Homeಮುಖಪುಟವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆ

ವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆ

ಈ ರೀತಿಯ ಘಟನೆ ಅಮೆರಿಕ ಅಥವಾ ಯೂರೋಪ್‌‌ನಲ್ಲಿ ಆಗಿದ್ದರೆ ಕೋಟ್ಯಂತರ ರೂಪಾಯಿ ದಂಡವನ್ನು ಆರೋಪಿಗಳಿಗೆ ಪೊಲೀಸ್‌ ಇಲಾಖೆ ಕಟ್ಟಬೇಕಾಗಿತ್ತು ಎಂದು ವೆಬ್‌ಸೀರೀಸ್‌ ನೋಡಿದವರು ಟೀಕಿಸಿದ್ದಾರೆ.

- Advertisement -
- Advertisement -

ನೆಟ್‌ಪ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿರುವ ‘ಕ್ರೈಮ್‌ ಸ್ಟೋರೀಸ್‌: ಇಂಡಿಯಾ ಡೆಟೆಕ್ಟೀವ್ಸ್‌’ ಸಾಕ್ಷ್ಯಚಿತ್ರ ಸರಣಿಯ ಮೊದಲ ಸಂಚಿಕೆಯ ಪ್ರಸಾರವನ್ನು ತಡೆ ಹಿಡಿಯಲು ಕರ್ನಾಟಕ ಹೈಕೋರ್ಟ್‌ ಸೂಚಿಸಿದೆ.

ನೆಟ್‌ಪ್ಲಿಕ್‌ ಇಂಟರ್‌ಟೈನ್‌ಮೆಂಟ್‌ ಸರ್ವೀಸ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಓಟಿಟಿಯಲ್ಲಿ ಈ ಸಾಕ್ಷ್ಯಚಿತ್ರ ಸರಣಿ ಬಿಡುಗಡೆಯಾಗಿದ್ದು, ಕರ್ನಾಟಕದಲ್ಲಿ ನಡೆದ ಅಪರಾಧ ಪ್ರಕರಣಗಳ ಕುರಿತು ಚಿತ್ರೀಕರಿಸಲಾಗಿದೆ. ಒಟ್ಟು ನಾಲ್ಕು ಸಂಚಿಕೆಗಳನ್ನು ಬಿಡುಗಡೆ ಮಾಡಲಾಗಿದ್ದು, ಒಂದೊಂದು ಸಂಚಿಕೆಯೂ ಒಂದೊಂದು ನೈಜ ಘಟನೆಯನ್ನು ಆಧರಿಸಿವೆ.

ಮೊದಲ ಸಂಚಿಕೆಯು ‘ಎ ಮರ್ಡರ್‌ ಮದರ್‌’ ಎಂದಿದ್ದು, ಅದಕ್ಕೆ ಜಸ್ಟೀಸ್‌ ಬಿ.ಎಂ.ಶ್ಯಾಮ್‌ ಪ್ರಸಾದ್‌ ಅಕ್ಟೋಬರ್‌ 1ರಂದು ಮಧ್ಯಂತರ ತಡೆಯಾಜ್ಞೆಯನ್ನು ಹೊರಡಿಸಿದ್ದಾರೆ.

