Homeಕರ್ನಾಟಕಮದುವೆಯಾದ ಮಾತ್ರಕ್ಕೆ ಪತ್ನಿಯ ಮೇಲೆ ಎಸಗಿದ ಅತ್ಯಾಚಾರಕ್ಕೆ ಗಂಡನಿಗೆ ವಿನಾಯಿತಿಯಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಮದುವೆಯಾದ ಮಾತ್ರಕ್ಕೆ ಪತ್ನಿಯ ಮೇಲೆ ಎಸಗಿದ ಅತ್ಯಾಚಾರಕ್ಕೆ ಗಂಡನಿಗೆ ವಿನಾಯಿತಿಯಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

- Advertisement -
- Advertisement -

ಪತ್ನಿಯ ಮೇಲೆ ಅತ್ಯಾಚಾರವೆಸಗುವ ಪತಿಗೆ ‘ಅತ್ಯಾಚಾರ’ ಕಾನೂನನ್ನು ಅನ್ವಯಿಸಬಹುದು ಎಂದು ರಾಜ್ಯ ಹೈಕೋರ್ಟ್‌ ಬುಧವಾರದಂದು ಹೇಳಿದೆ. ಸಂತ್ರಸ್ತೆಯು ಗಂಡನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಆರೋಪಗಳನ್ನು ರೂಪಿಸುವುದನ್ನು ನ್ಯಾಯಾಲಯ ಎತ್ತಿಹಿಡಿದಿದೆ.

“ಮದುವೆಯಾದ ಮಾತ್ರಕ್ಕೆ, ಯಾವುದೇ ವಿಶೇಷ ಸವಲತ್ತು ಪುರುಷರಿಗೆ ನೀಡಲಾಗುವುದಿಲ್ಲ. ಮದುವೆಯಾದಕ್ಕೆ ಮಾತ್ರಕ್ಕೆ ಕ್ರೂರ ಮೃಗದಂತೆ ವರ್ತಿಸಲು ಪರವಾನಗಿ ನೀಡುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ ಎಂದು ಲೈವ್‌ಲಾ ವರದಿ ಮಾಡಿದೆ. “ಅತ್ಯಾಚಾರ ಮಾಡಿದ್ದಕ್ಕೆ ಪುರುಷನೊಬ್ಬನಿಗೆ ಕಾನೂನು ಶಿಕ್ಷೆ ನೀಡಿದ್ದರೆ, ಆ ಪುರುಷ ಗಂಡನಾಗಿದ್ದರೂ ಸಹ ಶಿಕ್ಷೆಯಾಗಬೇಕು” ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ವೈವಾಹಿಕ ಅತ್ಯಾಚಾರ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯದ ಅತಿದೊಡ್ಡ ರೂಪ: ದೆಹಲಿ ಹೈಕೋರ್ಟ್‌ಗೆ ಅರ್ಜಿದಾರರು

ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ವೈವಾಹಿಕ ಅತ್ಯಾಚಾರ ಅಪವಾದವನ್ನು ಆಧರಿಸಿದದ ಹಳೆಯ ಸಿದ್ಧಾಂತವನ್ನು ಟೀಕಿಸಿದರು. “ಗಂಡಂದಿರು ತಮ್ಮ ಹೆಂಡತಿಯರ ದೇಹ, ಮನಸ್ಸು ಮತ್ತು ಆತ್ಮದ ಅಧಿಪತಿಗಳು ಎಂಬ ಪ್ರಾಚೀನ ಚಿಂತನೆ ಮತ್ತು ಸಂಪ್ರದಾಯವನ್ನು ಅಳಿಸಿ ಹಾಕಬೇಕು. ಈ ಪುರಾತನ, ಪ್ರತಿಗಾಮಿ ಮತ್ತು ಪೂರ್ವಗ್ರಹದ ಕಲ್ಪನೆಯಿಂದಾಗಿ ಈ ರೀತಿಯ ಪ್ರಕರಣಗಳು ದೇಶದಲ್ಲಿ ನಾಯಿಕೊಡೆಗಳಂತೆ ಹುಟ್ಟಿಕೊಳ್ಳುತ್ತಿವೆ” ಎಂದು ಆದೇಶವು ಹೇಳಿದೆ.

