Homeಕರ್ನಾಟಕಮುಡಾ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ : ಸಿಎಂ ಸಿದ್ದರಾಮಯ್ಯ ನಿರಾಳ

ಮುಡಾ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ : ಸಿಎಂ ಸಿದ್ದರಾಮಯ್ಯ ನಿರಾಳ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮುಖ ಆರೋಪಿಯಾಗಿರುವ ಆಪಾದಿತ ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಲು ಹೈಕೋರ್ಟ್‌ ಶುಕ್ರವಾರ (ಫೆ 7) ನಿರಾಕರಿಸಿದೆ. ಈ ಮೂಲಕ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಿರಸ್ಕರಿಸಿದೆ.

“ಲೋಕಾಯುಕ್ತ ಮತ್ತು ಲೋಕಾಯುಕ್ತ ಸಂಸ್ಥೆಯು ಪ್ರಶ್ನಾರ್ಹವಾದ ಸ್ವಾತಂತ್ರ್ಯದಿಂದ ಬಳಲುತ್ತಿಲ್ಲ. ಲೋಕಾಯುಕ್ತ ಸಂಸ್ಥೆ ನಡೆಸಿರುವ ತನಿಖೆಯು ಲೋಪದೋಷ, ಪಕ್ಷಪಾತದಿಂದ ಕೂಡಿದೆ ಎಂದು ತನಿಖಾ ವರದಿಯನ್ನು ಪರಿಶೀಲಿಸಿದಾಗ ಕಂಡು ಬಂದಿಲ್ಲ. ಹೀಗಾಗಿ, ಇದನ್ನು ಮುಂದುವರಿದ ತನಿಖೆ ಅಥವಾ ಮರು ತನಿಖೆ ನಡೆಸಲು ಸಿಬಿಐಗೆ ಆದೇಶಿಸಲಾಗದು. ಬಾಹ್ಯ ಶಕ್ತಿಗಳಿಂದ ಲೋಕಾಯುಕ್ತ ಸಂಸ್ಥೆಯು ಪ್ರಭಾವಕ್ಕೆ ತುತ್ತಾಗುವ ಸಾಧ್ಯತೆಯ ಬಗ್ಗೆ ಈಗಾಗಲೇ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ತಮ್ಮ ತೀರ್ಪುಗಳಲ್ಲಿ ಹೇಳಿವೆ. ಈ ಎಲ್ಲಾ ವಿಚಾರಗಳ ಹಿನ್ನೆಲೆಯಲ್ಲಿ ಅರ್ಜಿ ವಜಾ ಮಾಡಲಾಗಿದೆ” ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರು ಹೇಳಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ಸಿದ್ದರಾಮಯ್ಯ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಡಾ. ಅಭಿಷೇಕ್‌ ಮನು ಸಿಂಘ್ವಿ “ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ಆದೇಶವನ್ನು ಹೈಕೋರ್ಟ್‌ ಎತ್ತಿ ಹಿಡಿದಿರುವ ನಂತರ ಯಾವುದೇ ಅಕ್ರಮವಾಗಿರುವುದನ್ನು ಅರ್ಜಿದಾರರು ಸಾಬೀತುಪಡಿಸಿಲ್ಲ. ಮುಖ್ಯಮಂತ್ರಿಯಾಗಿರುವ ಕಾರಣಕ್ಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ ಎಂದು ವರದಿ ಹೇಳಿದೆ.

ಲೋಕಾಯುಕ್ತ ಪೊಲೀಸರು ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ಪ್ರಕರಣದ ತನಿಖೆಯನ್ನು ಪರಿಣಾಮಕಾರಿಯಾಗಿ ನಡೆಸುತ್ತಿಲ್ಲ ಎಂದು ಅರ್ಜಿದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದರು.

ಲೋಕಾಯುಕ್ತ, ಸಿಬಿಐ ಅಥವಾ ಯಾವುದೇ ಇತರ ಸಂಸ್ಥೆಯಿಂದ ತನಿಖೆ ನಡೆಸಬೇಕೆಂದು ಸ್ನೇಹಮಯಿ ಕೃಷ್ಣ ಕೋರಿದ ನಂತರ, ವಿಶೇಷ ನ್ಯಾಯಾಲಯವು ಸೆಪ್ಟೆಂಬರ್ 25, 2024 ರಂದು ಪ್ರಕರಣದ ತನಖೆಯನ್ನು ಲೋಕಾಯುಕ್ತ ಪೊಲೀಸರಿಗೆ ವಹಿಸಿ ಆದೇಶಿಸಿತ್ತು. ಆದಾಗ್ಯೂ, ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸುವ ಗಂಟೆಗಳ ಮೊದಲು, ಸೆಪ್ಟೆಂಬರ್ 28 ರಂದು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು.

