Homeಕರ್ನಾಟಕಮುಡಾ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ : ಸಿಎಂ ಸಿದ್ದರಾಮಯ್ಯ ನಿರಾಳ

ಮುಡಾ ಪ್ರಕರಣ ಸಿಬಿಐ ತನಿಖೆಗೆ ವಹಿಸಲು ಹೈಕೋರ್ಟ್ ನಕಾರ : ಸಿಎಂ ಸಿದ್ದರಾಮಯ್ಯ ನಿರಾಳ

- Advertisement -
- Advertisement -

ಮುಖ್ಯಮಂತ್ರಿ ಸಿದ್ದರಾಮಯ್ಯ ಪ್ರಮುಖ ಆರೋಪಿಯಾಗಿರುವ ಆಪಾದಿತ ಮುಡಾ ನಿವೇಶನ ಹಂಚಿಕೆ ಅಕ್ರಮ ಪ್ರಕರಣದ ತನಿಖೆಯನ್ನು ಕೇಂದ್ರೀಯ ತನಿಖಾ ದಳಕ್ಕೆ (ಸಿಬಿಐ) ವಹಿಸಲು ಹೈಕೋರ್ಟ್‌ ಶುಕ್ರವಾರ (ಫೆ 7) ನಿರಾಕರಿಸಿದೆ. ಈ ಮೂಲಕ ಸಿದ್ದರಾಮಯ್ಯ ಅವರಿಗೆ ಬಿಗ್ ರಿಲೀಫ್ ಸಿಕ್ಕಂತಾಗಿದೆ.

ಮುಡಾ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸುವಂತೆ ಕೋರಿ ಮೈಸೂರಿನ ಸ್ನೇಹಮಯಿ ಕೃಷ್ಣ ಅವರು ಸಲ್ಲಿಸಿದ್ದ ಅರ್ಜಿಯನ್ನು ನ್ಯಾಯಮೂರ್ತಿ ಎಂ.ನಾಗಪ್ರಸನ್ನ ಅವರ ಏಕಸದಸ್ಯ ಪೀಠ ತಿರಸ್ಕರಿಸಿದೆ.

“ಲೋಕಾಯುಕ್ತ ಮತ್ತು ಲೋಕಾಯುಕ್ತ ಸಂಸ್ಥೆಯು ಪ್ರಶ್ನಾರ್ಹವಾದ ಸ್ವಾತಂತ್ರ್ಯದಿಂದ ಬಳಲುತ್ತಿಲ್ಲ. ಲೋಕಾಯುಕ್ತ ಸಂಸ್ಥೆ ನಡೆಸಿರುವ ತನಿಖೆಯು ಲೋಪದೋಷ, ಪಕ್ಷಪಾತದಿಂದ ಕೂಡಿದೆ ಎಂದು ತನಿಖಾ ವರದಿಯನ್ನು ಪರಿಶೀಲಿಸಿದಾಗ ಕಂಡು ಬಂದಿಲ್ಲ. ಹೀಗಾಗಿ, ಇದನ್ನು ಮುಂದುವರಿದ ತನಿಖೆ ಅಥವಾ ಮರು ತನಿಖೆ ನಡೆಸಲು ಸಿಬಿಐಗೆ ಆದೇಶಿಸಲಾಗದು. ಬಾಹ್ಯ ಶಕ್ತಿಗಳಿಂದ ಲೋಕಾಯುಕ್ತ ಸಂಸ್ಥೆಯು ಪ್ರಭಾವಕ್ಕೆ ತುತ್ತಾಗುವ ಸಾಧ್ಯತೆಯ ಬಗ್ಗೆ ಈಗಾಗಲೇ ಸುಪ್ರೀಂ ಕೋರ್ಟ್‌ ಮತ್ತು ಹೈಕೋರ್ಟ್‌ ತಮ್ಮ ತೀರ್ಪುಗಳಲ್ಲಿ ಹೇಳಿವೆ. ಈ ಎಲ್ಲಾ ವಿಚಾರಗಳ ಹಿನ್ನೆಲೆಯಲ್ಲಿ ಅರ್ಜಿ ವಜಾ ಮಾಡಲಾಗಿದೆ” ಎಂದು ನ್ಯಾಯಮೂರ್ತಿ ನಾಗಪ್ರಸನ್ನ ಅವರು ಹೇಳಿರುವುದಾಗಿ ಬಾರ್ & ಬೆಂಚ್ ವರದಿ ಮಾಡಿದೆ.

