Homeಮುಖಪುಟವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆ

ವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆ

ಈ ರೀತಿಯ ಘಟನೆ ಅಮೆರಿಕ ಅಥವಾ ಯೂರೋಪ್‌‌ನಲ್ಲಿ ಆಗಿದ್ದರೆ ಕೋಟ್ಯಂತರ ರೂಪಾಯಿ ದಂಡವನ್ನು ಆರೋಪಿಗಳಿಗೆ ಪೊಲೀಸ್‌ ಇಲಾಖೆ ಕಟ್ಟಬೇಕಾಗಿತ್ತು ಎಂದು ವೆಬ್‌ಸೀರೀಸ್‌ ನೋಡಿದವರು ಟೀಕಿಸಿದ್ದಾರೆ.

- Advertisement -
- Advertisement -

ನೆಟ್‌ಪ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿರುವ ‘ಕ್ರೈಮ್‌ ಸ್ಟೋರೀಸ್‌: ಇಂಡಿಯಾ ಡೆಟೆಕ್ಟೀವ್ಸ್‌’ ಸಾಕ್ಷ್ಯಚಿತ್ರ ಸರಣಿಯ ಮೊದಲ ಸಂಚಿಕೆಯ ಪ್ರಸಾರವನ್ನು ತಡೆ ಹಿಡಿಯಲು ಕರ್ನಾಟಕ ಹೈಕೋರ್ಟ್‌ ಸೂಚಿಸಿದೆ.

ನೆಟ್‌ಪ್ಲಿಕ್‌ ಇಂಟರ್‌ಟೈನ್‌ಮೆಂಟ್‌ ಸರ್ವೀಸ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಓಟಿಟಿಯಲ್ಲಿ ಈ ಸಾಕ್ಷ್ಯಚಿತ್ರ ಸರಣಿ ಬಿಡುಗಡೆಯಾಗಿದ್ದು, ಕರ್ನಾಟಕದಲ್ಲಿ ನಡೆದ ಅಪರಾಧ ಪ್ರಕರಣಗಳ ಕುರಿತು ಚಿತ್ರೀಕರಿಸಲಾಗಿದೆ. ಒಟ್ಟು ನಾಲ್ಕು ಸಂಚಿಕೆಗಳನ್ನು ಬಿಡುಗಡೆ ಮಾಡಲಾಗಿದ್ದು, ಒಂದೊಂದು ಸಂಚಿಕೆಯೂ ಒಂದೊಂದು ನೈಜ ಘಟನೆಯನ್ನು ಆಧರಿಸಿವೆ.

ಮೊದಲ ಸಂಚಿಕೆಯು ‘ಎ ಮರ್ಡರ್‌ ಮದರ್‌’ ಎಂದಿದ್ದು, ಅದಕ್ಕೆ ಜಸ್ಟೀಸ್‌ ಬಿ.ಎಂ.ಶ್ಯಾಮ್‌ ಪ್ರಸಾದ್‌ ಅಕ್ಟೋಬರ್‌ 1ರಂದು ಮಧ್ಯಂತರ ತಡೆಯಾಜ್ಞೆಯನ್ನು ಹೊರಡಿಸಿದ್ದಾರೆ.

