Homeಕರ್ನಾಟಕಮದುವೆ, ವಿಚ್ಛೇದನ ಪ್ರಮಾಣಪತ್ರ ನೀಡುವ ವಕ್ಫ್ ಮಂಡಳಿಯ ಅಧಿಕಾರ ಪ್ರಶ್ನಿಸಿದ ಹೈಕೋರ್ಟ್

ಮದುವೆ, ವಿಚ್ಛೇದನ ಪ್ರಮಾಣಪತ್ರ ನೀಡುವ ವಕ್ಫ್ ಮಂಡಳಿಯ ಅಧಿಕಾರ ಪ್ರಶ್ನಿಸಿದ ಹೈಕೋರ್ಟ್

- Advertisement -
- Advertisement -

ಮುಸ್ಲಿಂ ದಂಪತಿಗಳಿಗೆ ವಿವಾಹ ಮತ್ತು ವಿಚ್ಛೇದನ ಪ್ರಮಾಣಪತ್ರಗಳನ್ನು ನೀಡುವ ರಾಜ್ಯ ವಕ್ಫ್ ಮಂಡಳಿಯ ಅಧಿಕಾರದ ಬಗ್ಗೆ ಕರ್ನಾಟಕ ಹೈಕೋರ್ಟ್ ಸೋಮವಾರ (ಫೆ.10) ಅನುಮಾನ ವ್ಯಕ್ತಪಡಿಸಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಮುಸ್ಲಿಂ ದಂಪತಿಗಳಿಗೆ ವಿವಾಹ ಪ್ರಮಾಣಪತ್ರಗಳನ್ನು ನೀಡಲು ವಕ್ಫ್ ಮಂಡಳಿ ಮತ್ತು ಅದರ ಜಿಲ್ಲಾ ಅಧಿಕಾರಿಗಳಿಗೆ ಅಧಿಕಾರ ನೀಡಿ ಆಗಸ್ಟ್ 30, 2023ರಂದು ಹೊರಡಿಸಲಾದ ಸರ್ಕಾರಿ ಆದೇಶವನ್ನು ನ್ಯಾಯಾಲಯ ಕಳೆದ ವರ್ಷ ತಡೆ ಹಿಡಿದಿತ್ತು.

ಮನವಿಯ ಮೇರೆಗೆ, ಮುಖ್ಯ ನ್ಯಾಯಮೂರ್ತಿ ಎನ್.ವಿ. ಅಂಜಾರಿಯಾ ಮತ್ತು ನ್ಯಾಯಮೂರ್ತಿ ಎಂ.ಐ. ಅರುಣ್ ಅವರ ನ್ಯಾಯಪೀಠವು ಇಂದು ರಾಜ್ಯ ಸರ್ಕಾರಕ್ಕೆ ತನ್ನ ಆದೇಶವನ್ನು ಪ್ರಶ್ನಿಸಿರುವ ಅರ್ಜಿಗೆ ಪ್ರತಿಕ್ರಿಯಿಸಲು ಸ್ವಲ್ಪ ಸಮಯವಕಾಶ ನೀಡಿದೆ. ಫೆಬ್ರವರಿ 19ಕ್ಕೆ ಮುಂದಿನ ವಿಚಾರಣೆಯನ್ನು ನಿಗದಿಪಡಿಸಿದೆ.

“ವಕ್ಫ್ (ಪ್ರಾಧಿಕಾರ) ಮದುವೆ ಪ್ರಮಾಣಪತ್ರ ಮತ್ತು ವಿಚ್ಛೇದನ ಪ್ರಮಾಣಪತ್ರವನ್ನು ಸಹ ನೀಡುತ್ತಿದೆಯೇ? ನಾವು ನಿಮ್ಮ ಉತ್ತರಕ್ಕಾಗಿ ಹೆಚ್ಚಿನ ಸಮಯವನ್ನು ನೀಡುವುದಿಲ್ಲ. ಏಕೆಂದರೆ ಇದು ಬಹಳ ಮುಖ್ಯವಾದ ವಿಷಯವಾಗಿದೆ. ವಕ್ಫ್ ಕಾಯ್ದೆಯಡಿ ನಿಮಗೆ ಯಾವುದೇ ಅಧಿಕಾರವಿಲ್ಲ” ಎಂದು ನ್ಯಾಯಾಲಯ ಟೀಕಿಸಿದೆ ಎಂದು ವರದಿ ಹೇಳಿದೆ.

