Homeಕರ್ನಾಟಕಎಸ್‌ಟಿಪಿಗಳಲ್ಲಿ 'ಮಲ ಹೊರುವ ಪದ್ದತಿ' ತಡೆಗೆ ನೀತಿ ರೂಪಿಸಲು ಹೈಕೋರ್ಟ್ ಸಲಹೆ

ಎಸ್‌ಟಿಪಿಗಳಲ್ಲಿ ‘ಮಲ ಹೊರುವ ಪದ್ದತಿ’ ತಡೆಗೆ ನೀತಿ ರೂಪಿಸಲು ಹೈಕೋರ್ಟ್ ಸಲಹೆ

- Advertisement -
- Advertisement -

ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವುದರಿಂದ ಹೆಚ್ಚಿನ ಸಾವುಗಳು ಸಂಭವಿಸುತ್ತಿರುವ ಹಿನ್ನೆಲೆ, ಸಾರ್ವಜನಿಕ ಮತ್ತು ಖಾಸಗಿ ಆಸ್ತಿಗಳಲ್ಲಿ ಸ್ಥಾಪಿಸಲಾಗಿರುವ ಕೊಳಚೆ ನೀರು ಸಂಸ್ಕರಣಾ ಘಟಕಗಳನ್ನು (ಎಸ್‌ಟಿಪಿ) ಮೇಲ್ವಿಚಾರಣೆ ಮಾಡಲು ನೀತಿ ರೂಪಿಸುವ ಬಗ್ಗೆ ರಾಜ್ಯ ಸರ್ಕಾರ ತುರ್ತಾಗಿ ಪರಿಗಣಿಸಬೇಕು ಎಂದು ಕರ್ನಾಟಕ ಹೈಕೋರ್ಟ್ ಗುರುವಾರ ಮೌಖಿಕವಾಗಿ ಸಲಹೆ ನೀಡಿದೆ.

“ಎಸ್‌ಟಿಪಿಗಳಲ್ಲಿ ಮಲ ಹೊರುವ ಪದ್ದತಿ ತಡೆಗೆ ಯಾವುದಾದರು ಶಾಸನಬದ್ಧ ಕಾರ್ಯವಿಧಾನ ಇದೆಯೇ?  ಇದು ಸರ್ಕಾರದ ತುರ್ತು ಗಮನದ ಅಗತ್ಯವಿರುವ ವಿಷಯ. ಅನೇಕ ಜನರು ತಮ್ಮ ಜೀವಗಳನ್ನು ಕಳೆದುಕೊಳ್ಳುತ್ತಿದ್ದಾರೆ. ಹಾಗಾಗಿ, ಎಸ್‌ಟಿಪಿ ಹೆಚ್ಚು ಯಾಂತ್ರೀಕರಿಸಬೇಕು” ಎಂದು ಹಂಗಾಮಿ ಮುಖ್ಯ ನ್ಯಾಯಮೂರ್ತಿ ವಿ.ಎಂ ಕಾಮೇಶ್ವರ ರಾವ್ ಮತ್ತು ನ್ಯಾಯಮೂರ್ತಿ ಸಿ.ಎಂ ಜೋಶಿ ಹೇಳಿದ್ದಾರೆ.

ರಾಜ್ಯಾದ್ಯಂತ ಎಲ್ಲಾ ಖಾಸಗಿ ಮತ್ತು ಸಾರ್ವಜನಿಕ ಆಸ್ತಿಗಳಲ್ಲಿರುವ ಎಸ್‌ಟಿಪಿ ಸ್ಥಾವರಗಳ ಸಮಗ್ರ ಸಮೀಕ್ಷೆಯನ್ನು ನಡೆಸುವಂತೆ ಮತ್ತು ಅವುಗಳನ್ನು ಯಾಂತ್ರಿಕವಾಗಿ ಸ್ವಚ್ಛಗೊಳಿಸುವುದನ್ನು ಖಚಿತಪಡಿಸಿಕೊಳ್ಳಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಕೋರಿ ಆಲ್ ಇಂಡಿಯಾ ಸೆಂಟ್ರಲ್ ಕೌನ್ಸಿಲ್ ಟ್ರೇಡ್ ಯೂನಿಯನ್ ಸಲ್ಲಿಸಿದ್ದ ಅರ್ಜಿಯನ್ನು ವಿಚಾರಣೆ ನಡೆಸುವಾಗ ಪೀಠವು ಹೀಗೆ ಅಭಿಪ್ರಾಯಪಟ್ಟಿದೆ.

