Homeಮುಖಪುಟವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆ

ವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆ

ಈ ರೀತಿಯ ಘಟನೆ ಅಮೆರಿಕ ಅಥವಾ ಯೂರೋಪ್‌‌ನಲ್ಲಿ ಆಗಿದ್ದರೆ ಕೋಟ್ಯಂತರ ರೂಪಾಯಿ ದಂಡವನ್ನು ಆರೋಪಿಗಳಿಗೆ ಪೊಲೀಸ್‌ ಇಲಾಖೆ ಕಟ್ಟಬೇಕಾಗಿತ್ತು ಎಂದು ವೆಬ್‌ಸೀರೀಸ್‌ ನೋಡಿದವರು ಟೀಕಿಸಿದ್ದಾರೆ.

- Advertisement -
- Advertisement -

ನೆಟ್‌ಪ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿರುವ ‘ಕ್ರೈಮ್‌ ಸ್ಟೋರೀಸ್‌: ಇಂಡಿಯಾ ಡೆಟೆಕ್ಟೀವ್ಸ್‌’ ಸಾಕ್ಷ್ಯಚಿತ್ರ ಸರಣಿಯ ಮೊದಲ ಸಂಚಿಕೆಯ ಪ್ರಸಾರವನ್ನು ತಡೆ ಹಿಡಿಯಲು ಕರ್ನಾಟಕ ಹೈಕೋರ್ಟ್‌ ಸೂಚಿಸಿದೆ.

ನೆಟ್‌ಪ್ಲಿಕ್‌ ಇಂಟರ್‌ಟೈನ್‌ಮೆಂಟ್‌ ಸರ್ವೀಸ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಓಟಿಟಿಯಲ್ಲಿ ಈ ಸಾಕ್ಷ್ಯಚಿತ್ರ ಸರಣಿ ಬಿಡುಗಡೆಯಾಗಿದ್ದು, ಕರ್ನಾಟಕದಲ್ಲಿ ನಡೆದ ಅಪರಾಧ ಪ್ರಕರಣಗಳ ಕುರಿತು ಚಿತ್ರೀಕರಿಸಲಾಗಿದೆ. ಒಟ್ಟು ನಾಲ್ಕು ಸಂಚಿಕೆಗಳನ್ನು ಬಿಡುಗಡೆ ಮಾಡಲಾಗಿದ್ದು, ಒಂದೊಂದು ಸಂಚಿಕೆಯೂ ಒಂದೊಂದು ನೈಜ ಘಟನೆಯನ್ನು ಆಧರಿಸಿವೆ.

ಮೊದಲ ಸಂಚಿಕೆಯು ‘ಎ ಮರ್ಡರ್‌ ಮದರ್‌’ ಎಂದಿದ್ದು, ಅದಕ್ಕೆ ಜಸ್ಟೀಸ್‌ ಬಿ.ಎಂ.ಶ್ಯಾಮ್‌ ಪ್ರಸಾದ್‌ ಅಕ್ಟೋಬರ್‌ 1ರಂದು ಮಧ್ಯಂತರ ತಡೆಯಾಜ್ಞೆಯನ್ನು ಹೊರಡಿಸಿದ್ದಾರೆ.

