Homeಕರ್ನಾಟಕನ್ಯಾಯಾಧೀಶರ ಹೇಳಿಕೆ ವೈರಲ್ : ಅನುಮತಿ ಇಲ್ಲದೆ ಕಲಾಪದ ವಿಡಿಯೋ ಬಳಕೆಗೆ ಹೈಕೋರ್ಟ್ ನಿರ್ಬಂಧ

ನ್ಯಾಯಾಧೀಶರ ಹೇಳಿಕೆ ವೈರಲ್ : ಅನುಮತಿ ಇಲ್ಲದೆ ಕಲಾಪದ ವಿಡಿಯೋ ಬಳಕೆಗೆ ಹೈಕೋರ್ಟ್ ನಿರ್ಬಂಧ

- Advertisement -
- Advertisement -

ನ್ಯಾಯಾಲಯದ ಕಲಾಪದ ಕೆಲವು ವಿಡಿಯೋಗಳು ವೈರಲ್‌ ಆಗಿರುವುದನ್ನು ಗಂಭೀರವಾಗಿ ಪರಿಗಣಿಸಿರುವ ಕರ್ನಾಟಕ ಹೈಕೋರ್ಟ್‌, ಪೂರ್ವಾನುಮತಿ ಪಡೆಯದೆ ವಿಡಿಯೋ ರೆಕಾರ್ಡಿಂಗ್‌, ಹಂಚಿಕೆ ಮಾಡದಂತೆ ವೀಕ್ಷಕರಿಗೆ ಎಚ್ಚರಿಸಿದೆ. ಅಲ್ಲದೆ, ಲೈವ್‌ ಸ್ಟ್ರೀಮಿಂಗ್‌ಗೂ ಮುನ್ನ ಸಂದೇಶ ಹಾಕಲಾರಂಭಿಸಿದೆ.

ಕರ್ನಾಟಕ ಹೈಕೋರ್ಟ್‌ 2022ರ ಜನವರಿ 1ರಿಂದ “ಕರ್ನಾಟಕ ನ್ಯಾಯಾಲಯ ಕಲಾಪಗಳ ನೇರಪ್ರಸಾರ (ಲೈವ್‌ಸ್ಟ್ರೀಮ್‌) ಮತ್ತು ರೆಕಾರ್ಡಿಂಗ್‌ ನಿಯಮಗಳು 2021” ಅನ್ನು ಜಾರಿಗೊಳಿಸಿದೆ. ಇದರನ್ವಯ ಲೈವ್‌ ಸ್ಟ್ರೀಮಿಂಗ್‌ ಹಾಗೂ ರೆಕಾರ್ಡಿಂಗ್‌ ನಿಯಮಗಳನ್ನು ಸೂಚಿಸಲಾಗಿದೆ ಎಂದು ಬಾರ್ & ಬೆಂಚ್ ವರದಿ ಮಾಡಿದೆ.

ಈ ಸಂಬಂಧದ ನೋಟಿಸ್‌ ಅನ್ನು ಪ್ರತಿಯೊಂದು ಕೋರ್ಟ್‌ ಹಾಲ್‌ಗಳ ವಿಡಿಯೋ ಕಾನ್ಫರೆನ್ಸ್‌ ಪರದೆಯ ಮೇಲೆ ಕಲಾಪ ಆರಂಭಕ್ಕೂ ಮುನ್ನ ಮತ್ತು ಮಧ್ಯಾಹ್ನ ಭೋಜನದ ವೇಳೆಯಲ್ಲಿ ಪ್ರಸಾರ ಮಾಡಲಾಗಿದೆ.