ಕರ್ನಾಟಕದಾದ್ಯಂತ ಜಿಲ್ಲಾ ವಕ್ಫ್ ಮಂಡಳಿಗಳಿಗೆ ವಿವಾಹ ಪ್ರಮಾಣಪತ್ರಗಳನ್ನು ನೀಡಲು ಅಧಿಕಾರ ಕೊಡುವ ರಾಜ್ಯ ಸರ್ಕಾರದ ಅಲ್ಪಸಂಖ್ಯಾತ, ವಕ್ಫ್ ಮತ್ತು ಹಜ್ ಇಲಾಖೆಯ ಅಧೀನ ಕಾರ್ಯದರ್ಶಿ ಹೊರಡಿಸಿದ ಆದೇಶವನ್ನು ರದ್ದುಗೊಳಿಸುವಂತೆ ಕೋರಿ ಆಲಂ ಪಾಷಾ ಎಂಬವರು ಸಲ್ಲಿಸಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿ (ಪಿಐಎಲ್)ಯನ್ನು ನ್ಯಾಯಾಲಯ ವಿಚಾರಣೆ ನಡೆಸುತ್ತಿದೆ.

ಮುಸ್ಲಿಂ ದಂಪತಿಗಳ ವಿವಾಹ ಸಮಾರಂಭದ ಸಮಯದಲ್ಲಿ ಕುರಾನ್ ಶ್ಲೋಕಗಳನ್ನು ಪಠಿಸುವ ಖಾಝಿಗೆ, 1988ರ ಖಾಝಿ ಕಾಯ್ದೆಯ ಅಡಿಯಲ್ಲಿ ವಿವಾಹ ಪ್ರಮಾಣಪತ್ರಗಳನ್ನು ನೀಡಲು ವಕ್ಫ್ ಮಂಡಳಿಯು ಅಧಿಕಾರ ನೀಡಿತ್ತು ಎಂದು ಅರ್ಜಿದಾರರು ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

ಆದರೆ, ಈ ಕಾಯ್ದೆಯನ್ನು 2013 ರಲ್ಲಿ ರದ್ದುಗೊಳಿಸಲಾಗಿದೆ. ನಂತರ ರಾಜ್ಯ ಸರ್ಕಾರ ವಕ್ಫ್ ಮಂಡಳಿಗೆ ವಿವಾಹ ಪ್ರಮಾಣಪತ್ರಗಳನ್ನು ನೀಡಲು ಅಧಿಕಾರ ಕೊಡುವ ಆದೇಶ ಹೊರಡಿಸಿದೆ.

ವಕ್ಫ್ ಕಾಯ್ದೆಯು ಸ್ಥಿರ ಮತ್ತು ಚರ ಆಸ್ತಿಗಳೊಂದಿಗೆ ಮಾತ್ರ ವ್ಯವಹರಿಸುತ್ತದೆ. ವಕ್ಫ್ ಮಂಡಳಿಯ ಅಧಿಕಾರಿಗಳಿಗೆ ವಿವಾಹ ಪ್ರಮಾಣಪತ್ರಗಳನ್ನು ನೀಡಲು ಅಥವಾ ವ್ಯವಹರಿಸಲು ಅಧಿಕಾರ ನೀಡುವ ಯಾವುದೇ ನಿಬಂಧನೆಗಳು ಈ ಕಾಯ್ದೆಯಡಿಯಲ್ಲಿ ಇಲ್ಲ ಎಂದು ಅರ್ಜಿಯಲ್ಲಿ ಹೇಳಲಾಗಿದೆ.