ಇದಲ್ಲದೆ, ಕೆಲಸದ ಪರಿಸ್ಥಿತಿಗಳು ಮತ್ತು ಕಾರ್ಮಿಕರ ಸುರಕ್ಷತೆಗೆ ಸಂಬಂಧಿಸಿದಂತೆ ಸಮಗ್ರ ಕೈಪಿಡಿಯನ್ನು ಅಭಿವೃದ್ಧಿಪಡಿಸಲು ಸರ್ಕಾರಕ್ಕೆ ನಿರ್ದೇಶನ ನೀಡುವಂತೆ ಟ್ರೇಡ್ ಯೂನಿಯನ್ ಕೋರಿತ್ತು.

ಒಕ್ಕೂಟದ ಪರವಾಗಿ ಹಾಜರಾದ ವಕೀಲೆ ಮೈತ್ರೇಯಿ ಕೃಷ್ಣನ್, ಕಳೆದ ಎರಡು ವರ್ಷಗಳಲ್ಲಿ ಬೆಂಗಳೂರಿನಲ್ಲಿ ಹಸ್ತಚಾಲಿತ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವಾಗ ಸಾವುಗಳು ಸಂಭವಿಸಿವೆ. ದುರದೃಷ್ಟವಶಾತ್ ಈ ಪದ್ಧತಿ ವಿಭಿನ್ನ ರೂಪಗಳನ್ನು ಪಡೆದುಕೊಂಡಿದೆ. ಕಳೆದ ಮೂರು ವರ್ಷಗಳಿಂದ ಸಾವುಗಳು ಸಂಭವಿಸಿರುವ ಒಳಚರಂಡಿ ಸಂಸ್ಕರಣಾ ಘಟಕಗಳಲ್ಲಿ ನಡೆಯುವ ಕೈಯಿಂದ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವುದನ್ನು ಪರಿಶೀಲಿಸಲು ಈ ಅರ್ಜಿಯನ್ನು ನಿರ್ದಿಷ್ಟವಾಗಿ ಸಲ್ಲಿಸಲಾಗಿದೆ ಎಂದು ಹೇಳಿದ್ದಾರೆ.

“ಸರ್ಕಾರ ಎಸ್‌ಟಿಪಿಗೆ ಸಂಬಂಧಿಸಿದಂತೆ ಒಂದು ಪ್ರಕ್ರಿಯೆಯನ್ನು ಪ್ರಾರಂಭಿಸಿದೆ. ರಾಜ್ಯದಲ್ಲಿ ಸ್ಥಾಪಿಸಲಾದ ಎಸ್‌ಟಿಪಿಗಳ ಸಮೀಕ್ಷೆಯನ್ನು ಮಾಡಿ ಯಾವ ಮಾರ್ಗಸೂಚಿಗಳನ್ನು ಜಾರಿಗೊಳಿಸಬಹುದು ಎಂದು ನೋಡುತ್ತೇವೆ ಎನ್ನಲಾಗಿತ್ತು. ಆದರೆ, ಇದು ಸಂಪೂರ್ಣವಾಗಿ ಅನಿಯಂತ್ರಿತವಾದ ಒಂದು ಕ್ಷೇತ್ರವಾಗಿದೆ. ಈ ಕೆಲಸವನ್ನು ಯಾರು ಮಾಡಬಹುದು ಮತ್ತು ಯಾವ ಸುರಕ್ಷತಾ ಕ್ರಮಗಳನ್ನು ತೆಗೆದುಕೊಳ್ಳಬೇಕು ಎಂಬುದರ ಕುರಿತು ಯಾವುದೇ ಮಾರ್ಗಸೂಚಿಗಳಿಲ್ಲ” ಎಂದು ಮೈತ್ರೇಯಿ ಕೃಷ್ಣನ್ ವಿವರಿಸಿದ್ದಾರೆ.

