Homeಕರ್ನಾಟಕಮದುವೆಯಾದ ಮಾತ್ರಕ್ಕೆ ಪತ್ನಿಯ ಮೇಲೆ ಎಸಗಿದ ಅತ್ಯಾಚಾರಕ್ಕೆ ಗಂಡನಿಗೆ ವಿನಾಯಿತಿಯಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಮದುವೆಯಾದ ಮಾತ್ರಕ್ಕೆ ಪತ್ನಿಯ ಮೇಲೆ ಎಸಗಿದ ಅತ್ಯಾಚಾರಕ್ಕೆ ಗಂಡನಿಗೆ ವಿನಾಯಿತಿಯಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

- Advertisement -
- Advertisement -

ಪತ್ನಿಯ ಮೇಲೆ ಅತ್ಯಾಚಾರವೆಸಗುವ ಪತಿಗೆ ‘ಅತ್ಯಾಚಾರ’ ಕಾನೂನನ್ನು ಅನ್ವಯಿಸಬಹುದು ಎಂದು ರಾಜ್ಯ ಹೈಕೋರ್ಟ್‌ ಬುಧವಾರದಂದು ಹೇಳಿದೆ. ಸಂತ್ರಸ್ತೆಯು ಗಂಡನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಆರೋಪಗಳನ್ನು ರೂಪಿಸುವುದನ್ನು ನ್ಯಾಯಾಲಯ ಎತ್ತಿಹಿಡಿದಿದೆ.

“ಮದುವೆಯಾದ ಮಾತ್ರಕ್ಕೆ, ಯಾವುದೇ ವಿಶೇಷ ಸವಲತ್ತು ಪುರುಷರಿಗೆ ನೀಡಲಾಗುವುದಿಲ್ಲ. ಮದುವೆಯಾದಕ್ಕೆ ಮಾತ್ರಕ್ಕೆ ಕ್ರೂರ ಮೃಗದಂತೆ ವರ್ತಿಸಲು ಪರವಾನಗಿ ನೀಡುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ ಎಂದು ಲೈವ್‌ಲಾ ವರದಿ ಮಾಡಿದೆ. “ಅತ್ಯಾಚಾರ ಮಾಡಿದ್ದಕ್ಕೆ ಪುರುಷನೊಬ್ಬನಿಗೆ ಕಾನೂನು ಶಿಕ್ಷೆ ನೀಡಿದ್ದರೆ, ಆ ಪುರುಷ ಗಂಡನಾಗಿದ್ದರೂ ಸಹ ಶಿಕ್ಷೆಯಾಗಬೇಕು” ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ವೈವಾಹಿಕ ಅತ್ಯಾಚಾರ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯದ ಅತಿದೊಡ್ಡ ರೂಪ: ದೆಹಲಿ ಹೈಕೋರ್ಟ್‌ಗೆ ಅರ್ಜಿದಾರರು

ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ವೈವಾಹಿಕ ಅತ್ಯಾಚಾರ ಅಪವಾದವನ್ನು ಆಧರಿಸಿದದ ಹಳೆಯ ಸಿದ್ಧಾಂತವನ್ನು ಟೀಕಿಸಿದರು. “ಗಂಡಂದಿರು ತಮ್ಮ ಹೆಂಡತಿಯರ ದೇಹ, ಮನಸ್ಸು ಮತ್ತು ಆತ್ಮದ ಅಧಿಪತಿಗಳು ಎಂಬ ಪ್ರಾಚೀನ ಚಿಂತನೆ ಮತ್ತು ಸಂಪ್ರದಾಯವನ್ನು ಅಳಿಸಿ ಹಾಕಬೇಕು. ಈ ಪುರಾತನ, ಪ್ರತಿಗಾಮಿ ಮತ್ತು ಪೂರ್ವಗ್ರಹದ ಕಲ್ಪನೆಯಿಂದಾಗಿ ಈ ರೀತಿಯ ಪ್ರಕರಣಗಳು ದೇಶದಲ್ಲಿ ನಾಯಿಕೊಡೆಗಳಂತೆ ಹುಟ್ಟಿಕೊಳ್ಳುತ್ತಿವೆ” ಎಂದು ಆದೇಶವು ಹೇಳಿದೆ.