ಲೋಕಾಯುಕ್ತ ಪೊಲೀಸರ ತನಿಖಾ ವರದಿಯನ್ನು ದಾಖಲಿಸಿಕೊಂಡ ನಂತರ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಸಿಬಿಐ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಯ ಮೇಲಿನ ಆದೇಶವನ್ನು ಕಾಯ್ದಿರಿಸಿದರು. ಲೋಕಾಯುಕ್ತ ಪೊಲೀಸರ ವರದಿಯನ್ನು ವಿಚಾರಣಾ ನ್ಯಾಯಾಲಯವು ಸ್ವೀಕರಿಸುವ ಸಮಯವನ್ನು ಹೈಕೋರ್ಟ್ ವಿಸ್ತರಿಸಿತ್ತು.

ಜನವರಿ 27ರಂದು ವಾದ-ಪ್ರತಿವಾದಗಳ ಸಂದರ್ಭದಲ್ಲಿ, ಲೋಕಾಯುಕ್ತ ಪೊಲೀಸರ ವರದಿಯನ್ನು ಪರಿಶೀಲಿಸಿ ಸಿಬಿಐ ತನಿಖೆಗೆ ಕೋರಿರುವ ಅರ್ಜಿಯನ್ನು ನಿರ್ಧರಿಸುವುದಾಗಿ ಹೈಕೋರ್ಟ್ ಹೇಳಿತ್ತು. ಈ ಮಧ್ಯೆ, ಸಿದ್ದರಾಮಯ್ಯ ಪರ ವಕೀಲರು, ವರದಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ವಿಚಾರಣಾ ನ್ಯಾಯಾಲಯದ ವಿಶೇಷ ಅಧಿಕಾರ, ಹೈಕೋರ್ಟ್ ಅಲ್ಲ ಎಂದು ನ್ಯಾಯಾಲಯದ ಮುಂದೆ ವಾದಿಸಿದ್ದರು.

ಲೋಕಾಯುಕ್ತ ಪೊಲೀಸ್ ತನಿಖೆಗೆ ಆದೇಶಿಸಿದ ವಿಶೇಷ ನ್ಯಾಯಾಲಯದ ವ್ಯಾಪ್ತಿಗೆ ಈ ವಿಷಯ ಬರುವುದರಿಂದ, ತನಿಖಾ ವರದಿಯನ್ನು ಪರಿಶೀಲಿಸಿದ ನಂತರ ಸಿಬಿಐ ತನಿಖೆಯ ಬೇಡಿಕೆಯನ್ನು ಹೈಕೋರ್ಟ್ ಪೀಠವು ಸ್ವಯಂಪ್ರೇರಿತವಾಗಿ ನಿರ್ಧರಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಪರ ವಕೀಲರು ಹೇಳಿದ್ದರು.

2010ರಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ಅವರ ಸಹೋದರ ದಾನವಾಗಿ ನೀಡಿದ್ದ ಸುಮಾರು 3.16 ಎಕರೆ ಭೂಮಿಯನ್ನು ‘ತಪ್ಪಾಗಿ’ ಸ್ವಾಧೀನಪಡಿಸಿಕೊಂಡ ನಂತರ, ಮುಡಾ ಸಂಸ್ಥೆಯು ಪರಿಹಾರವಾಗಿ ಅವರಿಗೆ ಹಂಚಿಕೆ ಮಾಡಿದ್ದ 56 ಕೋಟಿ ರೂ. ಮೌಲ್ಯದ 14 ನಿವೇಶನಗಳ ಸುತ್ತ ಮುಡಾ ಪ್ರಕರಣ ಕೇಂದ್ರೀಕೃತವಾಗಿದೆ.

ಬಿಜೆಪಿ ಅಧಿಕಾರಾವಧಿಯಲ್ಲಿ ತಮ್ಮ ಪತ್ನಿಗೆ 14 ವಸತಿ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಲ್ಲಿ ನನ್ನ  ಕಡೆಯಿಂದ ಯಾವುದೇ ಅಕ್ರಮ ಅಥವಾ ಭ್ರಷ್ಟಾಚಾರ ನಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸಾರ್ವಜನಿಕವಾಗಿ ಹೇಳಿದ್ದಾರೆ. ಈ ಮಧ್ಯೆ ಅವರ ಪತ್ನಿ ನಿವೇಶನಗಳನ್ನು ಮುಡಾಗೆ ಹಿಂದಿರುಗಿಸಿದ್ದಾರೆ.

