Homeಕರ್ನಾಟಕಬೈಕ್ ಟ್ಯಾಕ್ಸಿ ಸ್ಥಗಿತಗೊಳಿಸುವ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್

ಬೈಕ್ ಟ್ಯಾಕ್ಸಿ ಸ್ಥಗಿತಗೊಳಿಸುವ ಆದೇಶಕ್ಕೆ ತಡೆ ನೀಡಲು ನಿರಾಕರಿಸಿದ ಕರ್ನಾಟಕ ಹೈಕೋರ್ಟ್

- Advertisement -
- Advertisement -

ಬೈಕ್ ಟ್ಯಾಕ್ಸಿಗಳನ್ನು ನಿಯಂತ್ರಿಸಲು ಸಮಗ್ರ ನೀತಿಯನ್ನು ಹೊರಡಿಸುವವರೆಗೆ ರಾಜ್ಯದಲ್ಲಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಯನ್ನು ಸ್ಥಗಿತಗೊಳಿಸುವಂತೆ ಆದೇಶಿಸಿದ್ದ ಏಕಸದಸ್ಯ ತೀರ್ಪನ್ನು ತಡೆಹಿಡಿಯಲು ಕರ್ನಾಟಕ ಹೈಕೋರ್ಟ್‌ನ ವಿಭಾಗೀಯ ಪೀಠವು ಶುಕ್ರವಾರ ನಿರಾಕರಿಸಿದೆ. ಬೈಕ್ ಟ್ಯಾಕ್ಸಿ ಸ್ಥಗಿತಗೊಳಿಸುವ

ಜೂನ್ 24 ರಂದು ಅರ್ಹತೆಯ ಆಧಾರದ ಮೇಲೆ ಪ್ರಕರಣವನ್ನು ವಿಚಾರಣೆ ನಡೆಸುವುದಾಗಿ ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ. ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಶ್ರೀನಿವಾಸ್ ಹರೀಶ್ ಕುಮಾರ್ ಅವರ ಪೀಠ ಹೇಳಿದೆ.

ಸರ್ಕಾರವು ನಿಯಮಗಳನ್ನು ರೂಪಿಸುವ ಪ್ರಕ್ರಿಯೆಯಲ್ಲಿದೆ ಎಂದು ಹೇಳಿದ್ದರೆ ಮತ್ತು ಅವರ ಕಡೆಯಿಂದ ಸ್ವಲ್ಪ ವಿಳಂಬವಾಗಿದ್ದರೆ, ಏಕಸದಸ್ಯ ನ್ಯಾಯಾಧೀಶರ ಆದೇಶವನ್ನು ತಡೆಹಿಡಿಯುವ ಬಗ್ಗೆ ಪರಿಗಣಿಸಬಹುದಿತ್ತು ಎಂದು ನ್ಯಾಯಾಲಯ ಮೌಖಿಕವಾಗಿ ಹೇಳಿದೆ.

ಆದಾಗ್ಯೂ, ಬೈಕ್ ಟ್ಯಾಕ್ಸಿಗೆ ಅನುಮತಿ ನೀಡದಿರಲು ರಾಜ್ಯ ಸರ್ಕಾರವು ನೀತಿ ನಿರ್ಧಾರವನ್ನು ತೆಗೆದುಕೊಂಡಿದೆ ಎಂದು ಹೇಳಿದ್ದರಿಂದ, ಏಕಸದಸ್ಯ ನ್ಯಾಯಾಧೀಶರ ನಿರ್ದೇಶನಗಳನ್ನು ತಡೆಹಿಡಿಯಲು ಪೀಠ ನಿರಾಕರಿಸಿತು. ಈ ವಿಷಯವು ಬೈಕ್ ಟ್ಯಾಕ್ಸಿ ಚಾಲಕರ ಜೀವನೋಪಾಯ ಮತ್ತು ಸಾರ್ವಜನಿಕ ಹಿತಾಸಕ್ತಿಗೆ ಸಂಬಂಧಿಸಿದೆ ಎಂದು ಇದೇ ವೇಳೆ ಕೋರ್ಟ್‌ ಹೇಳಿದೆ.

