Homeಕರ್ನಾಟಕಮದುವೆಯಾದ ಮಾತ್ರಕ್ಕೆ ಪತ್ನಿಯ ಮೇಲೆ ಎಸಗಿದ ಅತ್ಯಾಚಾರಕ್ಕೆ ಗಂಡನಿಗೆ ವಿನಾಯಿತಿಯಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

ಮದುವೆಯಾದ ಮಾತ್ರಕ್ಕೆ ಪತ್ನಿಯ ಮೇಲೆ ಎಸಗಿದ ಅತ್ಯಾಚಾರಕ್ಕೆ ಗಂಡನಿಗೆ ವಿನಾಯಿತಿಯಿಲ್ಲ: ಕರ್ನಾಟಕ ಹೈಕೋರ್ಟ್ ಮಹತ್ವದ ತೀರ್ಪು

- Advertisement -
- Advertisement -

ಪತ್ನಿಯ ಮೇಲೆ ಅತ್ಯಾಚಾರವೆಸಗುವ ಪತಿಗೆ ‘ಅತ್ಯಾಚಾರ’ ಕಾನೂನನ್ನು ಅನ್ವಯಿಸಬಹುದು ಎಂದು ರಾಜ್ಯ ಹೈಕೋರ್ಟ್‌ ಬುಧವಾರದಂದು ಹೇಳಿದೆ. ಸಂತ್ರಸ್ತೆಯು ಗಂಡನ ವಿರುದ್ಧ ಭಾರತೀಯ ದಂಡ ಸಂಹಿತೆಯ ಸೆಕ್ಷನ್ 376 (ಅತ್ಯಾಚಾರ) ಅಡಿಯಲ್ಲಿ ಆರೋಪಗಳನ್ನು ರೂಪಿಸುವುದನ್ನು ನ್ಯಾಯಾಲಯ ಎತ್ತಿಹಿಡಿದಿದೆ.

“ಮದುವೆಯಾದ ಮಾತ್ರಕ್ಕೆ, ಯಾವುದೇ ವಿಶೇಷ ಸವಲತ್ತು ಪುರುಷರಿಗೆ ನೀಡಲಾಗುವುದಿಲ್ಲ. ಮದುವೆಯಾದಕ್ಕೆ ಮಾತ್ರಕ್ಕೆ ಕ್ರೂರ ಮೃಗದಂತೆ ವರ್ತಿಸಲು ಪರವಾನಗಿ ನೀಡುವುದಿಲ್ಲ” ಎಂದು ನ್ಯಾಯಾಲಯ ಹೇಳಿದೆ ಎಂದು ಲೈವ್‌ಲಾ ವರದಿ ಮಾಡಿದೆ. “ಅತ್ಯಾಚಾರ ಮಾಡಿದ್ದಕ್ಕೆ ಪುರುಷನೊಬ್ಬನಿಗೆ ಕಾನೂನು ಶಿಕ್ಷೆ ನೀಡಿದ್ದರೆ, ಆ ಪುರುಷ ಗಂಡನಾಗಿದ್ದರೂ ಸಹ ಶಿಕ್ಷೆಯಾಗಬೇಕು” ಎಂದು ನ್ಯಾಯಾಲಯ ಹೇಳಿದೆ.

ಇದನ್ನೂ ಓದಿ: ವೈವಾಹಿಕ ಅತ್ಯಾಚಾರ ಮಹಿಳೆಯರ ಮೇಲೆ ನಡೆಯುವ ಲೈಂಗಿಕ ದೌರ್ಜನ್ಯದ ಅತಿದೊಡ್ಡ ರೂಪ: ದೆಹಲಿ ಹೈಕೋರ್ಟ್‌ಗೆ ಅರ್ಜಿದಾರರು

ಪ್ರಕರಣದ ವಿಚಾರಣೆ ನಡೆಸುತ್ತಿದ್ದ ನ್ಯಾಯಮೂರ್ತಿ ಎಂ. ನಾಗಪ್ರಸನ್ನ ಅವರು ವೈವಾಹಿಕ ಅತ್ಯಾಚಾರ ಅಪವಾದವನ್ನು ಆಧರಿಸಿದದ ಹಳೆಯ ಸಿದ್ಧಾಂತವನ್ನು ಟೀಕಿಸಿದರು. “ಗಂಡಂದಿರು ತಮ್ಮ ಹೆಂಡತಿಯರ ದೇಹ, ಮನಸ್ಸು ಮತ್ತು ಆತ್ಮದ ಅಧಿಪತಿಗಳು ಎಂಬ ಪ್ರಾಚೀನ ಚಿಂತನೆ ಮತ್ತು ಸಂಪ್ರದಾಯವನ್ನು ಅಳಿಸಿ ಹಾಕಬೇಕು. ಈ ಪುರಾತನ, ಪ್ರತಿಗಾಮಿ ಮತ್ತು ಪೂರ್ವಗ್ರಹದ ಕಲ್ಪನೆಯಿಂದಾಗಿ ಈ ರೀತಿಯ ಪ್ರಕರಣಗಳು ದೇಶದಲ್ಲಿ ನಾಯಿಕೊಡೆಗಳಂತೆ ಹುಟ್ಟಿಕೊಳ್ಳುತ್ತಿವೆ” ಎಂದು ಆದೇಶವು ಹೇಳಿದೆ.