ಮುಡಾ ನಿವೇಶನ ಹಂಚಿಕೆಯಲ್ಲಿನ ಅಕ್ರಮಗಳ ತನಿಖೆಗೆ ಅನುಕೂಲವಾಗುವಂತೆ ಸೆಪ್ಟೆಂಬರ್ 24, 2024ರ ಏಕಸದಸ್ಯ ಪೀಠದ ಆದೇಶದ ವಿರುದ್ಧ ಸಿದ್ದರಾಮಯ್ಯ ಅವರು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ವಿಭಾಗೀಯ ಪೀಠವು ಮಾರ್ಚ್ 22 ರಂದು ಮೇಲ್ಮನವಿಯನ್ನು ವಿಚಾರಣೆ ನಡೆಸಲಿದೆ.

ನ್ಯಾಕ್ ಲಂಚ ಪ್ರಕರಣ : ದಾವಣಗೆರೆ ವಿವಿ ಪ್ರೊ.ಗಾಯತ್ರಿ ದೇವರಾಜ್ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ಯಾಲೆಸ್ತೀನ್ ಜನರೊಂದಿಗೆ ಒಗ್ಗಟ್ಟು ಪ್ರದರ್ಶನ: ದೆಹಲಿಯ ಮೆಕ್‌ಡೊನಾಲ್ಡ್ಸ್ ಹೊರಗೆ ಪ್ರತಿಭಟನೆ

ಪ್ಯಾಲೆಸ್ಟೈನ್ ಜೊತೆ ಒಗ್ಗಟ್ಟಿನ ಭಾರತೀಯ ಜನರು (ಐಪಿಎಸ್‌ಪಿ) ಗುಂಪಿನ ಸದಸ್ಯರು (ಏ.3) ಜನಪಥ್ ಪ್ರದೇಶದ ಮೆಕ್‌ಡೊನಾಲ್ಡ್ಸ್ ಔಟ್‌ಲೆಟ್‌ನ ಹೊರಗೆ ದಿಢೀರ್ ಪ್ರತಿಭಟನೆಯನ್ನು ಆಯೋಜಿಸಿದ್ದರು. ಪ್ಯಾಲೆಸ್ತೀನಿಯನ್ನರನ್ನು ಒಳಗೊಂಡ ನಡೆಯುತ್ತಿರುವ ಸಂಘರ್ಷದಲ್ಲಿ ಮೆಕ್‌ಡೊನಾಲ್ಡ್ಸ್ ಮತ್ತು ಕೋಕಾ-ಕೋಲಾದಂತಹ ಬಹುರಾಷ್ಟ್ರೀಯ...

‘ಇರಾನಿಯನ್ನರು ಸ್ಮಾರ್ಟ್ ಚೆಸ್ ಆಡುತ್ತಿದ್ದು, ಟ್ರಂಪ್ ಭ್ರಮಾಲೋಕದಲ್ಲಿದ್ದಾರೆ..’; ಮಾಜಿ ರಾಜತಾಂತ್ರಿಕ ಅಧಿಕಾರಿ ಕೆ.ಪಿ. ಫ್ಯಾಬಿಯನ್

ಪ್ರಸ್ತುತ ನಡೆಯುತ್ತಿರುವ ಪಶ್ಚಿಮ ಏಷ್ಯಾ ಸಂಘರ್ಷದ ಬಗ್ಗೆ ಮಾತನಾಡಿದ ಭಾರತದ ಮಾಜಿ ರಾಯಭಾರಿ ಕೆ.ಪಿ. ಫ್ಯಾಬಿಯನ್, "ಇರಾನಿಯನ್ನರು ಸ್ಮಾರ್ಟ್ ಚೆಸ್ ಆಟವನ್ನು ಆಡುತ್ತಿದ್ದಾರೆ. ಆದರೆ, ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗಳು...