ರಾಜ್ಯವು ಮಾರ್ಗಸೂಚಿಗಳನ್ನು ರೂಪಿಸುವ ಪ್ರಕ್ರಿಯೆಯಲ್ಲಿದೆ. ಈಗಾಗಲೇ ಅದನ್ನು ಕೆಎಸ್‌ಪಿಸಿಬಿಗೆ ಸಲ್ಲಿಸಲಾಗಿದೆ. ಅಂತಿಮಗೊಳಿಸಿದ ನಂತರ ಅದನ್ನು ಜಾರಿಗೆ ತರಲಾಗುವುದು ಎಂದು ಹೆಚ್ಚುವರಿ ಸರ್ಕಾರಿ ವಕೀಲ ನಿಲೋಫರ್ ಅಕ್ಬರ್ ನ್ಯಾಯಾಲಯಕ್ಕೆ ಮಾಹಿತಿ ನೀಡಿದ್ದಾರೆ.

ಇದಕ್ಕೆ ಪ್ರತಿಕ್ರಿಯಿಸಿದ ನ್ಯಾಯಾಲಯ, “ರಾಜ್ಯದಲ್ಲಿ ಪ್ರತಿಯೊಂದು ಎಸ್‌ಟಿಪಿಯನ್ನು ಎಲ್ಲಿ ಸ್ಥಾಪಿಸಿದರೂ ಅದಕ್ಕೆ ಒಂದು ಸಂಯೋಜಿತ ಯೋಜನೆ ಇರಬೇಕು. ಅದು ಮಾರ್ಗಸೂಚಿಗಳ ಸ್ವರೂಪದಲ್ಲಿರಲಿ ಅಥವಾ ಶಾಸನಬದ್ಧ ಕಾರ್ಯವಿಧಾನವಾಗಿರಲಿ, ಅದು ನಿಮ್ಮ ದೃಷ್ಟಿಕೋನವಾಗಿದೆ. ಆದರೆ, ಅದು ಕಾನೂನಿನ ನಿಯಂತ್ರಣ ಹೊಂದಿರಬೇಕು” ಎಂದು ಹೇಳಿದೆ.

ಎಸ್‌ಟಿಪಿಗಳ ನಿರ್ವಹಣೆಗೆ ಕೆಲವು ಕಾರ್ಯವಿಧಾನ ಮತ್ತು ಮೇಲ್ವಿಚಾರಣಾ ಕಾರ್ಯವಿಧಾನ ಇರಬೇಕು.  ಅಧಿಕಾರಿಗಳು ಒಟ್ಟಾಗಿ ಕುಳಿತು ಆ ಬಗ್ಗೆ ಮನಸ್ಸು ಮಾಡಿದರೆ ಮಾತ್ರ ಅದು ಸಾಧ್ಯವಾಗುತ್ತದೆ ಎಂದಿದೆ. ರಾಜ್ಯ ಮಾಲಿನ್ಯ ನಿಯಂತ್ರಣ ಮಂಡಳಿಯು ಎಸ್‌ಟಿಪಿಗಳ ಮೇಲೆ ನಿಗಾ ಇಡುತ್ತಿಲ್ಲವೇ ಎಂದೂ ನ್ಯಾಯಾಲಯ ಕೇಳಿದೆ.

ಇದಕ್ಕೆ ಉತ್ತರಿಸಿದ ವಕೀಲೆ ಕೃಷ್ಣನ್, “ಮಾಲಿನ್ಯ ನಿಯಂತ್ರಣ ಮಂಡಳಿಯು ಪರಿಸರದ ವಿಷಯ ನೋಡುತ್ತದೆ ಮತ್ತು ಸ್ಥಾವರಗಳ ಸ್ಥಾಪನೆಯನ್ನು ನಿರ್ದೇಶಿಸುತ್ತದೆ. ಕಾರ್ಮಿಕರ ವಿಷಯದಲ್ಲಿ ಇದು ಅನಿಯಂತ್ರಿತವಾಗಿಯೇ ಉಳಿದಿದೆ. ಕಳೆದ ವರ್ಷ ಎಸ್‌ಟಿಪಿಯಲ್ಲಿ ಇಬ್ಬರು ಕಾರ್ಮಿಕರು ಸಾವನ್ನಪ್ಪಿದ್ದರು. ಮಂಡಳಿ ಅಲ್ಲೇ ಇತ್ತು, ನಾವು ಕಾರ್ಮಿಕರನ್ನು ನೋಡುವುದಿಲ್ಲ ಎಂದು ಅದು ಹೇಳಿದೆ” ಎಂದು ಹೇಳಿದ್ದಾರೆ.