ಕೆ.ಆರ್‌.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2020ರ ಫೆಬ್ರುವರಿಯಲ್ಲಿ ನಡೆದ 54 ವರ್ಷದ ನಿರ್ಮಲಾ ಚಂದ್ರಶೇಖರ್‌ ಕೊಲೆ ಪ್ರಕರಣದ ಸಹ ಆರೋಪಿ, ಬೆಂಗಳೂರಿನ ನಿವಾಸಿ ಶ್ರೀಧರ್‌ ರಾವ್ ಎಸ್‌ (28) ಅವರು ‘ಎ ಮರ್ಡರ್‌ ಮದರ್‌’ ಸಂಚಿಕೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಅರ್ಜಿದಾರರು (ಸಹ ಆರೋಪಿ ಶ್ರೀಧರ್‌ ರಾವ್‌) ಮತ್ತು ಪ್ರಮುಖ ಆರೋಪಿ ಅಮೃತ ಚಂದ್ರಶೇಖರ್ ವಿರುದ್ಧದ ತನಿಖೆಯ ದೃಶ್ಯಗಳನ್ನು ಈ ಸರಣಿ ಒಳಗೊಂಡಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಆರೋಪಿ ಅಮೃತಾ ತನ್ನ ತಾಯಿಯನ್ನು ಕೊಂದು, ಸಹೋದರನನ್ನೂ ಕೊಲ್ಲಲು ಯತ್ನಿಸಿ ಬಳಿಕ ಸಹಆರೋಪಿ (ಅರ್ಜಿದಾರ) ಜೊತೆ ಅಂಡಮಾನ್‌ ನಿಕೋಬಾರ್‌ಗೆ ಫೆಬ್ರುವರಿ 2ರಂದು ವಿಮಾನ ಹತ್ತಿದ್ದರು ಎಂದು ಸಂಚಿಕೆಯಲ್ಲಿ ನಿರೂಪಿಸಲಾಗಿದೆ.

ಇದನ್ನೂ ಓದಿರಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

“ಅರ್ಜಿದಾರನು ಕಳೆದ ವರ್ಷದ ಫೆಬ್ರುವರಿಯಲ್ಲಿ ಬಂಧನಕ್ಕೆ ಒಳಗಾಗಿದ್ದಾಗ ಆತನ ಎಲ್ಲ ಚಲನವಲನಗಳನ್ನು ರೆಕಾರ್ಡ್‌ ಮಾಡಿಕೊಳ್ಳಲು, ವಿವಿಧ ಅಧಿಕಾರಿಗಳ ಸಂದರ್ಶನ ನಡೆಸಲು ಮಿನ್‌ನೌ ಫಿಲ್ಮ್ಸ್‌‌ನ ಕ್ಲೈರೇ ಗುಡ್‌ಲಾಸ್‌ ಮತ್ತು ಆಕೆಯ ತಂಡಕ್ಕೆ ಪೊಲೀಸರು ಅಧಿಕಾರ ನೀಡಿದ್ದಾರೆ” ಎಂದು ಅರ್ಜಿದಾರರು ಆರೋಪಿಸಿದ್ದಾರೆ.

“ಯಾವುದೇ ಅಧಿಕೃತ ಅನುಮತಿ ಇಲ್ಲದೇ ವಿಡಿಯೋ ಚಿತ್ರೀಕರಣ ಮಾಡಲಾಯಿತು, ಹೇಳಿಕೆಯನ್ನು ಪಡೆಯಲಾಯಿತು. ಮಿನ್‌ನೌ ಫಿಲ್ಮ್ಸ್‌ನವರ ಪತ್ರದ ಮೇಲೆ ಪೊಲೀಸರು ಬಲವಂತವಾಗಿ ಸಹಿ ಪಡೆದಿದ್ದಾರೆ” ಎಂದು ಅರ್ಜಿದಾರರು ಕೋರ್ಟ್‌‌ಗೆ ತಿಳಿಸಿದ್ದಾರೆ.

ವೆಬ್‌ ಸೀರೀಸ್‌ಗೆ ಆಕ್ಷೇಪ: ಕೀಲಾರ ನಾಗೇಗೌಡರ ಆಕ್ಷೇಪ

ಸದರಿ ವೆಬ್‌ ಸೀರೀಸ್‌ ಕುರಿತು, ನೆಟ್‌ಪ್ಲಿಕ್ಸ್‌ನ ಹಲವು ಬಳಕೆದಾರರು ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿದ್ದಾರೆ. ಇಂತಹ ವೆಬ್‌ ಸೀರೀಸ್‌ಗಳನ್ನು ನೋಡಿ ಹೊಗಳುವಾಗ ಮುನ್ನ ಎಚ್ಚರಿಕೆ ವಹಿಸಬೇಕು ಎಂದು ಪ್ರಜ್ಞಾವಂತರು ಅಭಿಪ್ರಾಯ ತಾಳಿದ್ದಾರೆ.

