Homeಕರ್ನಾಟಕಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ

- Advertisement -
- Advertisement -

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೇಲ್ವಿಚಾರಣೆಯಲ್ಲಿ ನಾಗರಿಕರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಯ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ಗುರುವಾರ (ಸೆ.23) ಮಧ್ಯಂತರ ಆದೇಶ ನೀಡಿದೆ.

ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಆದರೆ, ಸಮೀಕ್ಷೆಯಲ್ಲಿ ಭಾಗವಹಿಸಿದವರಿಂದ ಪಡೆದ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಬಾರದು ಎಂದು ಇದೇ ವೇಳೆ ಅಧಿಕಾರಿಗಳಿಗೆ ಆದೇಶಿಸಿದೆ ಮತ್ತು ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತವಾಗಿದೆ ಎಂದು ಸಾರ್ವಜನಿಕರಿಗೆ ತಿಳಿಸಲು ಸೂಚಿಸಿದೆ.

ರಾಜ್ಯ ಸರ್ಕಾರದ ಸಾಮಾಜಿಕ-ಆರ್ಥಿಕ ಸಮೀಕ್ಷೆಯನ್ನು ತಡೆ ಹಿಡಿಯಲು ಯಾವುದೇ ಕಾರಣವಿಲ್ಲ. ಆದರೆ, ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಮತ್ತು ಅದನ್ನು ಗೌಪ್ಯವಾಗಿಡಬೇಕು. ಜೊತೆಗೆ, ಈ ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತವಾಗಿದೆ, ಯಾರೂ ಒತ್ತಾಯದಿಂದ ಮಾಹಿತಿ ಕೊಡಬೇಕಾಗಿಲ್ಲ ಎಂದು ಸಾರ್ವಜನಿಕವಾಗಿ ತಿಳಿಸಬೇಕು. ಸಮೀಕ್ಷೆಗಾರರು ಆರಂಭದಲ್ಲಿಯೇ ಜನರಿಗೆ ಇದನ್ನು ಸ್ಪಷ್ಟವಾಗಿ ಹೇಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ಅವರಿದ್ದ ವಿಭಾಗೀಯ ಪೀಠವು ಹೇಳಿದೆ.

ಹಿಂದುಳಿದ ವರ್ಗಗಳ ಆಯೋಗದ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ರವಿವರ್ಮ ಕುಮಾರ್ ಅವರು, “ಈ ಸಮೀಕ್ಷೆಯು ಒಂದು ವರ್ಗ ಅಥವಾ ಜಾತಿಗೆ ಸಮರ್ಪಕ ಪ್ರಾತಿನಿದ್ಯ ಸಿಕ್ಕಿದೆಯೇ.. ಇಲ್ಲವೇ? ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸಲು ಕೈಗೊಳ್ಳಲಾಗಿದೆ ಎಂದು ಹೇಳಿದ್ದರು.

ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ ಇಚ್ಛೆಗೆ ಬಿಟ್ಟದ್ದು, ಯಾರನ್ನೂ ಒತ್ತಾಯಪೂರ್ವಕವಾಗಿ ಭಾಗವಹಿಸಲು ಹೇಳಿಲ್ಲ, ಮತ್ತು ಇದನ್ನು ಸಮೀಕ್ಷೆಗಾರರಿಗೆ ತರಬೇತಿಯಲ್ಲಿ ತಿಳಿಸಲಾಗಿದೆ ಎಂದಿದ್ದರು.