ಕೆ.ಆರ್‌.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2020ರ ಫೆಬ್ರುವರಿಯಲ್ಲಿ ನಡೆದ 54 ವರ್ಷದ ನಿರ್ಮಲಾ ಚಂದ್ರಶೇಖರ್‌ ಕೊಲೆ ಪ್ರಕರಣದ ಸಹ ಆರೋಪಿ, ಬೆಂಗಳೂರಿನ ನಿವಾಸಿ ಶ್ರೀಧರ್‌ ರಾವ್ ಎಸ್‌ (28) ಅವರು ‘ಎ ಮರ್ಡರ್‌ ಮದರ್‌’ ಸಂಚಿಕೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಅರ್ಜಿದಾರರು (ಸಹ ಆರೋಪಿ ಶ್ರೀಧರ್‌ ರಾವ್‌) ಮತ್ತು ಪ್ರಮುಖ ಆರೋಪಿ ಅಮೃತ ಚಂದ್ರಶೇಖರ್ ವಿರುದ್ಧದ ತನಿಖೆಯ ದೃಶ್ಯಗಳನ್ನು ಈ ಸರಣಿ ಒಳಗೊಂಡಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಆರೋಪಿ ಅಮೃತಾ ತನ್ನ ತಾಯಿಯನ್ನು ಕೊಂದು, ಸಹೋದರನನ್ನೂ ಕೊಲ್ಲಲು ಯತ್ನಿಸಿ ಬಳಿಕ ಸಹಆರೋಪಿ (ಅರ್ಜಿದಾರ) ಜೊತೆ ಅಂಡಮಾನ್‌ ನಿಕೋಬಾರ್‌ಗೆ ಫೆಬ್ರುವರಿ 2ರಂದು ವಿಮಾನ ಹತ್ತಿದ್ದರು ಎಂದು ಸಂಚಿಕೆಯಲ್ಲಿ ನಿರೂಪಿಸಲಾಗಿದೆ.

ಇದನ್ನೂ ಓದಿರಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

“ಅರ್ಜಿದಾರನು ಕಳೆದ ವರ್ಷದ ಫೆಬ್ರುವರಿಯಲ್ಲಿ ಬಂಧನಕ್ಕೆ ಒಳಗಾಗಿದ್ದಾಗ ಆತನ ಎಲ್ಲ ಚಲನವಲನಗಳನ್ನು ರೆಕಾರ್ಡ್‌ ಮಾಡಿಕೊಳ್ಳಲು, ವಿವಿಧ ಅಧಿಕಾರಿಗಳ ಸಂದರ್ಶನ ನಡೆಸಲು ಮಿನ್‌ನೌ ಫಿಲ್ಮ್ಸ್‌‌ನ ಕ್ಲೈರೇ ಗುಡ್‌ಲಾಸ್‌ ಮತ್ತು ಆಕೆಯ ತಂಡಕ್ಕೆ ಪೊಲೀಸರು ಅಧಿಕಾರ ನೀಡಿದ್ದಾರೆ” ಎಂದು ಅರ್ಜಿದಾರರು ಆರೋಪಿಸಿದ್ದಾರೆ.

“ಯಾವುದೇ ಅಧಿಕೃತ ಅನುಮತಿ ಇಲ್ಲದೇ ವಿಡಿಯೋ ಚಿತ್ರೀಕರಣ ಮಾಡಲಾಯಿತು, ಹೇಳಿಕೆಯನ್ನು ಪಡೆಯಲಾಯಿತು. ಮಿನ್‌ನೌ ಫಿಲ್ಮ್ಸ್‌ನವರ ಪತ್ರದ ಮೇಲೆ ಪೊಲೀಸರು ಬಲವಂತವಾಗಿ ಸಹಿ ಪಡೆದಿದ್ದಾರೆ” ಎಂದು ಅರ್ಜಿದಾರರು ಕೋರ್ಟ್‌‌ಗೆ ತಿಳಿಸಿದ್ದಾರೆ.

ವೆಬ್‌ ಸೀರೀಸ್‌ಗೆ ಆಕ್ಷೇಪ: ಕೀಲಾರ ನಾಗೇಗೌಡರ ಆಕ್ಷೇಪ

ಸದರಿ ವೆಬ್‌ ಸೀರೀಸ್‌ ಕುರಿತು, ನೆಟ್‌ಪ್ಲಿಕ್ಸ್‌ನ ಹಲವು ಬಳಕೆದಾರರು ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿದ್ದಾರೆ. ಇಂತಹ ವೆಬ್‌ ಸೀರೀಸ್‌ಗಳನ್ನು ನೋಡಿ ಹೊಗಳುವಾಗ ಮುನ್ನ ಎಚ್ಚರಿಕೆ ವಹಿಸಬೇಕು ಎಂದು ಪ್ರಜ್ಞಾವಂತರು ಅಭಿಪ್ರಾಯ ತಾಳಿದ್ದಾರೆ.