ಬರಹಗಾರ ನಾಗೇಗೌಡ ಕೀಲಾರ ಶಿವಲಿಂಗಯ್ಯ ಅವರು ತಮ್ಮ ಫೇಸ್‌ಬುಕ್‌ನಲ್ಲಿ ಆಕ್ಷೇಪ ಎತ್ತಿದ್ದಾರೆ. “ಕರ್ನಾಟಕ ಪೊಲೀಸ್‌ನವರದು ಒಂದು detective web series Netflixನಲ್ಲಿ ಬಂದಿದೆ ಅಂತ ಕುತೂಹಲದಿಂದ ಮೊದಲ ಎಪಿಸೋಡ್ ನೋಡಿದೆ. ಇದರಲ್ಲಿ ಯಾವುದೇ detective ಅಂಶಗಳು ಇರಲಿಲ್ಲ. ಇದೊಂದು open and shut case ಆಗಿತ್ತು” ಎಂದಿದ್ದಾರೆ.

ಮುಂದುವರಿದು, “ಬಡವರ ಮನೆ ಮಕ್ಕಳು ಈ ಮರ್ಡರ್‌‌ನಲ್ಲಿ ಆರೋಪಿಗಳು ಆಗಿರುವುದರಿಂದ ಪೊಲೀಸ್‌ನವರು ಆ ಆರೋಪಿಗಳ ಘನತೆಗೆ ಯಾವುದೇ ಬೆಲೆ ಕೊಡದೇ ಅವರನ್ನು ಈ ವೆಬ್‌ ಸೀರೀಸ್‌ನಲ್ಲಿ ತೋರಿಸಲು ಅವಕಾಶ ಕಲ್ಪಿಸಿದ್ದಾರೆ. ಆರೋಪಿಗಳ privacy ಹಕ್ಕುಗಳನ್ನು ಉಲ್ಲಂಘಿಸಿ ಅವರ ಮೆಸೇಜ್, ಬ್ಯಾಂಕ್ ಖಾತೆಯ ವಿವರಗಳು, ವೈಯಕ್ತಿಕ ವಿಚಾರಗಳು ಎಲ್ಲವನ್ನೂ web seriesನಲ್ಲಿ ತೋರಿಸಿದ್ದಾರೆ. ಇದಕ್ಕೆ ನಮ್ಮ ಕರ್ನಾಟಕ ಪೊಲೀಸ್‌‌ನವರು ಅವಕಾಶ ಕೊಟ್ಟಿದ್ದಾರೆ” ಎಂದಿದ್ದಾರೆ.

“ಈ ಮರ್ಡರ್‌‌ನಲ್ಲಿ ಬರುವ ಒಬ್ಬ ಆರೋಪಿ ಇವರ ಪ್ರಕಾರವೇ ನಿರಪರಾಧಿಯಾದರೂ ಇವನ ಮೇಲೆ ಕರ್ನಾಟಕ ಪೋಲಿಸ್‌‌ನವರು ಮರ್ಡರ್ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಈ ರೀತಿಯದ್ದು ಅಮೆರಿಕ ಅಥವಾ ಯೂರೋಪ್‌‌ನಲ್ಲಿ ಆಗಿದ್ದರೆ ಕೋಟ್ಯಂತರ ರೂಪಾಯಿ ದಂಡವನ್ನು ಆರೋಪಿಗಳಿಗೆ ಪೊಲೀಸ್‌ ಇಲಾಖೆ ಕಟ್ಟಬೇಕಾಗಿತ್ತು. ಜೊತೆಗೆ ಈ ಪೊಲೀಸ್‌‌ ಅಧಿಕಾರಿಗಳು ಕೆಲಸ ಕಳೆದುಕೊಳ್ಳುತ್ತಿದ್ದರು. ಇವರಿಗೆ ಅವರ PF, pension ಕೂಡ ಸಿಗುತ್ತಿರಲಿಲ್ಲ. ಆದರೆ ಭಾರತದಲ್ಲಿ ಬಡವರ ಮನೆ ಮಕ್ಕಳು ಅಂದರೆ ಯಾವುದೇ ಗೌರವ ಇಲ್ಲ. ನನ್ನ ಅಭಿಪ್ರಾಯದಲ್ಲಿ ಕರ್ನಾಟಕ ಪೊಲೀಸ್‌ನವರು ಆರೋಪಿಗಳಿಗೆ ಸಾರ್ವಜನಿಕ ಕ್ಷಮೆ ಕೇಳಿ ಒಂದು ದೊಡ್ಡ ಮೊತ್ತದ ದಂಡ ಕಟ್ಟಿಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