ಪ್ರಸ್ತುತ ಪ್ರಕರಣವು 2006 ರಲ್ಲಿ ವಿವಾಹವಾದ ದಂಪತಿಗಳಿಗೆ ಸಂಬಂಧಿಸಿದೆ. ಈ ಪ್ರಕರಣದಲ್ಲಿ, ಮದುವೆಯಾಗಿ ಕೆಲವು ವರ್ಷಗಳ ನಂತರ ಅವರ ಸಂಬಂಧವು ಹದಗೆಟ್ಟಿತ್ತು. ಮಹಿಳೆಯು ತನ್ನ ಪತಿ ಕೌಟುಂಬಿಕ ದೌರ್ಜನ್ಯ ಹಾಗೂ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ 2017ರಲ್ಲಿ ದೂರು ದಾಖಲಿಸಿದ್ದರು. ಸೆಕ್ಷನ್ 506, 498A, 323, ಮತ್ತು 377 ಮತ್ತು POCSO ಕಾಯಿದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮೇಲಿನ ಸೆಕ್ಷನ್‌ಗಳ ಜೊತೆಗೆ, ಸೆಕ್ಷನ್ 376 (ಅತ್ಯಾಚಾರ) ಮತ್ತು POCSO ಕಾಯಿದೆಯ ಸಂಬಂಧಿತ ಸೆಕ್ಷನ್‌ಗಳನ್ನು ಕೂಡಾ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಬಳಸಲಾಗಿದೆ.

ಶಾಸಕಾಂಗವು ಈ ಸಮಸ್ಯೆಯನ್ನು ಪರಿಶೀಲಿಸಿ, ವೈವಾಹಿಕ ಅತ್ಯಾಚಾರಕ್ಕೆ ಸಂಬಂಧಿಸಿ ಅಸ್ತಿತ್ವದಲ್ಲಿರುವ ವಿನಾಯಿತಿಯನ್ನು ಬದಲಾಯಿಸುವ ಬಗ್ಗೆ ಪರಿಗಣಿಸಬೇಕು ಎಂದು ನ್ಯಾಯಾಲಯ ಹೇಳಿದೆ. “ವೈವಾಹಿಕ ಅತ್ಯಾಚಾರವನ್ನು ಅಪರಾಧವೆಂದು ಗುರುತಿಸಬೇಕೇ ಅಥವಾ ಶಾಸಕಾಂಗವು ವಿನಾಯಿತಿಯನ್ನು ತೆಗೆದುಕೊಳ್ಳಬೇಕೇ ಎಂಬುದರ ಕುರಿತು ಈ ನ್ಯಾಯಾಲಯವು ಉಚ್ಚರಿಸುತ್ತಿಲ್ಲ” ಎಂದು ಹೈಕೋರ್ಟ್ ಹೇಳಿದೆ ಎಂದು ಲೈವ್ ಲಾ ಹೇಳಿದೆ.

ಇದನ್ನೂ ಓದಿ: ವೈವಾಹಿಕ ಅತ್ಯಾಚಾರ ಅಪರಾಧವಲ್ಲ ತೀರ್ಪು; ಛತ್ತೀಸಗಡ ಹೈಕೋರ್ಟ್ ನ್ಯಾಯಾಂಗ ಸಮಾನತೆಯನ್ನು ಅರ್ಥಮಾಡಿಕೊಂಡಿದ್ದು ಇಷ್ಟೆಯೇ?

ಆದರೂ, ತನ್ನ ಹೆಂಡತಿಯ ಮೇಲೆ ಹಲ್ಲೆ ಅಥವಾ ಅತ್ಯಾಚಾರ ಎಸಗುವುದರಿಂದ ಪತಿಗೆ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ಹೇಳಿದೆ.

