Homeಕರ್ನಾಟಕರಾಜ್ಯದಲ್ಲಿ ಚಲನಚಿತ್ರಗಳಿಗೆ 200 ರೂ. ಏಕರೂಪ ದರ ನಿಗದಿ: ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

ರಾಜ್ಯದಲ್ಲಿ ಚಲನಚಿತ್ರಗಳಿಗೆ 200 ರೂ. ಏಕರೂಪ ದರ ನಿಗದಿ: ಸರ್ಕಾರದ ಆದೇಶಕ್ಕೆ ಹೈಕೋರ್ಟ್ ಮಧ್ಯಂತರ ತಡೆ

- Advertisement -
- Advertisement -

‘ಮಲ್ಟಿಪ್ಲೆಕ್ಸ್‌ಗಳು ಸೇರಿ ರಾಜ್ಯದ ಎಲ್ಲಾ ಚಿತ್ರಮಂದಿರಗಳಲ್ಲಿ ಎಲ್ಲಾ ಭಾಷೆಗಳ ಚಲನಚಿತ್ರಗಳ ಪ್ರದರ್ಶನಕ್ಕೆ ತೆರಿಗೆ ಹೊರತುಪಡಿಸಿ ಗರಿಷ್ಠ 200 ರೂಪಾಯಿ ಏಕರೂಪ ದರ ನಿಗದಿಪಡಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಜಾರಿಗೆ ತಂದಿರುವ ನಿಯಮಗಳಿಗೆ ಹೈಕೋರ್ಟ್ ಮಂಗಳವಾರ (ಸೆ.23) ಮಧ್ಯಂತರ ತಡೆ ನೀಡಿದೆ.

ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ​​ಆಫ್ ಇಂಡಿಯಾ ಮತ್ತು ಇತರ ಸಂಸ್ಥೆಗಳು ಸಲ್ಲಿಸಿದ್ದ ಅರ್ಜಿ ವಿಚಾರಣೆ ನಡೆಸಿದ ನ್ಯಾಯಮೂರ್ತಿ ರವಿ ವಿ ಹೊಸ್ಮನಿ ಅವರು, ಮಧ್ಯಂತರ ಆದೇಶ ಹೊರಡಿಸಿದ್ದಾರೆ.

ವಿಚಾರಣೆಯ ಸಮಯದಲ್ಲಿ, ಮಲ್ಟಿಪ್ಲೆಕ್ಸ್ ಅಸೋಸಿಯೇಷನ್ ​​ಪರ ವಾದ ಮಂಡಿಸಿದ ಹಿರಿಯ ವಕೀಲ ಮುಕುಲ್ ರೋಹಟಗಿ ಅವರು, “ಅರ್ಜಿದಾರರು ಕರ್ನಾಟಕ ಸಿನಿಮಾಸ್ (ನಿಯಂತ್ರಣ) ಕಾಯ್ದೆಯಡಿಯಲ್ಲಿ ರೂಪಿಸಲಾದ ನಿಯಮವನ್ನು ತಿದ್ದುಪಡಿ ಮಾಡುವ ಅಧಿಸೂಚನೆಯನ್ನು ಪ್ರಶ್ನಿಸಿದ್ದಾರೆ. ತಿದ್ದುಪಡಿಯಲ್ಲಿ ಒಂದು ನಿಬಂಧನೆಯನ್ನು ಸೇರಿಸಲಾಗಿದೆ, ಇದು ಸಂಪೂರ್ಣವಾಗಿ ಅನಿಯಂತ್ರಿತವಾಗಿದೆ” ಎಂದು ಹೇಳಿದರು.