“ಅನುಮತಿ ಪಡೆದಿರುವ ವ್ಯಕ್ತಿ ಅಥವಾ ಸಂಸ್ಥೆ ಹೊರತುಪಡಿಸಿ, ಯಾವುದೇ ವ್ಯಕ್ತಿ ಅಥವಾ ಸಂಸ್ಥೆ (ಮುದ್ರಣ, ವಿದ್ಯುನ್ಮಾನ ಮತ್ತು ಸಾಮಾಜಿಕ ಜಾಲತಾಣಗಳು) ಕಲಾಪದ ಲೈವ್‌ ಸ್ಟ್ರೀಮಿಂಗ್‌ ಅಥವಾ ಹೈಕೋರ್ಟ್‌ ಯೂಟ್ಯೂಬ್‌ ಚಾನಲ್‌ನಲ್ಲಿನ ವಿಡಿಯೋಗಳನ್ನು ರೆಕಾರ್ಡ್‌ ಮಾಡುವುದಾಗಲಿ, ಪ್ರಸರಣ ಮಾಡುವುದಾಗಲಿ ಮಾಡುವಂತಿಲ್ಲ” ಎಂದು ಸಂದೇಶದಲ್ಲಿ ಹೇಳಲಾಗಿದೆ. ಈ ನಿರ್ಬಂಧವು ಎಲ್ಲಾ ಸಂದೇಶ ಅಪ್ಲಿಕೇಶನ್‌ಗಳಿಗೂ ಅನ್ವಯಿಸಲಿದೆ ಎಂದು ನ್ಯಾಯಾಲಯ ಸ್ಪಷ್ಟಪಡಿಸಿದೆ.

ಪೂರ್ವಾನುಮತಿ ಪಡೆಯದೇ ಲೈವ್‌ ಸ್ಟ್ರೀಮಿಂಗ್‌ನ ಮರು ಪ್ರಸಾರ, ವರ್ಗಾವಣೆ, ಅಪ್ಲೋಡ್ ಮಾಡುವುದು, ಪೋಸ್ಟ್‌ ಮಾಡುವುದು, ಮಾರ್ಪಾಡು ಮಾಡುವುದು ಪ್ರಸಾರ ಅಥವಾ ಮರು ಪ್ರಸಾರವನ್ನು ಮಾಡುವಂತಿಲ್ಲ ಎಂದು ನ್ಯಾಯಾಲಯ ಹೇಳಿದೆ.

ನ್ಯಾಯಾಲಯದ ಕಲಾಪವನ್ನು ರೆಕಾರ್ಡ್‌ ಮಾಡಲು ಅಥವಾ ಅದರ ನಿರೂಪಣೆಗೆ ಯಾವುದೇ ವ್ಯಕ್ತಿಗೆ ಅನುಮತಿ ನೀಡಲಾಗಿಲ್ಲ. ನ್ಯಾಯಾಲಯದ ನಿಯಮ ಉಲ್ಲಂಘಿಸಿದ ವ್ಯಕ್ತಿ ಅಥವಾ ಸಂಸ್ಥೆಯ ವಿರುದ್ಧ ಕಾನೂನಿನಡಿ ಕ್ರಮಕೈಗೊಳ್ಳಲಾಗುತ್ತದೆ. ನ್ಯಾಯಾಲಯದ ಕಲಾಪದ ರೆಕಾರ್ಡಿಂಗ್‌ ಮತ್ತು ಆರ್ಕೈವ್‌ ದತ್ತಾಂಶದ ಮೇಲೆ ನ್ಯಾಯಾಲಯಕ್ಕೆ ವಿಶೇಷ ಹಕ್ಕುಸ್ವಾಮ್ಯವಿದೆ ಎಂದು ನೋಟಿಸ್‌ನಲ್ಲಿ ಹೇಳಲಾಗಿದೆ.

ಹೈಕೋರ್ಟ್‌ ನ್ಯಾಯಮೂರ್ತಿ ವೇದವ್ಯಾಸಾಚಾರ್ ಶ್ರೀಶಾನಂದ ಅವರು ಬೆಂಗಳೂರಿನ ಗೋರಿಪಾಳ್ಯವನ್ನು ಪಾಕಿಸ್ತಾನಕ್ಕೆ ಹೋಲಿಕೆ ಮಾಡಿದ ಮತ್ತು ಮಹಿಳಾ ವಕೀಲೆಯೊಬ್ಬರಿಗೆ ಆಕ್ಷೇಪಾರ್ಹ ಹೇಳಿಕೆ ನೀಡಿದ  ವಿಡಿಯೋ ಕ್ಲಿಪ್‌ಗಳು ಎಲ್ಲೆಡೆ ವೈರಲ್ ಆದ ಬಳಿಕ, ವಿಡಿಯೋ ಬಳಕೆಗೆ ಹೈಕೋರ್ಟ್ ನಿರ್ಬಂಧ ಹೇರಿದೆ.