ಬರಹಗಾರ ನಾಗೇಗೌಡ ಕೀಲಾರ ಶಿವಲಿಂಗಯ್ಯ ಅವರು ತಮ್ಮ ಫೇಸ್‌ಬುಕ್‌ನಲ್ಲಿ ಆಕ್ಷೇಪ ಎತ್ತಿದ್ದಾರೆ. “ಕರ್ನಾಟಕ ಪೊಲೀಸ್‌ನವರದು ಒಂದು detective web series Netflixನಲ್ಲಿ ಬಂದಿದೆ ಅಂತ ಕುತೂಹಲದಿಂದ ಮೊದಲ ಎಪಿಸೋಡ್ ನೋಡಿದೆ. ಇದರಲ್ಲಿ ಯಾವುದೇ detective ಅಂಶಗಳು ಇರಲಿಲ್ಲ. ಇದೊಂದು open and shut case ಆಗಿತ್ತು” ಎಂದಿದ್ದಾರೆ.

ಮುಂದುವರಿದು, “ಬಡವರ ಮನೆ ಮಕ್ಕಳು ಈ ಮರ್ಡರ್‌‌ನಲ್ಲಿ ಆರೋಪಿಗಳು ಆಗಿರುವುದರಿಂದ ಪೊಲೀಸ್‌ನವರು ಆ ಆರೋಪಿಗಳ ಘನತೆಗೆ ಯಾವುದೇ ಬೆಲೆ ಕೊಡದೇ ಅವರನ್ನು ಈ ವೆಬ್‌ ಸೀರೀಸ್‌ನಲ್ಲಿ ತೋರಿಸಲು ಅವಕಾಶ ಕಲ್ಪಿಸಿದ್ದಾರೆ. ಆರೋಪಿಗಳ privacy ಹಕ್ಕುಗಳನ್ನು ಉಲ್ಲಂಘಿಸಿ ಅವರ ಮೆಸೇಜ್, ಬ್ಯಾಂಕ್ ಖಾತೆಯ ವಿವರಗಳು, ವೈಯಕ್ತಿಕ ವಿಚಾರಗಳು ಎಲ್ಲವನ್ನೂ web seriesನಲ್ಲಿ ತೋರಿಸಿದ್ದಾರೆ. ಇದಕ್ಕೆ ನಮ್ಮ ಕರ್ನಾಟಕ ಪೊಲೀಸ್‌‌ನವರು ಅವಕಾಶ ಕೊಟ್ಟಿದ್ದಾರೆ” ಎಂದಿದ್ದಾರೆ.

“ಈ ಮರ್ಡರ್‌‌ನಲ್ಲಿ ಬರುವ ಒಬ್ಬ ಆರೋಪಿ ಇವರ ಪ್ರಕಾರವೇ ನಿರಪರಾಧಿಯಾದರೂ ಇವನ ಮೇಲೆ ಕರ್ನಾಟಕ ಪೋಲಿಸ್‌‌ನವರು ಮರ್ಡರ್ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಈ ರೀತಿಯದ್ದು ಅಮೆರಿಕ ಅಥವಾ ಯೂರೋಪ್‌‌ನಲ್ಲಿ ಆಗಿದ್ದರೆ ಕೋಟ್ಯಂತರ ರೂಪಾಯಿ ದಂಡವನ್ನು ಆರೋಪಿಗಳಿಗೆ ಪೊಲೀಸ್‌ ಇಲಾಖೆ ಕಟ್ಟಬೇಕಾಗಿತ್ತು. ಜೊತೆಗೆ ಈ ಪೊಲೀಸ್‌‌ ಅಧಿಕಾರಿಗಳು ಕೆಲಸ ಕಳೆದುಕೊಳ್ಳುತ್ತಿದ್ದರು. ಇವರಿಗೆ ಅವರ PF, pension ಕೂಡ ಸಿಗುತ್ತಿರಲಿಲ್ಲ. ಆದರೆ ಭಾರತದಲ್ಲಿ ಬಡವರ ಮನೆ ಮಕ್ಕಳು ಅಂದರೆ ಯಾವುದೇ ಗೌರವ ಇಲ್ಲ. ನನ್ನ ಅಭಿಪ್ರಾಯದಲ್ಲಿ ಕರ್ನಾಟಕ ಪೊಲೀಸ್‌ನವರು ಆರೋಪಿಗಳಿಗೆ ಸಾರ್ವಜನಿಕ ಕ್ಷಮೆ ಕೇಳಿ ಒಂದು ದೊಡ್ಡ ಮೊತ್ತದ ದಂಡ ಕಟ್ಟಿಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