“ಟಿಕೆಟ್ ಬೆಲೆಯನ್ನು 200 ರೂಪಾಯಿಗೆ ನಿಗದಿಪಡಿಸಲಾಗಿದೆ. ಈ ಸ್ಥಿರ ಬೆಲೆಗೆ ಯಾವುದೇ ತಾರ್ಕಿಕ ಆಧಾರವಿಲ್ಲ. ಗ್ರಾಹಕರು ಹೆಚ್ಚಿನ ಐಷಾರಾಮಿ ಸೌಲಭ್ಯಗಳಿಗಾಗಿ ಹೆಚ್ಚು ಹಣ ಪಾವತಿಸಲು ಸಿದ್ಧರಿದ್ದರೂ, ಎಲ್ಲರಿಗೂ ಒಂದೇ ಬೆಲೆಯನ್ನು ವಿಧಿಸುವುದು ಸರಿಯಲ್ಲ” ಎಂದರು.

ಏಪ್ರಿಲ್ 2017ರಲ್ಲಿ ಇದೇ ರೀತಿಯ ಸರ್ಕಾರಿ ಆದೇಶವೊಂದು ಜಾರಿಯಾಗಿತ್ತು. ಅದನ್ನು ಹೈಕೋರ್ಟ್‌ನಲ್ಲಿ ಪ್ರಶ್ನಿಸಲಾಗಿತ್ತು. ನಂತರ, ಆದೇಶವನ್ನು ಸ್ಥಗಿತಗೊಳಿಸಲಾಗಿತ್ತು. ಕೊನೆಗೆ ಸರ್ಕಾರ ಅದನ್ನು ವಾಪಸ್ ಪಡೆಯಿತು. ಅದೇ ವಿಷಯ ಈಗ ಪುನರಾವರ್ತನೆಯಾಗುತ್ತಿದೆ. ಈ ಹಿಂದೆ ಸರ್ಕಾರಿ ಆದೇಶದ (ಜಿಒ) ಮೂಲಕ ನಿಯಮ ಜಾರಿಗೊಳಿಸಲಾಗಿತ್ತು. ಈಗ ಕಾಯ್ದೆಗೆ ತಿದ್ದುಪಡಿಯ ಮೂಲಕ ಜಾರಿಗೆ ತರಲಾಗಿದೆ ಎಂದು ಮುಕುಲ್ ರೋಹಟಗಿ ಪೀಠದ ಗಮನಕ್ಕೆ ತಂದರು.

“ನಾವು ಸಿನಿಮಾ ಥಿಯೇಟರ್‌ಗಳನ್ನು ನಿರ್ಮಿಸಲು ದೊಡ್ಡ ಮೊತ್ತದ ಹಣವನ್ನು ಖರ್ಚು ಮಾಡಿದ್ದೇವೆ. ಎಲ್ಲಾ ಟಿಕೆಟ್‌ಗಳ ಬೆಲೆಯನ್ನು 200 ರೂಪಾಯಿಗೆ ನಿಗದಿಪಡಿಸಬೇಕು ಎಂದು ಆದೇಶಿಸುವುದು ಸರಿಯಲ್ಲ. ಇದು ಎಲ್ಲಾ ವಿಮಾನಗಳನ್ನು ಕೇವಲ ಇಕಾನಮಿ ಕ್ಲಾಸ್‌ಗೆ ಸೀಮಿತಗೊಳಿಸುವಂತೆ ಹೇಳುವುದಕ್ಕೆ ಸಮಾನವಾಗಿದೆ. ಈ ಕಾಯ್ದೆಯಡಿಯಲ್ಲಿ ಬೆಲೆ ನಿಗದಿಪಡಿಸುದಕ್ಕೆ ಯಾವುದೇ ಅಧಿಕಾರವಿಲ್ಲ” ಎಂದು ವಾದಿಸಿದರು.