ಸಿದ್ದರಾಮಯ್ಯ ಅವರನ್ನು ಪ್ರತಿನಿಧಿಸಿದ್ದ ಹಿರಿಯ ವಕೀಲ ಡಾ. ಅಭಿಷೇಕ್‌ ಮನು ಸಿಂಘ್ವಿ “ರಾಜ್ಯಪಾಲರು ತನಿಖೆಗೆ ಅನುಮತಿ ನೀಡಿರುವ ಆದೇಶವನ್ನು ಹೈಕೋರ್ಟ್‌ ಎತ್ತಿ ಹಿಡಿದಿರುವ ನಂತರ ಯಾವುದೇ ಅಕ್ರಮವಾಗಿರುವುದನ್ನು ಅರ್ಜಿದಾರರು ಸಾಬೀತುಪಡಿಸಿಲ್ಲ. ಮುಖ್ಯಮಂತ್ರಿಯಾಗಿರುವ ಕಾರಣಕ್ಕೆ ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕು ಎಂದರೆ ಹೇಗೆ? ಎಂದು ಪ್ರಶ್ನಿಸಿದ್ದಾರೆ ಎಂದು ವರದಿ ಹೇಳಿದೆ.

ಲೋಕಾಯುಕ್ತ ಪೊಲೀಸರು ರಾಜ್ಯ ಸರ್ಕಾರದ ವ್ಯಾಪ್ತಿಯಲ್ಲಿ ಕಾರ್ಯನಿರ್ವಹಿಸುತ್ತಿರುವುದರಿಂದ ಪ್ರಕರಣದ ತನಿಖೆಯನ್ನು ಪರಿಣಾಮಕಾರಿಯಾಗಿ ನಡೆಸುತ್ತಿಲ್ಲ ಎಂದು ಅರ್ಜಿದಾರ ಸ್ನೇಹಮಯಿ ಕೃಷ್ಣ ಆರೋಪಿಸಿದ್ದರು.

ಲೋಕಾಯುಕ್ತ, ಸಿಬಿಐ ಅಥವಾ ಯಾವುದೇ ಇತರ ಸಂಸ್ಥೆಯಿಂದ ತನಿಖೆ ನಡೆಸಬೇಕೆಂದು ಸ್ನೇಹಮಯಿ ಕೃಷ್ಣ ಕೋರಿದ ನಂತರ, ವಿಶೇಷ ನ್ಯಾಯಾಲಯವು ಸೆಪ್ಟೆಂಬರ್ 25, 2024 ರಂದು ಪ್ರಕರಣದ ತನಖೆಯನ್ನು ಲೋಕಾಯುಕ್ತ ಪೊಲೀಸರಿಗೆ ವಹಿಸಿ ಆದೇಶಿಸಿತ್ತು. ಆದಾಗ್ಯೂ, ಲೋಕಾಯುಕ್ತ ಪೊಲೀಸರು ಎಫ್‌ಐಆರ್ ದಾಖಲಿಸುವ ಗಂಟೆಗಳ ಮೊದಲು, ಸೆಪ್ಟೆಂಬರ್ 28 ರಂದು ಪ್ರಕರಣವನ್ನು ಸಿಬಿಐ ತನಿಖೆಗೆ ವಹಿಸಬೇಕೆಂದು ಸ್ನೇಹಮಯಿ ಕೃಷ್ಣ ಹೈಕೋರ್ಟ್ ಮೆಟ್ಟಿಲೇರಿದ್ದರು.