ಸಮೀಕ್ಷೆಯಲ್ಲಿ ಭಾಗವಹಿಸುವುದು ಐಚ್ಛಿಕವಾಗಿದ್ದರೂ, ಅದಕ್ಕೆ ವಿರೋಧ ಇದ್ದೇ ಇರುತ್ತದೆ. ಕೆ.ಎಸ್. ಪುಟ್ಟಸ್ವಾಮಿ ಕೇಸ್‌ನಿಂದಾಗಿ ವೈಯಕ್ತಿಕ ಮಾಹಿತಿ ಸಂಗ್ರಹದ ನಿಯಮಗಳು ಬದಲಾಗಿವೆ, ಮತ್ತು ತಮ್ಮ ಮಾಹಿತಿಯನ್ನು ಯಾರೊಂದಿಗೆ, ಹೇಗೆ ಹಂಚಿಕೊಳ್ಳಬೇಕು ಎಂಬ ನಿಯಂತ್ರಣವೂ ಗೌಪ್ಯತೆಯ ಒಂದು ಭಾಗವಾಗಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ವಿವೇಕ್ ಸುಬ್ಬಾ ರೆಡ್ಡಿ ವಾದಿಸಿದ್ದರು.

ಸರ್ಕಾರವು ಸಂಗ್ರಹಿಸಿದ ಮಾಹಿತಿಯನ್ನು ಸರಿಯಾಗಿ ನಿಯಂತ್ರಿಸದೆ, ಅದನ್ನು ಅಸುರಕ್ಷಿತವಾಗಿ ಬಿಡುತ್ತದೆ. ಸಮೀಕ್ಷೆಯು ಜನರ ಗೌಪ್ಯತೆಯನ್ನು ಉಲ್ಲಂಘಿಸುತ್ತದೆ ಎಂದು ನಾವು ವಿರೋಧ ವ್ಯಕ್ತಪಡಿಸಿದ್ದೇವೆ. ಇದು ಸರಿಯೇ ಎಂದು ಪರೀಕ್ಷಿಸಲು ಸಮಾನತೆಯ ನಿಯಮವನ್ನು ಬಳಸಬೇಕು, ಮತ್ತು ಆ ಪರೀಕ್ಷೆ ಮುಗಿಯುವವರೆಗೆ ಸಮೀಕ್ಷೆಯನ್ನು ನಿಲ್ಲಿಸಬೇಕು ಎಂದು ವಿವೇಕ್ ಸುಬ್ಬಾ ರೆಡ್ಡಿ ಕೋರಿದ್ದರು.

ಆಧಾರ್ ದತ್ತಾಂಶ ಸೋರಿಕೆಯಾಗುವ ಸಾಧ್ಯತೆ ಇದೆ ಎಂಬ ವಾದಕ್ಕೆ, ಆಯೋಗ ಸಂಗ್ರಹಿಸುವ ಮಾಹಿತಿಯು ಆಧಾರ್‌ಗೆ ಸಂಬಂಧಿಸಿಲ್ಲ ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ. ಆದರೆ, ಸಮೀಕ್ಷೆಯಲ್ಲಿ ಭಾಗವಹಿಸುವ ವ್ಯಕ್ತಿಯು ಆಧಾರ್ ಸಂಖ್ಯೆಯನ್ನು ಹೊಂದಿದ್ದಾನೆ ಎಂಬ ವಿವರವನ್ನು ಮಾತ್ರ ದಾಖಲಿಸಲಾಗುತ್ತದೆ ಎಂದಿದೆ.

ರಾಜ್ಯ ಸರ್ಕಾರ ಇದನ್ನು ಸಮೀಕ್ಷೆ ಎಂದು ಹೇಳುತ್ತಿದ್ದರೂ, ಅವರು ಪ್ರಕಟಿಸಿದ ಕೈಪಿಡಿಯಲ್ಲಿ ಇದನ್ನು ಜಾತಿಗಣತಿ ಎಂದು ಉಲ್ಲೇಖಿಸಲಾಗಿದೆ ಎಂದು ಹಿರಿಯ ವಕೀಲ ಎಸ್. ಶ್ರೀರಂಗ ವಾದಿಸಿದ್ದರು.