“ದುರಂತ ಏನು ಅಂದರೆ ಕರ್ನಾಟಕದ ಒಂದಷ್ಟು ಸಿನಿಮಾ ಪ್ರಿಯರು ಇದೊಂದು ಅದ್ಭುತ ವೆಬ್ series ಅಂತ ಒಂದು ಕ್ಲಬ್ ಹೌಸ್ ಚರ್ಚೆ ಕೂಡ ನಡೆಸಿದರು. ಆ ಚರ್ಚೆಯಲ್ಲಿ ತಮ್ಮನ್ನು ತಾವೇ ಸಿನಿಮಾ ವಿಮರ್ಶಕರು ಅಂತ ಕರೆಸಿಕೊಳ್ಳುವವರು ಒಂದು ಘನವಾದ ಚರ್ಚೆ ಕೂಡ ಮಾಡಿದ್ದು ಅಲ್ಲದೇ ಮಾನವ ಹಕ್ಕುಗಳನ್ನು ಉಲ್ಲಂಘಿಸಿದ ಆ ಪೊಲೀಸ್‌ ಅಧಿಕಾರಿಗಳನ್ನು ಆ ಚರ್ಚೆಗೆ ಕರೆಸಿ ಹೊಗಳಿದ್ದೇ ಹೊಗಳಿದ್ದು. ಇಂತಹ ಮೂರ್ಖ ಸಿನಿಮಾ ವಿಮರ್ಶಕರಿಗೆ ವ್ಯಕ್ತಿ ಘನತೆ, ಮಾನವ ಹಕ್ಕುಗಳು, ನಮ್ಮ ನೆಲದ ಕಾನೂನಿನ ಬಗ್ಗೆ ಕಿಂಚಿತ್ತೂ ತಿಳಿವಳಿಕೆ ಇಲ್ಲ” ಎಂದು ವಿಷಾದಿಸಿದ್ದಾರೆ.

ದಯಾ ಗಂಗನಘಟ್ಟ ಅವರು ಪ್ರತಿಕ್ರಿಯಿಸಿ, “ಜಾಳು ಜಾಳು ಡೈಲಾಗ್ಸ್, ಆದರೆ ವಾಸ್ತವವಾಗಿಯೂ ಪೊಲೀಸ್ ವ್ಯವಸ್ಥೆ ಇದಕ್ಕಿಂತ ಹದಗೆಟ್ಟಿರೋದು ವಿಷಾದ” ಎಂದಿದ್ದಾರೆ.

ರಿಯಾಜ್‌ ಎಂಬುವವರು ಪ್ರತಿಕ್ರಿಯಿಸಿ, “ಸಾರ್ವಜನಿಕ ಸೇವಕರಾಗಿ ಇರಬೇಕಾದ ಪೊಲೀಸರನ್ನು ಹುಲಿ ಸಿಂಹ ಅಂತಾ ಮಿತಿಗಿಂತ ಹೆಚ್ಚು ಹೊಗಳಿ ಅಟ್ಟಕೇರಿಸಿ ಅವರ ಕಾನೂನು ಬಾಹಿರ (ಕಸ್ಟಡಿ ಸಾವು, ಎನ್ ಕೌಂಟರ್, ಸುಳ್ಳು ಕೇಸುಗಳು) ಕೃತ್ಯಗಳನ್ನು ಈ ಪರಿ ಸರ್ಮಥಿಸುವ ಮನಸ್ಥಿತಿ ಭಾರತದಲ್ಲಿ ಮಾತ್ರ ಇರಬಹುದೇನೋ, ಅನುಮಾನ” ಎಂದಿದ್ದಾರೆ.