ಲೋಕಾಯುಕ್ತ ಪೊಲೀಸರ ತನಿಖಾ ವರದಿಯನ್ನು ದಾಖಲಿಸಿಕೊಂಡ ನಂತರ ನ್ಯಾಯಮೂರ್ತಿ ನಾಗಪ್ರಸನ್ನ ಅವರು ಸಿಬಿಐ ತನಿಖೆಗೆ ಕೋರಿ ಸಲ್ಲಿಸಲಾದ ಅರ್ಜಿಯ ಮೇಲಿನ ಆದೇಶವನ್ನು ಕಾಯ್ದಿರಿಸಿದರು. ಲೋಕಾಯುಕ್ತ ಪೊಲೀಸರ ವರದಿಯನ್ನು ವಿಚಾರಣಾ ನ್ಯಾಯಾಲಯವು ಸ್ವೀಕರಿಸುವ ಸಮಯವನ್ನು ಹೈಕೋರ್ಟ್ ವಿಸ್ತರಿಸಿತ್ತು.

ಜನವರಿ 27ರಂದು ವಾದ-ಪ್ರತಿವಾದಗಳ ಸಂದರ್ಭದಲ್ಲಿ, ಲೋಕಾಯುಕ್ತ ಪೊಲೀಸರ ವರದಿಯನ್ನು ಪರಿಶೀಲಿಸಿ ಸಿಬಿಐ ತನಿಖೆಗೆ ಕೋರಿರುವ ಅರ್ಜಿಯನ್ನು ನಿರ್ಧರಿಸುವುದಾಗಿ ಹೈಕೋರ್ಟ್ ಹೇಳಿತ್ತು. ಈ ಮಧ್ಯೆ, ಸಿದ್ದರಾಮಯ್ಯ ಪರ ವಕೀಲರು, ವರದಿಯ ಬಗ್ಗೆ ನಿರ್ಧಾರ ತೆಗೆದುಕೊಳ್ಳುವುದು ವಿಚಾರಣಾ ನ್ಯಾಯಾಲಯದ ವಿಶೇಷ ಅಧಿಕಾರ, ಹೈಕೋರ್ಟ್ ಅಲ್ಲ ಎಂದು ನ್ಯಾಯಾಲಯದ ಮುಂದೆ ವಾದಿಸಿದ್ದರು.

ಲೋಕಾಯುಕ್ತ ಪೊಲೀಸ್ ತನಿಖೆಗೆ ಆದೇಶಿಸಿದ ವಿಶೇಷ ನ್ಯಾಯಾಲಯದ ವ್ಯಾಪ್ತಿಗೆ ಈ ವಿಷಯ ಬರುವುದರಿಂದ, ತನಿಖಾ ವರದಿಯನ್ನು ಪರಿಶೀಲಿಸಿದ ನಂತರ ಸಿಬಿಐ ತನಿಖೆಯ ಬೇಡಿಕೆಯನ್ನು ಹೈಕೋರ್ಟ್ ಪೀಠವು ಸ್ವಯಂಪ್ರೇರಿತವಾಗಿ ನಿರ್ಧರಿಸಲು ಸಾಧ್ಯವಿಲ್ಲ ಎಂದು ಸಿದ್ದರಾಮಯ್ಯ ಪರ ವಕೀಲರು ಹೇಳಿದ್ದರು.

