Homeಕರ್ನಾಟಕಮಲ ಹೊರುವ ಪದ್ಧತಿ ಇನ್ನೂ ಜೀವಂತ: ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಹೈಕೋರ್ಟ್‌

ಮಲ ಹೊರುವ ಪದ್ಧತಿ ಇನ್ನೂ ಜೀವಂತ: ಸ್ವಯಂ ಪ್ರೇರಿತ ಪ್ರಕರಣ ದಾಖಲಿಸಿಕೊಂಡ ಹೈಕೋರ್ಟ್‌

- Advertisement -
- Advertisement -

ಕಾನೂನಾತ್ಮಕ ನಿಷೇಧದ ಹೊರತಾಗಿಯೂ ರಾಜ್ಯದಲ್ಲಿ ಚಾಲ್ತಿಯಲ್ಲಿರುವ ಮಲ ತೆಗೆಯುವ, ಹೊರುವ ಪದ್ದತಿಯ ಸಂಬಂಧ ಪ್ರಕಟಗೊಂಡಿರುವ ಮಾಧ್ಯಮ ವರದಿಯನ್ನು ಸ್ವಯಂಪ್ರೇರಿತವಾಗಿ ಪರಿಗಣಿಸಿ ಪ್ರಕರಣ ದಾಖಲಿಸಲು ರಿಜಿಸ್ಟ್ರಿಗೆ ಕರ್ನಾಟಕ ಹೈಕೋರ್ಟ್‌ ಬುಧವಾರ ನಿರ್ದೇಶಿಸಿದೆ.

ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್ ದೀಕ್ಷಿತ್ ಅವರಿದ್ದ ವಿಭಾಗೀಯ ಪೀಠ, ಮಲ ಹೊರುವ ಪದ್ದತಿಯಲ್ಲಿ ಜಾತಿ ತಾರತಮ್ಯ ಒಳಗೊಂಡಿರುವುದನ್ನು ಒತ್ತಿ ಹೇಳಿದೆ. ದೇಶಕ್ಕೆ ಸ್ವಾತಂತ್ರ್ಯ ಬಂದು 60 ವರ್ಷಗಳಿಗಿಂತ ಹೆಚ್ಚು ಸಮಯ ಕಳೆದರೂ, ಸಮಾಜದಲ್ಲಿರುವ ನಮ್ಮದೇ ಸಹೋದರರು ಜಾತಿಯ ಕಾರಣಕ್ಕೆ ಈ ರೀತಿ ಕೆಲಸ ಮಾಡಬೇಕಿದೆ ಎಂದಿದೆ.

ಹೈಕೋರ್ಟ್‌ ಕಲಾಪ ಆರಂಭವಾಗುತ್ತಿದ್ದಂತೆ ಆಂಗ್ಲ ಪತ್ರಿಕೆಯೊಂದರಲ್ಲಿ ಪ್ರಕಟವಾಗಿದ್ದ ಸುದ್ದಿಯನ್ನು ಮುಖ್ಯ ನ್ಯಾಯಮೂರ್ತಿ ಪ್ರಸನ್ನ ಬಿ ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್.‌ ದೀಕ್ಷಿತ್‌ ಅವರ ನೇತೃತ್ವದ ವಿಭಾಗೀಯ ಪೀಠವು ಉಲ್ಲೇಖಿಸಿತು.

“ಇದು ಪ್ರತಿಯೊಬ್ಬರ ಆತ್ಮಸಾಕ್ಷಿಯನ್ನು ಕೆಣಕುತ್ತದೆ. ಸ್ವಾತಂತ್ರ್ಯ ಬಂದು 60 ವರ್ಷಗಳ ಬಳಿಕವೂ ನಿರ್ದಿಷ್ಟ ಸಮುದಾಯದಲ್ಲಿ ಜನಿಸಿದ, ತನ್ನದಲ್ಲದ ದುರದೃಷ್ಟಕ್ಕೆ ಅವರು ಈ ಕೆಲಸ ಮಾಡಬೇಕಿದೆ. ಇದು ಮಾನವೀಯತೆಗೆ ನಾಚಿಕೆಯಾಗುವ ಸಂಗತಿಯಲ್ಲವೇ? ಈ ಕಾರಣಕ್ಕಾಗಿ ನಾವೆಲ್ಲ ಇಲ್ಲಿ ಇದ್ದೇವೆಯೇ?” ಎಂದು ಪೀಠವು ಮೌಖಿವಾಗಿ ಕೇಳಿದೆ.