ಪ್ರಸ್ತುತ ಪ್ರಕರಣವು 2006 ರಲ್ಲಿ ವಿವಾಹವಾದ ದಂಪತಿಗಳಿಗೆ ಸಂಬಂಧಿಸಿದೆ. ಈ ಪ್ರಕರಣದಲ್ಲಿ, ಮದುವೆಯಾಗಿ ಕೆಲವು ವರ್ಷಗಳ ನಂತರ ಅವರ ಸಂಬಂಧವು ಹದಗೆಟ್ಟಿತ್ತು. ಮಹಿಳೆಯು ತನ್ನ ಪತಿ ಕೌಟುಂಬಿಕ ದೌರ್ಜನ್ಯ ಹಾಗೂ ಮಗಳಿಗೆ ಲೈಂಗಿಕ ಕಿರುಕುಳ ನೀಡಿದ್ದಾನೆ ಎಂದು ಆರೋಪಿಸಿ 2017ರಲ್ಲಿ ದೂರು ದಾಖಲಿಸಿದ್ದರು. ಸೆಕ್ಷನ್ 506, 498A, 323, ಮತ್ತು 377 ಮತ್ತು POCSO ಕಾಯಿದೆ ಅಡಿಯಲ್ಲಿ ಎಫ್‌ಐಆರ್ ದಾಖಲಿಸಲಾಗಿದೆ. ಮೇಲಿನ ಸೆಕ್ಷನ್‌ಗಳ ಜೊತೆಗೆ, ಸೆಕ್ಷನ್ 376 (ಅತ್ಯಾಚಾರ) ಮತ್ತು POCSO ಕಾಯಿದೆಯ ಸಂಬಂಧಿತ ಸೆಕ್ಷನ್‌ಗಳನ್ನು ಕೂಡಾ ಸಲ್ಲಿಸಿದ ಆರೋಪಪಟ್ಟಿಯಲ್ಲಿ ಬಳಸಲಾಗಿದೆ.

ಶಾಸಕಾಂಗವು ಈ ಸಮಸ್ಯೆಯನ್ನು ಪರಿಶೀಲಿಸಿ, ವೈವಾಹಿಕ ಅತ್ಯಾಚಾರಕ್ಕೆ ಸಂಬಂಧಿಸಿ ಅಸ್ತಿತ್ವದಲ್ಲಿರುವ ವಿನಾಯಿತಿಯನ್ನು ಬದಲಾಯಿಸುವ ಬಗ್ಗೆ ಪರಿಗಣಿಸಬೇಕು ಎಂದು ನ್ಯಾಯಾಲಯ ಹೇಳಿದೆ. “ವೈವಾಹಿಕ ಅತ್ಯಾಚಾರವನ್ನು ಅಪರಾಧವೆಂದು ಗುರುತಿಸಬೇಕೇ ಅಥವಾ ಶಾಸಕಾಂಗವು ವಿನಾಯಿತಿಯನ್ನು ತೆಗೆದುಕೊಳ್ಳಬೇಕೇ ಎಂಬುದರ ಕುರಿತು ಈ ನ್ಯಾಯಾಲಯವು ಉಚ್ಚರಿಸುತ್ತಿಲ್ಲ” ಎಂದು ಹೈಕೋರ್ಟ್ ಹೇಳಿದೆ ಎಂದು ಲೈವ್ ಲಾ ಹೇಳಿದೆ.

ಇದನ್ನೂ ಓದಿ: ವೈವಾಹಿಕ ಅತ್ಯಾಚಾರ ಅಪರಾಧವಲ್ಲ ತೀರ್ಪು; ಛತ್ತೀಸಗಡ ಹೈಕೋರ್ಟ್ ನ್ಯಾಯಾಂಗ ಸಮಾನತೆಯನ್ನು ಅರ್ಥಮಾಡಿಕೊಂಡಿದ್ದು ಇಷ್ಟೆಯೇ?

