Homeಕರ್ನಾಟಕಕೊರೊನ ಸಮಯದಲ್ಲಿ ಮೃತರಾದ ಪತ್ರಕರ್ತರಿಗೆ 50 ಲಕ್ಷ ಪರಿಹಾರ ನೀಡಿ: ಕರ್ನಾಟಕ ಹೈಕೋರ್ಟ್

ಕೊರೊನ ಸಮಯದಲ್ಲಿ ಮೃತರಾದ ಪತ್ರಕರ್ತರಿಗೆ 50 ಲಕ್ಷ ಪರಿಹಾರ ನೀಡಿ: ಕರ್ನಾಟಕ ಹೈಕೋರ್ಟ್

ಸಾಂಕ್ರಾಮಿಕ ರೋಗದ ಭೀತಿಯ ಸಂದರ್ಭದಲ್ಲಿ ಪತ್ರಕರ್ತರು, ಮಾಧ್ಯಮ ಪ್ರತಿನಿಧಿಗಳು ಮತ್ತು ಪತ್ರಿಕಾ ವಿತರಕರ ಸೇವೆಯನ್ನು ಕಡೆಗಣಿಸಲಾಗದು ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

- Advertisement -
- Advertisement -

ಕೊರೊನ ಸಾಂಕ್ರಾಮಿಕ ರೋಗ ಹರಡಿರುವ ಅವಧಿಯಲ್ಲಿ ಸರ್ಕಾರಿ ಮತ್ತು ಖಾಸಗಿ ಮಾಧ್ಯಮ ಸಂಸ್ಥೆಗಳ ಪತ್ರಕರ್ತರು, ಮತ್ತು ಪತ್ರಿಕಾ ವಿತರಕರು ಮೃತಪಟ್ಟರೆ ಅವರ ಕುಟುಂಬಗಳಿಗೆ 50 ಲಕ್ಷ ಪರಿಹಾರ ನೀಡಲು ಪರಿಗಣಿಸಿ ತೀರ್ಮಾನ ಕೈಗೊಳ್ಳಬೇಕು ಎಂದು ಕರ್ನಾಟಕ ಹೈಕೋರ್ಟ್ ಕೇಂದ್ರ ಮತ್ತು ರಾಜ್ಯ ಸರ್ಕಾರಕ್ಕೆ ನಿರ್ದೇಶನ ನೀಡಿದೆ.

ನ್ಯಾಯಮೂರ್ತಿ ಬಿ.ವಿ.ನಾಗರತ್ನ ಮತ್ತು ಸೂರತ್ ಗೋವಿಂದರಾಜ್ ಅವರಿದ್ದ ವಿಭಾಗೀಯ ಪೀಠ ಈ ನಿರ್ದೇಶನ ನೀಡಿದೆ. ಸಾಂಕ್ರಾಮಿಕ ರೋಗದ ಭೀತಿಯ ಸಂದರ್ಭದಲ್ಲಿ ಪತ್ರಕರ್ತರು, ಮಾಧ್ಯಮ ಪ್ರತಿನಿಧಿಗಳು ಮತ್ತು ಪತ್ರಿಕಾ ವಿತರಕರ ಸೇವೆಯನ್ನು ಕಡೆಗಣಿಸಲಾಗದು. ಇವರೂ ಕೂಡ ವೈದ್ಯರು, ನರ್ಸ್ ಗಳು, ಸರ್ಕಾರಿ ಸಮಿತಿಗಳು ಮತ್ತು ಇತರೆ ಕೋವಿಡ್ ವಿರುದ್ದ ಹೋರಾಡುತ್ತಿರುವವರಂತೆ ಅಗತ್ಯಸೇವೆಗಳ ಅಡಿಯಲ್ಲಿ ಬರುತ್ತಾರೆ ಎಂದು ನ್ಯಾಯಾಲಯ ಅಭಿಪ್ರಾಯಪಟ್ಟಿದೆ.

ವಿಶ್ವವ್ಯಾಪಿ ಭೀತಿಯನ್ನು ಮೂಡಿಸಿರುವ ಕೊರೊನಾ ಸಾಂಕ್ರಾಮಿಕ ರೋಗದ ಪರಣಾಮಗಳ ಕುರಿತು ಪತ್ರಕರ್ತರು, ಮಾಧ್ಯಮ ಪ್ರತಿನಿಧಿಗಳು ದೇಶದ ಜನರಿಗೆ ಸಮರ್ಪಕ ಮಾಹಿತಿ ನೀಡಿ ಜನರಲ್ಲಿ ಜಾಗೃತಿ ಮೂಡಿಸುತ್ತಿದ್ದಾರೆ ಎಂದು ಕೋರ್ಟ್ ಹೇಳಿದೆ ಎಂದು ಲೈವ್ ಲಾ.ಇನ್ ವರದಿ ಮಾಡಿದೆ.

ನಮ್ಮ ಪ್ರಜಾಪ್ರಭುತ್ವದಲ್ಲಿ ಮಾಧ್ಯಮಗಳ ಪ್ರಾಮುಖ್ಯತೆಯನ್ನು ಕಡೆಗಣಿಸಲಾಗದು. ಸಂವಿಧಾನದ ಆರ್ಟಿಕಲ್ 19 (1) (ಎ)ರಂತೆ ಅಭಿವ್ಯಕ್ತಿ ಸ್ವಾತಂತ್ರ್ಯ ಮತ್ತು ಪತ್ರಿಕಾ ಸ್ವಾತಂತ್ರ್ಯದ ಜೊತೆಗೆ  ಎಲೆಕ್ಟ್ರಾನಿಕ್ ಮತ್ತು ಸಂವಹನನ ಮೂಲಕ ಮಾಹಿತಿ ಹಕ್ಕನ್ನು ತಿಳಿಯುವ ಹಕ್ಕು ಇದೆ. ಹಾಗಾಗಿ ಅಭವ್ಯಕ್ತಿ ಮತ್ತು ಪತ್ರಿಕಾ ಸ್ವಾತಂತ್ರ್ಯಕ್ಕೆ ಮಹತ್ವವಿದೆ ಎಂದು ಹೇಳಿದೆ.

ಕೋವಿಡ್ ಅವಧಿಯನ್ನು ಸವಾಲಾಗಿ ಸ್ವೀಕರಿಸಿದ ಪತ್ರಕರ್ತರು ಕೊರೊನ ರೋಗದ ಪರಿಣಾಮಗಳನ್ನು ಜನರಿಗೆ ತಿಳಿಸುವ ಮೂಲಕ ಕರ್ತವ್ಯ ಮೆರೆದಿದ್ದಾರೆ ಎಂದು ನ್ಯಾಯಮೂರ್ತಿಗಳು ತಿಳಿಸಿದ್ದಾರೆ.


ಓದಿ: ಕ್ಯಾಮರ ಎದುರೆ ಇಸ್ಲಾಮೋಫೋಬಿಯ ಹರಡಿದ ಪ್ರಾಂಶುಪಾಲೆ: ತೀವ್ರ ವಿರೋಧ


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...