“ಒಬ್ಬ ಮಹಿಳೆಗೆ ಮಹಿಳೆಯಾಗಿ ನಿರ್ದಿಷ್ಟ ಸ್ಥಾನಮಾನವನ್ನು ನೀಡಲಾಗುತ್ತದೆ; ಹೆಂಡತಿಯಾಗಿರುವ ಮಹಿಳೆಗೆ ವಿಭಿನ್ನ ಸ್ಥಾನಮಾನವನ್ನು ನೀಡಲಾಗುತ್ತದೆ. ಅಂತೆಯೇ, ಒಬ್ಬ ಪುರುಷ, ಅವನು ಪುರುಷನಾಗಿರುವುದರಿಂದ ಅವನ ಕೃತ್ಯಗಳಿಗೆ ಶಿಕ್ಷೆಯಾಗುತ್ತದೆ; ಒಬ್ಬ ಪುರುಷನು ಗಂಡನಾಗಿರುವುದರಿಂದ ಅವನ ಕೃತ್ಯಗಳಿಗೆ ವಿನಾಯಿತಿ ನೀಡಲಾಗುತ್ತದೆ. ಈ ಅಸಮಾನತೆಯೇ ಸಮಾನತೆಯ ಹಕ್ಕಿನ ಬಗ್ಗೆ ಇರುವ ಸಂವಿಧಾನದ ಆತ್ಮವನ್ನು ನಾಶಪಡಿಸುತ್ತದೆ” ಎಂದು ಗಂಡಂದಿರಿಗೆ ಇರುವ ವಿನಾಯಿತಿಯ ಬಗ್ಗೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.

ವೈವಾಹಿಕ ಅತ್ಯಾಚಾರವನ್ನು ಇನ್ನೂ ಅಪರಾಧೀಕರಿಸದ ವಿಶ್ವದ ಕೆಲವೇ ದೇಶಗಳಲ್ಲಿ ಭಾರತವೂ ಒಂದಾಗಿದೆ. ಜನವರಿಯಲ್ಲಿ ದೆಹಲಿ ಹೈಕೋರ್ಟ್‌ನಲ್ಲಿ ಪೀಠವು ಭಾರತೀಯ ದಂಡ ಸಂಹಿತೆಯಲ್ಲಿನ ವೈವಾಹಿಕ ಅತ್ಯಾಚಾರದ ವಿನಾಯಿತಿಗಳನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆ ನಡೆಸುತ್ತಿದ್ದಾಗ ಈ ಚರ್ಚೆ ಮುನ್ನಲೆಗೆ ಬಂದಿತ್ತು.

ಭಾರತದಲ್ಲಿ ಪತ್ನಿಯ ಮೇಲೆ ದೈಹಿಕ ಹಿಂಸೆ ಅಥವಾ ಪತ್ನಿಯನ್ನು ಕೊಲ್ಲುವುದು ಅಪರಾಧವೆಂದು ಪರಿಗಣಿಸಲಾಗಿದೆಯೆ ಹೊರತು ಪತ್ನಿಯ ಮೇಲೆ ಪತಿ ನಡೆಸುವ ಅತ್ಯಾಚಾರವನ್ನಲ್ಲ.

ಇದನ್ನೂ ಓದಿ: ಹಾವು ಕಚ್ಚಿಸಿ ಪತ್ನಿ ಕೊಲೆ: ದೇಶದ ಮೊದಲ ಪ್ರಕರಣ; ಅಪರಾಧಿಗೆ 2 ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉಪಚುನಾವಣೆ : ಬಿಹಾರದ ಬಂಕಿಪುರದಲ್ಲಿ ಪ್ರಶಾಂತ್ ಕಿಶೋರ್‌ಗೆ ಐತಿಹಾಸಿಕ ಗೆಲುವು; ಇನ್ನೆರಡು ಕ್ಷೇತ್ರಗಳು ಕಾಂಗ್ರೆಸ್-ಬಿಜೆಪಿ ಪಾಲು

ಬಿಹಾರದ ಬಂಕಿಪುರ, ಗುಜರಾತ್‌ನ ಮಂಜಲ್‌ಪುರ ಮತ್ತು ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರಗಳಿಗೆ ಜುಲೈ 30ರಂದು ನಡೆದ ಉಪಚುನಾವಣೆಯ ಫಲಿತಾಂಶ ಸೋಮವಾರ (ಆ.3) ಹೊರಬಿದ್ದಿದ್ದಿದೆ. ಬಿಜೆಪಿಯ ಭದ್ರಕೋಟೆ ಎನಿಸಿಕೊಂಡಿದ್ದ, ಕಳೆದ 31 ವರ್ಷಗಳಿಂದ ಬಿಜೆಪಿಯೇ...