“ಯಾರೋ ಹಣಕಾಸಿನ ಸಮಸ್ಯೆ ಎದುರಿಸುತ್ತಿದ್ದಾರೆ ಎಂದ ಮಾತ್ರಕ್ಕೆ ಪ್ರಾಣಿಗಿಂತ ಕೆಟ್ಟ ಬದುಕು ಬದುಕಬೇಕೆ? ನಾವೆಲ್ಲಾ ದೇವರ ಮಕ್ಕಳು, ಇದೇನಿದು? ಯಂತ್ರೋಪಕರಣಗಳು ಇದ್ದೂ ಹೀಗೇಕೆ? ಮಲಗುಂಡಿ ಸ್ವಚ್ಛಗೊಳಿಸಲು ಒಂದು ತಾಸಿಗೆ ಎರಡು ಸಾವಿರ ರೂಪಾಯಿ ವೆಚ್ಚವಾಗುತ್ತದೆಯಷ್ಟೇ” ಎಂದು ನ್ಯಾಯಪೀಠ ಬೇಸರ ವ್ಯಕ್ತಪಡಿಸಿದ್ದಾಗಿ ಬಾರ್ ಅಂಡ್ ಬೆಂಚ್ ವರದಿ ಮಾಡಿದೆ.

ವಕೀಲ ಶ್ರೀಧರ್‌ ಪ್ರಭು ಅವರನ್ನು ಅಮಿಕಸ್‌ ಕ್ಯೂರಿಯನ್ನಾಗಿ ನೇಮಕ ಮಾಡಿ, ಸಾರ್ವಜನಿಕ ಹಿತಾಸಕ್ತ ಅರ್ಜಿ ಸಿದ್ಧಪಡಿಸಿ ಶುಕ್ರವಾರದ ಒಳಗೆ ರಿಜಿಸ್ಟ್ರಿಗೆ ಸಲ್ಲಿಸಬೇಕು. ರಿಜಿಸ್ಟ್ರಿ ಅರ್ಜಿಯನ್ನು ವಿಚಾರಣೆಗೆ ಸೋಮವಾರಕ್ಕೆ ಪಟ್ಟಿ ಮಾಡಬೇಕು ಎಂದು ಪೀಠ ನಿರ್ದೇಶನ ನೀಡಿರುವುದಾಗಿ ತಿಳಿದು ಬಂದಿದೆ.

ಕೋಲಾರದಲ್ಲಿ ದಲಿತ ಮಕ್ಕಳನ್ನು ಮಲದ ಗುಂಡಿಗೆ ಇಳಿಸಿದ ಶಿಕ್ಷಕರು:

ಕೋಲಾರದ ಮಾಲೂರು ತಾಲೂಕಿನ ಯಲುವಹಳ್ಳಿ ಮೊರಾರ್ಜಿ ದೇಸಾಯಿ ವಸತಿ ಶಾಲೆಯ ಮಕ್ಕಳನ್ನು ಮಲದ ಗುಂಡಿಯೊಳಗೆ ಇಳಿಸಿ ಸ್ವಚ್ಛಗೊಳಿಸಿದ ಘಟನೆ ಇತ್ತೀಚೆಗೆ ದೇಶದಾದ್ಯಂತ ಸುದ್ದಿಯಾಗಿತ್ತು. ಗುಂಡಿಗೆ ಇಳಿದ ಎಲ್ಲಾ ಮಕ್ಕಳು ಪರಿಶಿಷ್ಟ ಸಮುದಾಯಕ್ಕೆ ಸೇರಿದವರು ಎಂಬುವುದು ಮಾತ್ರ ಶಿಕ್ಷಕರೊಳಗಿನ ಜಾತಿಕ್ರೌರ್ಯಕ್ಕೆ ಹಿಡಿದ ಕನ್ನಡಿ ಎನ್ನಬಹುದು. ಡಿಸೆಂಬರ್ 1ರಂದು ಈ ಘಟನೆ ನಡೆದಿದ್ದು, ಡಿ.17ರಂದು ಪ್ರಕರಣ ಬೆಳಕಿದೆ ಬಂದಿದೆ. ಇದೇ ಶಾಲೆಯ ಚಿತ್ರಕಲಾ ಶಿಕ್ಷಕ ಮುನಿಯಪ್ಪ, ಮಕ್ಕಳು ಮಲದ ಗುಂಡಿ ಸ್ವಚ್ಛಗೊಳಿಸುತ್ತಿರುವುದನ್ನು ವಿಡಿಯೋ ಮಾಡಿದ್ದು, ಅದನ್ನು ಸಮಾಜ ಕಲ್ಯಾಣ ಇಲಾಖೆಯ ಸಹಾಯವಾಣಿಗೆ ಕಳಿಸಿದ್ದರು. ಕನ್ನಡದ ಪ್ರಮುಖ ಪತ್ರಿಕೆಯೊಂದು ಈ ವಿಷಯವನ್ನು ವರದಿ ಮಾಡಿ ಸರ್ಕಾರದ ಗಮನ ಸೆಳೆದಿತ್ತು.

ಈ ಪ್ರಕರಣದ ಕುರಿತು ನಾನು ಗೌರಿಯಲ್ಲಿ ಪ್ರಕಟವಾದ ವಿಸ್ಕೃತ ವರದಿ ಇಲ್ಲಿದೆ :
ದಲಿತ ಚಳವಳಿಯ ನೆಲ ಕೋಲಾರದಲ್ಲಿ ’ಅಮಾನವೀಯ ಕೃತ್ಯ’

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...