ಪ್ರಸ್ತುತ ಪ್ರಕರಣವು 2006 ರಲ್ಲಿ ವಿವಾಹವಾದ ದಂಪತಿಗಳಿಗೆ ಸಂಬಂಧಿಸಿದೆ. ಈ ಪ್ರಕರಣದಲ್ಲಿ, ಮದುವೆಯಾಗಿ ಕೆಲವು ವರ್ಷಗಳ ನಂತರ ಅವರ ಸಂಬಂಧವು ಹದಗೆಟ್ಟಿತ್ತು. ಮಹಿಳೆಯು ತನ್ನ ಪತಿ ಕೌಟುಂಬಿಕ ದೌರ್ಜನ್ಯ ಹಾಗೂ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ 2017ರಲ್ಲಿ ದೂರು ದಾಖಲಿಸಿದ್ದರು. ಸೆಕ್ಷನ್ 506, 498A, 323, ಮತ್ತು 377 ಮತ್ತು POCSO ಕಾಯಿದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮೇಲಿನ ಸೆಕ್ಷನ್‌ಗಳ ಜೊತೆಗೆ, ಸೆಕ್ಷನ್ 376 (ಅತ್ಯಾಚಾರ) ಮತ್ತು POCSO ಕಾಯಿದೆಯ ಸಂಬಂಧಿತ ಸೆಕ್ಷನ್‌ಗಳನ್ನು ಕೂಡಾ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಬಳಸಲಾಗಿದೆ.

ಶಾಸಕಾಂಗವು ಈ ಸಮಸ್ಯೆಯನ್ನು ಪರಿಶೀಲಿಸಿ, ವೈವಾಹಿಕ ಅತ್ಯಾಚಾರಕ್ಕೆ ಸಂಬಂಧಿಸಿ ಅಸ್ತಿತ್ವದಲ್ಲಿರುವ ವಿನಾಯಿತಿಯನ್ನು ಬದಲಾಯಿಸುವ ಬಗ್ಗೆ ಪರಿಗಣಿಸಬೇಕು ಎಂದು ನ್ಯಾಯಾಲಯ ಹೇಳಿದೆ. “ವೈವಾಹಿಕ ಅತ್ಯಾಚಾರವನ್ನು ಅಪರಾಧವೆಂದು ಗುರುತಿಸಬೇಕೇ ಅಥವಾ ಶಾಸಕಾಂಗವು ವಿನಾಯಿತಿಯನ್ನು ತೆಗೆದುಕೊಳ್ಳಬೇಕೇ ಎಂಬುದರ ಕುರಿತು ಈ ನ್ಯಾಯಾಲಯವು ಉಚ್ಚರಿಸುತ್ತಿಲ್ಲ” ಎಂದು ಹೈಕೋರ್ಟ್ ಹೇಳಿದೆ ಎಂದು ಲೈವ್ ಲಾ ಹೇಳಿದೆ.

ಇದನ್ನೂ ಓದಿ: ವೈವಾಹಿಕ ಅತ್ಯಾಚಾರ ಅಪರಾಧವಲ್ಲ ತೀರ್ಪು; ಛತ್ತೀಸಗಡ ಹೈಕೋರ್ಟ್ ನ್ಯಾಯಾಂಗ ಸಮಾನತೆಯನ್ನು ಅರ್ಥಮಾಡಿಕೊಂಡಿದ್ದು ಇಷ್ಟೆಯೇ?

ಆದರೂ, ತನ್ನ ಹೆಂಡತಿಯ ಮೇಲೆ ಹಲ್ಲೆ ಅಥವಾ ಅತ್ಯಾಚಾರ ಎಸಗುವುದರಿಂದ ಪತಿಗೆ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ಹೇಳಿದೆ.

