Homeಮುಖಪುಟಮಂಗಳೂರು ವಿಮಾನ ನಿಲ್ದಾಣದ ಖಾಸಗೀಕರಣವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಜಾಮಾಡಿದ ಕರ್ನಾಟಕ ಹೈಕೋರ್ಟ್‌

ಮಂಗಳೂರು ವಿಮಾನ ನಿಲ್ದಾಣದ ಖಾಸಗೀಕರಣವನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಅರ್ಜಿ ವಜಾಮಾಡಿದ ಕರ್ನಾಟಕ ಹೈಕೋರ್ಟ್‌

- Advertisement -
- Advertisement -

ಮಂಗಳೂರು ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಖಾಸಗೀಕರಣವನ್ನು ಪ್ರಶ್ನಿಸಿ, ವಿಮಾನ ನಿಲ್ದಾಣ ಪ್ರಾಧಿಕಾರದ ನೌಕರರ ಒಕ್ಕೂಟ ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು ಕರ್ನಾಟಕ ಹೈಕೋರ್ಟ್ ಮಂಗಳವಾರ ವಜಾಗೊಳಿಸಿದೆ.

ಹಂಗಾಮಿ ಮುಖ್ಯ ನ್ಯಾಯಮೂರ್ತಿ ಸತೀಶ್ ಚಂದ್ರ ಶರ್ಮಾ ಮತ್ತು ನ್ಯಾಯಮೂರ್ತಿ ಸಚಿನ್ ಶಂಕರ್ ಮಗದುಮ್ ಅವರ ವಿಭಾಗೀಯ ಪೀಠವು ಅರ್ಜಿಯನ್ನು ವಜಾಗೊಳಿಸಲು ‘ಕೇರಳ ಹೈಕೋರ್ಟ್ ನೀಡಿದ್ದ ತೀರ್ಪನ್ನು’ ಅವಲಂಬಿಸಿತು. ಈ ತೀರ್ಪಿನಲ್ಲಿ ಕೇರಳ ಹೈಕೋರ್ಟ್‌ ‘‘ವಿಮಾನ ನಿಲ್ದಾಣಗಳನ್ನು ಗುತ್ತಿಗೆ ನೀಡುವುದು ಭಾರತ ಸರ್ಕಾರ ತೆಗೆದುಕೊಂಡ ನೀತಿ ನಿರ್ಧಾರವಾಗಿದ್ದು, ನ್ಯಾಯಾಲಯದ ಹಸ್ತಕ್ಷೇಪ ಅಗತ್ಯವಿಲ್ಲ” ಎಂದು ಹೇಳಿತ್ತು.

ಇದನ್ನೂ ಓದಿ: ಅದಾನಿಗೆ ಮಂಗಳೂರು ಏರ್‌ಪೋರ್ಟ್ ಗುತ್ತಿಗೆ: ಕೇಂದ್ರಕ್ಕೆ ಕರ್ನಾಟಕ ಹೈಕೋರ್ಟ್ ನೋಟಿಸ್

ವಿಮಾನ ನಿಲ್ದಾಣ ಪ್ರಾಧಿಕಾರದ ನೌಕರರ ಒಕ್ಕೂಟ ಸಲ್ಲಿಸಿದ್ದ ಅರ್ಜಿಯಲ್ಲಿ, ಮಂಗಳೂರಿನ ವಿಮಾನ ನಿಲ್ದಾಣ ಸೇರಿದಂತೆ ಮೂರು ವಿಮಾನ ನಿಲ್ದಾಣಗಳನ್ನು, ಅದಾನಿ ಎಂಟರ್‌ಪ್ರೈಸಸ್‌ಗೆ ಗುತ್ತಿಗೆ ನೀಡುವ ಬಿಡ್‌ಗೆ ಅನುಮೋದನೆ ನೀಡುವ 2019 ರ ಕ್ಯಾಬಿನೆಟ್ ನಿರ್ಧಾರವನ್ನು ರದ್ದುಗೊಳಿಸುವಂತೆ ನ್ಯಾಯಾಲಯದಲ್ಲಿ ಕೋರಲಾಗಿತ್ತು.

ಅಷ್ಟೆ ಅಲ್ಲದೆ, ಆರು ವಿಮಾನ ನಿಲ್ದಾಣಗಳನ್ನು ಖಾಸಗೀಕರಣಗೊಳಿಸುವ ಒಕ್ಕೂಟ ಸರ್ಕಾರದ ನಿರ್ಧಾರವನ್ನು ಪ್ರಶ್ನಿಸಿತ್ತು. ಈ ನಿರ್ಧಾವು ಕಾನೂನುಬಾಹಿರವಾಗಿದ್ದು, ‘ವಿಮಾನ ನಿಲ್ದಾಣ ಪ್ರಾಧಿಕಾರ ಕಾಯ್ದೆ-1994’ ಯನ್ನು ಉಲ್ಲಂಘಿಸಲಾಗಿದೆ ಎಂದು ಅರ್ಜಿಯಲ್ಲಿ ಹೇಳಲಾಗಿತ್ತು.