ಈ ಸಮೀಕ್ಷೆಯನ್ನು ಜನಗಣತಿಯಂತೆ ಪರಿಗಣಿಸಲಾಗಿದೆ. ಒಂದು ವೇಳೆ ದೃಢೀಕರಣಕ್ಕಾಗಿ ಮೊಬೈಲ್ ಸಂಖ್ಯೆಯನ್ನು ಕಡ್ಡಾಯಗೊಳಿಸಿದ್ದರೆ, 2021ರ ನಿಯಮಗಳನ್ನು ಪಾಲನೆ ಮಾಡಬೇಕು, ಆದರೆ ಆ ನಿಯಮಗಳನ್ನು ಈ ಸಮೀಕ್ಷೆಯಲ್ಲಿ ಅನುಸರಿಸಿಲ್ಲ ಎಂದಿದ್ದರು.

ವಾದಗಳನ್ನು ಆಲಿಸಿದ ನಂತರ, ನ್ಯಾಯಾಲಯವು ಸಮೀಕ್ಷೆಗೆ ತಡೆ ನೀಡಲು ನಿರಾಕರಿಸಿದೆ. ಆದರೆ, ಸಮೀಕ್ಷೆಯಲ್ಲಿ ಭಾಗವಹಿಸುವವರ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಆದೇಶಿಸಿದೆ.

“ಒಬ್ಬರು ವ್ಯಕ್ತಿ ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸಿದರೆ, ಸಮೀಕ್ಷೆ ಮಾಡುವವರು ಒತ್ತಾಯಪೂರ್ವಕವಾಗಿ ಅವರಿಂದ ಯಾವುದೇ ಮಾಹಿತಿಯನ್ನು ಪಡೆಯಲು ಪ್ರಯತ್ನಿಸಬಾರದು. ಆಯೋಗವು ಒಂದು ಕೆಲಸದ ದಿನದೊಳಗೆ (working Day) ಈ ಕುರಿತು ಅಫಿಡವಿಟ್ ಸಲ್ಲಿಸಬೇಕು. ಅದರಲ್ಲಿ ಸಂಗ್ರಹಿಸಿದ ಮತ್ತು ಶೇಖರಿಸಿದ ದತ್ತಾಂಶಗಳ ಗೌಪ್ಯತೆಗಾಗಿ ತೆಗೆದುಕೊಂಡ ಕ್ರಮಗಳನ್ನು ಸ್ಪಷ್ಟವಾಗಿ ತಿಳಿಸಬೇಕು” ಎಂದು ನ್ಯಾಯಾಲಯ ಸೂಚಿಸಿದೆ.

ಸಮೀಕ್ಷೆಗಾಗಿ ಆಗಸ್ಟ್‌ 13ರಂದು ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕರೂ ಆದ ಹಿರಿಯ ವಕೀಲ ಕೆ.ಎನ್‌ ಸುಬ್ಬಾರೆಡ್ಡಿ ಮತ್ತಿತರರು ಪ್ರತ್ಯೇಕ ಪಿಐಎಲ್‌ಗಳನ್ನು ಸಲ್ಲಿಸಿದ್ದರು.

Courtesy: livelaw.in

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ‘ಜಾತಿ ಗಣತಿ’ಯಲ್ಲ, ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ: ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕಾಳಿಘಾಟ್‌ನಲ್ಲಿ ‘ಮೀನಿನ ಪ್ರಸಾದ’ ಸ್ವೀಕರಿಸಿದ ಸುವೇಂದು ಅಧಿಕಾರಿ; ಬಾಗೇಶ್ವರ್ ಬಾಬಾ ‘ಮಾಂಸಾಹಾರ’ ವಿವಾದಕ್ಕೆ ಹೊಸ ತಿರುವು!