“ಮದುವೆಯ ನಂತರ ವಿದೇಶ ಪ್ರವಾಸ ಮಾಡಿದ ಮುಸ್ಲಿಮರು ವಿವಾಹ ಪ್ರಮಾಣಪತ್ರಗಳನ್ನು ಪಡೆಯುವಲ್ಲಿ ಬಹಳಷ್ಟು ತೊಂದರೆಗಳನ್ನು ಎದುರಿಸುತ್ತಿರುವುದರಿಂದ ಈ ಆದೇಶವನ್ನು ಹೊರಡಿಸಲಾಗಿದೆ” ಎಂದು ನವೆಂಬರ್ 2024ರಲ್ಲಿ ನಡೆದ ವಿಚಾರಣೆಯ ಸಂದರ್ಭದಲ್ಲಿ ರಾಜ್ಯ ಸರ್ಕಾರ ನ್ಯಾಯಾಲಯಕ್ಕೆ ತಿಳಿಸಿತ್ತು.

ಇಂದು ವಾದ ಮಂಡಿಸಲು ವಕೀಲರು ಲಭ್ಯವಿಲ್ಲ ಎಂದು ನ್ಯಾಯಾಲಯಕ್ಕೆ ತಿಳಿಸಲಾಯಿತು. ಪರಿಣಾಮ ವಿಚಾರಣೆ ಮುಂದೂಡಲಾಯಿತು ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ದಾವಣಗೆರೆಯಲ್ಲಿ ಕಾಂಗ್ರೆಸ್ ಅಹಿಂದ ನಾಯಕರ ರಹಸ್ಯ ಸಭೆ; ನಾಯಕತ್ವ ಬದಲಾವಣೆ ಚರ್ಚೆ?

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಟಿಎಂಸಿ ಬೆಂಬಲ

ಮಾರ್ಚ್ 9 ರ ಸೋಮವಾರ ಸಂಸತ್ತಿನ ಬಜೆಟ್ ಅಧಿವೇಶನ ಪುನರಾರಂಭವಾದಾಗ ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ಮಂಡಿಸಲಾಗುವ ಅವಿಶ್ವಾಸ ನಿರ್ಣಯಕ್ಕೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಬೆಂಬಲ ನೀಡಲಿದೆ ಎಂದು ಪಕ್ಷದ ನಾಯಕರು...

ಹೊಸ ರಾಜ್ಯಪಾಲ ರವಿ ಬಿಜೆಪಿ ಕೇಡರ್, ಆದರೆ ಬಂಗಾಳ ಟಫ್ ಟರ್ಫ್ : ಮಮತಾ ಬ್ಯಾನರ್ಜಿ

ನೂತನ ರಾಜ್ಯಪಾಲ ಆರ್.ಎನ್ ರವಿ ಅವರನ್ನು 'ಬಿಜೆಪಿ ಕೇಡರ್' ಎಂದು ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಲೇವಡಿ ಮಾಡಿದ್ದು, ಮುಂಬರುವ ದಿನಗಳಲ್ಲಿ ರಾಜ್ಯ ಸಚಿವಾಲಯ 'ನಬನ್ನಾ' ಮತ್ತು ರಾಜ್ಯಪಾಲರ ನಿವಾಸ...

ಕರ್ನಾಟಕ ಬಜೆಟ್ 2026| ಶಿಕ್ಷಣ ಕ್ಷೇತ್ರಕ್ಕೆ ಅನುದಾನ ಹಂಚಿಕೆ ನಿರಾಶದಾಯಕ

ಶಿಕ್ಷಣಕ್ಕೆ 47,224 ಕೋಟಿ (ಶೇ.10) ಹಂಚಿಕೆ ಮಾಡಿದ್ದಾರೆ. ಇದು ತುಂಬಾ ಕಡಿಮೆ ಅನುದಾನವಾಗಿದೆ. ವಾಸ್ತವದಲ್ಲಿ ಬಜೆಟ್ ವೆಚ್ಚದ ಶೇ.20-24ರಷ್ಟು ಹಣವನ್ನು ಶಿಕ್ಷಣಕ್ಕೆ ಮೀಸಲಿಡಬೇಕು. ಆದರೆ ಇದು ಸಾಧ್ಯವಾಗುತ್ತಿಲ್ಲ. ಶಿಕ್ಷಣವನ್ನು ಅನುತ್ಪಾದಕ ವಲಯ ಎಂದು...