ನಂತರ ನ್ಯಾಯಾಲಯವು, ಎಸ್‌ಟಿಪಿಗಳಲ್ಲಿ ಹಸ್ತಚಾಲಿತ ಶೌಚಗುಂಡಿಗಳನ್ನು ಸ್ವಚ್ಛಗೊಳಿಸುವ ಪದ್ಧತಿಗಳನ್ನು ಪರಿಶೀಲಿಸಲು ಸುರಕ್ಷತಾ ಮಾರ್ಗಸೂಚಿಗಳನ್ನು ರೂಪಿಸುವಂತೆ ಕೋರಿ ಸಲ್ಲಿಸಿರುವ ಅರ್ಜಿಗೆ ತಮ್ಮ ಪ್ರತಿಕ್ರಿಯೆಯನ್ನು ಸಲ್ಲಿಸುವಂತೆ ರಾಜ್ಯ ಸರ್ಕಾರದ ಅಧಿಕಾರಿಗಳಿಗೆ ನಿರ್ದೇಶಿಸಿದೆ.

ನಾಲ್ಕು ವಾರಗಳಲ್ಲಿ ಪ್ರತಿಕ್ರಿಯೆ ಸಲ್ಲಿಸಬೇಕು ಎಂದು ನ್ಯಾಯಾಲಯ ಆದೇಶಿಸಿದೆ.

ಕೆಲಸದ ಅವಧಿ ಹೆಚ್ಚಿಸಲು ಮುಂದಾದ ರಾಜ್ಯ ಸರ್ಕಾರ: ಕಾರ್ಮಿಕ ಸಂಘಟನೆಗಳಿಂದ ತೀವ್ರ ವಿರೋಧ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...

ಕ್ಷೇತ್ರ ಮರುವಿಂಗಡನೆ : ಗೃಹ ಸಚಿವ ಅಮಿತ್ ಶಾ ಹೇಳಿದ್ದೆಲ್ಲವು ನಿಜವೇ?..ಇಲ್ಲಿದೆ ವಾಸ್ತವಾಂಶ

ದೇಶದ ಗೃಹ ಸಚಿವರು ಸಂಸತ್ತಿನಲ್ಲಿ ಪ್ರಮುಖ ಕಾನೂನಿನ ಬಗ್ಗೆ ವಿವರಿಸುವಾಗ ವಿಷಯ ಸ್ಪಷ್ಟವಾಗಿರಬೇಕು. ಆದರೆ, ಕ್ಷೇತ್ರ ಮರುವಿಂಗಡನೆ ಕುರಿತು ಗೃಹ ಸಚಿವ ಅಮಿತ್ ಶಾ ಮಾತನಾಡಿರುವುದು ಹಾಗಿರಲಿಲ್ಲ. ದಕ್ಷಿಣ ಭಾರತದ ರಾಜ್ಯಗಳು ತಮ್ಮ...

ಮಹಿಳಾ ಮೀಸಲು ಮಸೂದೆ 2023ರಲ್ಲೇ ಗೆದ್ದಿದೆ, ಈಗ ಸೋತಿರುವುದು ಮೋದಿ ಸರ್ಕಾರ

ಮೋದಿ ಸರ್ಕಾರ ಮಂಡಿಸಿದ್ದ ಮಹಿಳಾ ಮೀಸಲಾತಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾಗಿದೆ ಎಂಬುವುದು ದೇಶದಲ್ಲಿ ಪ್ರಸ್ತುತ ದೊಡ್ಡ ಚರ್ಚೆಯ ವಿಷಯವಾಗಿದೆ. ಕಾಂಗ್ರೆಸ್‌ ನೇತೃತ್ವದಲ್ಲಿ ವಿಪಕ್ಷಗಳು ಮಸೂದೆಯನ್ನು ಸೋಲಿಸುವ ಮೂಲಕ ದೇಶದ ಮಹಿಳೆಯರ ಸಬಲೀಕರಣಕ್ಕೆ...