ದುರ್ಗಾ ಪೂಜೆ ಸಂದರ್ಭದಲ್ಲಿ ಮೀನು–ಮಾಂಸ ಸೇವನೆ ಕುರಿತು ಬಾಗೇಶ್ವರ್ ಧಾಮದ ಧೀರೇಂದ್ರ ಕೃಷ್ಣ ಶಾಸ್ತ್ರಿ ನೀಡಿರುವ ಹೇಳಿಕೆ ಪಶ್ಚಿಮ ಬಂಗಾಳದಲ್ಲಿ ವಿವಾದಕ್ಕೆ ಕಾರಣವಾಗಿರುವ ನಡುವೆಯೇ, ಮುಖ್ಯಮಂತ್ರಿ ಸುವೇಂದು ಅಧಿಕಾರಿ ಕಾಳಿಘಾಟ್ʼನ ಕಾಳಿ ದೇವಸ್ಥಾನದಲ್ಲಿ...

ಎಸ್‌ಐಆರ್‌: ಹೈದರಾಬಾದ್, ಸಿಕಂದರಾಬಾದ್‌ನಲ್ಲಿ ಲಕ್ಷಾಂತರ ಮತದಾರರ ಹೆಸರು ಅಳಿಸುವಿಕೆ; 2029ರ ಚುನಾವಣೆಗೂ ಮುನ್ನ ಗಂಭೀರ ಆತಂಕ

ಹೈದರಾಬಾದ್: ತೆಲಂಗಾಣದಲ್ಲಿ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯಡಿ ಮತದಾರರ ಪಟ್ಟಿಯಿಂದ ಭಾರೀ ಪ್ರಮಾಣದಲ್ಲಿ ಹೆಸರುಗಳನ್ನು ತೆಗೆದುಹಾಕಲಾಗಿರುವುದು ಮುಂದಿನ ಚುನಾವಣೆಯ ರಾಜಕೀಯ ಲೆಕ್ಕಾಚಾರಗಳ ಮೇಲೆ ಗಂಭೀರ ಪರಿಣಾಮ ಬೀರುವ ಸಾಧ್ಯತೆಯನ್ನು ಹುಟ್ಟುಹಾಕಿದೆ....

9/11 ದಾಳಿಗೆ 25 ವರ್ಷ: ‘ಭಯೋತ್ಪಾದನೆ ವಿರುದ್ಧದ ಯುದ್ಧ’ ಮತ್ತು ಕುಸಿದ ಪ್ರಜಾಪ್ರಭುತ್ವದ ಮೌಲ್ಯಗಳು

ನ್ಯೂಯಾರ್ಕ್‌ನ ಪ್ರತಿಷ್ಠಿತ ವರ್ಲ್ಡ್ ಟ್ರೇಡ್ ಸೆಂಟರ್ ಅವಳಿ ಗೋಪುರಗಳ ಮೇಲೆ ನಡೆದ ಭೀಕರ ಭಯೋತ್ಪಾದನಾ ದಾಳಿಗೆ ಇಂದಿಗೆ ಭರ್ತಿ 25 ವರ್ಷಗಳು ತುಂಬಿವೆ. ಈ ಕಾಲು ಶತಮಾನದ ಅವಧಿಯಲ್ಲಿ 'ಭಯೋತ್ಪಾದನೆ ವಿರುದ್ಧದ ಜಾಗತಿಕ...

‘ಈ ಪ್ರಕ್ರಿಯೆಯೇ ಶಿಕ್ಷೆಯಾಗಿದೆ’: ಉಮರ್ ಖಾಲಿದ್ ದೀರ್ಘ ಜೈಲುವಾಸದ ಬಗ್ಗೆ ಮಾಜಿ ನ್ಯಾಯಮೂರ್ತಿ ದೀಪಕ್ ಗುಪ್ತಾ ತೀವ್ರ ಟೀಕೆ

ನವದೆಹಲಿ: ಮಾನವ ಹಕ್ಕುಗಳ ಕಾರ್ಯಕರ್ತ, ವಿದ್ಯಾರ್ಥಿ ನಾಯಕ ಉಮರ್ ಖಾಲಿದ್ ಅವರ ದೀರ್ಘಕಾಲದ ವಿಚಾರಣಾಪೂರ್ವ ಬಂಧನ, ಎಲ್ಗರ್ ಪರಿಷತ್ ಪ್ರಕರಣದ ಆರೋಪಿಗಳ ವರ್ಷಗಳ ಜೈಲುವಾಸ ಹಾಗೂ ವೈಯಕ್ತಿಕ ಸ್ವಾತಂತ್ರ್ಯಕ್ಕೆ ಸಂಬಂಧಿಸಿದ ಪ್ರಕರಣಗಳಲ್ಲಿ ನ್ಯಾಯಾಂಗದ...

