Homeಕರ್ನಾಟಕಪೋಕ್ಸೋ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು

ಪೋಕ್ಸೋ ಪ್ರಕರಣ : ಮಾಜಿ ಸಿಎಂ ಯಡಿಯೂರಪ್ಪಗೆ ಹೈಕೋರ್ಟ್‌ನಿಂದ ನಿರೀಕ್ಷಣಾ ಜಾಮೀನು

- Advertisement -
- Advertisement -

ಅಪ್ರಾಪ್ತ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಲ್ಲಿ ಮಾಜಿ ಮುಖ್ಯಮಂತ್ರಿ ಹಾಗೂ ಬಿಜೆಪಿ ನಾಯಕ ಬಿಎಸ್ ಯಡಿಯೂರಪ್ಪ ವಿರುದ್ಧ ವಿಚಾರಣಾ ನ್ಯಾಯಾಲಯ ಸಂಜ್ಞೇ ಪರಿಗಣಿಸಿರುವ ಆದೇಶವನ್ನು ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ.

ಸಿಐಡಿ ಮಾಡಿರುವ ತನಿಖೆ ಮತ್ತು ಅಂತಿಮ ವರದಿ ಹಾಗೆಯೇ ಉಳಿಯಲಿದೆ ಎಂದಿರುವ ಹೈಕೋರ್ಟ್, ಸಿಐಡಿ ತನ್ನ ಮುಂದೆ ಇಟ್ಟಿರುವ ಸಾಮಗ್ರಿಗಳು ಮತ್ತು ಈ ಆದೇಶದಲ್ಲಿ ಮಾಡಿದ ಅವಲೋಕನಗಳನ್ನು ಪರಿಗಣಿಸಿ ಹೊಸದಾಗಿ ಸೂಕ್ತ ಆದೇಶ ನೀಡಲು ವಿಚಾರಣಾ ನ್ಯಾಯಾಲಯಕ್ಕೆ ವಿಷಯವನ್ನು ಹಿಂದಿರುಗಿಸಿದೆ. ಇದೇ ವೇಳೆ ಯಡಿಯೂರಪ್ಪ ಅವರಿಗೆ ನಿರೀಕ್ಷಣಾ ಜಾಮೀನು ಮಂಜೂರು ಮಾಡಿದೆ.

ಜುಲೈ 4, 2024 ರಂದು ವಿಚಾರಣಾ ನ್ಯಾಯಾಲಯ ನೀಡಿದ್ದ ಆದೇಶವನ್ನು ರದ್ದುಗೊಳಿಸಿ ನ್ಯಾಯಮೂರ್ತಿ ಎಂ ನಾಗಪ್ರಸನ್ನ ಅವರು ಆದೇಶ ಹೊರಡಿಸಿದ್ದಾರೆ. ಪೋಕ್ಸೋ ಮತ್ತು ಐಪಿಸಿ ನಿಬಂಧನೆಗಳ ಅಡಿಯಲ್ಲಿ ಸದಾಶಿವನಗರ ಠಾಣೆಯಲ್ಲಿ ತನ್ನ ವಿರುದ್ದ ದಾಖಲಾಗಿರುವ ಎಫ್‌ಐಆರ್, ಆನಂತರ ಸಿಐಡಿ ಸಲ್ಲಿಸಿರುವ ಆರೋಪ ಪಟ್ಟಿ ಹಾಗೂ ಅದನ್ನು ಆಧರಿಸಿ ಸಕ್ಷಮ ನ್ಯಾಯಾಲಯ ಸಂಜ್ಞೇ ಪರಿಗಣಿಸಿರುವ ಆದೇಶವನ್ನು ರದ್ದುಪಡಿಸುವಂತೆ ಕೋರಿ ಯಡಿಯೂರಪ್ಪ ಪ್ರತ್ಯೇಕ ಎರಡು ಅರ್ಜಿಗಳನ್ನು ಸಲ್ಲಿಸಿದ್ದ ಅರ್ಜಿಯನ್ನು ಭಾಗಶಃ ಮಾನ್ಯ ಮಾಡಿದ್ದಾರೆ.

2024ರ ಜೂನ್‌ನಲ್ಲಿ ಬೆಂಗಳೂರಿನ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ಲೈಂಗಿಕ ಅಪರಾಧಗಳಿಂದ ಮಕ್ಕಳ ರಕ್ಷಣೆ ಕಾಯ್ದೆಯ (ಪೋಕ್ಸೋ) ಸೆಕ್ಷನ್ 8 ಮತ್ತು 1860ರ ಭಾರತೀಯ ದಂಡ ಸಂಹಿತೆಯ 354ಎ ಅಡಿಯಲ್ಲಿ ಯಡಿಯೂರಪ್ಪ ವಿರುದ್ದ ಪ್ರಕರಣ ದಾಖಲಾಗಿದೆ.