ಕೆ.ಆರ್‌.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2020ರ ಫೆಬ್ರುವರಿಯಲ್ಲಿ ನಡೆದ 54 ವರ್ಷದ ನಿರ್ಮಲಾ ಚಂದ್ರಶೇಖರ್‌ ಕೊಲೆ ಪ್ರಕರಣದ ಸಹ ಆರೋಪಿ, ಬೆಂಗಳೂರಿನ ನಿವಾಸಿ ಶ್ರೀಧರ್‌ ರಾವ್ ಎಸ್‌ (28) ಅವರು ‘ಎ ಮರ್ಡರ್‌ ಮದರ್‌’ ಸಂಚಿಕೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಅರ್ಜಿದಾರರು (ಸಹ ಆರೋಪಿ ಶ್ರೀಧರ್‌ ರಾವ್‌) ಮತ್ತು ಪ್ರಮುಖ ಆರೋಪಿ ಅಮೃತ ಚಂದ್ರಶೇಖರ್ ವಿರುದ್ಧದ ತನಿಖೆಯ ದೃಶ್ಯಗಳನ್ನು ಈ ಸರಣಿ ಒಳಗೊಂಡಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಆರೋಪಿ ಅಮೃತಾ ತನ್ನ ತಾಯಿಯನ್ನು ಕೊಂದು, ಸಹೋದರನನ್ನೂ ಕೊಲ್ಲಲು ಯತ್ನಿಸಿ ಬಳಿಕ ಸಹಆರೋಪಿ (ಅರ್ಜಿದಾರ) ಜೊತೆ ಅಂಡಮಾನ್‌ ನಿಕೋಬಾರ್‌ಗೆ ಫೆಬ್ರುವರಿ 2ರಂದು ವಿಮಾನ ಹತ್ತಿದ್ದರು ಎಂದು ಸಂಚಿಕೆಯಲ್ಲಿ ನಿರೂಪಿಸಲಾಗಿದೆ.

ಇದನ್ನೂ ಓದಿರಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

“ಅರ್ಜಿದಾರನು ಕಳೆದ ವರ್ಷದ ಫೆಬ್ರುವರಿಯಲ್ಲಿ ಬಂಧನಕ್ಕೆ ಒಳಗಾಗಿದ್ದಾಗ ಆತನ ಎಲ್ಲ ಚಲನವಲನಗಳನ್ನು ರೆಕಾರ್ಡ್‌ ಮಾಡಿಕೊಳ್ಳಲು, ವಿವಿಧ ಅಧಿಕಾರಿಗಳ ಸಂದರ್ಶನ ನಡೆಸಲು ಮಿನ್‌ನೌ ಫಿಲ್ಮ್ಸ್‌‌ನ ಕ್ಲೈರೇ ಗುಡ್‌ಲಾಸ್‌ ಮತ್ತು ಆಕೆಯ ತಂಡಕ್ಕೆ ಪೊಲೀಸರು ಅಧಿಕಾರ ನೀಡಿದ್ದಾರೆ” ಎಂದು ಅರ್ಜಿದಾರರು ಆರೋಪಿಸಿದ್ದಾರೆ.

“ಯಾವುದೇ ಅಧಿಕೃತ ಅನುಮತಿ ಇಲ್ಲದೇ ವಿಡಿಯೋ ಚಿತ್ರೀಕರಣ ಮಾಡಲಾಯಿತು, ಹೇಳಿಕೆಯನ್ನು ಪಡೆಯಲಾಯಿತು. ಮಿನ್‌ನೌ ಫಿಲ್ಮ್ಸ್‌ನವರ ಪತ್ರದ ಮೇಲೆ ಪೊಲೀಸರು ಬಲವಂತವಾಗಿ ಸಹಿ ಪಡೆದಿದ್ದಾರೆ” ಎಂದು ಅರ್ಜಿದಾರರು ಕೋರ್ಟ್‌‌ಗೆ ತಿಳಿಸಿದ್ದಾರೆ.

ವೆಬ್‌ ಸೀರೀಸ್‌ಗೆ ಆಕ್ಷೇಪ: ಕೀಲಾರ ನಾಗೇಗೌಡರ ಆಕ್ಷೇಪ

ಸದರಿ ವೆಬ್‌ ಸೀರೀಸ್‌ ಕುರಿತು, ನೆಟ್‌ಪ್ಲಿಕ್ಸ್‌ನ ಹಲವು ಬಳಕೆದಾರರು ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿದ್ದಾರೆ. ಇಂತಹ ವೆಬ್‌ ಸೀರೀಸ್‌ಗಳನ್ನು ನೋಡಿ ಹೊಗಳುವಾಗ ಮುನ್ನ ಎಚ್ಚರಿಕೆ ವಹಿಸಬೇಕು ಎಂದು ಪ್ರಜ್ಞಾವಂತರು ಅಭಿಪ್ರಾಯ ತಾಳಿದ್ದಾರೆ.