‘ದೇಶವಿರೋಧಿ ಮನಸ್ಥಿತಿಯಲ್ಲ’: ಜಿ.ಎನ್. ಸಾಯಿಬಾಬಾ ಸ್ಮರಣೆ ಪ್ರಕರಣದಲ್ಲಿ ‘ಟಿಸ್’ ಮಾಜಿ ವಿದ್ಯಾರ್ಥಿಗೆ ಜಾಮೀನು!

ದೆಹಲಿ ವಿಶ್ವವಿದ್ಯಾಲಯದ ಮಾಜಿ ಪ್ರಾಧ್ಯಾಪಕ ದಿವಂಗತ ಜಿ.ಎನ್. ಸಾಯಿಬಾಬಾ ಅವರ ಸ್ಮರಣಾರ್ಥ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (TISS) ಕ್ಯಾಂಪಸ್‌ನಲ್ಲಿ ನಡೆದ ಅನುಮತಿರಹಿತ ಕಾರ್ಯಕ್ರಮಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಂಧಿತರಾಗಿದ್ದ ಮಾಜಿ ವಿದ್ಯಾರ್ಥಿ...

ಜನಾಕ್ರೋಶದ ನಡುವೆಯೇ ಎಸ್ಐಆರ್ ಸಮರ್ಥಿಸಿಕೊಂಡ ಮುಖ್ಯ ಚುನಾವಣಾ ಆಯುಕ್ತ: ‘ರಾಜಕೀಯ ದಾಳಿಗಳಿಂದ ಆಯೋಗ ವಿಚಲಿತವಾಗದು’ ಎಂದ ಜ್ಞಾನೇಶ್ ಕುಮಾರ್

ಅಹಮದಾಬಾದ್: ದೇಶದ ಮತದಾರರ ಪಟ್ಟಿಗಳ ವಿಶೇಷ ತೀವ್ರ ಪರಿಷ್ಕರಣೆ (SIR) ಕುರಿತು ರಾಜಕೀಯ ಪಕ್ಷಗಳು, ನಾಗರಿಕ ಸಂಘಟನೆಗಳು ಹಾಗೂ ವಿವಿಧ ವಲಯಗಳಿಂದ ತೀವ್ರ ಟೀಕೆಗಳು ವ್ಯಕ್ತವಾಗುತ್ತಿರುವ ನಡುವೆಯೇ, ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್...

ಕರ್ನಾಟಕ ಎಸ್ಐಆರ್: ಹೆಸರಿನ ಸಣ್ಣ ವ್ಯತ್ಯಾಸಕ್ಕಾಗಿ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರಿಗೆ ನೋಟಿಸ್; ‘ಸುಳ್ಳು ಮಾಹಿತಿ ನೀಡಿದರೆ ಜೈಲು’ ಎಂಬ ಬೆದರಿಕೆ

ಮೈಸೂರು: ಸುಮಾರು ಮೂರೂವರೆ ದಶಕಗಳ ಕಾಲ ರಾಜ್ಯದ ಆಡಳಿತ ವ್ಯವಸ್ಥೆಯಲ್ಲಿ ಸೇವೆ ಸಲ್ಲಿಸಿ, ಸ್ವತಃ ಚುನಾವಣಾ ಪ್ರಕ್ರಿಯೆಯ ಜವಾಬ್ದಾರಿಯುತ ಹುದ್ದೆಯಲ್ಲಿ ಕಾರ್ಯನಿರ್ವಹಿಸಿದ್ದ ನಿವೃತ್ತ ಐಎಎಸ್ ಅಧಿಕಾರಿ ಎ.ಬಿ. ಇಬ್ರಾಹಿಂ ಅವರೇ ಇದೀಗ ತಮ್ಮ...

