Homeಕರ್ನಾಟಕಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಕಾರ

- Advertisement -
- Advertisement -

ಕರ್ನಾಟಕ ರಾಜ್ಯ ಹಿಂದುಳಿದ ವರ್ಗಗಳ ಆಯೋಗದ ಮೇಲ್ವಿಚಾರಣೆಯಲ್ಲಿ ನಾಗರಿಕರ ಸಾಮಾಜಿಕ, ಶೈಕ್ಷಣಿಕ ಮತ್ತು ಆರ್ಥಿಕ ಸ್ಥಿತಿಗತಿಯ ಸಮೀಕ್ಷೆ ನಡೆಸಲು ರಾಜ್ಯ ಸರ್ಕಾರ ಅನುಮೋದನೆ ನೀಡಿರುವುದನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳಿಗೆ ಸಂಬಂಧಿಸಿದಂತೆ ಹೈಕೋರ್ಟ್ ಗುರುವಾರ (ಸೆ.23) ಮಧ್ಯಂತರ ಆದೇಶ ನೀಡಿದೆ.

ಸಮೀಕ್ಷೆಗೆ ತಡೆ ನೀಡಲು ಹೈಕೋರ್ಟ್ ನಿರಾಕರಿಸಿದೆ. ಆದರೆ, ಸಮೀಕ್ಷೆಯಲ್ಲಿ ಭಾಗವಹಿಸಿದವರಿಂದ ಪಡೆದ ಯಾವುದೇ ಮಾಹಿತಿಯನ್ನು ಬಹಿರಂಗಪಡಿಸಬಾರದು ಎಂದು ಇದೇ ವೇಳೆ ಅಧಿಕಾರಿಗಳಿಗೆ ಆದೇಶಿಸಿದೆ ಮತ್ತು ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತವಾಗಿದೆ ಎಂದು ಸಾರ್ವಜನಿಕರಿಗೆ ತಿಳಿಸಲು ಸೂಚಿಸಿದೆ.

ರಾಜ್ಯ ಸರ್ಕಾರದ ಸಾಮಾಜಿಕ-ಆರ್ಥಿಕ ಸಮೀಕ್ಷೆಯನ್ನು ತಡೆ ಹಿಡಿಯಲು ಯಾವುದೇ ಕಾರಣವಿಲ್ಲ. ಆದರೆ, ಸಮೀಕ್ಷೆಯಲ್ಲಿ ಸಂಗ್ರಹಿಸಿದ ಮಾಹಿತಿಯನ್ನು ಯಾರೊಂದಿಗೂ ಹಂಚಿಕೊಳ್ಳಬಾರದು ಮತ್ತು ಅದನ್ನು ಗೌಪ್ಯವಾಗಿಡಬೇಕು. ಜೊತೆಗೆ, ಈ ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತವಾಗಿದೆ, ಯಾರೂ ಒತ್ತಾಯದಿಂದ ಮಾಹಿತಿ ಕೊಡಬೇಕಾಗಿಲ್ಲ ಎಂದು ಸಾರ್ವಜನಿಕವಾಗಿ ತಿಳಿಸಬೇಕು. ಸಮೀಕ್ಷೆಗಾರರು ಆರಂಭದಲ್ಲಿಯೇ ಜನರಿಗೆ ಇದನ್ನು ಸ್ಪಷ್ಟವಾಗಿ ಹೇಳಬೇಕು ಎಂದು ಮುಖ್ಯ ನ್ಯಾಯಮೂರ್ತಿ ವಿಭು ಬಕ್ರು ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ಅವರಿದ್ದ ವಿಭಾಗೀಯ ಪೀಠವು ಹೇಳಿದೆ.

ಹಿಂದುಳಿದ ವರ್ಗಗಳ ಆಯೋಗದ ಪರವಾಗಿ ವಾದ ಮಂಡಿಸಿದ್ದ ಹಿರಿಯ ವಕೀಲ ರವಿವರ್ಮ ಕುಮಾರ್ ಅವರು, “ಈ ಸಮೀಕ್ಷೆಯು ಒಂದು ವರ್ಗ ಅಥವಾ ಜಾತಿಗೆ ಸಮರ್ಪಕ ಪ್ರಾತಿನಿದ್ಯ ಸಿಕ್ಕಿದೆಯೇ.. ಇಲ್ಲವೇ? ಎಂಬುದರ ಬಗ್ಗೆ ಮಾಹಿತಿ ಸಂಗ್ರಹಿಸಲು ಕೈಗೊಳ್ಳಲಾಗಿದೆ ಎಂದು ಹೇಳಿದ್ದರು.