ಬರಹಗಾರ ನಾಗೇಗೌಡ ಕೀಲಾರ ಶಿವಲಿಂಗಯ್ಯ ಅವರು ತಮ್ಮ ಫೇಸ್‌ಬುಕ್‌ನಲ್ಲಿ ಆಕ್ಷೇಪ ಎತ್ತಿದ್ದಾರೆ. “ಕರ್ನಾಟಕ ಪೊಲೀಸ್‌ನವರದು ಒಂದು detective web series Netflixನಲ್ಲಿ ಬಂದಿದೆ ಅಂತ ಕುತೂಹಲದಿಂದ ಮೊದಲ ಎಪಿಸೋಡ್ ನೋಡಿದೆ. ಇದರಲ್ಲಿ ಯಾವುದೇ detective ಅಂಶಗಳು ಇರಲಿಲ್ಲ. ಇದೊಂದು open and shut case ಆಗಿತ್ತು” ಎಂದಿದ್ದಾರೆ.

ಮುಂದುವರಿದು, “ಬಡವರ ಮನೆ ಮಕ್ಕಳು ಈ ಮರ್ಡರ್‌‌ನಲ್ಲಿ ಆರೋಪಿಗಳು ಆಗಿರುವುದರಿಂದ ಪೊಲೀಸ್‌ನವರು ಆ ಆರೋಪಿಗಳ ಘನತೆಗೆ ಯಾವುದೇ ಬೆಲೆ ಕೊಡದೇ ಅವರನ್ನು ಈ ವೆಬ್‌ ಸೀರೀಸ್‌ನಲ್ಲಿ ತೋರಿಸಲು ಅವಕಾಶ ಕಲ್ಪಿಸಿದ್ದಾರೆ. ಆರೋಪಿಗಳ privacy ಹಕ್ಕುಗಳನ್ನು ಉಲ್ಲಂಘಿಸಿ ಅವರ ಮೆಸೇಜ್, ಬ್ಯಾಂಕ್ ಖಾತೆಯ ವಿವರಗಳು, ವೈಯಕ್ತಿಕ ವಿಚಾರಗಳು ಎಲ್ಲವನ್ನೂ web seriesನಲ್ಲಿ ತೋರಿಸಿದ್ದಾರೆ. ಇದಕ್ಕೆ ನಮ್ಮ ಕರ್ನಾಟಕ ಪೊಲೀಸ್‌‌ನವರು ಅವಕಾಶ ಕೊಟ್ಟಿದ್ದಾರೆ” ಎಂದಿದ್ದಾರೆ.

“ಈ ಮರ್ಡರ್‌‌ನಲ್ಲಿ ಬರುವ ಒಬ್ಬ ಆರೋಪಿ ಇವರ ಪ್ರಕಾರವೇ ನಿರಪರಾಧಿಯಾದರೂ ಇವನ ಮೇಲೆ ಕರ್ನಾಟಕ ಪೋಲಿಸ್‌‌ನವರು ಮರ್ಡರ್ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಈ ರೀತಿಯದ್ದು ಅಮೆರಿಕ ಅಥವಾ ಯೂರೋಪ್‌‌ನಲ್ಲಿ ಆಗಿದ್ದರೆ ಕೋಟ್ಯಂತರ ರೂಪಾಯಿ ದಂಡವನ್ನು ಆರೋಪಿಗಳಿಗೆ ಪೊಲೀಸ್‌ ಇಲಾಖೆ ಕಟ್ಟಬೇಕಾಗಿತ್ತು. ಜೊತೆಗೆ ಈ ಪೊಲೀಸ್‌‌ ಅಧಿಕಾರಿಗಳು ಕೆಲಸ ಕಳೆದುಕೊಳ್ಳುತ್ತಿದ್ದರು. ಇವರಿಗೆ ಅವರ PF, pension ಕೂಡ ಸಿಗುತ್ತಿರಲಿಲ್ಲ. ಆದರೆ ಭಾರತದಲ್ಲಿ ಬಡವರ ಮನೆ ಮಕ್ಕಳು ಅಂದರೆ ಯಾವುದೇ ಗೌರವ ಇಲ್ಲ. ನನ್ನ ಅಭಿಪ್ರಾಯದಲ್ಲಿ ಕರ್ನಾಟಕ ಪೊಲೀಸ್‌ನವರು ಆರೋಪಿಗಳಿಗೆ ಸಾರ್ವಜನಿಕ ಕ್ಷಮೆ ಕೇಳಿ ಒಂದು ದೊಡ್ಡ ಮೊತ್ತದ ದಂಡ ಕಟ್ಟಿಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