ಇದನ್ನೂ ಓದಿ : ಮುನಿರತ್ನ ಅಪರಾಧಗಳಿಗೆ ಆರ್ ಅಶೋಕ್ & ಕುಮಾರಸ್ವಾಮಿ ಕುಮ್ಮಕ್ಕು ಇದೆಯೆ? – ಸಚಿವ ಭೈರೆಗೌಡ ಪ್ರಶ್ನೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಡಿಶಾ | ಆಸ್ಪತ್ರೆಯಲ್ಲಿ ಬೆಂಕಿ ಅವಘಡ : 10 ಮಂದಿ ಸಾವು

ಒಡಿಶಾದ ಕಟಕ್‌ನಲ್ಲಿರುವ ಎಸ್‌ಸಿಬಿ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಯ ಟ್ರಾಮಾ ಕೇರ್ ಐಸಿಯುನಲ್ಲಿ ಸೋಮವಾರ (ಮಾರ್ಚ್ 16) ಬೆಂಕಿ ಅವಘಡ ಸಂಭವಿಸಿದ್ದು, ಕನಿಷ್ಠ 10 ರೋಗಿಗಳು ಸಾವನ್ನಪ್ಪಿದ್ದಾರೆ ಮತ್ತು ಹಲವರು ಗಾಯಗೊಂಡಿದ್ದಾರೆ ಎಂದು...

ಆಸ್ಕರ್‌ 2026 : ಮೈಕೆಲ್ ಬಿ. ಜೋರ್ಡಾನ್ ಅತ್ಯುತ್ತಮ ನಟ, ಜೆಸ್ಸಿ ಬಕ್ಲಿ ಅತ್ಯುತ್ತಮ ನಟಿ, ಒನ್ ಬ್ಯಾಟಲ್ ಆಫ್ಟರ್ ಅನದರ್‌ಗೆ ಅತ್ಯುತ್ತಮ ಚಿತ್ರ ಪ್ರಶಸ್ತಿ

ಪ್ರತಿಷ್ಠಿತ 98ನೇ ಅಕಾಡೆಮಿ ಪ್ರಶಸ್ತಿ (ಆಸ್ಕರ್ 2026) ಸಮಾರಂಭ ಲಾಸ್ ಏಂಜಲೀಸ್‌ನ ಡಾಲ್ಬಿ ಥಿಯೇಟರ್‌ನಲ್ಲಿ ಮಾರ್ಚ್ 15ರಂದು (ಭಾರತೀಯ ಕಾಲಮಾನ ಮಾರ್ಚ್ 16) ನಡೆಯಿತು. ಖ್ಯಾತ ಹಾಸ್ಯನಟ ಕೋನನ್ ಒಬ್ರೇನ್ ಅವರು ಈ ಕಾರ್ಯಕ್ರಮವನ್ನು ನಡೆಸಿಕೊಟ್ಟರು....

ಐದು ರಾಜ್ಯಗಳ ವಿಧಾನಸಭೆ ಚುನಾವಣೆ ದಿನಾಂಕ ಪ್ರಕಟ; ಬಂಗಾಳದಲ್ಲಿ ಮಾತ್ರ ಎರಡು ಹಂತದ ಮತದಾನ

ಅಸ್ಸಾಂ, ಪಶ್ಚಿಮ ಬಂಗಾಳ, ತಮಿಳುನಾಡು, ಕೇರಳ ಮತ್ತು ಪುದುಚೇರಿ ವಿಧಾನಸಭಾ ಚುನಾವಣೆಗಳ ವೇಳಾಪಟ್ಟಿಯನ್ನು ಭಾರತೀಯ ಚುನಾವಣಾ ಆಯೋಗದ (ಇಸಿಐ) ಮುಖ್ಯಸ್ಥರಾದ ಜ್ಞಾನೇಶ್ ಕುಮಾರ್ ಪ್ರಕಟಿಸಿದರು. ದೆಹಲಿಯಲ್ಲಿ ಇಂದು ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಮುಖ್ಯ...

