಸುದ್ದಿಗಳು...

ಪ್ರಧಾನಿ ಮೋದಿ ವಿಡಿಯೋ ತೆಗೆದುಹಾಕಿದ ಪ್ರಕರಣ: ಮಾರ್ಕ್ ಝುಕರ್‌ಬರ್ಗ್‌ ಕ್ಷಮೆಯಾಚಣೆಗೆ ಒತ್ತಾಯಿಸಿದ ಸಂಸದೀಯ ಸಮಿತಿ; 3 ದಿನಗಳ ಗಡುವು

ಪ್ರಧಾನಿ ನರೇಂದ್ರ ಮೋದಿಯವರ ವೀಡಿಯೊವನ್ನು ಫೇಸ್‌ಬುಕ್‌ನಿಂದ ತೆಗೆದುಹಾಕಿದ್ದಕ್ಕೆ ಸಂಬಂಧಿಸಿದಂತೆ ಮೆಟಾ ಮುಖ್ಯಸ್ಥ ಮಾರ್ಕ್ ಜುಕರ್‌ಬರ್ಗ್ ಕ್ಷಮೆಯಾಚಿಸಬೇಕೆಂದು ಸಂಸದೀಯ ಸ್ಥಾಯಿ ಸಮಿತಿ ಒತ್ತಾಯಿಸಿದ್ದು, ಈ ಕ್ರಮವನ್ನು ಗಂಭೀರವಾಗಿ ಪರಿಗಣಿಸಲಾಗಿದೆ ಎಂದು ಹೇಳಿದೆ. ಇಲೆಕ್ಟ್ರಾನಿಕ್ಸ್ ಮತ್ತು ಮಾಹಿತಿ...

ಜನರ ಆತಂಕಗಳಿಗೆ ಧ್ವನಿಯಾಗಲು CJP ಸಿದ್ಧತೆ: ಮಹಾರಾಷ್ಟ್ರದಲ್ಲಿ ಅಭಿಜೀತ್ ದೀಪ್ಕೆ ನೇತೃತ್ವದಲ್ಲಿ ಉನ್ನತ ಮಟ್ಟದ ಸಭೆ

ಕಾಕ್ರೋಚ್ ಜನತಾ ಪಾರ್ಟಿ (CJP) ಸದ್ಯಕ್ಕೆ ಒತ್ತಡದ ಗುಂಪಾಗಿ ಕೆಲಸ ಮಾಡಲಿದ್ದು, ಪ್ರಸಕ್ತ ಭಾರತಕ್ಕೆ ಬೇಕಾಗಿರುವುದು ಕೂಡ ಅದೇ ಆಗಿದೆ ಎಂದು ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ ಬುಧವಾರ ಸ್ಪಷ್ಟಪಡಿಸಿದ್ದಾರೆ. ಮಹಾರಾಷ್ಟ್ರದ ಛತ್ರಪತಿ ಸಂಭಾಜಿನಗರದಲ್ಲಿ...

ರಾಯಚೂರು: ದಲಿತ ಮುಖಂಡ ಭೂಮಾನಂದ ಬರ್ಬರ ಹತ್ಯೆ; ಆಲ್ ಇಂಡಿಯಾ ಬಿಎಸ್‌ಪಿ ಹಾಗೂ ಜನಪರ ಸಂಘಟನೆಗಳ ತೀವ್ರ ಆಕ್ರೋಶ 

ರಾಯಚೂರು ಜಿಲ್ಲೆಯಲ್ಲಿ ದಲಿತ ಯುವ ನಾಯಕನೊಬ್ಬನ ಭೀಕರ ಕೊಲೆ ಪ್ರಕರಣ ವರದಿಯಾಗಿದ್ದು, ಇಡೀ ಜಿಲ್ಲೆಯಲ್ಲಿ ತೀವ್ರ ಆತಂಕ, ಕಾವು ಮತ್ತು ಆಕ್ರೋಶದ ವಾತಾವರಣ ನಿರ್ಮಾಣವಾಗಿದೆ. ದೇವದುರ್ಗ ತಾಲೂಕಿನ ಹದ್ದಿನಾಳ ಗ್ರಾಮದ ನಿವಾಸಿ, ಮಾದಿಗ...