“ದುರಂತ ಏನು ಅಂದರೆ ಕರ್ನಾಟಕದ ಒಂದಷ್ಟು ಸಿನಿಮಾ ಪ್ರಿಯರು ಇದೊಂದು ಅದ್ಭುತ ವೆಬ್ series ಅಂತ ಒಂದು ಕ್ಲಬ್ ಹೌಸ್ ಚರ್ಚೆ ಕೂಡ ನಡೆಸಿದರು. ಆ ಚರ್ಚೆಯಲ್ಲಿ ತಮ್ಮನ್ನು ತಾವೇ ಸಿನಿಮಾ ವಿಮರ್ಶಕರು ಅಂತ ಕರೆಸಿಕೊಳ್ಳುವವರು ಒಂದು ಘನವಾದ ಚರ್ಚೆ ಕೂಡ ಮಾಡಿದ್ದು ಅಲ್ಲದೇ ಮಾನವ ಹಕ್ಕುಗಳನ್ನು ಉಲ್ಲಂಘಿಸಿದ ಆ ಪೊಲೀಸ್‌ ಅಧಿಕಾರಿಗಳನ್ನು ಆ ಚರ್ಚೆಗೆ ಕರೆಸಿ ಹೊಗಳಿದ್ದೇ ಹೊಗಳಿದ್ದು. ಇಂತಹ ಮೂರ್ಖ ಸಿನಿಮಾ ವಿಮರ್ಶಕರಿಗೆ ವ್ಯಕ್ತಿ ಘನತೆ, ಮಾನವ ಹಕ್ಕುಗಳು, ನಮ್ಮ ನೆಲದ ಕಾನೂನಿನ ಬಗ್ಗೆ ಕಿಂಚಿತ್ತೂ ತಿಳಿವಳಿಕೆ ಇಲ್ಲ” ಎಂದು ವಿಷಾದಿಸಿದ್ದಾರೆ.

ದಯಾ ಗಂಗನಘಟ್ಟ ಅವರು ಪ್ರತಿಕ್ರಿಯಿಸಿ, “ಜಾಳು ಜಾಳು ಡೈಲಾಗ್ಸ್, ಆದರೆ ವಾಸ್ತವವಾಗಿಯೂ ಪೊಲೀಸ್ ವ್ಯವಸ್ಥೆ ಇದಕ್ಕಿಂತ ಹದಗೆಟ್ಟಿರೋದು ವಿಷಾದ” ಎಂದಿದ್ದಾರೆ.

ರಿಯಾಜ್‌ ಎಂಬುವವರು ಪ್ರತಿಕ್ರಿಯಿಸಿ, “ಸಾರ್ವಜನಿಕ ಸೇವಕರಾಗಿ ಇರಬೇಕಾದ ಪೊಲೀಸರನ್ನು ಹುಲಿ ಸಿಂಹ ಅಂತಾ ಮಿತಿಗಿಂತ ಹೆಚ್ಚು ಹೊಗಳಿ ಅಟ್ಟಕೇರಿಸಿ ಅವರ ಕಾನೂನು ಬಾಹಿರ (ಕಸ್ಟಡಿ ಸಾವು, ಎನ್ ಕೌಂಟರ್, ಸುಳ್ಳು ಕೇಸುಗಳು) ಕೃತ್ಯಗಳನ್ನು ಈ ಪರಿ ಸರ್ಮಥಿಸುವ ಮನಸ್ಥಿತಿ ಭಾರತದಲ್ಲಿ ಮಾತ್ರ ಇರಬಹುದೇನೋ, ಅನುಮಾನ” ಎಂದಿದ್ದಾರೆ.