ಸಂಜ್ಞೇ ಪರಿಗಣಿಸಿರುವ ಆದೇಶ ಹೊರತುಪಡಿಸಿ ಉಭಯ ಪಕ್ಷಕಾರರ ಪರ ಹಿರಿಯ ವಕೀಲರಾದ ಸಿ ವಿ ನಾಗೇಶ್‌ ಮತ್ತು ಪ್ರೊ. ರವಿವರ್ಮ ಕುಮಾರ್‌ ಅವರು ಎತ್ತಿರುವ ಯಾವುದೇ ವಾದಗಳಿಗೆ ಹೈಕೋರ್ಟ್ ಉತ್ತರಿಸಿಲ್ಲ. ಎಲ್ಲಾ ವಾದಗಳನ್ನು ಮುಕ್ತವಾಗಿರಿಸಲಾಗಿದ್ದು, ಅರ್ಜಿದಾರರು ಸೂಕ್ತ ಸಂದರ್ಭದಲ್ಲಿ ಸೂಕ್ತ ವೇದಿಕೆಯಲ್ಲಿ ಪರಿಹಾರ ಪಡೆಯಬಹುದಾಗಿದೆ” ಎಂದು ಆದೇಶ ಮಾಡಿದೆ.

ಹೀಗಾಗಿ, ಈ ಪ್ರಕರಣದಲ್ಲಿ ಇತರೆ ಆರೋಪಿಗಳಾಗಿರುವ ವೈ ಎಂ ಅರುಣ, ರುದ್ರೇಶ ಮರಳಸಿದ್ದಯ್ಯ ಮತ್ತು ಜಿ ಮರಿಸ್ವಾಮಿ ಅವರ ವಿರುದ್ಧ ಸಂಜ್ಞೇ ಪರಿಗಣಿಸಿರುವ ಆದೇಶ ಮುಂದುವರಿಯಲಿದೆ.

ಮಾರ್ಚ್ 28,2024 ರಂದು ಯಡಿಯೂರಪ್ಪ ಅವರಿಗೆ ಸಿಆರ್‌ಪಿಸಿ ಸೆಕ್ಷನ್ 41 ಎ ಅಡಿಯಲ್ಲಿ ಪೊಲೀಸರು ನೋಟಿಸ್ ಜಾರಿ ಮಾಡಿದ್ದರು. ಅದರ ಪ್ರಕಾರ, ಯಡಿಯೂರಪ್ಪ ತನಿಖಾಧಿಕಾರಿಯ ಮುಂದೆ ವಿಚಾರಣೆಗೆ ಹಾಜರಾಗಿದ್ದರು. ಜೂನ್ 10, 2024 ರಂದು ಯಡಿಯೂರಪ್ಪ ಅವರಿಗೆ ಎರಡನೇ ನೋಟಿಸ್‌ ನೀಡಿ, ಜೂನ್ 11, 2024 ರಂದು ವಿಚಾರಣೆಗೆ ಹಾಜರಾಗುವಂತೆ ಸೂಚಿಸಲಾಗಿತ್ತು. ಆದರೆ, ಅವರು ಜೂನ್ 17 ರವರೆಗೆ ಹಾಜರಾಗಲು ಸಮಯ ಕೋರಿದ್ದರು. ಈ ನಡುವೆ ಯಡಿಯೂರಪ್ಪ ಅವರು ತನಿಖೆಗೆ ಸಹಕರಿಸುತ್ತಿಲ್ಲ ಎಂದು ಸಿಐಡಿ ಆರೋಪಿಸಿತ್ತು.