‘ಪಂಕ್ಚರ್-ತಲಾ ಬನಾನೆ ವಾಲೆಗಳೇ ಹೆಚ್ಚು’: ನೀಟ್ ಅಕ್ರಮಗಳ ವಿರುದ್ಧ ಪ್ರತಿಭಟಿಸಿದವರ ವಿರುದ್ಧ ನಾಲಿಗೆ ಹರಿಬಿಟ್ಟ ಬಿಜೆಪಿ ನಾಯಕ ರಮೇಶ್ ಬಿಧು

ದೆಹಲಿಯ ಜಂತರ್ ಮಂತರ್‌ನಲ್ಲಿ ‘ನೀಟ್’ (NEET) ಪರೀಕ್ಷೆಯ ಅಕ್ರಮಗಳ ವಿರುದ್ಧ ಧ್ವನಿಯೆತ್ತಿದ ಯುವಜನತೆ ಮತ್ತು ವಿದ್ಯಾರ್ಥಿಗಳ ಹೋರಾಟವನ್ನು ದಮನ ಮಾಡಲು ಯತ್ನಿಸುತ್ತಿರುವ ಬಿಜೆಪಿ, ಈಗ ಅವರ ವಿರುದ್ಧವೇ ಅತ್ಯಂತ ಕೀಳುಮಟ್ಟದ ಇಸ್ಲಾಮೋಫೋಬಿಕ್ ಮತ್ತು...

ಲೈಂಗಿಕ ಕಿರುಕುಳ ಪ್ರಕರಣದಲ್ಲಿ ಖುಲಾಸೆ : ಇಡೀ ವ್ಯವಸ್ಥೆಯೇ ಬ್ರಿಜ್ ಭೂಷಣ್‌ರನ್ನು ರಕ್ಷಿಸಿತು ಎಂದ ವಿನೇಶ್ ಫೋಗಟ್; ಮೇಲ್ಮನವಿ ಸಲ್ಲಿಸಲು ಮಹಿಳಾ ಕುಸ್ತಿಪಟುಗಳ ನಿರ್ಧಾರ

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪ ಎದುರಿಸುತ್ತಿದ್ದ ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಹಾಗೂ ಬಿಜೆಪಿ ಮಾಜಿ ಸಂಸದ ಬ್ರಿಜ್ ಭೂಷಣ್ ಶರಣ್ ಸಿಂಗ್ ಅವರನ್ನು ದೆಹಲಿಯ ರೋಸ್...

ಕರ್ನಾಟಕದಲ್ಲಿ SIR ಬಿಹಾರ-ಬಂಗಾಳಕ್ಕಿಂತ ಭೀಕರ: ಆಗಸ್ಟ್ 4 ರಂದು ಜನಪರ ಸಂಘಟನೆಗಳಿಂದ ಮಹತ್ವದ ಮಾಧ್ಯಮಗೋಷ್ಠಿ

ಬೆಂಗಳೂರು: ಕರ್ನಾಟಕದಲ್ಲಿ ನಡೆಯುತ್ತಿರುವ ಎಸ್‌ಐಆರ್ (SIR) ಪ್ರಕ್ರಿಯೆಯು ಬಿಹಾರ ಮತ್ತು ಪಶ್ಚಿಮ ಬಂಗಾಳ ರಾಜ್ಯಗಳಿಗಿಂತಲೂ ಅತ್ಯಂತ ಭೀಕರ ರೂಪ ಪಡೆದುಕೊಳ್ಳುತ್ತಿದೆ ಎಂದು 'SIR ವಿರೋಧಿ ಜಾತ್ಯತೀತ ಪಕ್ಷಗಳು ಮತ್ತು ಜನಪರ ಸಂಘಟನೆಗಳ ಒಕ್ಕೂಟ'...