“ದುರಂತ ಏನು ಅಂದರೆ ಕರ್ನಾಟಕದ ಒಂದಷ್ಟು ಸಿನಿಮಾ ಪ್ರಿಯರು ಇದೊಂದು ಅದ್ಭುತ ವೆಬ್ series ಅಂತ ಒಂದು ಕ್ಲಬ್ ಹೌಸ್ ಚರ್ಚೆ ಕೂಡ ನಡೆಸಿದರು. ಆ ಚರ್ಚೆಯಲ್ಲಿ ತಮ್ಮನ್ನು ತಾವೇ ಸಿನಿಮಾ ವಿಮರ್ಶಕರು ಅಂತ ಕರೆಸಿಕೊಳ್ಳುವವರು ಒಂದು ಘನವಾದ ಚರ್ಚೆ ಕೂಡ ಮಾಡಿದ್ದು ಅಲ್ಲದೇ ಮಾನವ ಹಕ್ಕುಗಳನ್ನು ಉಲ್ಲಂಘಿಸಿದ ಆ ಪೊಲೀಸ್‌ ಅಧಿಕಾರಿಗಳನ್ನು ಆ ಚರ್ಚೆಗೆ ಕರೆಸಿ ಹೊಗಳಿದ್ದೇ ಹೊಗಳಿದ್ದು. ಇಂತಹ ಮೂರ್ಖ ಸಿನಿಮಾ ವಿಮರ್ಶಕರಿಗೆ ವ್ಯಕ್ತಿ ಘನತೆ, ಮಾನವ ಹಕ್ಕುಗಳು, ನಮ್ಮ ನೆಲದ ಕಾನೂನಿನ ಬಗ್ಗೆ ಕಿಂಚಿತ್ತೂ ತಿಳಿವಳಿಕೆ ಇಲ್ಲ” ಎಂದು ವಿಷಾದಿಸಿದ್ದಾರೆ.

ದಯಾ ಗಂಗನಘಟ್ಟ ಅವರು ಪ್ರತಿಕ್ರಿಯಿಸಿ, “ಜಾಳು ಜಾಳು ಡೈಲಾಗ್ಸ್, ಆದರೆ ವಾಸ್ತವವಾಗಿಯೂ ಪೊಲೀಸ್ ವ್ಯವಸ್ಥೆ ಇದಕ್ಕಿಂತ ಹದಗೆಟ್ಟಿರೋದು ವಿಷಾದ” ಎಂದಿದ್ದಾರೆ.

ರಿಯಾಜ್‌ ಎಂಬುವವರು ಪ್ರತಿಕ್ರಿಯಿಸಿ, “ಸಾರ್ವಜನಿಕ ಸೇವಕರಾಗಿ ಇರಬೇಕಾದ ಪೊಲೀಸರನ್ನು ಹುಲಿ ಸಿಂಹ ಅಂತಾ ಮಿತಿಗಿಂತ ಹೆಚ್ಚು ಹೊಗಳಿ ಅಟ್ಟಕೇರಿಸಿ ಅವರ ಕಾನೂನು ಬಾಹಿರ (ಕಸ್ಟಡಿ ಸಾವು, ಎನ್ ಕೌಂಟರ್, ಸುಳ್ಳು ಕೇಸುಗಳು) ಕೃತ್ಯಗಳನ್ನು ಈ ಪರಿ ಸರ್ಮಥಿಸುವ ಮನಸ್ಥಿತಿ ಭಾರತದಲ್ಲಿ ಮಾತ್ರ ಇರಬಹುದೇನೋ, ಅನುಮಾನ” ಎಂದಿದ್ದಾರೆ.