ಕೇರಳ : ಪ್ರಧಾನಿ ಮೋದಿ ‘ದೇಶದ್ರೋಹಿ’ ಎಂದ ವ್ಯಕ್ತಿಯ ವಿರುದ್ಧ ಪ್ರಕರಣ ದಾಖಲು

ಪ್ರಧಾನಿ ನರೇಂದ್ರ ಮೋದಿ 'ದೇಶದ್ರೋಹಿ' ಎಂದು ಸಾಮಾಜಿಕ ಮಾಧ್ಯಮದಲ್ಲಿ ಕಾಮೆಂಟ್ ಹಾಕಿದ ಆರೋಪದ ಮೇಲೆ ಕೇರಳದ ಕಣ್ಣೂರಿನ ಶ್ರೀಕಂಡಪುರಂ ಪೊಲೀಸರು ವ್ಯಕ್ತಿಯೊಬ್ಬರ ವಿರುದ್ಧ ಪ್ರಕರಣ ದಾಖಲಿಸಿದ್ದಾರೆ ಎಂದು ಹಿಂದೂ ಶನಿವಾರ (ಮಾ.7) ವರದಿ...

ಕೋಲ್ಕತ್ತಾ| ಮತದಾರರ ಪಟ್ಟಿಯಿಂದ ಹೆಸರು ಅಳಿಸುವಿಕೆ ವಿರೋಧಿಸಿ ಅಹೋರಾತ್ರಿ ಧರಣಿ ಮುಂದುವರೆಸಿದ ಮಮತಾ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಶನಿವಾರ ಸತತ ಎರಡನೇ ದಿನವಾದ ಶನಿವಾರವೂ ತಮ್ಮ ಪ್ರತಿಭಟನೆಯನ್ನು ಮುಂದುವರೆಸಿದ್ದಾರೆ, ಅವರು ಅಹೋರಾತ್ರಿ ಧರಣಿ ಸ್ಥಳದಲ್ಲಿ ರಾತ್ರಿ ಕಳೆದರು. ಮುಂಬರುವ ವಿಧಾನಸಭಾ ಚುನಾವಣೆಗೆ ಮುಂಚಿತವಾಗಿ "ಬಂಗಾಳದ ಮತದಾರರ...

ಇಂಡೋನೇಷ್ಯಾ | ನಾಲ್ವರು ಪ್ರಮುಖ ಹೋರಾಟಗಾರರು ಖುಲಾಸೆ : ಪ್ರತಿಭಟನೆಯ ಹಕ್ಕಿಗೆ ಹೊಸ ಭರವಸೆ ಎಂದ ಆಮ್ನೆಸ್ಟಿ

2025ರ ಆಗಸ್ಟ್ ಮತ್ತು ಸೆಪ್ಟೆಂಬರ್‌ನಲ್ಲಿ ನಡೆದ ಹಿಂಸಾತ್ಮಕ ವಿದ್ಯಾರ್ಥಿ ಪ್ರತಿಭಟನೆಗಳಿಗೆ ಪ್ರಚೋದನೆ ನೀಡಿದ ಆರೋಪ ಎದುರಿಸುತ್ತಿದ್ದ ನಾಲ್ವರು ಪ್ರಮುಖ ಹೋರಾಟಗಾರರನ್ನು ಇಂಡೋನೇಷ್ಯಾದ ಕೇಂದ್ರ ಜಕಾರ್ತಾ ಜಿಲ್ಲಾ ನ್ಯಾಯಾಲಯವು ಶುಕ್ರವಾರ (ಮಾ.6) ಖುಲಾಸೆಗೊಳಿಸಿದೆ. ದೇಶದಲ್ಲಿ ನಾಗರಿಕ ಸ್ವಾತಂತ್ರ್ಯಕ್ಕೆ...