“ಒಬ್ಬ ಮಹಿಳೆಗೆ ಮಹಿಳೆಯಾಗಿ ನಿರ್ದಿಷ್ಟ ಸ್ಥಾನಮಾನವನ್ನು ನೀಡಲಾಗುತ್ತದೆ; ಹೆಂಡತಿಯಾಗಿರುವ ಮಹಿಳೆಗೆ ವಿಭಿನ್ನ ಸ್ಥಾನಮಾನವನ್ನು ನೀಡಲಾಗುತ್ತದೆ. ಅಂತೆಯೇ, ಒಬ್ಬ ಪುರುಷ, ಅವನು ಪುರುಷನಾಗಿರುವುದರಿಂದ ಅವನ ಕೃತ್ಯಗಳಿಗೆ ಶಿಕ್ಷೆಯಾಗುತ್ತದೆ; ಒಬ್ಬ ಪುರುಷನು ಗಂಡನಾಗಿರುವುದರಿಂದ ಅವನ ಕೃತ್ಯಗಳಿಗೆ ವಿನಾಯಿತಿ ನೀಡಲಾಗುತ್ತದೆ. ಈ ಅಸಮಾನತೆಯೇ ಸಮಾನತೆಯ ಹಕ್ಕಿನ ಬಗ್ಗೆ ಇರುವ ಸಂವಿಧಾನದ ಆತ್ಮವನ್ನು ನಾಶಪಡಿಸುತ್ತದೆ” ಎಂದು ಗಂಡಂದಿರಿಗೆ ಇರುವ ವಿನಾಯಿತಿಯ ಬಗ್ಗೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.

ವೈವಾಹಿಕ ಅತ್ಯಾಚಾರವನ್ನು ಇನ್ನೂ ಅಪರಾಧೀಕರಿಸದ ವಿಶ್ವದ ಕೆಲವೇ ದೇಶಗಳಲ್ಲಿ ಭಾರತವೂ ಒಂದಾಗಿದೆ. ಜನವರಿಯಲ್ಲಿ ದೆಹಲಿ ಹೈಕೋರ್ಟ್‌ನಲ್ಲಿ ಪೀಠವು ಭಾರತೀಯ ದಂಡ ಸಂಹಿತೆಯಲ್ಲಿನ ವೈವಾಹಿಕ ಅತ್ಯಾಚಾರದ ವಿನಾಯಿತಿಗಳನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆ ನಡೆಸುತ್ತಿದ್ದಾಗ ಈ ಚರ್ಚೆ ಮುನ್ನಲೆಗೆ ಬಂದಿತ್ತು.

ಭಾರತದಲ್ಲಿ ಪತ್ನಿಯ ಮೇಲೆ ದೈಹಿಕ ಹಿಂಸೆ ಅಥವಾ ಪತ್ನಿಯನ್ನು ಕೊಲ್ಲುವುದು ಅಪರಾಧವೆಂದು ಪರಿಗಣಿಸಲಾಗಿದೆಯೆ ಹೊರತು ಪತ್ನಿಯ ಮೇಲೆ ಪತಿ ನಡೆಸುವ ಅತ್ಯಾಚಾರವನ್ನಲ್ಲ.

ಇದನ್ನೂ ಓದಿ: ಹಾವು ಕಚ್ಚಿಸಿ ಪತ್ನಿ ಕೊಲೆ: ದೇಶದ ಮೊದಲ ಪ್ರಕರಣ; ಅಪರಾಧಿಗೆ 2 ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಜ್ಞಾನವಾಪಿ, ಮಥುರಾ, ಸಂಭಾಲ್ ದೇವಾಲಯ-ಮಸೀದಿಗಳ ವಿವಾದ : ಸುಪ್ರೀಂ ಕೋರ್ಟ್‌ನ ಮಧ್ಯಸ್ಥಿಕೆ ಪ್ರಸ್ತಾಪ ತಿರಸ್ಕರಿಸಿದ ಹಿಂದೂ-ಮುಸ್ಲಿಂ ಪಕ್ಷಗಳು