ಸಮೀಕ್ಷೆಯಲ್ಲಿ ಭಾಗವಹಿಸುವುದು ಜನರ ಇಚ್ಛೆಗೆ ಬಿಟ್ಟದ್ದು, ಯಾರನ್ನೂ ಒತ್ತಾಯಪೂರ್ವಕವಾಗಿ ಭಾಗವಹಿಸಲು ಹೇಳಿಲ್ಲ, ಮತ್ತು ಇದನ್ನು ಸಮೀಕ್ಷೆಗಾರರಿಗೆ ತರಬೇತಿಯಲ್ಲಿ ತಿಳಿಸಲಾಗಿದೆ ಎಂದಿದ್ದರು.

ಸಮೀಕ್ಷೆಯಲ್ಲಿ ಭಾಗವಹಿಸುವುದು ಐಚ್ಛಿಕವಾಗಿದ್ದರೂ, ಅದಕ್ಕೆ ವಿರೋಧ ಇದ್ದೇ ಇರುತ್ತದೆ. ಕೆ.ಎಸ್. ಪುಟ್ಟಸ್ವಾಮಿ ಕೇಸ್‌ನಿಂದಾಗಿ ವೈಯಕ್ತಿಕ ಮಾಹಿತಿ ಸಂಗ್ರಹದ ನಿಯಮಗಳು ಬದಲಾಗಿವೆ, ಮತ್ತು ತಮ್ಮ ಮಾಹಿತಿಯನ್ನು ಯಾರೊಂದಿಗೆ, ಹೇಗೆ ಹಂಚಿಕೊಳ್ಳಬೇಕು ಎಂಬ ನಿಯಂತ್ರಣವೂ ಗೌಪ್ಯತೆಯ ಒಂದು ಭಾಗವಾಗಿದೆ ಎಂದು ಅರ್ಜಿದಾರರ ಪರ ಹಿರಿಯ ವಕೀಲ ವಿವೇಕ್ ಸುಬ್ಬಾ ರೆಡ್ಡಿ ವಾದಿಸಿದ್ದರು.

ಸರ್ಕಾರವು ಸಂಗ್ರಹಿಸಿದ ಮಾಹಿತಿಯನ್ನು ಸರಿಯಾಗಿ ನಿಯಂತ್ರಿಸದೆ, ಅದನ್ನು ಅಸುರಕ್ಷಿತವಾಗಿ ಬಿಡುತ್ತದೆ. ಸಮೀಕ್ಷೆಯು ಜನರ ಗೌಪ್ಯತೆಯನ್ನು ಉಲ್ಲಂಘಿಸುತ್ತದೆ ಎಂದು ನಾವು ವಿರೋಧ ವ್ಯಕ್ತಪಡಿಸಿದ್ದೇವೆ. ಇದು ಸರಿಯೇ ಎಂದು ಪರೀಕ್ಷಿಸಲು ಸಮಾನತೆಯ ನಿಯಮವನ್ನು ಬಳಸಬೇಕು, ಮತ್ತು ಆ ಪರೀಕ್ಷೆ ಮುಗಿಯುವವರೆಗೆ ಸಮೀಕ್ಷೆಯನ್ನು ನಿಲ್ಲಿಸಬೇಕು ಎಂದು ವಿವೇಕ್ ಸುಬ್ಬಾ ರೆಡ್ಡಿ ಕೋರಿದ್ದರು.

ಆಧಾರ್ ದತ್ತಾಂಶ ಸೋರಿಕೆಯಾಗುವ ಸಾಧ್ಯತೆ ಇದೆ ಎಂಬ ವಾದಕ್ಕೆ, ಆಯೋಗ ಸಂಗ್ರಹಿಸುವ ಮಾಹಿತಿಯು ಆಧಾರ್‌ಗೆ ಸಂಬಂಧಿಸಿಲ್ಲ ಎಂದು ನ್ಯಾಯಾಲಯವು ಸ್ಪಷ್ಟಪಡಿಸಿದೆ. ಆದರೆ, ಸಮೀಕ್ಷೆಯಲ್ಲಿ ಭಾಗವಹಿಸುವ ವ್ಯಕ್ತಿಯು ಆಧಾರ್ ಸಂಖ್ಯೆಯನ್ನು ಹೊಂದಿದ್ದಾನೆ ಎಂಬ ವಿವರವನ್ನು ಮಾತ್ರ ದಾಖಲಿಸಲಾಗುತ್ತದೆ ಎಂದಿದೆ.

ರಾಜ್ಯ ಸರ್ಕಾರ ಇದನ್ನು ಸಮೀಕ್ಷೆ ಎಂದು ಹೇಳುತ್ತಿದ್ದರೂ, ಅವರು ಪ್ರಕಟಿಸಿದ ಕೈಪಿಡಿಯಲ್ಲಿ ಇದನ್ನು ಜಾತಿಗಣತಿ ಎಂದು ಉಲ್ಲೇಖಿಸಲಾಗಿದೆ ಎಂದು ಹಿರಿಯ ವಕೀಲ ಎಸ್. ಶ್ರೀರಂಗ ವಾದಿಸಿದ್ದರು.