2010ರಲ್ಲಿ ಸಿದ್ದರಾಮಯ್ಯ ಅವರ ಪತ್ನಿ ಪಾರ್ವತಿಗೆ ಅವರ ಸಹೋದರ ದಾನವಾಗಿ ನೀಡಿದ್ದ ಸುಮಾರು 3.16 ಎಕರೆ ಭೂಮಿಯನ್ನು ‘ತಪ್ಪಾಗಿ’ ಸ್ವಾಧೀನಪಡಿಸಿಕೊಂಡ ನಂತರ, ಮುಡಾ ಸಂಸ್ಥೆಯು ಪರಿಹಾರವಾಗಿ ಅವರಿಗೆ ಹಂಚಿಕೆ ಮಾಡಿದ್ದ 56 ಕೋಟಿ ರೂ. ಮೌಲ್ಯದ 14 ನಿವೇಶನಗಳ ಸುತ್ತ ಮುಡಾ ಪ್ರಕರಣ ಕೇಂದ್ರೀಕೃತವಾಗಿದೆ.

ಬಿಜೆಪಿ ಅಧಿಕಾರಾವಧಿಯಲ್ಲಿ ತಮ್ಮ ಪತ್ನಿಗೆ 14 ವಸತಿ ನಿವೇಶನ ಹಂಚಿಕೆ ಮಾಡಲಾಗಿದೆ. ಇದರಲ್ಲಿ ನನ್ನ  ಕಡೆಯಿಂದ ಯಾವುದೇ ಅಕ್ರಮ ಅಥವಾ ಭ್ರಷ್ಟಾಚಾರ ನಡೆದಿಲ್ಲ ಎಂದು ಸಿಎಂ ಸಿದ್ದರಾಮಯ್ಯ ಸಾರ್ವಜನಿಕವಾಗಿ ಹೇಳಿದ್ದಾರೆ. ಈ ಮಧ್ಯೆ ಅವರ ಪತ್ನಿ ನಿವೇಶನಗಳನ್ನು ಮುಡಾಗೆ ಹಿಂದಿರುಗಿಸಿದ್ದಾರೆ.

ಮುಡಾ ನಿವೇಶನ ಹಂಚಿಕೆಯಲ್ಲಿನ ಅಕ್ರಮಗಳ ತನಿಖೆಗೆ ಅನುಕೂಲವಾಗುವಂತೆ ಸೆಪ್ಟೆಂಬರ್ 24, 2024ರ ಏಕಸದಸ್ಯ ಪೀಠದ ಆದೇಶದ ವಿರುದ್ಧ ಸಿದ್ದರಾಮಯ್ಯ ಅವರು ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ವಿಭಾಗೀಯ ಪೀಠವು ಮಾರ್ಚ್ 22 ರಂದು ಮೇಲ್ಮನವಿಯನ್ನು ವಿಚಾರಣೆ ನಡೆಸಲಿದೆ.

ನ್ಯಾಕ್ ಲಂಚ ಪ್ರಕರಣ : ದಾವಣಗೆರೆ ವಿವಿ ಪ್ರೊ.ಗಾಯತ್ರಿ ದೇವರಾಜ್ ಅಮಾನತು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಿಡದಿ ರೈತರ ವಿಚಾರದಲ್ಲಿ ಸರ್ಕಾರದ ನಿರ್ಧಾರ ಸ್ವಾಗತಾರ್ಹ ಆದರೆ.., ಸಂಯುಕ್ತ ಹೋರಾಟ ಸಮಿತಿಯ ಎಚ್ಚರಿಕೆಯ ಮಾತು

ಬಿಡದಿ ಟೌನ್‌ಶಿಪ್ ವಿಚಾರದಲ್ಲಿ ಬಲವಂತವಾಗಿ ಯಾವುದೇ ರೈತರ ಭೂಮಿ ಕಿತ್ತುಕೊಳ್ಳುವುದಿಲ್ಲ ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಹೇಳುತ್ತಿರುವುದು ಕೇವಲ ಮಾತಿನ ಜಾಣ್ಮೆಯಷ್ಟೇ. ಬಿಡದಿ ಭಾಗದ ಮೂರು ಗ್ರಾಮಗಳಿಗೆ ಹೊರಡಿಸಲಾಗಿರುವ ಭೂಸ್ವಾಧೀನದ ಅಂತಿಮ ಅಧಿಸೂಚನೆಯನ್ನು ಸಂಪೂರ್ಣವಾಗಿ...