ಏಪ್ರಿಲ್ 2 ರ ಆದೇಶದ ಮೂಲಕ, ನ್ಯಾಯಮೂರ್ತಿ ಬಿ. ಶ್ಯಾಮ್ ಪ್ರಸಾದ್ ಕರ್ನಾಟಕದಲ್ಲಿ ಎಲ್ಲಾ ಬೈಕ್ ಟ್ಯಾಕ್ಸಿ ಸೇವೆಗಳನ್ನು ಆರು ವಾರಗಳ ಒಳಗೆ ಸ್ಥಗಿತಗೊಳಿಸಲು ಆದೇಶಿಸಿದ್ದರು. ಈ ವೇಳೆ ಸರ್ಕಾರವು ನೀತಿ ಬದಲಾವಣೆ ಮಾಡಲು ನಿರ್ಧರಿಸದ ಹೊರತು ಮತ್ತು ಬೈಕ್ ಟ್ಯಾಕ್ಸಿಗಳಿಗೆ ಅನುಮತಿ ನೀಡಲು ನಿಯಮಗಳು ಮತ್ತು ಮಾರ್ಗಸೂಚಿಗಳನ್ನು ರೂಪಿಸದ ಹೊರತು, ಅಂತಹ ವಾಹನಗಳನ್ನು ಓಡಿಸಲು ಸಾಧ್ಯವಿಲ್ಲ ಎಂದು ನ್ಯಾಯಾಲಯ ವಿವರಿಸಿತ್ತು.

ಕರ್ನಾಟಕದಲ್ಲಿ ಬೈಕ್ ಕಾರ್ಯಾಚರಣೆಗಳನ್ನು ಸ್ಥಗಿತಗೊಳಿಸಬೇಕಾದ ಆರು ವಾರಗಳ ಗಡುವು ಮೇ ತಿಂಗಳಲ್ಲಿ ಮುಕ್ತಾಯಗೊಳ್ಳಬೇಕಿತ್ತು. ಆದಾಗ್ಯೂ, ರಾಪಿಡೊ, ಓಲಾ ಮತ್ತು ಉಬರ್ ಸೇರಿದಂತೆ ಬಾಧಿತ ಬೈಕ್ ಟ್ಯಾಕ್ಸಿ ನಿರ್ವಾಹಕರು ಈ ಗಡುವನ್ನು ವಿಸ್ತರಿಸುವಂತೆ ನ್ಯಾಯಾಲಯವನ್ನು ಒತ್ತಾಯಿಸಿದ್ದರು.

ಈ ವೇಳೆ ವಿನಂತಿಯನ್ನು ಪರಿಗಣಸಿದ್ದ ನ್ಯಾಯಾಧೀಶರು, ಅಂತಿಮವಾಗಿ ಬೈಕ್ ಟ್ಯಾಕ್ಸಿ ಕಾರ್ಯಾಚರಣೆಗಳನ್ನು ಮುಕ್ತಾಯಗೊಳಿಸುವ ಗಡುವನ್ನು ಜೂನ್ 15 ರವರೆಗೆ ವಿಸ್ತರಿಸಿದ್ದರು.

ನಂತರ, ಏಪ್ರಿಲ್ 2 ರ ತೀರ್ಪನ್ನು ಪ್ರಶ್ನಿಸಿ ಜೂನ್ 11 ರಂದು ಎಎನ್‌ಐ ಟೆಕ್ನಾಲಜೀಸ್ (ಓಲಾ ಮಾಲೀಕತ್ವ) ತನ್ನ ಮೇಲ್ಮನವಿಯನ್ನು ಸಲ್ಲಿಸಿದರೆ, ಜೂನ್ 2 ರಂದು ಉಬರ್ ತನ್ನ ಮೇಲ್ಮನವಿಯನ್ನು ಸಲ್ಲಿಸಿದೆ.

ಮೇಲ್ಮನವಿದಾರರ ಪರವಾಗಿ ವಾದಿಸಿದ ವಕೀಲರಾದ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಏಕ ನ್ಯಾಯಾಧೀಶರ ಆದೇಶವನ್ನು ತಡೆಹಿಡಿಯುವಂತೆ ಅವರು ವಿಭಾಗೀಯ ಪೀಠವನ್ನು ಒತ್ತಾಯಿಸಿದರು. 1988 ರ ಮೋಟಾರು ವಾಹನ ಕಾಯ್ದೆಯ ಈಗಾಗಲೇ ಅಸ್ತಿತ್ವದಲ್ಲಿರುವ ಚೌಕಟ್ಟಿನ ಅಡಿಯಲ್ಲಿ ಬೈಕ್ ಟ್ಯಾಕ್ಸಿಗಳು ಕಾರ್ಯನಿರ್ವಹಿಸಬಹುದು ಎಂದು ಅವರು ವಾದಿಸಿದ್ದರು. ಬೈಕ್ ಟ್ಯಾಕ್ಸಿ ಸ್ಥಗಿತಗೊಳಿಸುವ