ಫ್ಲಿಪ್‌ಕಾರ್ಟ್‌ನಿಂದ 1 ರೂ.ಗೆ ಹಾಲು ಮಾರಾಟ; ಪ್ರಧಾನಿ ಮೋದಿ ಮಧ್ಯಸ್ಥಿಕೆಗೆ ಬಮುಲ್‌ ಆಗ್ರಹ

ಫ್ಲಿಪ್‌ಕಾರ್ಟ್‌ ಸಂಸ್ಥೆಯು ಆನ್‌ಲೈನ್‌ ಮೂಲಕ 1 ರೂ.ಗೆ ಲೀಟರ್‌ ಹಾಲನ್ನು ಮಾರಾಟ ಮಾಡಿರುವುದು ಭಾರಿ ಜನಾಕ್ರೋಶಕ್ಕೆ ಕಾರಣವಾಗಿದೆ. ಈ ಬಗ್ಗೆ, ಬೆಂಗಳೂರು ನಗರ, ಗ್ರಾಮೀಣ ಮತ್ತು ರಾಮನಗರ ಜಿಲ್ಲಾ ಸಹಕಾರಿ ಹಾಲು ಉತ್ಪಾದಕರ...

“ಮಕ್ಕಳ ಹಂತಕನನ್ನು ಹುಡುಕಿ ಹತ್ಯೆ ಮಾಡುತ್ತೇವೆ” : ನೆತನ್ಯಾಹು ಸುರಕ್ಷಿತವಾಗಿದ್ದಾರೆ ಎಂಬ ಇಸ್ರೇಲ್ ಸ್ಪಷ್ಟನೆ ಬೆನ್ನಲ್ಲೆ ಐಆರ್‌ಜಿಸಿ ಹೇಳಿಕೆ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅವರನ್ನು ಹುಡುಕಿ ಹತ್ಯೆ ಮಾಡುತ್ತೇವೆ ಎಂದು ಇರಾನ್‌ನ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ಹೇಳಿರುವುದಾಗಿ ವರದಿಯಾಗಿದೆ. ನೆತನ್ಯಾಹು ಅವರ ಹತ್ಯೆಯ ವದಂತಿಗಳನ್ನು ಇಸ್ರೇಲ್ ನಿರಾಕರಿಸಿದ ಬೆನ್ನಲ್ಲೇ, ಐಆರ್‌ಜಿಸಿ ಈ...

ಮಹಾರಾಷ್ಟ್ರ| ಇಫ್ತಾರ್ ಕೂಟಕ್ಕೆ ಸೇರಿದ್ದ ಮುಸ್ಲಿಮರ ಮೇಲೆ ಹಿಂದುತ್ವವಾದಿ ಗುಂಪಿನಿಂದ ದಾಳಿ

ರಂಜಾನ್‌ ಮಾಸದ ಉಪವಾಸ ಮುರಿಯಲು ನೆರೆದಿದ್ದ ಜನರ ಮೇಲೆ ಅಪರಿಚಿತ ವ್ಯಕ್ತಿಗಳ ಗುಂಪೊಂದು ದಾಳಿ ನಡೆಸಿರುವ ಘಟನೆ ಮಹಾರಾಷ್ಟ್ರದ ಪುಣೆಯಲ್ಲಿ ನಡೆದಿದೆ. ಇಫ್ತಾರ್ ಕೂಟಕ್ಕೆ ಸಿದ್ಧತೆ ನಡೆಸುತ್ತಿದ್ದಾಗ, ಸುಮಾರು 100 ಕ್ಕೂ ಹೆಚ್ಚು...

ಆಸ್ಕರ್‌ ಅಂತಿಮ ಪಟ್ಟಿಗೆ ಆಯ್ಕೆಯಾದ ‘ದಿ ವಾಯ್ಸ್ ಆಫ್ ಹಿಂದ್ ರಜಬ್’

ಗಾಝಾದ ಆರು ವರ್ಷದ ಬಾಲಕಿ ಹಿಂದ್ ರಜಬ್‌ ಮತ್ತು ಆಕೆಯ ಸಂಬಂಧಿಕರನ್ನು ಇಸ್ರೇಲಿ ಸೈನಿಕರು ಭೀಕರವಾಗಿ ಹತ್ಯೆ ಮಾಡಿದ ಕಥೆಯನ್ನು ಹೇಳುವ 'ದಿ ವಾಯ್ಸ್ ಆಫ್ ಹಿಂದ್ ರಜಬ್' ಚಲನಚಿತ್ರವು 2026ರ ಆಸ್ಕರ್...