ಇದನ್ನೂ ಓದಿ: ಚಲನಚಿತ್ರ 2020: ಸ್ಟ್ರೀಮ್ ಸಿನಿಮಾ ಕುಗ್ಗಿದ ಪರದೆ, ಹಿಗ್ಗಿದ ಮಾರುಕಟ್ಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...

ಬಿಹಾರ: ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರಕ್ಕೆ ಯತ್ನ; ಹಲ್ಲೆ ಮಾಡಿ ವಿಡಿಯೋ ಹರಿಬಿಟ್ಟ ದುಷ್ಟರು: ಇಬ್ಬರ ಬಂಧನ 

ಬಿಹಾರದ ನಳಂದ ಜಿಲ್ಲೆಯಲ್ಲಿ ನಾಚಿಕೆಗೇಡಿನ ಮತ್ತು ಆತಂಕಕಾರಿ ಘಟನೆಯೊಂದು ಬೆಳಕಿಗೆ ಬಂದಿದೆ. ನೂರ್ಸರಾಯ್ ಪೊಲೀಸ್ ಠಾಣೆ ವ್ಯಾಪ್ತಿಯ ಹಳ್ಳಿಯೊಂದರಲ್ಲಿ ಮೂವರು ಪುರುಷರು ವಿವಾಹಿತ ಮಹಿಳೆಯ ಮೇಲೆ ಸಾರ್ವಜನಿಕವಾಗಿ ಸಾಮೂಹಿಕ ಅತ್ಯಾಚಾರಕ್ಕೆ ಯತ್ನಿಸಿದ್ದಾರೆ. ದೌರ್ಜನ್ಯ ವಿರೋಧಿಸಿ...

‘ಹಿಂದುತ್ವ ಉಗ್ರವಾದವನ್ನು ಏಕೆ ನಿರ್ಲಕ್ಷಿಸಬೇಕು..?’; ಸಂಸತ್ತಿನಲ್ಲಿ ಪ್ರಶ್ನಿಸಿದ ರುಹುಲ್ಲಾ ಮೆಹದಿ

"ದೇಶದಲ್ಲಿ ಹೆಚ್ಚುತ್ತಿರುವ ಬಲಪಂಥೀಯ ಉಗ್ರವಾದವನ್ನು ನಿರ್ಲಕ್ಷಿಸಿ ಎಡಪಂಥೀಯ ಬೆದರಿಕೆಗಳ ಮೇಲೆ ಮಾತ್ರ ಗಮನಹರಿಸಲಾಗುತ್ತಿದೆ" ಎಂದು ಲೋಕಸಭೆಯಲ್ಲಿ ಜಮ್ಮು-ಕಾಶ್ಮೀರದ ಶ್ರೀನಗರ ಸಂಸದ ಆಗಾ ಸೈಯದ್ ರುಹುಲ್ಲಾ ಮೆಹದಿ ನರೇಂದ್ರ ಮೋದಿ ನೇತೃತ್ವದ ಸರ್ಕಾರದ ಮೇಲೆ...

ವಿರೋಧದ ನಡುವೆಯೂ ಟ್ರಾನ್ಸ್‌ಜೆಂಡರ್ ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ಅಂಕಿತ

ತೀವ್ರ ವಿರೋಧಗಳ ನಡುವೆಯೂ ಟ್ರಾನ್ಸ್‌ಜೆಂಡರ್‌ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಮಸೂದೆಗೆ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರು ಅಂಕಿತ ಹಾಕಿದ್ದಾರೆ ಎಂದು ಕೇಂದ್ರ ಕಾನೂನು ಸಚಿವಾಲಯ ಸೋಮವಾರ (ಮಾ. 30) ಗೆಜೆಟ್ ಅಧಿಸೂಚನೆಯಲ್ಲಿ...