“ನೈರ್ಮಲ್ಯ ಕಾರ್ಮಿಕರು ಕೆಲಸ ಬಿಡಲು ಸಾಧ್ಯವಿಲ್ಲ”: ದೇಶಾದ್ಯಂತ ಪ್ರತಿಭಟನೆಗೆ DASAM ಬೆಂಬಲ, ಉದ್ಯೋಗ ಖಾಯಂಗೊಳಿಸಲು ತೀವ್ರ ಒತ್ತಾಯ

ನವದೆಹಲಿ: ಉದ್ಯೋಗ ಕ್ರಮಬದ್ಧಗೊಳಿಸುವಿಕೆ (ಖಾಯಂಗೊಳಿಸುವುದು), ನ್ಯಾಯಯುತ ವೇತನ, ಸಾಮಾಜಿಕ ಭದ್ರತೆ, ಸುರಕ್ಷಿತ ಕೆಲಸದ ವಾತಾವರಣ ಮತ್ತು ಕೆಲಸದ ಸ್ಥಳದಲ್ಲಿ ಮಾನವ ಘನತೆಯನ್ನು ಎತ್ತಿಹಿಡಿಯುವಂತೆ ಒತ್ತಾಯಿಸಿ ದೇಶದ ನಾನಾ ಭಾಗಗಳಲ್ಲಿ ನೈರ್ಮಲ್ಯ ಕಾರ್ಮಿಕರು ನಡೆಸುತ್ತಿರುವ...

ದ್ವೇಷ ಭಾಷಣ ಪ್ರಕರಣ: ಬಿಜೆಪಿ ನಾಯಕರಾದ ಅನುರಾಗ್‌ ಠಾಕೂರ್‌, ಪರ್ವೇಶ್‌ ವರ್ಮಾಗೆ ಕ್ಲೀನ್ ಚೀಟ್: ಪುನರ್ ಪರಿಶೀಲನಾ ಅರ್ಜಿ ವಜಾಗೊಳಿಸಿದ ಸುಪ್ರೀಂ

ನವದೆಹಲಿ: 2020ರ ದೆಹಲಿಯಲ್ಲಿ ನಡೆದ ಪೌರತ್ವ ತಿದ್ದುಪಡಿ ಕಾಯ್ದೆ (ಸಿಎಎ) ವಿರೋಧಿ ಪ್ರತಿಭಟನೆಗಳ ಸಂದರ್ಭದಲ್ಲಿ ಉದ್ರೇಕಕಾರಿ ಹಾಗೂ ದ್ವೇಷಪೂರಿತ ಭಾಷಣ ಮಾಡಿದ ಆರೋಪ ಹೊತ್ತಿದ್ದ ಬಿಜೆಪಿ ನಾಯಕರಾದ ಅನುರಾಗ್ ಠಾಕೂರ್ ಮತ್ತು ಪರ್ವೇಶ್‌...

ಕರ್ನಾಟಕ ಸಚಿವ ಸಂಪುಟ ವಿಸ್ತರಣೆ: ನೂತನ ಸಚಿವರ ಪಟ್ಟಿಗೆ ವರಿಷ್ಠರ ಅನುಮೋದನೆ: ಇಂದು ಸಂಜೆ 4:05 ಕ್ಕೆ ಪ್ರಮಾಣ ವಚನ

ಬಹುನಿರೀಕ್ಷಿತ ಕರ್ನಾಟಕ ರಾಜ್ಯ ಸಚಿವ ಸಂಪುಟ ವಿಸ್ತರಣೆಗೆ ಕೊನೆಗೂ ಮುಹೂರ್ತ ನಿಗದಿಯಾಗಿದ್ದು, ಕಾಂಗ್ರೆಸ್ ಹೈಕಮಾಂಡ್ ನೂತನ ಸಚಿವರ ಪಟ್ಟಿಗೆ ಅಧಿಕೃತ ಅನುಮೋದನೆ ನೀಡಿದೆ. ಇದರೊಂದಿಗೆ ಕಳೆದ ಕೆಲವು ದಿನಗಳಿಂದ ರಾಜ್ಯ ರಾಜಕಾರಣದಲ್ಲಿ ತೀವ್ರ...

ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ಪ್ರಕರಣ : WFI ಮಾಜಿ ಅಧ್ಯಕ್ಷ ಬ್ರಿಜ್ ಭೂಷಣ್‌ ಸಿಂಗ್‌ ಖುಲಾಸೆ

ದೆಹಲಿ ನ್ಯಾಯಾಲಯವು ಸೋಮವಾರ (ಆ.3) ಭಾರತೀಯ ಕುಸ್ತಿ ಫೆಡರೇಶನ್ (WFI) ಮಾಜಿ ಅಧ್ಯಕ್ಷ ಮತ್ತು ಬಿಜೆಪಿ ನಾಯಕ ಬ್ರಿಜ್ ಭೂಷಣ್ ಸಿಂಗ್ ಅವರನ್ನು ಮಹಿಳಾ ಕುಸ್ತಿಪಟುಗಳಿಗೆ ಲೈಂಗಿಕ ಕಿರುಕುಳ ನೀಡಿದ ಆರೋಪದ ಪ್ರಕರಣದಿಂದ...

ಪ್ರಶ್ನೆ ಪತ್ರಿಕೆ ಸೋರಿಕೆ : ಫಾಸ್ಟ್‌ ಟ್ರ್ಯಾಕ್ ಕೋರ್ಟ್ ನ್ಯಾಯಾಧೀಶೆ ಒಂದೇ ವಾರದಲ್ಲಿ ವರ್ಗಾವಣೆ

ಪ್ರಶ್ನೆ ಪತ್ರಿಕೆ ಸೋರಿಕೆ ಪ್ರಕರಣಗಳ ವಿಚಾರಣೆಗಾಗಿ ಸ್ಥಾಪಿಸಲಾದ ತ್ವರಿತಗತಿ (ಫಾಸ್ಟ್‌ ಟ್ರ್ಯಾಕ್) ನ್ಯಾಯಾಲಯದ ನೇತೃತ್ವ ವಹಿಸಲು ನೇಮಕಗೊಂಡ ಕೇವಲ ಒಂದು ವಾರದ ನಂತರ, ದೆಹಲಿ ಹೈಕೋರ್ಟ್ ಶನಿವಾರ (ಆಗಸ್ಟ್ 1) ವಿಶೇಷ ನ್ಯಾಯಾಧೀಶರಾದ...

ಶ್ರೀಲಂಕಾ | 2019ರ ಈಸ್ಟರ್ ಬಾಂಬ್ ಸ್ಫೋಟ ಪ್ರಕರಣ: ಇಬ್ಬರು ಮಾಜಿ ಅಧಿಕಾರಿಗಳಿಗೆ ಮರಣದಂಡನೆ ವಿಧಿಸಿದ ಕೋರ್ಟ್

ಬರೋಬ್ಬರಿ 260ಕ್ಕೂ ಹೆಚ್ಚು ಜನರ ಸಾವಿಗೆ ಕಾರಣವಾಗಿದ್ದ 2019ರ ಶ್ರೀಲಂಕಾದ 'ಈಸ್ಟರ್ ಸಂಡೇ' ಬಾಂಬ್ ಸ್ಫೋಟ ಪ್ರಕರಣದಲ್ಲಿ ಕ್ರಿಮಿನಲ್ ನಿರ್ಲಕ್ಷ್ಯ ಆರೋಪ ಸಾಬೀತಾದ ಹಿನ್ನೆಲೆ, ಪೊಲೀಸ್ ಮಾಜಿ ಮುಖ್ಯಸ್ಥ ಮತ್ತು ರಕ್ಷಣಾ ಸಚಿವಾಲಯದ...