ಉತ್ತರ ಪ್ರದೇಶ| ದಲಿತ ಕುಟುಂಬದ ಮದುವೆ ಮನೆಯಲ್ಲಿ ಸವರ್ಣಿಯರಿಂದ ಹಲ್ಲೆ; ಬಂದೂಕಿನಿಂದ ಬೆದರಿಕೆ

ಮಾರ್ಚ್ 10 ರಂದು ಉತ್ತರ ಪ್ರದೇಶದ ಲಖಿಂಪುರ ಖೇರಿ ಜಿಲ್ಲೆಯ ಟಿಕುನಿಯಾ ಪೊಲೀಸ್ ಠಾಣೆ ಪ್ರದೇಶದಲ್ಲಿ ಜಾತಿ ಆಧಾರಿತ ಹಿಂಸಾಚಾರದ ತೀವ್ರ ಆತಂಕಕಾರಿ ಘಟನೆ ಬೆಳಕಿಗೆ ಬಂದಿದೆ. 24 ಗಂಟೆಗಳ ಒಳಗೆ ಎಫ್‌ಐಆರ್...

’70 ಲಕ್ಷ ಬಂಗಾಳಿ ಮುಸ್ಲಿಮರನ್ನು ಹೊರದಬ್ಬಲು ಸಾಧ್ಯವಿಲ್ಲ..ಅವರೇ ದೇಶ ಬಿಡುವಂತಹ ಪರಿಸ್ಥಿತಿ ಸೃಷ್ಟಿಸುತ್ತೇವೆ’: ಅಸ್ಸಾಂ ಸಿಎಂ ಹಿಮಂತ ಬಿಸ್ವಾ ಶರ್ಮಾ

ಸುಮಾರು 70 ಲಕ್ಷ 'ಬಂಗಾಳಿ ಮುಸ್ಲಿಮರ'ನ್ನು ಭಾರತದಿಂದ ಹೊರಹಾಕುವುದು 'ಮಾನವೀಯವಾಗಿ ಸಾಧ್ಯವಿಲ್ಲ'. ಹಾಗಾಗಿ, ಅವರಾಗಿಯೇ ದೇಶ ತೊರೆಯುವಂತಹ ಪರಿಸ್ಥಿತಿಯನ್ನು ನಾವು ಸೃಷ್ಟಿಸುತ್ತೇವೆ ಎಂದು ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವಾ ಶರ್ಮಾ ಹೇಳಿದ್ದಾರೆ. ಈ...

ಮೋದಿಯವರ ವಿದೇಶಾಂಗ ನೀತಿ ಸಂಪೂರ್ಣವಾಗಿ ದಿಕ್ಕು ತಪ್ಪಿದೆ, ನಗೆಪಾಟಲಿಗೆ ಈಡಾಗಿದೆ, ಅನೈತಿಕತೆಯಿಂದ ಕೂಡಿದೆ. ಇದು ಜಗಜ್ಜಾಹೀರಾಗಿದೆ – ಶ್ರೀಪಾದ್‌ ಭಟ್

ತಮ್ಮ ಸ್ಥಳೀಯ ಮತಬ್ಯಾಂಕ್ ರಾಜಕಾರಣದ ಜೊತೆಗೆ ವಿದೇಶಿ ನೀತಿಯನ್ನು ತಳುಕು ಹಾಕುವುದು. ಉದಾಹರಣೆಗೆ ಅಮೆರಿಕ-ಇಸ್ರೇಲ್ ಜಂಟಿಯಾಗಿ ನಡೆಸುತ್ತಿರುವ ಇರಾನ್ ಮೇಲಿನ ಯುದ್ಧದ ಸಮಯದಲ್ಲಿ ಮೋದಿ ನೇತೃತ್ವದ ಸರ್ಕಾರವು ತಾನು ಇರಾನ್ ಪರ ನಿಲುವು ತಾಳಿದರೆ...