“ಈ ಕಾಯ್ದೆಯು ಟಿಕೆಟ್‌ ಬೆಲೆಯನ್ನು ನಿಗದಿಪಡಿಸುವುದನ್ನು ಎಂದಿಗೂ ಉದ್ದೇಶಿಸಿರಲಿಲ್ಲ, ಮತ್ತು ಈ ತಿದ್ದುಪಡಿಯು ಸಿನಿಮಾ ಥಿಯೇಟರ್ ಮಾಲೀಕರ ವ್ಯಾಪಾರ ನಡೆಸುವ ಹಕ್ಕಿನ ಮೇಲೆ ನೇರವಾದ ನಿರ್ಬಂಧವಾಗಿದೆ. ನೂರಾರು ಸಿನಿಮಾ ಥಿಯೇಟರ್‌ಗಳಿಗೆ ಇದರಿಂದ ಪರಿಣಾಮ ಬೀರುತ್ತದೆ. ಹಾಗಾಗಿ, ಈ ವಿಷಯವನ್ನು ನ್ಯಾಯಾಲಯ ಅಂತಿಮವಾಗಿ ನಿರ್ಧರಿಸುವವರೆಗೆ 200 ರೂಪಾಯಿ ಟಿಕೆಟ್ ಬೆಲೆಯ ನಿಯಮವನ್ನು ತಡೆ ಹಿಡಿಯಬೇಕು” ಎಂದು ಮನವಿ ಮಾಡಿದರು.

ಇದೇ ವೇಳೆ, ಮತ್ತೊಬ್ಬ ಅರ್ಜಿದಾರರ ಪರವಾಗಿ ವಾದಿ ಮಂಡಿಸಿದ ಹಿರಿಯ ವಕೀಲ ಉದಯ್ ಹೊಳ್ಳ ಅವರು, ಹಿಂದಿನ ಸರ್ಕಾರಿ ಆದೇಶದಲ್ಲಿ ಟಿಕೆಟ್‌ ಬೆಲೆಯ ಮೇಲೆ ಮಿತಿಯನ್ನು ವಿಧಿಸಲಾಗಿತ್ತು. 2017ರಲ್ಲಿ ಟಿಕೆಟ್‌ ಬೆಲೆಯ ಮೇಲೆ 200 ರೂಪಾಯಿಗಳ ಮಿತಿಯನ್ನು ಹಾಕಲಾಗಿತ್ತು. ಹಲವು ವರ್ಷಗಳ ನಂತರ ಈಗ ಮತ್ತೆ ಅದೇ ಮಿತಿಯನ್ನು ವಿಧಿಸಲಾಗಿದೆ. ಹಿಂದಿನ ಸರ್ಕಾರಿ ಆದೇಶವನ್ನು ವಾಪಸ್ ಪಡೆಯಲಾಗಿತ್ತು. ಆದ್ದರಿಂದ, ತಾತ್ಕಾಲಿಕವಾಗಿ ಈ ಆದೇಶವನ್ನು ತಡೆ ಹಿಡಿದು ಮಧ್ಯಂತರ ಆದೇಶ ನೀಡಲು ನಾವು ಕೋರುತ್ತಿದ್ದೇವೆ ಎಂದರು.

ಹೊಂಬಾಳೆ ಫಿಲ್ಮ್ಸ್ ಪರ ಹಿರಿಯ ವಕೀಲ ಧ್ಯಾನ್ ಚಿನ್ನಪ್ಪ ಅವರು, ನಿಯಮ ತಿದ್ದುಪಡಿ ಮಾಡುವ ನೆಪದಲ್ಲಿ ನಿಯಮ ಮಾಡುವ ಕ್ರಮವು ಸಂಪೂರ್ಣವಾಗಿ ಕಾನೂನುಬಾಹಿರವಾಗಿದೆ ಎಂದು ವಾದಿಸಿದರು.