ಆದರೂ, ತನ್ನ ಹೆಂಡತಿಯ ಮೇಲೆ ಹಲ್ಲೆ ಅಥವಾ ಅತ್ಯಾಚಾರ ಎಸಗುವುದರಿಂದ ಪತಿಗೆ ವಿನಾಯಿತಿ ನೀಡಲು ಸಾಧ್ಯವಿಲ್ಲ ಎಂದು ಹೈಕೋರ್ಟ್‌ ಹೇಳಿದೆ.

“ಒಬ್ಬ ಮಹಿಳೆಗೆ ಮಹಿಳೆಯಾಗಿ ನಿರ್ದಿಷ್ಟ ಸ್ಥಾನಮಾನವನ್ನು ನೀಡಲಾಗುತ್ತದೆ; ಹೆಂಡತಿಯಾಗಿರುವ ಮಹಿಳೆಗೆ ವಿಭಿನ್ನ ಸ್ಥಾನಮಾನವನ್ನು ನೀಡಲಾಗುತ್ತದೆ. ಅಂತೆಯೇ, ಒಬ್ಬ ಪುರುಷ, ಅವನು ಪುರುಷನಾಗಿರುವುದರಿಂದ ಅವನ ಕೃತ್ಯಗಳಿಗೆ ಶಿಕ್ಷೆಯಾಗುತ್ತದೆ; ಒಬ್ಬ ಪುರುಷನು ಗಂಡನಾಗಿರುವುದರಿಂದ ಅವನ ಕೃತ್ಯಗಳಿಗೆ ವಿನಾಯಿತಿ ನೀಡಲಾಗುತ್ತದೆ. ಈ ಅಸಮಾನತೆಯೇ ಸಮಾನತೆಯ ಹಕ್ಕಿನ ಬಗ್ಗೆ ಇರುವ ಸಂವಿಧಾನದ ಆತ್ಮವನ್ನು ನಾಶಪಡಿಸುತ್ತದೆ” ಎಂದು ಗಂಡಂದಿರಿಗೆ ಇರುವ ವಿನಾಯಿತಿಯ ಬಗ್ಗೆ ನ್ಯಾಯಾಲಯ ಅಸಮಾಧಾನ ವ್ಯಕ್ತಪಡಿಸಿದೆ.

ವೈವಾಹಿಕ ಅತ್ಯಾಚಾರವನ್ನು ಇನ್ನೂ ಅಪರಾಧೀಕರಿಸದ ವಿಶ್ವದ ಕೆಲವೇ ದೇಶಗಳಲ್ಲಿ ಭಾರತವೂ ಒಂದಾಗಿದೆ. ಜನವರಿಯಲ್ಲಿ ದೆಹಲಿ ಹೈಕೋರ್ಟ್‌ನಲ್ಲಿ ಪೀಠವು ಭಾರತೀಯ ದಂಡ ಸಂಹಿತೆಯಲ್ಲಿನ ವೈವಾಹಿಕ ಅತ್ಯಾಚಾರದ ವಿನಾಯಿತಿಗಳನ್ನು ಪ್ರಶ್ನಿಸುವ ಅರ್ಜಿಗಳ ವಿಚಾರಣೆ ನಡೆಸುತ್ತಿದ್ದಾಗ ಈ ಚರ್ಚೆ ಮುನ್ನಲೆಗೆ ಬಂದಿತ್ತು.

ಭಾರತದಲ್ಲಿ ಪತ್ನಿಯ ಮೇಲೆ ದೈಹಿಕ ಹಿಂಸೆ ಅಥವಾ ಪತ್ನಿಯನ್ನು ಕೊಲ್ಲುವುದು ಅಪರಾಧವೆಂದು ಪರಿಗಣಿಸಲಾಗಿದೆಯೆ ಹೊರತು ಪತ್ನಿಯ ಮೇಲೆ ಪತಿ ನಡೆಸುವ ಅತ್ಯಾಚಾರವನ್ನಲ್ಲ.

ಇದನ್ನೂ ಓದಿ: ಹಾವು ಕಚ್ಚಿಸಿ ಪತ್ನಿ ಕೊಲೆ: ದೇಶದ ಮೊದಲ ಪ್ರಕರಣ; ಅಪರಾಧಿಗೆ 2 ಜೀವಾವಧಿ ಶಿಕ್ಷೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...