ಧಾರ್ಮಿಕ ಸ್ಥಳಗಳ ವಿವಾದಗಳಿಗೆ ಸೌಹಾರ್ದಯುತ ಪರಿಹಾರವನ್ನು ಕಂಡುಕೊಳ್ಳುವ ನಿಟ್ಟಿನಲ್ಲಿ ಸುಪ್ರೀಂ ಕೋರ್ಟ್ ಮಹತ್ವದ ಹೆಜ್ಜೆಯನ್ನಿಟ್ಟಿದೆ. ವಾರಣಾಸಿಯ ಜ್ಞಾನವಾಪಿ ಮಸೀದಿ ವಿವಾದ, ಮಥುರಾದ ಕೃಷ್ಣ ಜನ್ಮಭೂಮಿ-ಶಾಹಿ ಇದ್ಗಾ ವಿವಾದ ಮತ್ತು ಸಂಭಾಲ್ ಜಮಾ ಮಸೀದಿ...

ಬಿಡದಿ ಟೌನ್‌ಶಿಪ್ ಸರ್ವೆಗೆ ರೈತರ ತೀವ್ರ ವಿರೋಧ: ಅಧಿಕಾರಿಗಳಿಗೆ ಪೊರಕೆ ಏಟು, ಕಾರುಗಳು ಜಖಂ

ರಾಮನಗರ: ಬಿಡದಿ ಉಪನಗರ (ಟೌನ್‌ಶಿಪ್) ಯೋಜನೆಯನ್ನು ವಿರೋಧಿಸಿ ಸ್ಥಳೀಯ ರೈತರು ನಡೆಸುತ್ತಿರುವ ಹೋರಾಟ ದಿನದಿಂದ ದಿನಕ್ಕೆ ತೀವ್ರ ಸ್ವರೂಪ ಪಡೆದುಕೊಳ್ಳುತ್ತಿದ್ದು, ಸೋಮವಾರ (ಜುಲೈ 13) ಬೆಂಗಳೂರು ದಕ್ಷಿಣ ಜಿಲ್ಲೆಯ ರಾಮನಗರ ತಾಲೂಕಿನ ಮಂಡಲಹಳ್ಳಿ...

ಮನೆಕೆಲಸದಾಕೆ ಮೇಲಿನ ದೌರ್ಜನ್ಯ ಆರೋಪ ಪ್ರಕರಣ : ಜೆಡಿಎಸ್ ಶಾಸಕ ಹೆಚ್​​​.ಡಿ. ರೇವಣ್ಣಗೆ ಸುಪ್ರೀಂ ಕೋರ್ಟ್​ ನೋಟಿಸ್​

ಮಹಿಳೆಯ ಘನತೆಗೆ ಧಕ್ಕೆ ಹಾಗೂ ಲೈಂಗಿಕ ಕಿರುಕುಳ ಆರೋಪಗಳಿಗೆ ಸಂಬಂಧಿಸಿದ ಪ್ರಕರಣದಲ್ಲಿ ಕರ್ನಾಟಕ ಹೈಕೋರ್ಟ್‌ ನೀಡಿದ್ದ ಆದೇಶ ಪ್ರಶ್ನಿಸಿ ರಾಜ್ಯ ಸರ್ಕಾರ ಸಲ್ಲಿಸಿರುವ ಮೇಲ್ಮನವಿಗೆ ಸಂಬಂಧಿಸಿದಂತೆ, ಸುಪ್ರೀಂ ಕೋರ್ಟ್‌ ಸೋಮವಾರ (ಜು.13) ಜೆಡಿಎಸ್‌...