ಇದನ್ನೂ ಓದಿ: ಚಲನಚಿತ್ರ 2020: ಸ್ಟ್ರೀಮ್ ಸಿನಿಮಾ ಕುಗ್ಗಿದ ಪರದೆ, ಹಿಗ್ಗಿದ ಮಾರುಕಟ್ಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಉತ್ತರ ಪ್ರದೇಶ| ರಸ್ತೆ ಗುಂಡಿಗೆ ಇಳಿದ ಆಂಬ್ಯುಲೆನ್ಸ್; ಮರುಜೀವ ಪಡೆದ ಮೆದುಳು ನಿಷ್ಕ್ರಿಯಗೊಂಡಿದ್ದ ಮಹಿಳೆ!

ಉತ್ತರ ಪ್ರದೇಶದ ಬರೇಲಿಯ ಖಾಸಗಿ ಆಸ್ಪತ್ರೆಯೊಂದರ ವೈದ್ಯರು ಮೆದುಳು ನಿಷ್ಕ್ರಿಯ ಎಂದು ಘೋಷಿಸಿದ್ದು, ಮಹಿಳೆಯೊಬ್ಬರ ಮೃತದೇಹವನ್ನು ಅಂತ್ಯಕ್ರಿಯೆಗಾಗಿ ಮನೆಗೆ ಸಾಗಿಸುತ್ತಿದ್ದಾಗ ಆಂಬ್ಯುಲೆನ್ಸ್ ರಸ್ತೆಯ ಗುಂಡಿಗೆ ಇಳಿದ ನಂತರ ಆಕೆ ಜೀವಂತವಾಗಿರುವ ಲಕ್ಷಣಗಳು ಕಂಡುಬಂದು...

ಪಶ್ಚಿಮ ಏಷ್ಯಾ ಸಂಘರ್ಷ: ದುಬೈ ವಿಮಾನ ನಿಲ್ದಾಣದ ಮೇಲೆ ಇರಾನ್​ ಡ್ರೋನ್​ ದಾಳಿ; ಭಾರತೀಯ ಪ್ರಜೆ ಸೇರಿ ನಾಲ್ವರಿಗೆ ಗಾಯ

ದುಬೈ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದ ಬಳಿ ಇರಾನಿನ ಎರಡು ಡ್ರೋಣಗಳಿಂದ ದಾಳಿ ನಡೆದಿದೆ. ಈ ದಾಳಿಯಲ್ಲಿ ಓರ್ವ ಭಾರತೀಯ ಸೇರಿದಂತೆ ನಾಲ್ವರು ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಅಲ್ಲಿನ ಸರ್ಕಾರದ ಪರವಾಗಿ ಪ್ರಕಟಣೆ ಹೊರಡಿಸಿರುವ...

ಜಾರ್ಖಂಡ್| ಆಂಬ್ಯುಲೆನ್ಸ್ ನಿರಾಕರಿಸಿದ ಆಸ್ಪತ್ರೆ ಸಿಬ್ಬಂದಿ; ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿದ ತಂದೆ

ಆಸ್ಪತ್ರೆ ಸಿಬ್ಬಂದಿ ಆಂಬ್ಯುಲೆನ್ಸ್ ನಿರಾಕರಿಸಿದ್ದರಿಂದ ಕೂಲಿಕಾರ ತಂದೆಯೊಬ್ಬ ಕಾರ್ಡ್‌ಬೋರ್ಡ್‌ನಲ್ಲಿ ಮಗುವಿನ ಶವ ಸಾಗಿಸಿರುವ ಹೃದಯವಿದ್ರಾವಕ ಘಟನೆಯೊಂದು ಜಾರ್ಖಂಡ್‌ನ ಪಶ್ಚಿಮ ಸಿಂಗ್ಭೂಮ್ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಕಳೆದ ಶನಿವಾರ ನಡೆದಿದೆ ಎನ್ನಲಾದ...