“8.5 ಕೆಜಿ ತೂಕ ಇಳಿಸಿಕೊಂಡ ಸೋನಮ್ ವಾಂಗ್‌ಚುಕ್ ಜೀವಕ್ಕೆ ಅಪಾಯ: ಬಲವಂತ ಆಹಾರ ನೀಡುವಂತೆ ದೆಹಲಿ ಹೈಕೋರ್ಟ್‌ನಲ್ಲಿ ಪಿಐಎಲ್”

ದೇಶದ ಶೈಕ್ಷಣಿಕ ವ್ಯವಸ್ಥೆಯ ಭವಿಷ್ಯವನ್ನು ಗಾಳಿಗೆ ತೂರಿರುವ ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಸಾಲು ಸಾಲು ಭ್ರಷ್ಟಾಚಾರದ ವಿರುದ್ಧ ಸಿಡಿದೆದ್ದು, ದೆಹಲಿಯ ಜಂತರ್ ಮಂತರ್‌ನಲ್ಲಿ ಅನಿರ್ದಿಷ್ಟಾವಧಿ ಉಪವಾಸ ಸತ್ಯಾಗ್ರಹ ನಡೆಸುತ್ತಿರುವ ಪ್ರಖ್ಯಾತ ಹವಾಮಾನ ಮತ್ತು...

ಇನ್‌ಸ್ಟಾಮಾರ್ಟ್‌ನಲ್ಲಿ ಸಿಗಲಿದೆ ಎಲ್‌ಪಿಜಿ ಸಿಲಿಂಡರ್: ಬೆಂಗಳೂರಿನಲ್ಲಿ ಹೊಸ ಸೇವೆ ಆರಂಭ!

ಬೆಂಗಳೂರು: ದೇಶದಲ್ಲೇ ಮೊದಲ ಬಾರಿಗೆ ಬೆಂಗಳೂರಿನ ಗ್ರಾಹಕರು ಇನ್ನು ಮುಂದೆ ಪ್ರಮುಖ ಕ್ವಿಕ್ ಕಾಮರ್ಸ್ ಸಂಸ್ಥೆಯಾದ 'ಇನ್‌ಸ್ಟಾಮಾರ್ಟ್' (Instamart) ಆ್ಯಪ್ ಮೂಲಕವೇ ಎಲ್‌ಪಿಜಿ ಗ್ಯಾಸ್ ಸಿಲಿಂಡರ್‌ಗಳನ್ನು ಬುಕ್ ಮಾಡಬಹುದು. ಹಿಂದೂಸ್ತಾನ್ ಪೆಟ್ರೋಲಿಯಂ ಕಾರ್ಪೊರೇಷನ್...

ಬಿಡದಿ ರೈತರ ಹೋರಾಟಕ್ಕೆ ಜಯ: ಬಲವಂತವಾಗಿ ಒಬ್ಬೇ ಒಬ್ಬ ರೈತರ ಜಮೀನನ್ನೂ ಪಡೆಯಲ್ಲ ಸಿಎಂ ಡಿ.ಕೆ.ಶಿವಕುಮಾರ್

"ಬಿಡದಿ ಸ್ಮಾರ್ಟ್ ಸಿಟಿ/ಟೌನ್ ಶಿಪ್ ಯೋಜನೆಯ ಹೆಸರಿನಲ್ಲಿ ಬಲವಂತವಾಗಿ ಒಬ್ಬೇ ಒಬ್ಬ ರೈತರ ಅಥವಾ ರೈತ ಮಹಿಳೆಯರ ಜಮೀನನ್ನು ನಮ್ಮ ಸರ್ಕಾರ ಭೂಸ್ವಾಧೀನ ಮಾಡಿಕೊಳ್ಳುವುದಿಲ್ಲ," ಎಂದು ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್ ಸ್ಪಷ್ಟಪಡಿಸಿದ್ದಾರೆ. ಬಿಡದಿ ಟೌನ್‌ಶಿಪ್...