ದಲಿತ ಯುವಕರಿಗೆ ವಿದ್ಯುತ್ ಶಾಕ್‌ ಶಿಕ್ಷೆ: ಕಳ್ಳತನ ಆರೋಪದ ಮೇಲೆ ಇಬ್ಬರಿಗೆ ಚಿತ್ರಹಿಂಸೆ

ದಲಿತ ಯುವಕರ ಮೇಲೆ ಮಧ್ಯಪ್ರದೇಶದಲ್ಲಿ ನಡೆದಿರುವ ಅಮಾನವೀಯ ಕೃತ್ಯವೊಂದರ ವಿಡಿಯೋ ಇದೀಗ ನಾಗರಿಕ ಸಮಾಜವನ್ನೇ ಆಘಾತಕ್ಕೀಡು ಮಾಡಿದೆ. ನೀರಿನ ಪಂಪ್ ಮೋಟಾರ್ ಕದ್ದಿದ್ದಾರೆ ಎಂಬ ಶಂಕೆಯ ಮೇಲೆ ಇಬ್ಬರು ದಲಿತ ಯುವಕರನ್ನು ಕಂಬಕ್ಕೆ...

ರಾಮಮಂದಿರ ಹಗರಣ: ಕೇಂದ್ರ ಸರ್ಕಾರ, ಟ್ರಸ್ಟ್, ಉತ್ತರ ಪ್ರದೇಶ ಸರ್ಕಾರಕ್ಕೆ ‘ಸುಪ್ರೀಂ’ ನೋಟಿಸ್ 

ನವದೆಹಲಿ: ವಿಶ್ವಪ್ರಸಿದ್ಧ ಅಯೋಧ್ಯೆಯ ಶ್ರೀ ರಾಮಮಂದಿರಕ್ಕೆ ಸಾರ್ವಜನಿಕ ಭಕ್ತಾದಿಗಳಿಂದ ಹರಿದುಬಂದಿರುವ ಕೋಟ್ಯಂತರ ರೂಪಾಯಿ ದೇಣಿಗೆ ನಿಧಿಯ ಕಳ್ಳತನ, ದುರುಪಯೋಗ ಮತ್ತು ಆಡಳಿತಾತ್ಮಕ ಅಕ್ರಮಗಳ ಆರೋಪ ಇದೀಗ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿದೆ. ಈ...

ಜಮ್ಮು-ಕಾಶ್ಮೀರ: ಪ್ರತ್ಯೇಕತಾವಾದಿಗಳು, ಉಗ್ರಗಾಮಿಗಳನ್ನು ವೈಭವೀಕರಿಸಿದ ಆರೋಪ: ಮೂವರು ಪ್ರಕಾಶಕರ ಬಂಧನ

ಜಮ್ಮು/ಶ್ರೀನಗರ: ಜಮ್ಮು ಮತ್ತು ಕಾಶ್ಮೀರದಲ್ಲಿ ಪ್ರತ್ಯೇಕತಾವಾದಿ ಹಾಗೂ ಭಯೋತ್ಪಾದಕ ನಾಯಕರನ್ನು ವೈಭವೀಕರಿಸುವ ಪುಸ್ತಕಗಳನ್ನು ಪ್ರಕಟಿಸಿ, ವಿತರಿಸಿದ ಗಂಭೀರ ಆರೋಪದ ಮೇಲೆ ಪ್ರತಿ-ಗುಪ್ತಚರ ವಿಭಾಗದ (ಸಿಐಜೆಕೆ) ಪೊಲೀಸರು ಭಾನುವಾರ ಇಬ್ಬರು ಪ್ರಮುಖ ಪ್ರಕಾಶನ ಸಂಸ್ಥೆಗಳಿಗೆ...

ಕರ್ನಾಟಕ ಎಸ್‍ಐಆರ್: ಮತದಾರರ ಸೌಲಭ್ಯ ಕೇಂದ್ರಗಳ ಕೊರತೆ, ಮತದಾರರ ಪಟ್ಟಿ ಪರಿಷ್ಕರಣೆ ಕಾರ್ಯಕ್ಕೆ ಅಡ್ಡಿ: ವರದಿ

ಬೆಂಗಳೂರು: ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಆರಂಭವಾಗಿ ಸುಮಾರು ಎರಡು ವಾರಗಳು ಕಳೆಯುತ್ತಾ ಬಂದಿದ್ದರೂ, ಚುನಾವಣಾ ಆಯೋಗವು ಸಾರ್ವಜನಿಕರ ಅನುಕೂಲಕ್ಕಾಗಿ ರಾಜ್ಯಾದ್ಯಂತ ಅಗತ್ಯವಿರುವಷ್ಟು ಮತದಾರರ ಸೌಲಭ್ಯ ಕೇಂದ್ರಗಳನ್ನು...