ಮಶಾದ್ ವಿಮಾನ ನಿಲ್ದಾಣದ ಮೇಲೆ ಅಮೆರಿಕ ದಾಳಿ: ದೆಹಲಿಗೆ ತೆರಳುತ್ತಿದ್ದ ನೆರವು ವಿಮಾನಕ್ಕೆ ಡಿಕ್ಕಿ: ಇದು ‘ಯುದ್ಧ ಅಪರಾಧ’ ಎಂದ ಇರಾನ್ 

ಇರಾನ್‌ನ ಮಶಾದ್ ಅಂತರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಅಮೆರಿಕದ ವಾಯುದಾಳಿಯ ಸಂದರ್ಭದಲ್ಲಿ ನವದೆಹಲಿಗೆ ಹಾರಲು ನಿಗದಿಯಾಗಿದ್ದ ಮಹಾನ್ ಏರ್ ವಿಮಾನವು ಡಿಕ್ಕಿ ಹೊಡೆದಿದೆ ಎಂದು ವರದಿಯಾಗಿದೆ.  ಈ ವಿಮಾನವು ಔಷಧಿಗಳು ಸೇರಿದಂತೆ ಮಾನವೀಯ ನೆರವು ಸಾಗಣೆಗೆ...

ಪ್ಯಾಲೆಸ್ತೀನಿಯರಿಗೆ ಮರಣದಂಡನೆ ವಿಧಿಸುವ ಕಾನೂನು ಅಂಗೀಕಾರ : ಇಸ್ರೇಲ್ ಕ್ರಮಕ್ಕೆ ಜಾಗತಿಕ ಖಂಡನೆ

ಮಾರಣಾಂತಿಕ ದಾಳಿಗಳ ಅಪರಾಧ ಸಾಬೀತಾದ ಪ್ಯಾಲೆಸ್ತೀನಿಯರಿಗೆ ಮರಣದಂಡನೆಯನ್ನು ಕಡ್ಡಾಯ ಶಿಕ್ಷೆಯನ್ನಾಗಿ ನಿಗದಿಪಡಿಸಿದ ಇಸ್ರೇಲ್‌ನ ಹೊಸ ಕಾನೂನನ್ನು ಮಾನವ ಹಕ್ಕುಗಳ ಸಂಘಟನೆಗಳು, ವಿವಿಧ ರಾಷ್ಟ್ರಗಳ ನಾಯಕರು ಸೇರಿದಂತೆ ಜಾಗತಿಕ ಸಮುಯದಾಯ ತೀವ್ರವಾಗಿ ವಿರೋಧಿಸಿದೆ. ಈ...

ಬರೇಲಿ: ಮುಸ್ಲಿಂ ಯುವಕರ ಮೇಲೆ ಹಲ್ಲೆ, ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಬಲವಂತ; ಪ್ರಮುಖ ಆರೋಪಿ ಬಂಧನ

ಉತ್ತರ ಪ್ರದೇಶದ ಬರೇಲಿಯಲ್ಲಿ ಮುಸ್ಲಿಂ ಯುವಕನ ಮೇಲೆ ಹಲ್ಲೆ, ಅವಮಾನ ಮತ್ತು ಹಿಂದುತ್ವ ಘೋಷಣೆಗಳನ್ನು ಪಠಿಸುವಂತೆ ಒತ್ತಾಯಿಸಲಾಗಿದೆ ಎಂದು ಆರೋಪಿಸಲಾಗಿದೆ. ಪ್ರಮುಖ ಆರೋಪಿ ರಿಷಭ್ ಠಾಕೂರ್ ನನ್ನು ಪೊಲೀಸರು ಬಂಧಿಸಿದ್ದು, ಮತ್ತಷ್ಟು ಬಂಧನಗಳು ನಡೆಯುವ...