ಅಮಾನವೀಯ ಕೃತ್ಯ : ಮಹಿಳೆಗೆ ಥಳಿಸಿ, ಕೂದಲು ಹಿಡಿದು ಎಳೆದೊಯ್ದ ಪೊಲೀಸ್ ಸಿಬ್ಬಂದಿ

ತೆಲಂಗಾಣದ ಹಫೀಝ್‌ಪೇಟ್ ರೈಲ್ವೆ ನಿಲ್ದಾಣದಲ್ಲಿ ಪೊಲೀಸ್ ಸಿಬ್ಬಂದಿಯೊಬ್ಬರು ಮಹಿಳೆಗೆ ಥಳಿಸಿ, ಆಕೆಯ ತಲೆಕೂದಲು ಹಿಡಿದು ಎಳೆದೊಯ್ದಿರುವ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ತೀವ್ರ ಆಕ್ರೋಶ ವ್ಯಕ್ತವಾಗಿದೆ. ಶುಕ್ರವಾರ (ಸೆ.18) ರಾತ್ರಿ ರೈಲ್ವೆ...

ರಾಮಮಂದಿರ ದೇಣಿಗೆ ಕಳವು ಪ್ರಕರಣ: ಆರೋಪಿಗಳ ನ್ಯಾಯಾಂಗ ಬಂಧನ ಅವಧಿ ವಿಸ್ತರಣೆ

ರಾಮಮಂದಿರದಲ್ಲಿ ದೇಣಿಗೆ ಹಣ ಕಳವು ಮಾಡಿದ ಆರೋಪದ ಮೇಲೆ ಬಂಧಿಸಲಾಗಿರುವ ಎಲ್ಲಾ ಎಂಟು ಆರೋಪಿಗಳ ನ್ಯಾಯಾಂಗ ಬಂಧನವನ್ನು ಸೆಪ್ಟೆಂಬರ್ 21ರವರೆಗೆ ವಿಸ್ತರಿಸಲಾಗಿದೆ ಎಂದು ಅವರ ವಕೀಲರು (ಸೆ.18) ತಿಳಿಸಿದ್ದಾರೆ. ಅಯೋಧ್ಯೆಯ ಭ್ರಷ್ಟಾಚಾರ ನಿಗ್ರಹ ನ್ಯಾಯಾಲಯದ...

ಬಂಗಾಳದಲ್ಲಿ ಬಿಜೆಪಿ ದ್ವೇಷ ರಾಜಕಾರಣ: ಮಾಮತಾ ಬ್ಯಾನರ್ಜಿ ಬೆಂಬಲ ಘೋಷಿಸಿದ ಬೆನ್ನಲ್ಲೇ ನಂದಿಗ್ರಾಮ ಕಾಂಗ್ರೆಸ್ ಅಭ್ಯರ್ಥಿ ಬಂಧನ

ಪಶ್ಚಿಮ ಬಂಗಾಳದ ಪೂರ್ವ ಮೇದಿನಿಪುರ ಜಿಲ್ಲೆಯ ನಂದಿಗ್ರಾಮ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಕಾಂಗ್ರೆಸ್ ಅಭ್ಯರ್ಥಿ ಮಿಲನ್ ಪ್ರಧಾನ್ ಅವರನ್ನು ಹಳೆಯ ಪ್ರಕರಣವೊಂದರಲ್ಲಿ ಶುಕ್ರವಾರ (ಸೆ.18) ಬಂಧಿಸಲಾಗಿದೆ ಎಂದು ಪೂರ್ವ ಮೇದಿನಿಪುರ ಜಿಲ್ಲಾ ಪೊಲೀಸ್...

‘ವೆಟ್ಟುವಂ’ ಪಾ.ರಂಜಿತ್ ಅವರ ಅದ್ಭುತ ಅಪೋಕಲಿಪ್ಟಿಕ್ ಆಕ್ಷನ್ ಸಿನಿಮಾ: ರಂಗನಾಥ್ ಆರ್. ವಿ

ತಮಿಳಿನ ಖ್ಯಾತ ನಿರ್ದೇಶಕ ಪಾ.ರಂಜಿತ್ ಅವರ ನಿರ್ದೇಶನದಲ್ಲಿ ಮೂಡಿಬರುತ್ತಿರುವ 'ವೆಟ್ಟುವಂ' ಚಿತ್ರವನ್ನು 'ಲರ್ನ್ ಆಂಡ್ ಟೀಚ್ ಪ್ರೊಡಕ್ಷನ್' ಸಂಸ್ಥೆಯ ಸಹಯೋಗದೊಂದಿಗೆ, ಪಾ.ರಂಜಿತ್ ಅವರ 'ನೀಲಂ ಪ್ರೊಡಕ್ಷನ್ಸ್' ನಿರ್ಮಿಸಿದೆ. ಈ ಚಿತ್ರದ ಜಗತ್ತನ್ನು ಪರಿಚಯಿಸುವ...