SIR : ತಾಯಿಯೊಂದಿಗೆ ಮ್ಯಾಪಿಂಗ್ ಮಾಡಿದರೂ ಅಜ್ಜನ ವಯಸ್ಸಿನ ವ್ಯತ್ಯಾಸದ ನೆಪ ಹೇಳಿ ನೋಟಿಸ್ ನೀಡಿದ ಚುನಾವಣಾ ಆಯೋಗ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ದಿನಕ್ಕೊಂದು ವಿಲಕ್ಷಣ ಹಾಗೂ ಯಾಂತ್ರಿಕ ದೋಷಗಳನ್ನು ಹೊರಹಾಕುತ್ತಿದ್ದು, ಪ್ರಜಾಪ್ರಭುತ್ವದ ಹಕ್ಕನ್ನು ಚಲಾಯಿಸಲು ಬಯಸುವ ನೈಜ ಮತದಾರರನ್ನು ಆತಂಕಕ್ಕೆ ತಳ್ಳುತ್ತಿದೆ. ಬ್ಯಾಟರಾಯನಪುರ...

ಬ್ಯಾಂಕ್ ಮುಷ್ಕರ: ದೇಶಾದ್ಯಂತ ಶಾಖಾ ಸೇವೆಗಳಿಗೆ ಅಡಚಣೆ; ವಾರಾಂತ್ಯ, ಗಣೇಶ ಚತುರ್ಥಿಯಿಂದ ಹಲವು ದಿನ ಸೇವೆ ವ್ಯತ್ಯಯ 

ನವದೆಹಲಿ: ಯುನೈಟೆಡ್ ಫೋರಮ್ ಆಫ್ ಬ್ಯಾಂಕ್ ಯೂನಿಯನ್ಸ್ (UFBU) ಕರೆ ನೀಡಿರುವ ರಾಷ್ಟ್ರವ್ಯಾಪಿ ಬ್ಯಾಂಕ್ ಮುಷ್ಕರ ಸೆಪ್ಟೆಂಬರ್ 11ರಂದು (ಇಂದು) ನಡೆಯುತ್ತಿದ್ದು, ದೇಶದಾದ್ಯಂತ ಬ್ಯಾಂಕ್ ಗ್ರಾಹಕರ ಸಾಮಾನ್ಯ ಸೇವೆಗಳ ಮೇಲೆ ಪರಿಣಾಮ ಬೀರುವ...

ಹನೂರು ಶೂಟೌಟ್ ಪ್ರಕರಣ: ಮೂವರು ಅರಣ್ಯ ಸಿಬ್ಬಂದಿಗೆ ನಿರೀಕ್ಷಣಾ ಜಾಮೀನು.!

ಕಾವೇರಿ ವನ್ಯಜೀವಿ ಅಭಯಾರಣ್ಯದ ಹನೂರು ವ್ಯಾಪ್ತಿಯಲ್ಲಿ ಮೂವರು ಮೃತಪಟ್ಟಿದ್ದ ವಿವಾದಾತ್ಮಕ ಗುಂಡಿನ ದಾಳಿ ಪ್ರಕರಣಕ್ಕೆ ಇದೀಗ ಕಾನೂನು ತಿರುವು ಸಿಕ್ಕಿದೆ. ಪ್ರಕರಣದಲ್ಲಿ ಆರೋಪ ಎದುರಿಸುತ್ತಿರುವ ಮೂವರು ಅರಣ್ಯ ಸಿಬ್ಬಂದಿಗೆ ಕೊಳ್ಳೇಗಾಲದ ಮೊದಲ ಹೆಚ್ಚುವರಿ...