ಇದನ್ನೂ ಓದಿ: ಚಲನಚಿತ್ರ 2020: ಸ್ಟ್ರೀಮ್ ಸಿನಿಮಾ ಕುಗ್ಗಿದ ಪರದೆ, ಹಿಗ್ಗಿದ ಮಾರುಕಟ್ಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...

ಅತ್ಯಾಚಾರ ಪ್ರಕರಣದಲ್ಲಿ 10 ವರ್ಷ ಜೈಲು ಶಿಕ್ಷೆ: ‘ತೆಹಲ್ಕಾ’ ಸಂಸ್ಥಾಪಕ ತರುಣ್ ತೇಜ್‌ಪಾಲ್ ನ್ಯಾಯಾಲಯಕ್ಕೆ ಶರಣು, ಜೈಲಿಗೆ ರವಾನೆ 

ಪಣಜಿ: 2013ರ ಲೈಂಗಿಕ ದೌರ್ಜನ್ಯ ಪ್ರಕರಣದಲ್ಲಿ ಬಾಂಬೆ ಹೈಕೋರ್ಟ್‌ನ ಗೋವಾ ಪೀಠದಿಂದ ದೋಷಿ ಎಂದು ತೀರ್ಪುಗೊಂಡು 10 ವರ್ಷಗಳ ಕಠಿಣ ಕಾರಾಗೃಹ ಶಿಕ್ಷೆಗೆ ಗುರಿಯಾಗಿರುವ ‘ತೆಹಲ್ಕಾ’ ಸಂಸ್ಥಾಪಕ ಹಾಗೂ ಮಾಜಿ ಪ್ರಧಾನ ಸಂಪಾದಕ...

ಹೈದರಾಬಾದ್‌ನಲ್ಲಿ ಗಣೇಶ ವಿಗ್ರಹ ಖರೀದಿ ವಿಚಾರಕ್ಕೆ ಘರ್ಷಣೆ: 34 ವರ್ಷದ ವ್ಯಕ್ತಿ ಸಾವು: ತಪ್ಪಿತಸ್ಥರ ವಿರುದ್ಧ ಕ್ರಮಕ್ಕೆ ಆಗ್ರಹ

ಹೈದರಾಬಾದ್: ಗಣೇಶ ಚತುರ್ಥಿ ಆಚರಣೆಗೆ ಮುನ್ನ ಗಣೇಶ ವಿಗ್ರಹ ಖರೀದಿಸುವ ವಿಚಾರಕ್ಕೆ ಸಂಬಂಧಿಸಿದಂತೆ ನಡೆದ ವಾಗ್ವಾದವು ಹಿಂಸಾತ್ಮಕ ಘರ್ಷಣೆಗೆ ತಿರುಗಿ 34 ವರ್ಷದ ವ್ಯಕ್ತಿಯೊಬ್ಬರು ಮೃತಪಟ್ಟಿರುವ ಘಟನೆ ಹೈದರಾಬಾದ್‌ನ ಜೋಡಿಮೆಟ್ಲಾ ಪ್ರದೇಶದಲ್ಲಿ ನಡೆದಿದೆ....