‘ನಾನು ಸಂಸತ್ತಿಗೆ ಹೋಗುವುದು ಗದ್ದಲ ಸೃಷ್ಟಿಸಲು ಅಲ್ಲ’ : ಎಎಪಿ ಆರೋಪಗಳನ್ನು ತಳ್ಳಿ ಹಾಕಿದ ರಾಘವ್ ಚಡ್ಡಾ

ತನ್ನ ವಿರುದ್ದ ಆಮ್‌ ಆದ್ಮಿ ಪಕ್ಷ (ಎಎಪಿ) ಮಾಡಿರುವ ಎಲ್ಲಾ ಆರೋಪಗಳನ್ನು ರಾಘವ್ ಚಡ್ಡಾ ಶನಿವಾರ (ಏ.4) ಅಲ್ಲಗಳೆದಿದ್ದು, "ಅವೆಲ್ಲವೂ ಸುಳ್ಳು ಮತ್ತು ಸಂಘಟಿತ ಅಭಿಯಾನದ ಭಾಗ" ಎಂದಿದ್ದಾರೆ. "ಸಂಸತ್ತಿನಲ್ಲಿ ನನ್ನ ಉದ್ದೇಶ...

ಎಡರಂಗದಲ್ಲಿ ಎಡಪಂಥೀಯರೇ ಇಲ್ಲ; ದ್ವೇಷ ಹರಡುವ ಜನರೊಂದಿಗೆ ಪಿಣರಾಯಿ ಪಾಲುದಾರಿಕೆ ಹೊಂದಿದ್ದಾರೆ: ರಾಹುಲ್ ಗಾಂಧಿ

ಕೇರಳ ವಿಧಾನಸಭಾ ಚುನಾವಣೆ ಪ್ರಚಾರವು ಅಂತಿಮ ಹಂತಕ್ಕೆ ತಲುಪುತ್ತಿದ್ದಂತೆ ತೀಕ್ಷ್ಣವಾದ ರಾಜಕೀಯ ದಾಳಿಯನ್ನು ಆರಂಭಿಸಿದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, "ಸಿಪಿಐ-ಎಂ ನೇತೃತ್ವದ ಎಡಪಕ್ಷವು ತನ್ನ ಸೈದ್ಧಾಂತಿಕ ತಿರುಳನ್ನು ಕಳೆದುಕೊಳ್ಳುತ್ತಿದೆ" ಎಂದು ಆರೋಪಿಸಿದ್ದಾರೆ. "ಎಲ್‌ಡಿಎಫ್...

ಬಿಜೆಪಿ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಅಂದಿದ್ದೆ : ಅಣ್ಣಾಮಲೈ

"ವಿಧಾನಸಭಾ ಚುನಾವಣೆಗೆ ಬಿಜೆಪಿ ನನಗೆ ಟಿಕೆಟ್ ನಿರಾಕರಿಸಿಲ್ಲ, ನಾನೇ ಸ್ಪರ್ಧಿಸಲ್ಲ ಎಂದು ಮುಂಚಿತವಾಗಿ ಹೈಕಮಾಂಡ್‌ಗೆ ತಿಳಿಸಿದ್ದೆ" ಎಂದು ತಮಿಳುನಾಡು ಬಿಜೆಪಿಯ ಮಾಜಿ ರಾಜ್ಯಾಧ್ಯಕ್ಷ ಕೆ. ಅಣ್ಣಾಮಲೈ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಶನಿವಾರ...

ಸುರಕ್ಷಿತವಾಗಿ ಹಾರ್ಮುಜ್ ದಾಟಿದ 7ನೇ ಎಲ್‌ಪಿಜಿ ಹಡಗು; ಸರದಿಯಲ್ಲಿ ಕಾಯುತ್ತಿವೆ ಭಾರತದ 17 ಟ್ಯಾಂಕರ್‌ಗಳು

ಭಾರತದ ಧ್ವಜ ಹೊಂದಿದ್ದ ಮತ್ತೊಂದು ದ್ರವೀಕೃತ ಪೆಟ್ರೋಲಿಯಂ ಅನಿಲ (ಎಲ್‌ಪಿಜಿ) ಟ್ಯಾಂಕರ್, ಗ್ರೀನ್ ಸಾನ್ವಿ ಹೆಸರಿನ ಹಡಗು ಹಾರ್ಮುಜ್ ಜಲಸಂಧಿಯ ಪೂರ್ವಕ್ಕೆ ಯಶಸ್ವಿಯಾಗಿ ತಲುಪಿದೆ. ಹಡಗು ಟ್ರ್ಯಾಕಿಂಗ್ ದತ್ತಾಂಶದ ಪ್ರಕಾರ, ನಡೆಯುತ್ತಿರುವ ಪಶ್ಚಿಮ...