ಇಲ್ಲಿ ಕ್ಲಿಕ್ ಮಾಡಿ

ಇದನ್ನೂಓದಿ:  ನಕ್ಸಲ್ ವಿರೋಧಿ ಪಡೆಯನ್ನು ವಿಸರ್ಜಿಸುವುದಿಲ್ಲ: ಗೃಹ ಸಚಿವ ಜಿ. ಪರಮೇಶ್ವರ

ನಕ್ಸಲ್ ವಿರೋಧಿ ಪಡೆಯನ್ನು ವಿಸರ್ಜಿಸುವುದಿಲ್ಲ: ಗೃಹ ಸಚಿವ ಜಿ. ಪರಮೇಶ್ವರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಪ್ರಾಪ್ತ ಮಗಳ ಮರ್ಯಾದೆಗೇಡು ಹತ್ಯೆ : ದಂಪತಿಗೆ ಜೀವಾವಧಿ ಶಿಕ್ಷೆ ಖಾಯಂಗೊಳಿಸಿದ ಅಲಹಾಬಾದ್‌ ಹೈಕೋರ್ಟ್

ಮರ್ಯಾದೆಗೇಡು ಹತ್ಯೆ ಪ್ರಕರಣದಲ್ಲಿ, 2014ರಲ್ಲಿ ತಮ್ಮ ಅಪ್ರಾಪ್ತ ಮಗಳು ಮತ್ತು ಬಾಡಿಗೆದಾರರನ್ನು ಕೊಲೆ ಮಾಡಿದ್ದ ದಂಪತಿಗೆ ಜೀವಾವಧಿ ಶಿಕ್ಷೆಯನ್ನು ಅಲಹಾಬಾದ್ ಹೈಕೋರ್ಟ್ ಖಾಯಂಗೊಳಿಸಿದೆ. ನ್ಯಾಯಮೂರ್ತಿ ಜೆ.ಜೆ. ಮುನೀರ್ ಮತ್ತು ನ್ಯಾಯಮೂರ್ತಿ ವಿನಯ್ ಕುಮಾರ್ ದ್ವಿವೇದಿ...

ಇಸ್ರೇಲ್-ಇರಾನ್ ಸಂಘರ್ಷ: ಕೇರಳದ ಗಲ್ಫ್ ಕೇಂದ್ರಗಳಲ್ಲಿ ಎಸ್‌ಎಸ್‌ಎಲ್‌ಸಿ, ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧಾರ

ತಿರುವನಂತಪುರಂ: ಪಶ್ಚಿಮ ಏಷ್ಯಾ ಪ್ರದೇಶದಲ್ಲಿನ ಪ್ರಚಲಿತ ಅಶಾಂತಿಯನ್ನು ಗಮನದಲ್ಲಿಟ್ಟುಕೊಂಡು, ಸಾಮಾನ್ಯ ಶಿಕ್ಷಣ ಇಲಾಖೆಯು ಗಲ್ಫ್ ರಾಷ್ಟ್ರಗಳಲ್ಲಿನ ಕೇಂದ್ರಗಳಲ್ಲಿ ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ ಮತ್ತು ಪ್ಲಸ್-II ಪರೀಕ್ಷೆಗಳನ್ನು ಮುಂದೂಡಲು ನಿರ್ಧರಿಸಿದೆ.   ಮಾರ್ಚ್ 5 ರಂದು ನಿಗದಿಯಾಗಿದ್ದ ಎಸ್‌ಎಸ್‌ಎಲ್‌ಸಿ...

ಚಿಕ್ಕಬಳ್ಳಾಪುರ| ಆಯತುಲ್ಲಾ ಖಮೇನಿ ಹತ್ಯೆ; ಅಲಿಪುರದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ

ಇಸ್ರೇಲ್-ಅಮೆರಿಕ ದಾಳಿಯಲ್ಲಿ ಇರಾನ್ ಸರ್ವೋಚ್ಚ ನಾಯಕ ಆಯತುಲ್ಲಾ ಖಮೇನಿ ಹತ್ಯೆಯಿಂದ ನೊಂದಿರುವ ಗೌರಿಬಿದನೂರು ತಾಲ್ಲೂಕಿನ ಅಲಿಪುರ ಗ್ರಾಮದ ಶಿಯಾ ಸಮುದಾಯವು, ಗ್ರಾಮದಲ್ಲಿ ಮೂರು ದಿನಗಳ ಕಾಲ ಶೋಕಾಚರಣೆ ಘೋಷಿಸಿದ್ದಾರೆ. ಚಿಕ್ಕಬಳ್ಳಾಪುರ ಜಿಲ್ಲೆ ಗೌರಿಬಿದನೂರು ತಾಲೂಕಿನ...