“ಇದು ಸಂಪೂರ್ಣವಾಗಿ ಪ್ರದರ್ಶಕ ಮತ್ತು ಚಿತ್ರ ವೀಕ್ಷಕರ ನಡುವಿನ ಖಾಸಗಿ ಒಪ್ಪಂದವಾಗಿದೆ. ಒಂದು ಚಿತ್ರಮಂದಿರದಲ್ಲಿ ಒಂದು ಚಿತ್ರಕ್ಕೆ ಒಂದು ಟಿಕೆಟ್ ಬೆಲೆ ಮತ್ತು ಇನ್ನೊಂದು ಚಿತ್ರ ಮಂದಿರದಲ್ಲಿ ಅದೇ ಚಿತ್ರಕ್ಕೆ ಇನ್ನೊಂದು ಟಿಕೆಟ್ ಬೆಲೆ ಇರುತ್ತದೆ” ಎಂದು ಥಿಯೇಟರ್ ಪರವಾಗಿ ಹಾಜರಾದ ಹಿರಿಯ ವಕೀಲ ಡಿ ಆರ್ ರವಿಶಂಕರ್ ಹೇಳಿದರು.

ರಾಜ್ಯ ಸರ್ಕಾರದ ಪರವಾಗಿ ವಾದಿಸಿದ ಎಎಜಿ ಇಸ್ಮಾಯಿಲ್ ಝಬಿಉಲ್ಲಾ ಅವರು, “ಜುಲೈ 15 ರಂದು ಪ್ರಕಟವಾದ ಕರಡು ಅಧಿಸೂಚನೆಗೆ ಕೆಲವು ಅರ್ಜಿದಾರರು ಆಕ್ಷೇಪಣೆ ಸಲ್ಲಿಸಿದ್ದಾರೆ. ಟಿಕೆಟ್ ಬೆಲೆಗೆ ಮಿತಿ ವಿಧಿಸುವ ನಿರ್ಧಾರವನ್ನು ಮಾರ್ಚ್ 7 ರ ರಾಜ್ಯ ಬಜೆಟ್ ಭಾಷಣದಲ್ಲಿ ಘೋಷಿಸಲಾಗಿತ್ತು. ಇದು ಸಾರ್ವಜನಿಕರ ಹಿತದೃಷ್ಟಿಯಿಂದ ಮಾಡಲಾಗಿದೆ. ಈ ನಿರ್ಧಾರದಿಂದಾಗಿ ಅನೆಕ್ಸರ್ ಎ ಜಾರಿಗೆ ಬಂದಿದೆ. ಜೊತೆಗೆ, ಈ ರೀತಿಯ ನಿಯಂತ್ರಣವನ್ನು ವಿಧಿಸುವ ಅಧಿಕಾರವು ಸಂವಿಧಾನದಿಂದ ದೊರೆತಿದೆ ಎಂದು ಅವರು ಸ್ಪಷ್ಟಪಡಿಸಿದರು.

ಕರ್ನಾಟಕ ಫಿಲ್ಮ್ ಚೇಂಬರ್ ಆಫ್ ಕಾಮರ್ಸ್ (ಕೆಎಫ್‌ಸಿಸಿ) ಪರ ವಕೀಲರು, ತಾವು ಈ ಪ್ರಕರಣದಲ್ಲಿ ಒಳಗೊಳ್ಳಲು ಅರ್ಜಿ ಸಲ್ಲಿಸಿದ್ದು, ನ್ಯಾಯಾಲಯಕ್ಕೆ ಸಹಾಯ ಮಾಡಲು ಇಚ್ಛಿಸುವುದಾಗಿ ತಿಳಿಸಿದರು. ಆದರೆ, ನ್ಯಾಯಾಲಯವು ಈ ಪ್ರಕರಣವು ಸಾರ್ವಜನಿಕ ಹಿತಾಸಕ್ತಿ ಅರ್ಜಿಯಲ್ಲ ಎಂದು ಸ್ಪಷ್ಟಪಡಿಸಿತು. ಕೆಎಫ್‌ಸಿಸಿಯು ಈ ಪ್ರಕರಣದಲ್ಲಿ ಭಾಗವಹಿಸಲು ತನ್ನ ಕಾನೂನು ಅರ್ಹತೆಯನ್ನು ಸಾಬೀತುಪಡಿಸಬೇಕು ಎಂದು ಮೌಖಿಕವಾಗಿ ಹೇಳಿತು.