ಸಿಬಿಎಸ್‌ಇ ಹಿಂದಿ ಹೇರಿಕೆಯು ತ್ರಿಭಾಷಾ ಸೂತ್ರ ಜಾರಿಯ ‘ರಹಸ್ಯ ಕಾರ್ಯವಿಧಾನ’: ಸ್ಟಾಲಿನ್ ಆರೋಪ

ಸಿಬಿಎಸ್‌ಇ ಇತ್ತೀಚೆಗೆ ಅನಾವರಣಗೊಳಿಸಿದ ಪಠ್ಯಕ್ರಮ ಚೌಕಟ್ಟಿನ ಕುರಿತು ಮಾತನಾಡಿದ ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್, "ಮೂರು ಭಾಷಾ ಸೂತ್ರ ಎಂದು ಕರೆಯಲ್ಪಡುವುದು ವಾಸ್ತವದಲ್ಲಿ ಹಿಂದಿ ಮಾತನಾಡದ ಪ್ರದೇಶಗಳಿಗೆ ಹಿಂದಿ ವಿಸ್ತರಿಸುವ ರಹಸ್ಯ ಕಾರ್ಯವಿಧಾನವಾಗಿದೆ"...

‘ತಿಂದ ಮನೆಗೆ ಕನ್ನ ಹಾಕುವುದು ತರವಲ್ಲ, ನಿಮ್ಮ ಅಧಿಕ ಪ್ರಸಂಗ ಕರ್ನಾಟಕದ ಜನತೆ ಒಪ್ಪುವುದಿಲ್ಲ’ : ರಾಜ್ಯಪಾಲರ ವಿರುದ್ಧ ಕರವೇ ಕಿಡಿ

ರಾಜ್ಯದಲ್ಲಿ ಎಸ್‌ಎಸ್‌ಎಲ್‌ಸಿ ಪರೀಕ್ಷೆಗಳಲ್ಲಿ ತೃತೀಯ ಭಾಷೆಗೆ ಗ್ರೇಡಿಂಗ್ ನೀಡುವ ಸರ್ಕಾರದ ನಿರ್ಧಾರವನ್ನು ಮರುಪರಿಶೀಲಿಸುವಂತೆ ಮುಖ್ಯ ಕಾರ್ಯದರ್ಶಿಗಳಿಗೆ ಪತ್ರ ಬರೆದಿರುವ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ವಿರುದ್ಧ ಕರ್ನಾಟಕ ರಕ್ಷಣಾ ವೇದಿಕೆ (ಕರವೇ) ರಾಜ್ಯಾಧ್ಯಕ್ಷ...

‘ತಪ್ಪಾಗಿದೆ’ : ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್‌ ವಿಧೇಯಕದ ಕುರಿತ ಟೀಕೆಗಳನ್ನು ಕೈಬಿಟ್ಟ ರಾಜಸ್ಥಾನ ಹೈಕೋರ್ಟ್

ಟ್ರಾನ್ಸ್‌ಜೆಂಡರ್ ಕಾಯ್ದೆ, 2019ರಲ್ಲಿ ಬದಲಾವಣೆಗಳನ್ನು ತರಲಿರುವ ಕೇಂದ್ರ ಸರ್ಕಾರದ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ವಿಧೇಯ, 2026ರ ಕುರಿತು ಈ ಹಿಂದೆ ಮಾಡಿದ್ದ ವಿಮರ್ಶಾತ್ಮಕ ಟಿಪ್ಪಣಿಗಳನ್ನು ರಾಜಸ್ಥಾನ ಹೈಕೋರ್ಟ್ ತೆಗೆದುಹಾಕಿದೆ ಎಂದು...

ಯುಸಿಸಿ ಜಾರಿ ನಂತರ ‘ಜನಸಂಖ್ಯಾ ನಿಯಂತ್ರಣ’ ಕಾನೂನಿಗೆ ಮುಂದಾದ ಉತ್ತರಾಖಂಡ ಬಿಜೆಪಿ ಸರ್ಕಾರ

ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಜಾರಿಗೆ ತಂದ ನಂತರ, ಉತ್ತರಾಖಂಡ ಸರ್ಕಾರ ಈಗ ಜನಸಂಖ್ಯಾ ನಿಯಂತ್ರಣ ಕಾನೂನನ್ನು ತರುವ ಬಗ್ಗೆ ಯೋಚಿಸುತ್ತಿದೆ ಎಂದು ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಶುಕ್ರವಾರ ಸೂಚಿಸಿದ್ದಾರೆ. ಪ್ರಸ್ತಾವಿತ ಕ್ರಮದ...