ಸೌದಿ ಅರೇಬಿಯಾ | ಡ್ರೋನ್ ದಾಳಿ ಬಳಿಕ ರಾಸ್ ತನುರಾ ಸಂಸ್ಕರಣಾಗಾರ ಮುಚ್ಚಿದ ತೈಲ ದೈತ್ಯ ಅರಾಮ್ಕೊ

ಸೌದಿ ಅರೇಬಿಯಾದ ಸರ್ಕಾರಿ ಸ್ವಾಮ್ಯದ ತೈಲ ದೈತ್ಯ ಸಂಸ್ಥೆ ಅರಾಮ್ಕೊ ಡ್ರೋನ್ ದಾಳಿಗೆ ಒಳಗಾದ ನಂತರ ತನ್ನ ರಾಸ್ ತನುರಾ ತೈಲ ಸಂಸ್ಕರಣಾಗಾರವನ್ನು ಮುಚ್ಚಿದೆ ಎಂದು ಮೂಲಗಳನ್ನು ಉಲ್ಲೇಖಿಸಿ ರಾಯಿಟರ್ಸ್ ಸೋಮವಾರ (ಫೆ.2)...

ದೆಹಲಿ ನ್ಯಾಯಾಲಯದಿಂದ ತಕ್ಷಣ ಬಿಡುಗಡೆ ಆದೇಶ: ತಿಹಾರ್ ಜೈಲಿನಿಂದ ಹೊರಬಂದ 14 ಜೆಎನ್‌ಯು ವಿದ್ಯಾರ್ಥಿಗಳು 

ಫೆಬ್ರವರಿ 26 ರಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ ವಿದ್ಯಾರ್ಥಿ ಸಂಘ (ಜೆಎನ್‌ಯುಎಸ್‌ಯು) ಪ್ರತಿಭಟನೆಯ ಸಂದರ್ಭದಲ್ಲಿ ಬಂಧಿಸಲ್ಪಟ್ಟಿದ್ದ ಹದಿನಾಲ್ಕು ವಿದ್ಯಾರ್ಥಿ ನಾಯಕರನ್ನು ದೆಹಲಿ ನ್ಯಾಯಾಲಯವು ಭಾನುವಾರ ತಕ್ಷಣ ಬಿಡುಗಡೆ ಮಾಡಲು ಆದೇಶಿಸಿದ ನಂತರ, 14...

ಉತ್ತರ ಪ್ರದೇಶ| ಇಂಜೆಕ್ಷನ್ ನೀಡಿದ ಗೋರಖ್‌ಪುರದ ಮೆಡಿಕಲ್ ಸ್ಟೋರ್‌ ನಿರ್ವಾಹಕ; ಬಾಲಕಿ ಸಾವು

ಗೋರಖ್‌ಪುರದ ಉರುವಾ ಪ್ರದೇಶದ ಮೆಡಿಕಲ್ ಸ್ಟೋರ್‌ ನಿರ್ವಾಹಕನಿಂದ ಇಂಜೆಕ್ಷನ್ ಪಡೆದ ಒಂಬತ್ತು ವರ್ಷದ ಬಾಲಕಿ ಸಾವನ್ನಪ್ಪಿದ್ದಾಳೆ ಎಂದು ಪೊಲೀಸರು ಸೋಮವಾರ ತಿಳಿಸಿದ್ದಾರೆ. ಈ ಘಟನೆ ಭಾನುವಾರ ಸಂಜೆ ನಡೆದಿದೆ. ಮೃತ ದಿವ್ಯಾ ಬನ್ಸ್‌ಗಾಂವ್ ಪೊಲೀಸ್...