ಕೋಮುವಾದಿಗಳಿಗೆ ಅವಕಾಶ, ಶಾಂತಿಪ್ರಿಯರಿಗೆ ನಿರ್ಬಂಧ: ಮದ್ದೂರು ‘ಸೌಹಾರ್ದ ನಡಿಗೆ’ ಜಾಥಾದಲ್ಲಿ ಆಕ್ರೋಶ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...

ವಿಬಿ-ಜಿ ರಾಮ್ ಜಿ ಮಸೂದೆ ‘ರಾಜ್ಯ ವಿರೋಧಿ’ ಮತ್ತು ‘ಗ್ರಾಮ ವಿರೋಧಿ’: ರಾಹುಲ್ ಗಾಂಧಿ

ಎರಡು ದಶಕಗಳ ಕಾಲದ ಮಹಾತ್ಮ ಗಾಂಧಿ ರಾಷ್ಟ್ರೀಯ ಗ್ರಾಮೀಣ ಉದ್ಯೋಗ ಖಾತರಿ ಕಾಯ್ದೆ (ಎಂಜಿಎನ್‌ಆರ್‌ಇಜಿಎ)ಯನ್ನು ಒಂದೇ ದಿನದಲ್ಲಿ ಮೋದಿ ಸರ್ಕಾರ ರದ್ದುಗೊಳಿಸಿದೆ ಎಂದು ಕಾಂಗ್ರೆಸ್ ನಾಯಕ ಮತ್ತು ಲೋಕಸಭೆಯ ವಿರೋಧ ಪಕ್ಷದ ನಾಯಕ...

ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ನಂತರ ರಾಜಧಾನಿ ಢಾಕಾದಲ್ಲಿ ಭುಗಿಲೆದ್ದ ಹಿಂಸಾಚಾರ

ಢಾಕಾ: ಬಾಂಗ್ಲಾದೇಶದ ವಿದ್ಯಾರ್ಥಿ ನಾಯಕ ಷರೀಫ್ ಉಸ್ಮಾನ್ ಹಾದಿ ಸಾವಿನ ಬಳಿಕ ಬಾಂಗ್ಲಾದೇಶದ ರಾಜಧಾನಿ ಢಾಕಾದಲ್ಲಿ ಶುಕ್ರವಾರ ಬೆಳಗಿನ ಜಾವ ಹಿಂಸಾಚಾರ ಭುಗಿಲೆದ್ದಿದೆ. ಹತ್ಯೆ ಯತ್ನದಲ್ಲಿ ಗಂಭೀರವಾಗಿ ಗಾಯಗೊಂಡಿದ್ದ ಉಸ್ಮಾನ್ ಹಾದಿ, ಸಿಂಗಾಪುರದ ಆಸ್ಪತ್ರೆಯಲ್ಲಿ...

ಸತ್ನಾದಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್: ಮಧ್ಯಪ್ರದೇಶ ಸರ್ಕಾರದಿಂದ ರಕ್ತ ನಿಧಿಯ ಮುಖ್ಯಸ್ಥ ಸೇರಿ ಮೂವರು ಅಮಾನತು

ಭೋಪಾಲ್: ಸತ್ನಾ ಜಿಲ್ಲೆಯ ಸರ್ದಾರ್ ವಲ್ಲಭಭಾಯಿ ಪಟೇಲ್ ಸರ್ಕಾರಿ ಆಸ್ಪತ್ರೆಯಲ್ಲಿ ಆರು ಮಕ್ಕಳಿಗೆ ಎಚ್‌ಐವಿ ಪಾಸಿಟಿವ್ ಬಂದ ಪ್ರಕರಣಕ್ಕೆ ಸಂಬಂಧಿಸಿದಂತೆ ಮಧ್ಯಪ್ರದೇಶ ಸರ್ಕಾರ ಗುರುವಾರ ರಕ್ತ ನಿಧಿಯ ಉಸ್ತುವಾರಿ ಮತ್ತು ಇಬ್ಬರು ಪ್ರಯೋಗಾಲಯ...

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...