ಈ ಸಮೀಕ್ಷೆಯನ್ನು ಜನಗಣತಿಯಂತೆ ಪರಿಗಣಿಸಲಾಗಿದೆ. ಒಂದು ವೇಳೆ ದೃಢೀಕರಣಕ್ಕಾಗಿ ಮೊಬೈಲ್ ಸಂಖ್ಯೆಯನ್ನು ಕಡ್ಡಾಯಗೊಳಿಸಿದ್ದರೆ, 2021ರ ನಿಯಮಗಳನ್ನು ಪಾಲನೆ ಮಾಡಬೇಕು, ಆದರೆ ಆ ನಿಯಮಗಳನ್ನು ಈ ಸಮೀಕ್ಷೆಯಲ್ಲಿ ಅನುಸರಿಸಿಲ್ಲ ಎಂದಿದ್ದರು.

ವಾದಗಳನ್ನು ಆಲಿಸಿದ ನಂತರ, ನ್ಯಾಯಾಲಯವು ಸಮೀಕ್ಷೆಗೆ ತಡೆ ನೀಡಲು ನಿರಾಕರಿಸಿದೆ. ಆದರೆ, ಸಮೀಕ್ಷೆಯಲ್ಲಿ ಭಾಗವಹಿಸುವವರ ಮಾಹಿತಿಯನ್ನು ಗೌಪ್ಯವಾಗಿ ಇಡಬೇಕೆಂದು ಆದೇಶಿಸಿದೆ.

“ಒಬ್ಬರು ವ್ಯಕ್ತಿ ಸಮೀಕ್ಷೆಯಲ್ಲಿ ಭಾಗವಹಿಸಲು ನಿರಾಕರಿಸಿದರೆ, ಸಮೀಕ್ಷೆ ಮಾಡುವವರು ಒತ್ತಾಯಪೂರ್ವಕವಾಗಿ ಅವರಿಂದ ಯಾವುದೇ ಮಾಹಿತಿಯನ್ನು ಪಡೆಯಲು ಪ್ರಯತ್ನಿಸಬಾರದು. ಆಯೋಗವು ಒಂದು ಕೆಲಸದ ದಿನದೊಳಗೆ (working Day) ಈ ಕುರಿತು ಅಫಿಡವಿಟ್ ಸಲ್ಲಿಸಬೇಕು. ಅದರಲ್ಲಿ ಸಂಗ್ರಹಿಸಿದ ಮತ್ತು ಶೇಖರಿಸಿದ ದತ್ತಾಂಶಗಳ ಗೌಪ್ಯತೆಗಾಗಿ ತೆಗೆದುಕೊಂಡ ಕ್ರಮಗಳನ್ನು ಸ್ಪಷ್ಟವಾಗಿ ತಿಳಿಸಬೇಕು” ಎಂದು ನ್ಯಾಯಾಲಯ ಸೂಚಿಸಿದೆ.

ಸಮೀಕ್ಷೆಗಾಗಿ ಆಗಸ್ಟ್‌ 13ರಂದು ಸರ್ಕಾರ ಹೊರಡಿಸಿರುವ ಆದೇಶ ಪ್ರಶ್ನಿಸಿ ರಾಜ್ಯ ಒಕ್ಕಲಿಗರ ಸಂಘ, ಅಖಿಲ ಕರ್ನಾಟಕ ಬ್ರಾಹ್ಮಣ ಮಹಾಸಭಾ, ಮಾಜಿ ಶಾಸಕರೂ ಆದ ಹಿರಿಯ ವಕೀಲ ಕೆ.ಎನ್‌ ಸುಬ್ಬಾರೆಡ್ಡಿ ಮತ್ತಿತರರು ಪ್ರತ್ಯೇಕ ಪಿಐಎಲ್‌ಗಳನ್ನು ಸಲ್ಲಿಸಿದ್ದರು.

Courtesy: livelaw.in

ಸಾಮಾಜಿಕ, ಶೈಕ್ಷಣಿಕ ಸಮೀಕ್ಷೆ ‘ಜಾತಿ ಗಣತಿ’ಯಲ್ಲ, ಸಮೀಕ್ಷೆಯಲ್ಲಿ ಭಾಗವಹಿಸುವುದು ಸ್ವಯಂಪ್ರೇರಿತ: ಹೈಕೋರ್ಟ್‌ಗೆ ತಿಳಿಸಿದ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...