ತಮಿಳುನಾಡು: ಹಿಂದೂ ‘ಮೇಲ್ಜಾತಿ’ ವ್ಯಕ್ತಿಯ ಜಮೀನಿನಲ್ಲಿ ಕುದುರೆ ಮೇಯಿಸುತ್ತಿದ್ದ ಎಂಬ ಕಾರಣಕ್ಕೆ 26 ವರ್ಷದ ದಲಿತ ವ್ಯಕ್ತಿಯ ಬರ್ಬರ ಹತ್ಯೆ 

ತಮಿಳುನಾಡಿನ ದಿಂಡಿಗಲ್ ಜಿಲ್ಲೆಯಲ್ಲಿ ಜಾತಿ ಗರ್ವದ ಬಲಿಪೀಠಕ್ಕೆ 26 ವರ್ಷದ ದಲಿತ ಯುವಕನೊಬ್ಬ ಬಲಿಯಾಗಿರುವ ಕ್ರೂರ ಘಟನೆ ವರದಿಯಾಗಿದೆ. ‘ಮೇಲ್ಜಾತಿ’ ಪ್ರಬಲ ಸಮುದಾಯಕ್ಕೆ ಸೇರಿದ ವ್ಯಕ್ತಿಯೊಬ್ಬನ ಜಮೀನಿನಲ್ಲಿ ಕುದುರೆ ಮೇಯುತ್ತಿತ್ತು ಎಂಬ ಕ್ಷುಲ್ಲಕ...

ಹಸು ಕೇವಲ ಉಪಯುಕ್ತ ಪ್ರಾಣಿ, ದೇವತೆಯಲ್ಲ ಎಂದಿದ್ದ ಸಾವರ್ಕರ್, ಕೋರ್ಟ್‌ನಲ್ಲಿ ಸಾವರ್ಕರ್ ಮೊಮ್ಮಗನ ಮಹತ್ವದ ಹೇಳಿಕೆ

ವಿನಾಯಕ ದಾಮೋದರ ಸಾವರ್ಕರ್ ಅವರು ಗೋಪೂಜೆಯನ್ನು ಸ್ಪಷ್ಟವಾಗಿ ವಿರೋಧಿಸಿದ್ದರು ಮತ್ತು ಹಸುವನ್ನು ಕೇವಲ ಒಂದು ಉಪಯುಕ್ತ ಪ್ರಾಣಿಯನ್ನಾಗಿಷ್ಟೇ ಪರಿಗಣಿಸುತ್ತಿದ್ದರು" ಎಂದು ಅವರ ಮೊಮ್ಮಗ ಸತ್ಯಕಿ ಸಾವರ್ಕರ್ ಪುಣೆಯ ವಿಶೇಷ ಜನಪ್ರತಿನಿಧಿಗಳ ನ್ಯಾಯಾಲಯದಲ್ಲಿ ಹೇಳಿಕೆ...

ಯಾದಗಿರಿ: ಫಾರ್ಮಾ ಘಟಕದಲ್ಲಿ ವಿಷಾನಿಲ ಸೋರಿಕೆ, ಮೂವರು ಕಾರ್ಮಿಕರ ದಾರುಣ ಸಾವು, FIR ದಾಖಲು

ಜಿಲ್ಲೆಯ ಸೈದಾಪುರ ಪೊಲೀಸ್ ಠಾಣೆ ವ್ಯಾಪ್ತಿಯ ಕಡೇಚೂರು–ಬಾಡಿಯಾಳ ಕೈಗಾರಿಕಾ ಪ್ರದೇಶದಲ್ಲಿರುವ 'ಸಿಲ್ ಲ್ಯಾಬೊರೇಟರೀಸ್ ಪ್ರೈವೇಟ್ ಲಿಮಿಟೆಡ್' (Sil Laboratories Pvt Ltd) ಔಷಧಿ ತಯಾರಿಕಾ ಘಟಕದಲ್ಲಿ ಬುಧವಾರ ಮುಂಜಾನೆ ಸಂಭವಿಸಿದ ಭೀಕರ ರಾಸಾಯನಿಕ...

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’: ಯುಪಿ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ದ್ವೇಷ ಭಾಷಣಕ್ಕೆ ವ್ಯಾಪಕ ಆಕ್ರೋಶ

‘ಮದ್ರಸಾಗಳು ಭಯೋತ್ಪಾದನೆಯನ್ನು ಉತ್ಪಾದಿಸುತ್ತವೆ’ ಎಂಬ ಉತ್ತರ ಪ್ರದೇಶದ ಉಪಮುಖ್ಯಮಂತ್ರಿ ಕೇಶವ್ ಪ್ರಸಾದ್ ಮೌರ್ಯ ಅವರ ಹೇಳಿಕೆಯು ತೀವ್ರ ಸ್ವರೂಪದ ವಿವಾದಕ್ಕೆ ಕಾರಣವಾಗಿದೆ. ಧಾರ್ಮಿಕ ಅಲ್ಪಸಂಖ್ಯಾತರ ಶಿಕ್ಷಣ ಸಂಸ್ಥೆಗಳನ್ನು ಗುರಿಯಾಗಿಸಿಕೊಂಡು ನೀಡಿರುವ ಈ ಹೇಳಿಕೆಯು...