Homeಕರ್ನಾಟಕಎಸ್‌ಟಿಪಿಗಳಲ್ಲಿ 'ಮಲ ಹೊರುವ ಪದ್ದತಿ' ತಡೆಗೆ ನೀತಿ ರೂಪಿಸಲು ಹೈಕೋರ್ಟ್ ಸಲಹೆ

ಎಸ್‌ಟಿಪಿಗಳಲ್ಲಿ ‘ಮಲ ಹೊರುವ ಪದ್ದತಿ’ ತಡೆಗೆ ನೀತಿ ರೂಪಿಸಲು ಹೈಕೋರ್ಟ್ ಸಲಹೆ

- Advertisement -
- Advertisement -

ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವುದರಿಂದ ಹೆಚ್ಚಿನ ಸಾವುಗಳು ಸಂಭವಿಸುತ್ತಿರುವ ಹಿನ್ನೆಲೆ, ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳಲ್ಲಿ ಸ್ಥಾಪಿಸಲಾಗಿರುವ ಕೊಳಚೆ ನೀರು ಸಂಸ್ಕರಣಾ ಘಟಕಗಳನ್ನು (ಎಸ್‌ಟಿಪಿ) ಮೇಲ್ವಿಚಾರಣೆ ಮಾಡಲು ನೀತಿ ರೂಪಿಸುವ ಬಗ್ಗೆ ರಾಜ್ಯ ಸರ್ಕಾರ ತುರ್ತಾಗಿ ಪರಿಗಣಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಗುರುವಾರ ಮೌಖಿಕವಾಗಿ ಸಲಹೆ ನೀಡಿದೆ.

“ಎಸ್‌ಟಿಪಿಗಳಲ್ಲಿ ಮಲ ಹೊರುವ ಪದ್ದತಿ ತಡೆಗೆ ಯಾವುದಾದರು ಶಾಸನಬದ್ಧ ಕಾರ್ಯವಿಧಾನ ಇದೆಯೇ?  ಇದು ಸರ್ಕಾರದ ತುರ್ತು ಗಮನದ ಅಗತ್ಯವಿರುವ ವಿಷಯ. ಅನೇಕ ಜನರು ತಮ್ಮ ಜೀವಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ, ಎಸ್‌ಟಿಪಿ ಹೆಚ್ಚು ಯಾಂತ್ರೀಕರಿಸಬೇಕು” ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಎಂ ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ಹೇಳಿದ್ದಾರೆ.

ರಾಜ್ಯಾದ್ಯಂತ ಎಲ್ಲಾ ಖಾಸಗಿ ಮತ್ತು ಸಾರ್ವಜನಿಕ ಆಸ್ತಿಗಳಲ್ಲಿರುವ ಎಸ್‌ಟಿಪಿ ಸ್ಥಾವರಗಳ ಸಮಗ್ರ ಸಮೀಕ್ಷೆಯನ್ನು ನಡೆಸುವಂತೆ ಮತ್ತು ಅವುಗಳನ್ನು ಯಾಂತ್ರಿಕವಾಗಿ ಸ್ವಚ್ಛಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಟ್ರೇಡ್ ಯೂನಿಯನ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸುವಾಗ ಪೀಠವು ಹೀಗೆ ಅಭಿಪ್ರಾಯಪಟ್ಟಿದೆ.

ಇದಲ್ಲದೆ, ಕೆಲಸದ ಪರಿಸ್ಥಿತಿಗಳು ಮತ್ತು ಕಾರ್ಮಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಸಮಗ್ರ ಕೈಪಿಡಿಯನ್ನು ಅಭಿವೃದ್ಧಿಪಡಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಟ್ರೇಡ್ ಯೂನಿಯನ್ ಕೋರಿತ್ತು.

ಒಕ್ಕೂಟದ ಪರವಾಗಿ ಹಾಜರಾದ ವಕೀಲೆ ಮೈತ್ರೇಯಿ ಕೃಷ್ಣನ್, ಕಳೆದ ಎರಡು ವರ್ಷಗಳಲ್ಲಿ ಬೆಂಗಳೂರಿನಲ್ಲಿ ಹಸ್ತಚಾಲಿತ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವಾಗ ಸಾವುಗಳು ಸಂಭವಿಸಿವೆ. ದುರದೃಷ್ಟವಶಾತ್ ಈ ಪದ್ಧತಿ ವಿಭಿನ್ನ ರೂಪಗಳನ್ನು ಪಡೆದುಕೊಂಡಿದೆ. ಕಳೆದ ಮೂರು ವರ್ಷಗಳಿಂದ ಸಾವುಗಳು ಸಂಭವಿಸಿರುವ ಒಳಚರಂಡಿ ಸಂಸ್ಕರಣಾ ಘಟಕಗಳಲ್ಲಿ ನಡೆಯುವ ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವುದನ್ನು ಪರಿಶೀಲಿಸಲು ಈ ಅರ್ಜಿಯನ್ನು ನಿರ್ದಿಷ್ಟವಾಗಿ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