ಅರ್ಜಿದಾರರ ಪರ ಹಾಜರಾದ ಹಿರಿಯ ವಕೀಲ ಅಶೋಕ್ ಹಾರನಹಳ್ಳಿ, ಭಾರತೀಯ ವಿಮಾನ ನಿಲ್ದಾಣ ಪ್ರಾಧಿಕಾರದ ಕಾಯಿದೆಯ ಸೆಕ್ಷನ್ 12 ಅನ್ನು ಉಲ್ಲೇಖಿಸಿದ್ದರು. ವಿಮಾನ ನಿಲ್ದಾಣದ ಆವರಣವನ್ನು ಗುತ್ತಿಗೆ ಪಡೆಯಬಹುದು ಆದರೆ, ಈಗ ಇಡೀ ವಿಮಾನ ನಿಲ್ದಾಣವನ್ನು ಕಾರ್ಯಾಚರಣೆಗಾಗಿ ಖಾಸಗಿ ವ್ಯಕ್ತಿಗೆ ನೀಡಲಾಗಿದೆ. ಗುತ್ತಿಗೆ ನೀಡಿದ ಒಪ್ಪಂದವನ್ನು ಉಲ್ಲೇಖಿಸಿ, ಸರ್ಕಾರದೊಂದಿಗೆ ಯಾವುದೇ ಆದಾಯ ಹಂಚಿಕೆ ಇಲ್ಲ ಮತ್ತು ಪ್ರತಿ ಪ್ರಯಾಣಿಕರ ಶುಲ್ಕದ ಮೇಲೆ ಗುತ್ತಿಗೆಯನ್ನು ನಿಗದಿಪಡಿಸಲಾಗಿದೆ ಎಂದು ಅವರು ಸೂಚಿಸಿದ್ದಾರೆ.

ಇದನ್ನೂ ಓದಿ: ಮಂಗಳೂರು ವಿಮಾನ ನಿಲ್ದಾಣ ಇನ್ನು ಮುಂದೆ ಅದಾನಿ ಏರ್‌ಪೋರ್ಟ್ಸ್!: ನೆಟ್ಟಿಗರ ಕಿಡಿ

“ರನ್‌ವೇಗಳು, ಟ್ಯಾಕ್ಸಿವೇಗಳು ಮತ್ತು ವಿಮಾನಗಳನ್ನು ರಕ್ಷಿಸುವ ಫೈರ್‌ ಕಟ್ಟಡಗಳನ್ನು ಸಹ ಗುತ್ತಿಗೆಗೆ ನೀಡಲಾಗಿದೆ. ಇವು ಏರ್ ಟ್ರಾಫಿಕ್ ಸೇವೆಯ ಭಾಗವಾಗಿದೆ, ಅವುಗಳನ್ನು ಯಾರೂ ಗುತ್ತಿಗೆಗೆ ನೀಡುವುದಿಲ್ಲ … ವಾಸ್ತವವಾಗಿ, ವಾಯುಯಾನ ಸೇವೆಗಳ ಮೇಲಿನ ಸಂಪೂರ್ಣ ನಿಯಂತ್ರಣವನ್ನು ಅವರಿಗೆ ನೀಡಲಾಗಿದೆ, ಇದು ಎಎಐ ಕಾಯ್ದೆಗೆ ವಿರುದ್ಧವಾಗಿದೆ” ಎಂದು ಅವರು ವಾದಿಸಿದ್ದಾರೆ.

“ವಿಮಾನ ನಿಲ್ದಾಣವನ್ನು ಮೂರನೇ ವ್ಯಕ್ತಿಗೆ ನೀಡಲಾಗಿದೆ, ಇದು ಸಾರ್ವಜನಿಕ-ಖಾಸಗಿ ಸಹಭಾಗಿತ್ವ ಮಾದರಿಯ ನೀತಿಗೆ ಅನುಗುಣವಾಗಿಲ್ಲ. ಇದು ಪಾಲುದಾರಿಕೆಯಲ್ಲ ಬದಲಾಗಿ ಎಲ್ಲವನ್ನೂ ಅವರಿಗೆ ನೀಡುವುದಾಗಿದೆ” ಎಂದು ಅವರು ಹೇಳಿದ್ದಾರೆ.

ಈ ಅರ್ಜಿಯನ್ನು ವಿರೋಧಿಸಿ, ಒಕ್ಕೂಟ ಸರ್ಕಾರದ ಪರವಾಗಿ ಹೆಚ್ಚುವರಿ ಸಾಲಿಸಿಟರ್ ಜನರಲ್ ಎಂಬಿ ನರಗುಂದ ಹಾಜರಾಗಿದ್ದರು. ಅರ್ಜಿದಾರರ ಒಕ್ಕೂಟದ ಒಂದು ಶಾಖೆಯು ಕೇರಳ ಹೈಕೋರ್ಟ್‌ಗೆ ಕೂಡಾ ಅರ್ಜಿ ಸಲ್ಲಿಸಿದೆ ಎಂದು ನ್ಯಾಯಾಲಯಕ್ಕೆ ತಿಳಿಸಿದ ನಂತರ ಅರ್ಜಿಯನ್ನು ವಜಾಗೊಳಿಸಲಾಗಿದೆ

ಇದನ್ನೂ ಓದಿ: ಮುಂಬೈ ವಿಮಾನ ನಿಲ್ದಾಣದಲ್ಲಿನ ‘ಅದಾನಿ ಏರ್‌ಪೋರ್ಟ್’ ಬೋರ್ಡ್‌ಗಳನ್ನು ಕಿತ್ತೆಸೆದ ಶಿವಸೇನೆ ಕಾರ್ಯಕರ್ತರು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...