ಮಧುರಾಂತಕಂ ಬಳಿ 14 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ: ಪೋಕ್ಸೋ ಪ್ರಕರಣದಡಿ ಓರ್ವ ರೌಡಿ ಶೀಟರ್ ಬಂಧನ

ಚೆನ್ನೈ (ಚೆಂಗಲ್ಪಟ್ಟು): ಸೋಮವಾರ ರಾತ್ರಿ ಮಧುರಾಂಟಕಂ ಬಳಿಯ ಜಲಮೂಲದ ದಡದಲ್ಲಿ 14 ವರ್ಷದ ಬಾಲಕಿಯ ಮೇಲೆ ರೌಡಿ ಶೀಟರ್ ಮತ್ತು ಆತನ ಸಹಚರರು ಸಾಮೂಹಿಕ ಅತ್ಯಾಚಾರ ಎಸಗಿದ್ದಾರೆ ಎಂದು ವರದಿಯಾಗಿದೆ. ಪ್ರಕರಣ ಸಂಬಂಧ ಪೋಕ್ಸೋ...

ಮುಸ್ಲಿಂ ಮಹಿಳೆಯರ ವಿರುದ್ಧದ ಷರಿಯಾ ಕಾನೂನಿಗೆ ಏಕರೂಪ ನಾಗರಿಕ ಸಂಹಿತೆ ಪರಿಹಾರ: ಸುಪ್ರೀಂ ಕೋರ್ಟ್

"ಮುಸ್ಲಿಂ ವೈಯಕ್ತಿಕ ಕಾನೂನಿನಡಿಯಲ್ಲಿ ತಾರತಮ್ಯದ ಆನುವಂಶಿಕ ನಿಬಂಧನೆಗಳನ್ನು ಪರಿಹರಿಸಲು ಏಕರೂಪ ನಾಗರಿಕ ಸಂಹಿತೆ (ಯುಸಿಸಿ) ಅತ್ಯಂತ ಪರಿಣಾಮಕಾರಿ ಪರಿಹಾರ ಎಂದು ಸುಪ್ರೀಂ ಕೋರ್ಟ್ ಮಂಗಳವಾರ (ಮಾ.20) ಹೇಳಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯ...

ಮುಂಬೈ: ಬಜೆಟ್ ಅಧಿವೇಶನದ ನಡುವೆ ವಿಧಾನ ಭವನದ ಬಳಿ ವ್ಯಕ್ತಿಯೊಬ್ಬನಿಂದ ಆತ್ಮಹತ್ಯೆಗೆ ಯತ್ನ: ವಶಕ್ಕೆ ಪಡೆದ ಪೊಲೀಸರು

ಮುಂಬೈ: ಮಾರ್ಚ್ 11, ಬುಧವಾರ ಮಹಾರಾಷ್ಟ್ರ ವಿಧಾನ ಭವನದ ಹೊರಗೆ ವ್ಯಕ್ತಿಯೊಬ್ಬರು ಆತ್ಮಾಹುತಿ ಮಾಡಿಕೊಳ್ಳಲು ಯತ್ನಿಸಿರುವುದಾಗಿ ವರದಿಯಾಗಿದೆ. ತಕ್ಷಣವೇ ಮುಂಬೈ ಪೊಲೀಸರು ಆತನನ್ನು ಬಂಧಿಸಿದ್ದಾರೆ.  2026 ರ ಮಹಾರಾಷ್ಟ್ರ ಬಜೆಟ್ ಅಧಿವೇಶನ ವಿಧಾನ ಭವನದಲ್ಲಿ...

ಕೋವಿಡ್ ಲಸಿಕೆ ಕೆಲ ಸಾವುಗಳಿಗೆ ಕಾರಣವಾಗಿದೆ ಎಂದು ಅಧಿಕೃತ ದತ್ತಾಂಶ ತೋರಿಸಿದೆ, ಸರ್ಕಾರ ಜವಾಬ್ದಾರಿಯಿಂದ ನುಣುಚಿಕೊಳ್ಳಲು ಸಾಧ್ಯವಿಲ್ಲ : ಸುಪ್ರೀಂ ಕೋರ್ಟ್