“ಸರ್ಕಾರ ಎಸ್‌ಟಿಪಿಗೆ ಸಂಬಂಧಿಸಿದಂತೆ ಒಂದು ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ರಾಜ್ಯದಲ್ಲಿ ಸ್ಥಾಪಿಸಲಾದ ಎಸ್‌ಟಿಪಿಗಳ ಸಮೀಕ್ಷೆಯನ್ನು ಮಾಡಿ ಯಾವ ಮಾರ್ಗಸೂಚಿಗಳನ್ನು ಜಾರಿಗೊಳಿಸಬಹುದು ಎಂದು ನೋಡುತ್ತೇವೆ ಎನ್ನಲಾಗಿತ್ತು. ಆದರೆ, ಇದು ಸಂಪೂರ್ಣವಾಗಿ ಅನಿಯಂತ್ರಿತವಾದ ಒಂದು ಕ್ಷೇತ್ರವಾಗಿದೆ. ಈ ಕೆಲಸವನ್ನು ಯಾರು ಮಾಡಬಹುದು ಮತ್ತು ಯಾವ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಕುರಿತು ಯಾವುದೇ ಮಾರ್ಗಸೂಚಿಗಳಿಲ್ಲ” ಎಂದು ಮೈತ್ರೇಯಿ ಕೃಷ್ಣನ್ ವಿವರಿಸಿದ್ದಾರೆ.

ರಾಜ್ಯವು ಮಾರ್ಗಸೂಚಿಗಳನ್ನು ರೂಪಿಸುವ ಪ್ರಕ್ರಿಯೆಯಲ್ಲಿದೆ. ಈಗಾಗಲೇ ಅದನ್ನು ಕೆಎಸ್‌ಪಿಸಿಬಿಗೆ ಸಲ್ಲಿಸಲಾಗಿದೆ. ಅಂತಿಮಗೊಳಿಸಿದ ನಂತರ ಅದನ್ನು ಜಾರಿಗೆ ತರಲಾಗುವುದು ಎಂದು ಹೆಚ್ಚುವರಿ ಸರ್ಕಾರಿ ವಕೀಲ ನಿಲೋಫರ್ ಅಕ್ಬರ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, “ರಾಜ್ಯದಲ್ಲಿ ಪ್ರತಿಯೊಂದು ಎಸ್‌ಟಿಪಿಯನ್ನು ಎಲ್ಲಿ ಸ್ಥಾಪಿಸಿದರೂ ಅದಕ್ಕೆ ಒಂದು ಸಂಯೋಜಿತ ಯೋಜನೆ ಇರಬೇಕು. ಅದು ಮಾರ್ಗಸೂಚಿಗಳ ಸ್ವರೂಪದಲ್ಲಿರಲಿ ಅಥವಾ ಶಾಸನಬದ್ಧ ಕಾರ್ಯವಿಧಾನವಾಗಿರಲಿ, ಅದು ನಿಮ್ಮ ದೃಷ್ಟಿಕೋನವಾಗಿದೆ. ಆದರೆ, ಅದು ಕಾನೂನಿನ ನಿಯಂತ್ರಣ ಹೊಂದಿರಬೇಕು” ಎಂದು ಹೇಳಿದೆ.

ಎಸ್‌ಟಿಪಿಗಳ ನಿರ್ವಹಣೆಗೆ ಕೆಲವು ಕಾರ್ಯವಿಧಾನ ಮತ್ತು ಮೇಲ್ವಿಚಾರಣಾ ಕಾರ್ಯವಿಧಾನ ಇರಬೇಕು.  ಅಧಿಕಾರಿಗಳು ಒಟ್ಟಾಗಿ ಕುಳಿತು ಆ ಬಗ್ಗೆ ಮನಸ್ಸು ಮಾಡಿದರೆ ಮಾತ್ರ ಅದು ಸಾಧ್ಯವಾಗುತ್ತದೆ ಎಂದಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಎಸ್‌ಟಿಪಿಗಳ ಮೇಲೆ ನಿಗಾ ಇಡುತ್ತಿಲ್ಲವೇ ಎಂದೂ ನ್ಯಾಯಾಲಯ ಕೇಳಿದೆ.

ಇದಕ್ಕೆ ಉತ್ತರಿಸಿದ ವಕೀಲೆ ಕೃಷ್ಣನ್, “ಮಾಲಿನ್ಯ ನಿಯಂತ್ರಣ ಮಂಡಳಿಯು ಪರಿಸರದ ವಿಷಯ ನೋಡುತ್ತದೆ ಮತ್ತು ಸ್ಥಾವರಗಳ ಸ್ಥಾಪನೆಯನ್ನು ನಿರ್ದೇಶಿಸುತ್ತದೆ. ಕಾರ್ಮಿಕರ ವಿಷಯದಲ್ಲಿ ಇದು ಅನಿಯಂತ್ರಿತವಾಗಿಯೇ ಉಳಿದಿದೆ. ಕಳೆದ ವರ್ಷ ಎಸ್‌ಟಿಪಿಯಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದರು. ಮಂಡಳಿ ಅಲ್ಲೇ ಇತ್ತು, ನಾವು ಕಾರ್ಮಿಕರನ್ನು ನೋಡುವುದಿಲ್ಲ ಎಂದು ಅದು ಹೇಳಿದೆ” ಎಂದು ಹೇಳಿದ್ದಾರೆ.

ನಂತರ ನ್ಯಾಯಾಲಯವು, ಎಸ್‌ಟಿಪಿಗಳಲ್ಲಿ ಹಸ್ತಚಾಲಿತ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವ ಪದ್ಧತಿಗಳನ್ನು ಪರಿಶೀಲಿಸಲು ಸುರಕ್ಷತಾ ಮಾರ್ಗಸೂಚಿಗಳನ್ನು ರೂಪಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ನಿರ್ದೇಶಿಸಿದೆ.

ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

ಕೆಲಸದ ಅವಧಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರ: ಕಾರ್ಮಿಕ ಸಂಘಟನೆಗಳಿಂದ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...