ಅರ್ಜಿದಾರರ ವಿರುದ್ಧ ಎಫ್‌ಐಆರ್ ದಾಖಲಿಸುವಲ್ಲಿ ವಿಳಂಬವಾಗಿದೆ ಎಂದು ಯಡಿಯೂರಪ್ಪ ಪರ ವಕೀಲರು ವಾದಿಸಿದ್ದಾರೆ. ಕ್ಯಾನ್ಸರ್‌ನಿಂದಾಗಿ ಕೊನೆಯುಸಿರೆಳೆದ ಸಂತ್ರಸ್ತೆಯ ತಾಯಿ, ದೂರುದಾರರ ಅರ್ಹತೆಗಳು ಮತ್ತು ಅರ್ಜಿದಾರರ ವಿರುದ್ಧ ಹೊರಿಸಲಾದ ಆರೋಪಗಳ ಸ್ವರೂಪ, ದೂರುದಾರರು ಇತರರ ವಿರುದ್ಧ ದಾಖಲಿಸಿರುವ ಹಲವಾರು ಪ್ರಕರಣಗಳ ಬಗ್ಗೆಯೂ ವಕೀಲರು ಉಲ್ಲೇಖಿಸಿದ್ದಾರೆ. ತನ್ನ ಕಕ್ಷಿದಾರರ ವಿರುದ್ಧದ ಪ್ರಕರಣದಂತೆ ಅವೆಲ್ಲವೂ ಕ್ಷುಲ್ಲಕವಾಗಿವೆ ಎಂದು ಅವರು ವಾದಿಸಿದ್ದಾರೆ. ಇದಲ್ಲದೆ, ರಾಜಕೀಯ ದ್ವೇಷದ ಬಗ್ಗೆಯೂ ಪ್ರಸ್ತಾಪಿಸಿದ್ದಾರೆ ಎಂದು ವರದಿಯಾಗಿದೆ.

ಮಧ್ಯಂತರ ಆದೇಶದ ಮೂಲಕ, ನ್ಯಾಯಾಲಯವು ಯಡಿಯೂರಪ್ಪ ಅವರಿಗೆ ತನಿಖೆಗೆ ಸಹಕರಿಸುವಂತೆ ಮತ್ತು ತನಿಖೆಗಾಗಿ ಪೊಲೀಸರ ಮುಂದೆ ಹಾಜರಾದಾಗ ಅವರನ್ನು ಬಂಧಿಸದಂತೆ ನಿರ್ದೇಶಿಸಿತ್ತು.

ಪ್ರಕರಣದ ಹಿನ್ನೆಲೆ : ಫೆಬ್ರವರಿ 2, 2024ರಂದು ಬೆಂಗಳೂರಿನ ತಮ್ಮ ಮನೆಯಲ್ಲಿ 17 ವರ್ಷದ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿರುವ ಆರೋಪ ಯಡಿಯೂರಪ್ಪ ಮೇಲಿದೆ. ಈ ಸಂಬಂಧ ಬಾಲಕಿಯ ತಾಯಿ ಮಾರ್ಚ್ 14, 2024 ರಂದು ಯಡಿಯೂರಪ್ಪ ವಿರುದ್ಧ ಸದಾಶಿವನಗರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದರು.

ಬಾಲಕಿ ಮೇಲೆ ನಡೆದ ಲೈಂಗಿಕ ದೌರ್ಜನ್ಯಕ್ಕೆ ಸಂಬಂಧಿಸಿದಂತೆ ನ್ಯಾಯ ಕೊಡಿಸುವಂತೆ ಕೋರಿ ಬಾಲಕಿ ಮತ್ತು ಆಕೆಯ ತಾಯಿ ಯಡಿಯೂರಪ್ಪ ನಿವಾಸಕ್ಕೆ ತೆರಳಿದ್ದರು. ಈ ವೇಳೆ ಯಡಿಯೂರಪ್ಪ ಅವರೇ ಬಾಲಕಿ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾರೆ ಎಂದು ಆರೋಪಿಸಲಾಗಿದೆ. ಯಡಿಯೂರಪ್ಪ ವಿರುದ್ಧದ ದೂರಿನ ಸಂಬಂಧ ಅಪ್ರಾಪ್ತ ಬಾಲಕಿಯ ತಾಯಿ ಮೇ 27, 2024 ರಂದು ವಕೀಲ ಬಾಲನ್ ಅವರನ್ನು ಭೇಟಿಯಾಗಬೇಕಿತ್ತು. ಆದರೆ, ಉಸಿರಾಟದ ತೊಂದರೆಯಿಂದ ಅವರು ಮೇ 26, 2024ರಂದು ಬೆಂಗಳೂರಿನ ನ್ಯಾನೋ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾಳೆ. ಈ ಸಾವಿನ ಸುತ್ತವೂ ಹಲವು ಅನುಮಾನಗಳು ವ್ಯಕ್ತವಾಗಿದ್ದು, ತನಿಖೆಗೆ ಅಗ್ರಹಿಸಿ ಜನವಾದಿ ಮಹಿಳಾ ಸಂಘಟನೆ ಬೆಂಗಳೂರಿನ ಹುಳಿಮಾವು ಪೊಲೀಸ್ ಠಾಣೆಯಲ್ಲಿ ಮೇ 27,2024ರಂದು ದೂರು ದಾಖಲಿಸಿದೆ.

ಮುಡಾ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ : ಸಿಎಂ ಸಿದ್ದರಾಮಯ್ಯ ನಿರಾಳ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...