ಕ್ಯಾಂಪಸ್ ಜಾತಿ ತಾರತಮ್ಯ ವಿರುದ್ಧದ ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ರಾಜ್ಯ ಸಚಿವ ಸಂಪುಟ ಗುರುವಾರ (ಏ.16) ರಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ'ಗೆ ಅನುಮೋದನೆ ನೀಡಿತು. ಜೊತೆಗೆ, ಪ್ರಮುಖ ಮೂಲಸೌಕರ್ಯ ಮತ್ತು...

ಮಧ್ಯಪ್ರದೇಶ| ವಂದೇ ಮಾತರಂ ಹಾಡಲು ನಿರಾಕರಣೆ; ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್

ಏಪ್ರಿಲ್ 8 ರಂದು ಇಂದೋರ್ ಮುನ್ಸಿಪಲ್ ಕಾರ್ಪೊರೇಷನ್‌ನ ಬಜೆಟ್ ಅಧಿವೇಶನದಲ್ಲಿ ಧಾರ್ಮಿಕ ಮತ್ತು ಸಾಂವಿಧಾನಿಕ ಕಾರಣಗಳನ್ನು ಉಲ್ಲೇಖಿಸಿ ವಂದೇ ಮಾತರಂ ಹಾಡಲು ನಿರಾಕರಿಸಿದ್ದಕ್ಕಾಗಿ ಮಧ್ಯಪ್ರದೇಶ ಪೊಲೀಸರು ಇಬ್ಬರು ಕಾಂಗ್ರೆಸ್ ಕೌನ್ಸಿಲರ್‌ಗಳ ವಿರುದ್ಧ ಎಫ್‌ಐಆರ್...

ನ್ಯಾಯಾಂಗ ಸೇವೆಗಳು, ಸರ್ಕಾರಿ ಸಮಿತಿಗಳಲ್ಲಿ ಶೇ. 50 ಮಹಿಳಾ ಪ್ರಾತಿನಿಧ್ಯ ಕೋರಿ ಪಿಐಎಲ್ : ವಜಾಗೊಳಿಸಿದ ಸುಪ್ರೀಂ ಕೋರ್ಟ್

ಸರ್ಕಾರಿ ಸಮಿತಿಗಳು ಮತ್ತು ನ್ಯಾಯಾಂಗ ಸೇವೆಯ ಖಾಲಿ ಇರುವ ಸ್ಥಾನಗಳಲ್ಲಿ ಮಹಿಳೆಯರಿಗೆ ಶೇ. 50ರಷ್ಟು ಪ್ರಾತಿನಿಧ್ಯ ನೀಡಬೇಕೆಂದು ಕೋರಿ ಸಲ್ಲಿಸಲಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಯನ್ನು (ಪಿಐಎಲ್‌) ವಿಚಾರಣೆಗೆ ಸ್ವೀಕರಿಸಲು ಸುಪ್ರೀಂ ಕೋರ್ಟ್ ಗುರುವಾರ...

ರಷ್ಯಾ ತೈಲ ಖರೀದಿಸಲು ಭಾರತಕ್ಕೆ ನೀಡಿದ್ದ ಕಾಲಾವಕಾಶ ವಿಸ್ತರಿಸುವುದಿಲ್ಲ: ಅಮೆರಿಕ

ಇರಾನ್ ಮತ್ತು ರಷ್ಯಾದಿಂದ ತೈಲವನ್ನು ಖರೀದಿಸಲು ಭಾರತ ಸೇರಿದಂತೆ ವಿವಿಧ ದೇಶಗಳಿಗೆ ಈವರೆಗೆ ನೀಡಲಾಗಿದ್ದ ನಿರ್ಬಂಧ ಸಡಿಲಿಕೆಯನ್ನು ಇನ್ನು ಮುಂದೆ ಮುಂದುವರಿಸುವುದಿಲ್ಲ ಎಂದು ಅಮೆರಿಕದ ಖಜಾನೆ ಕಾರ್ಯದರ್ಶಿ ಸ್ಕಾಟ್ ಬೆಸೆಂಟ್ ಬುಧವಾರ (ಏ.15)...