ಬಂಗಾಳ ಎಸ್‌ಐಆರ್‌: 5 ಲಕ್ಷಕ್ಕೂ ಹೆಚ್ಚು ಮತದಾರರ ಹೆಸರು ಡಿಲೀಟ್; 60 ಲಕ್ಷಕ್ಕೂ ಹೆಚ್ಚು ಪ್ರಕರಣಗಳ ವಿಚಾರಣೆ ಬಾಕಿ

ವಿಶೇಷ ತೀವ್ರ ಪರಿಷ್ಕರಣೆ (ಎಸ್ಐಆರ್‌) ಪ್ರಕ್ರಿಯೆ ನಂತರ ಪಶ್ಚಿಮ ಬಂಗಾಳದ ಮತದಾರರ ಪಟ್ಟಿಯಿಂದ 5.46 ಲಕ್ಷ ಹೆಸರುಗಳನ್ನು ಡಿಲೀಟ್ ಮಾಡಲಾಗಿದೆ ಎಂದು ಚುನಾವಣಾ ಆಯೋಗ ಶನಿವಾರ ತಿಳಿಸಿದೆ. ಅನುಮಾನಾಸ್ಪದ ಎಂಬ ಕಾರಣಕ್ಕೆ 60,06,675 ಹೆಸರುಗಳು...

‘ರಾಜಕೀಯ ಭಿನ್ನಾಭಿಪ್ರಾಯ..ಸಂಘಟಿತ ಅಪರಾಧವಲ್ಲ’: ಎಐ ಶೃಂಗಸಭೆಯಲ್ಲಿ ಪ್ರತಿಭಟಿಸಿದ್ದಕ್ಕೆ ಬಂಧಿಸಲ್ಪಟ್ಟ 9 ಯುವ ಕಾಂಗ್ರೆಸ್ ಕಾರ್ಯಕರ್ತರಿಗೆ ಜಾಮೀನು

ಇಂಡಿಯಾ ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ನಡೆದ ಪ್ರತಿಭಟನೆಗಳಿಗೆ ಸಂಬಂಧಿಸಿದಂತೆ ದೆಹಲಿ ಪೊಲೀಸರು ಬಂಧಿಸಿದ್ದ ಒಂಬತ್ತು ಭಾರತೀಯ ಯುವ ಕಾಂಗ್ರೆಸ್ (ಐವೈಸಿ) ಕಾರ್ಯಕರ್ತರಿಗೆ ದೆಹಲಿ ನ್ಯಾಯಾಲಯ ಭಾನುವಾರ (ಮಾ.1) ಸಂಜೆ ಜಾಮೀನು ನೀಡಿದೆ barandbench.com...

ವಯನಾಡ್ ಭೂಕುಸಿತ; ಪುನರ್ವಸತಿ ಕಾರ್ಯದಲ್ಲಿ ಸಂತ್ರಸ್ತರಿಗೆ 229 ಮನೆಗಳನ್ನು ಹಸ್ತಾಂತರಿಸಿದ ಕೇರಳ ಸರ್ಕಾರ, ಐಯುಎಂಎಲ್

ಕೇರಳದ ವಯನಾಡ್ ಜಿಲ್ಲೆಯಲ್ಲಿ ಸಂಭವಿಸಿದ ಬೃಹತ್ ಭೂಕುಸಿತದ ಸುಮಾರು ಎರಡು ವರ್ಷಗಳ ನಂತರ, ರಾಜ್ಯ ಸರ್ಕಾರವು ಭಾನುವಾರ ಕಲ್ಪೆಟ್ಟಾದ ಪುನರ್ವಸತಿ ಪಟ್ಟಣದಲ್ಲಿ ಸಂತ್ರಸ್ತರಿಗೆ ಮನೆಗಳನ್ನು ಹಸ್ತಾಂತರಿಸಿತು. ಮುಖ್ಯಮಂತ್ರಿ ಪಿಣರಾಯಿ ವಿಜಯನ್ ಅವರು ₹299...

ಬೆಂಗಳೂರು | ಕಾಲೇಜು ವಿದ್ಯಾರ್ಥಿನಿಯ ಅತ್ಯಾಚಾರ ಪ್ರಕರಣ : ಮತ್ತೆ ಮೂವರ ಬಂಧನ

ಬೆಂಗಳೂರಿನ ಜಕ್ಕೂರು ಬಳಿಯ ವಿಲ್ಲಾವೊಂದರಲ್ಲಿ ತಮಿಳುನಾಡಿನ 19 ವರ್ಷದ ಯುವತಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದ ತನಿಖೆ ನಡೆಸುತ್ತಿರುವ ಅಮೃತಹಳ್ಳಿ ಪೊಲೀಸರು ಮತ್ತೆ ಮೂವರನ್ನು ಬಂಧಿಸಿದ್ದು, ಈ ಮೂಲಕ ಬಂಧಿತರ ಸಂಖ್ಯೆ...