ಪಶ್ಚಿಮ ಬಂಗಾಳ: TMC ಬಂಡಾಯ ನಾಯಕ ರಿತಬ್ರತ ಬ್ಯಾನರ್ಜಿಗೆ ವಿಪಕ್ಷ ಸ್ಥಾನ ನೀಡಿದ್ದಕ್ಕೆ ನ್ಯಾಯಾಧೀಶರ ತೀವ್ರ ಆಕ್ಷೇಪ

ತೃಣಮೂಲ ಕಾಂಗ್ರೆಸ್‌ನ ಬಂಡಾಯ ಬಣದ ಮುಖ್ಯಸ್ಥ ರಿತಬ್ರತ ಬ್ಯಾನರ್ಜಿ ಅವರನ್ನು ಪಶ್ಚಿಮ ಬಂಗಾಳದ ವಿಧಾನಸಭೆಯ ವಿರೋಧ ಪಕ್ಷದ ನಾಯಕರನ್ನಾಗಿ ನೇಮಕ ಮಾಡುವಲ್ಲಿ ಸ್ಪೀಕರ್ ರತೀಂದ್ರ ಬೋಸ್ ತೋರಿರುವ "ತರಾತುರಿ"ಯನ್ನು ಕಲ್ಕತ್ತಾ ಹೈಕೋರ್ಟ್‌ನ ನ್ಯಾಯಮೂರ್ತಿ...

ಎರಡು ವರ್ಷಗಳಲ್ಲಿ 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ; ಇವರಲ್ಲಿ 193 ಮಂದಿ ವಿದೇಶಿಯರೆಂದು ಘೋಷಿತರು: ಅಸ್ಸಾಂ ಸರ್ಕಾರ

ಗುವಾಹಟಿ: ಕಳೆದ ಎರಡು ವರ್ಷಗಳ ಅವಧಿಯಲ್ಲಿ ಗಡೀಪಾರು, ಗಡಿಯಿಂದ ಆಚೆಗೆ ತಳ್ಳುವಿಕೆ (ಪುಶ್‌ಬ್ಯಾಕ್) ಅಥವಾ ಉಚ್ಚಾಟನೆ ಪ್ರಕ್ರಿಯೆಯ ಮೂಲಕ ಒಟ್ಟು 1,679 ಜನರನ್ನು ಬಾಂಗ್ಲಾದೇಶಕ್ಕೆ ಕಳುಹಿಸಲಾಗಿದೆ ಎಂದು ಅಸ್ಸಾಂ ಸರ್ಕಾರ ರಾಜ್ಯ ವಿಧಾನಸಭೆಗೆ...

17 ದಿನ, 9 ಕೆಜಿ ತೂಕ ಇಳಿಕೆ, ಸೋನಮ್ ವಾಂಗ್‌ಚುಕ್ ಆರೋಗ್ಯ ಸ್ಥಿತಿ ಗಂಭೀರ: ಉಪವಾಸ ಕೈಬಿಡುವಂತೆ ಅಖಿಲೇಶ್-ಕೇಜ್ರಿವಾಲ್ ಮನವಿ

ದೇಶದ ಶಿಕ್ಷಣ ವ್ಯವಸ್ಥೆಯನ್ನು ಜರ್ಜರಿತಗೊಳಿಸಿರುವ ಸರಣಿ ಪ್ರಶ್ನೆ ಪತ್ರಿಕೆ ಸೋರಿಕೆ ಮತ್ತು ಭ್ರಷ್ಟಾಚಾರವನ್ನು ವಿರೋಧಿಸಿ ಹಾಗೂ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿ ಖ್ಯಾತ ಪರಿಸರ ಕಾರ್ಯಕರ್ತ ಸೋನಮ್...