‘ಆಕ್ರಮಣ ಮಾಡುವ ಉದ್ದೇಶವಿಲ್ಲ..’; ಗಲ್ಫ್ ರಾಷ್ಟ್ರಗಳ ಮೇಲಿನ ದಾಳಿಗೆ ಕ್ಷಮೆಯಾಚಿಸಿದ ಇರಾನ್ ಅಧ್ಯಕ್ಷರು

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ನೆರೆಯ ರಾಷ್ಟ್ರಗಳಿಗೆ ಶನಿವಾರ ಕ್ಷಮೆಯಾಚಿಸಿದ್ದಾರೆ. ಉಲ್ಬಣಗೊಳ್ಳುತ್ತಿರುವ ಪ್ರಾದೇಶಿಕ ಸಂಘರ್ಷಕ್ಕೆ ಸಂಬಂಧಿಸಿದ ಇತ್ತೀಚಿನ ದಾಳಿಗಳಿಗೆ ಟೆಹ್ರಾನ್ ಇತರ ರಾಷ್ಟ್ರಗಳನ್ನು ಆಕ್ರಮಿಸುವ ಉದ್ದೇಶವನ್ನು ಹೊಂದಿಲ್ಲ ಎಂದು ಹೇಳಿದ್ದಾರೆ. ಇರಾನ್ ಸಾರ್ವಜನಿಕರನ್ನು...

ತೈಲ ಆಮದು ವಿಚಾರದಲ್ಲಿ ಅಮೆರಿಕದ ಒಪ್ಪಿಗೆ ಪಡೆಯುವುದು ‘ಅತಿರೇಕದ’ ಸಂಗತಿ: ಪಿಣರಾಯಿ ವಿಜಯನ್

ತೈಲ ಆಮದುಗಳಂತಹ ನಿರ್ಧಾರಗಳಿಗೆ ಭಾರತವು ಅಮೆರಿಕದ ಅನುಮೋದನೆಯನ್ನು ಪಡೆಯುವಂತೆ ಬಿಂಬಿತವಾಗುತ್ತಿರುವುದು 'ಅತಿರೇಕದ' ಸಂಗತಿ ಎಂದು ಕೇರಳ ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಶುಕ್ರವಾರ ಹೇಳಿದ್ದಾರೆ. ಭಾರತದ ಸಾರ್ವಭೌಮತ್ವವು ವಿದೇಶಿ ಅನುಮತಿಗೆ ಒಳಪಡುವುದಿಲ್ಲ ಎಂದು ವಿಜಯನ್ ಸಾಮಾಜಿಕ...

ಪತ್ರಕರ್ತನ ಹತ್ಯೆ ಪ್ರಕರಣ : ಡೇರಾ ಮುಖ್ಯಸ್ಥ ರಾಮ್ ರಹೀಂ ಸಿಂಗ್ ಖುಲಾಸೆ

ಪತ್ರಕರ್ತ ಛತ್ರಪತಿ ಹತ್ಯೆ ಪ್ರಕರಣದಲ್ಲಿ ಸಿರ್ಸಾದ ಡೇರಾ ಸಚ್ಚಾ ಸೌದಾ ಮುಖ್ಯಸ್ಥ ಗುರ್ಮೀತ್ ರಾಮ್ ರಹೀಂ ಸಿಂಗ್ ಅನ್ನು ಪಂಜಾಬ್ ಮತ್ತು ಹರಿಯಾಣ ಹೈಕೋರ್ಟ್ ಶನಿವಾರ (ಮಾ.7) ಖುಲಾಸೆಗೊಳಿಸಿರುವುದಾಗಿ livelaw.in ಎಂದು ವರದಿ...

ಗೃಹ ಬಳಕೆಯ ಎಲ್‌ಪಿಜಿ ದರ 60 ರೂ. ಹೆಚ್ಚಳ : 11 ತಿಂಗಳಲ್ಲಿ ಎರಡನೇ ಬಾರಿ ಬೆಲೆ ಏರಿಕೆ

ತೈಲ ಮಾರುಕಟ್ಟೆ ಕಂಪನಿಗಳು ಶನಿವಾರ (ಮಾ.7) ದೇಶದಲ್ಲಿ ಗೃಹ ಬಳಕೆಯ ಮತ್ತು ವಾಣಿಜ್ಯ ಎಲ್‌ಪಿಜಿ ಸಿಲಿಂಡರ್‌ಗಳ ಬೆಲೆಯನ್ನು ಕ್ರಮವಾಗಿ ರೂ. 60 ಮತ್ತು ರೂ. 115 ಹೆಚ್ಚಿಸಿವೆ. ಈ ಹೆಚ್ಚಳದ ನಂತರ ರಾಷ್ಟ್ರ ರಾಜಧಾನಿ...