27 ಮಂದಿಯನ್ನು ‘ವಿದೇಶಿಯರು’ ಎಂದಿದ್ದ ಅಸ್ಸಾಂ ನ್ಯಾಯಮಂಡಳಿಗಳ ಆದೇಶ ರದ್ದುಗೊಳಿಸಿದ ಸುಪ್ರೀಂ ಕೋರ್ಟ್

ಒಬ್ಬ ವ್ಯಕ್ತಿಯ ಪೌರತ್ವ ಮತ್ತು ವಿದೇಶಿಯರ ಸ್ಥಾನಮಾನವನ್ನು ನಿರ್ಧರಿಸುವಾಗ ಕೇವಲ ಯಾಂತ್ರಿಕವಾಗಿ ತೀರ್ಪು ನೀಡಲಾಗದು, ಬದಲಿಗೆ ಅತ್ಯಂತ ನ್ಯಾಯಯುತ, ಕಾನೂನುಬದ್ಧ ಹಾಗೂ ಸಮಂಜಸವಾದ ಪ್ರಕ್ರಿಯೆಯನ್ನು ಕಡ್ಡಾಯವಾಗಿ ಪಾಲಿಸಲೇಬೇಕು ಎಂದು ಸುಪ್ರೀಂ ಕೋರ್ಟ್ ಸೋಮವಾರ...

ಶಿಕ್ಷಕ ‘ಖಾನ್ ಸರ್‌’ಗೆ ಪಟ್ನಾ ಕೋರ್ಟ್‌ನಲ್ಲಿ ಜಯ: ಕೋಚಿಂಗ್ ಸೆಂಟರ್ ದಾಳಿ ಪ್ರಕರಣದಲ್ಲಿ ಮುಂಗಡ ಜಾಮೀನು ಮಂಜೂರು

ಬಿಹಾರದ ಖ್ಯಾತ ಶಿಕ್ಷಕ ಫೈಸಲ್ ಖಾನ್ (ಜನಪ್ರಿಯವಾಗಿ ಖಾನ್ ಸರ್ ಎಂದು ಕರೆಯಲ್ಪಡುವ) ಅವರಿಗೆ ಪಟ್ನಾ ನ್ಯಾಯಾಲಯವು ಸೋಮವಾರ ಮುಂಗಡ ಜಾಮೀನು ಮಂಜೂರು ಮಾಡಿದೆ. ಈ ತಿಂಗಳ ಆರಂಭದಲ್ಲಿ ಅವರ ಕೋಚಿಂಗ್ ಇನ್ಸ್ಟಿಟ್ಯೂಟ್...

ಗುಜರಾತ್‌| ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಚಾಲಕನನ್ನು ಬೆದರಿಸಿದ ನಕಲಿ ಗೋರಕ್ಷಕರು

ಗುಜರಾತ್‌ನ ವಲ್ಸಾದ್ ಜಿಲ್ಲೆಯಲ್ಲಿ ಸ್ವಘೋಷಿತ ಗೋರಕ್ಷಕರ ಗುಂಪೊಂದು ದನಗಳನ್ನು ಸಾಗಿಸುತ್ತಿದ್ದ ಟ್ರಕ್ ಅನ್ನು ಸುಮಾರು 100 ಕಿಲೋಮೀಟರ್‌ಗಳವರೆಗೆ ಬೆನ್ನಟ್ಟಿ, ವಾಹನವನ್ನು ತಡೆದು ಗುಂಪು ಮುಸ್ಲಿಂ ಚಾಲಕನನ್ನು ನಿಂದಿಸಿ ಬೆದರಿಸಿದ್ದಾರೆ. 'ಕ್ಲಾರಿಯನ್ ಇಂಡಿಯಾ' ವರದಿ ಪ್ರಕಾರ,...