ಎನ್‌ಸಿಪಿಯ ಎರಡೂ ಬಣಗಳಲ್ಲೂ ಬಿರುಸಿನ ಬೆಳವಣಿಗೆ : ಬಿಜೆಪಿ ತೆಕ್ಕೆಗೆ ಮತ್ತೊಂದು ಪಕ್ಷ?

ನ್ಯಾಷನಲಿಸ್ಟ್ ಕಾಂಗ್ರೆಸ್ ಪಾರ್ಟಿಯ (ಎನ್‌ಸಿಪಿ) ಎರಡೂ ಬಣಗಳ ಮುಖ್ಯ ನಾಯಕರು ಮಂಗಳವಾರ (ಜು.14) ರಾತ್ರಿ ಮಹಾರಾಷ್ಟ್ರ ಮುಖ್ಯಮಂತ್ರಿ ದೇವೇಂದ್ರ ಫಡ್ನವೀಸ್ ಅವರನ್ನು ಭೇಟಿಯಾಗಿ ಚರ್ಚೆ ನಡೆಸಿದ್ದಾರೆ. ಈ ಸಭೆಯು ಶರದ್ ಪವಾರ್ ಅವರ...

ಮೋದಿಯ ಮೌನವನ್ನು ಪ್ರಶ್ನಿಸುವ ರಾಹುಲ್ ಗಾಂಧಿ, ಸಾರ್ವಜನಿಕ ಹಿತಾಸಕ್ತಿಯ ಈ ವಿಷಯಗಳಲ್ಲಿ ತಾವೇಕೆ ಮೌನ?

ಪ್ರಧಾನಿ ಮೋದಿಯವರದ್ದು ಜಾಣ ಮೌನ ಎಂದು ಈಗಾಗಲೇ ಈ ದೇಶದ ಜನಕ್ಕೆ ಮನವರಿಕೆಯಾಗಿದೆ. ಕಳೆದ 14ವರ್ಷದಲ್ಲಿ ಒಂದೇ ಒಂದು ಪ್ರೆಸ್ ಮೀಟ್‌ಅನ್ನು ಅಡ್ರೆಸ್ ಮಾಡದೆ ಇರುವವರ ಬಗ್ಗೆ ಜನ ಹೆಚ್ಚಿನದ್ದೇನನ್ನು ನಿರೀಕ್ಷಿಸಲಾರರು, ಆದರೆ...

ಹೊಸ ಮತದಾರರ ಫಾರಂ 6ಕ್ಕೆ ಪೋಷಕರ ಎಸ್‌ಐಆರ್ ಕಡ್ಡಾಯಗೊಳಿಸಿದ ಚು. ಆಯೋಗ : ಸಂಪೂರ್ಣ ಕಾನೂನುಬಾಹಿರ ಎಂದ ಸಂಸದ ಜಾನ್ ಬ್ರಿಟ್ಟಾಸ್

ಹೊಸ ಮತದಾರರನ್ನು ನೋಂದಾಯಿಸಲು ಬಳಸುವ ತನ್ನ ಆನ್‌ಲೈನ್ ಅರ್ಜಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆಗೆ (ಎಸ್‌ಐಆರ್) ಸಂಬಂಧಿಸಿದ ಹೊಸ ವಿಭಾಗವನ್ನು ಸೇರಿಸುವ ಮೂಲಕ ಚುನಾವಣಾ ಆಯೋಗವು (ಇಸಿ) "ಸಂಪೂರ್ಣವಾಗಿ ಕಾನೂನು ಅಧಿಕಾರವಿಲ್ಲದೆ ಕಾರ್ಯನಿರ್ವಹಿಸಿದೆ" ಎಂದು...