ಸರ್ಕಾರದ ಅಧೀನದ ಸಾರ್ವಜನಿಕ ಆರೋಗ್ಯ ವ್ಯವಸ್ಥೆಯ ಮೂಲಕ ಕೋವಿಡ್ ಲಸಿಕೆಯನ್ನು ವಿತರಿಸಲಾಗಿದೆ. ಕೋವಿಡ್ ಲಸಿಕೆ ಪಡೆದ ಬಳಿಕ ಕೆಲ ಸಾವುಗಳು ಸಂಭವಿಸಿರುವುದನ್ನು ಅಧಿಕೃತ ದತ್ತಾಂಶಗಳೇ ದೃಢಪಡಿಸಿವೆ. ಹೀಗಿರುವಾಗ, ಲಸಿಕೆ ಹಾಕಿಸಿಕೊಂಡ ನಂತರ ಸಾವು...

ತಮಿಳುನಾಡು| ಪೊಲೀಸ್ ದೌರ್ಜನ್ಯದಿಂದ ಎರಡು ತಿಂಗಳಲ್ಲಿ ನಾಲ್ವರು ದಲಿತರು ಸಾವು

ವಿಧಾನಸಭೆ ಚುನಾವಣೆ ಹೊಸ್ತಿಲಲ್ಲಿರುವ ತಮಿಳುನಾಡಿನಲ್ಲಿ ಕಾನೂನು ಸುವ್ಯವಸ್ಥೆ ಹದಗೆಡುತ್ತಿರುವುದನ್ನು ಪ್ರತಿಬಿಂಬಿಸುವ ಆತಂಕಕಾರಿ ವಿಚಾರವೊಂದು ಮುನ್ನಲೆಗೆ ಬಂದಿದ್ದು, ಪೊಲೀಸ್ ಹಿಂಸಾಚಾರದಿಂದಾಗಿ ಎರಡು ತಿಂಗಳ ಅವಧಿಯಲ್ಲಿ ನಾಲ್ವರು ದಲಿತರು ಸಾವನ್ನಪ್ಪಿದ್ದಾರೆ. ಈ ಸಾವುಗಳಲ್ಲಿ, ಎರಡು ಪ್ರಕರಣಗಳನ್ನು...

ಪಶ್ಚಿಮ ಏಷ್ಯಾ ಸಂಘರ್ಷ| ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿದ್ದಾಗಿ ವಿಡಿಯೋ ಹಂಚಿಕೊಂಡ ಅಮೆರಿಕ ಸೇನೆ

ಪಶ್ಚಿಮ ಏಷ್ಯಾದಿಂದ ತೈಲ ರಫ್ತನ್ನು ತಡೆಯಲು ಇರಾನ್ ಪ್ರಯತ್ನಿಸುತ್ತಿರುವುದರಿಂದ ಹಾರ್ಮುಜ್ ಜಲಸಂಧಿಯಲ್ಲಿ ಇರಾನಿನ 16 ಹಡಗುಗಳನ್ನು ನಾಶಪಡಿಸಿರುವುದಾಗಿ ಅಮೆರಿಕ ಸೇನೆ ಹೇಳಿಕೊಂಡಿದೆ.  ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಈ ಹಿಂದೆ ಇರಾನ್ ಜಲಸಂಧಿಯಲ್ಲಿ ಗಣಿಗಳನ್ನು...

13 ವರ್ಷಗಳಿಂದ ಕೋಮಾದಲ್ಲಿರುವ ಯುವಕನ ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಅನುಮತಿ

ಕಳೆದ 13 ವರ್ಷಗಳಿಂದ ಕೋಮಾದಲ್ಲಿರುವ 32 ವರ್ಷದ ಹರೀಶ್ ರಾಣಾ ಎಂಬ ಯುವಕನ ಪರೋಕ್ಷ (ನಿಷ್ಕ್ರಿಯ) ದಯಾಮರಣಕ್ಕೆ ಸುಪ್ರೀಂ ಕೋರ್ಟ್ ಬುಧವಾರ (ಮಾ.11) ಅನುಮತಿ ನೀಡಿದೆ ಎಂದು livelaw.in ವರದಿ ಮಾಡಿದೆ. ದೆಹಲಿ ಮೂಲದ ಹರೀಶ್...