ಮಹಿಳಾ ಬೈಕರ್‌ಗೆ ಬೇಕಂತಲೇ ಢಿಕ್ಕಿ ಹೊಡೆದು ಪರಾರಿಯಾದ ಕಾರು ಸವಾರ! ಬೆಚ್ಚಿಬೀಳಿಸುವ ವಿಡಿಯೋ ವೈರಲ್

ಹರ್ಯಾಣದ ಗುರುಗ್ರಾಮದ ಗಾಲ್ಫ್ ಕೋರ್ಸ್ ರಸ್ತೆಯಲ್ಲಿ ಅತಿವೇಗವಾಗಿ ಬಂದ ಕಾರೊಂದು ಮಹಿಳಾ ಬೈಕ್ ಸವಾರಿಗೆ ಉದ್ದೇಶಪೂರ್ವಕವಾಗಿ ಢಿಕ್ಕಿ ಹೊಡೆದು ಪರಾರಿಯಾಗಿರುವ ಭೀಕರ ಘಟನೆ ನಡೆದಿದೆ. ಹಿಟ್ ಆ್ಯಂಡ್ ರನ್ ಶಂಕೆ ವ್ಯಕ್ತವಾಗಿರುವ ಈ...

ಪ. ಬಂಗಾಳ | 252 ಮದ್ರಸಾಗಳನ್ನು ಮುಚ್ಚಲು ಆದೇಶಿಸಿದ ಬಿಜೆಪಿ ಸರ್ಕಾರ; 100 ಸಂಸ್ಥೆಗಳಿಗೆ ಕಾರಣ ಕೇಳಿ ನೋಟಿಸ್

ರಾಜ್ಯದಾದ್ಯಂತ ಮದ್ರಸಾಗಳ ಸಮೀಕ್ಷೆಯನ್ನು ಪ್ರಾರಂಭಿಸಿದ ಮೂರು ತಿಂಗಳ ನಂತರ, ಬಿಜೆಪಿ ನೇತೃತ್ವದ ಪಶ್ಚಿಮ ಬಂಗಾಳ ಸರ್ಕಾರವು ಅನುಮೋದನೆಯ ಕೊರತೆ ಅಥವಾ ಇತರ ಅಕ್ರಮಗಳನ್ನು ಉಲ್ಲೇಖಿಸಿ 252 ಸಂಸ್ಥೆಗಳನ್ನು ಮುಚ್ಚಲು ಆದೇಶಿಸಿದೆ ಮತ್ತು ಇತರ...

ಟಿ. ನರಸೀಪುರ ಪ್ರತಿಭಟನೆ ವೇಳೆ ವಾಕ್ಸಮರ: ಪ್ರತಾಪ್ ಸಿಂಹ ಹಾಗೂ ಎಲ್. ನಾಗೇಂದ್ರ ನಡುವೆ ಬಹಿರಂಗ ನೂಕಾಟ-ತಳ್ಳಾಟ!

ಟಿ. ನರಸೀಪುರದಲ್ಲಿ ಗಣೇಶೋತ್ಸವ ಮೆರವಣಿಗೆಗೆ ಸಂಬಂಧಿಸಿದ ವಿವಾದದ ಹಿನ್ನೆಲೆಯಲ್ಲಿ ಬಿಜೆಪಿ ಹಮ್ಮಿಕೊಂಡಿದ್ದ ಪ್ರತಿಭಟನೆ ವೇಳೆ ಮೈಸೂರು ಬಿಜೆಪಿಯಲ್ಲಿನ ಆಂತರಿಕ ಭಿನ್ನಮತ ಬಹಿರಂಗಗೊಂಡಿದೆ. ಪೊಲೀಸ್ ಇನ್ಸ್‌ಪೆಕ್ಟರ್ ಧನಂಜಯ್ ವಿರುದ್ಧ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಮಾಜಿ...

ಉಮರ್ ಖಾಲಿದ್ ಕುರಿತ ಸಾಕ್ಷ್ಯಚಿತ್ರ ಪ್ರದರ್ಶನ ಮುಂದೂಡಿದ NLSIU ವಿದ್ಯಾರ್ಥಿ ಸಂಘ; ಯಾವುದೇ ಒತ್ತಡಕ್ಕೆ ಮಣಿದಿಲ್ಲವೆಂದು ಸ್ಪಷ್ಟನೆ

ಬೆಂಗಳೂರಿನ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯ (NLSIU) ಲಾ ಅಂಡ್ ಸೊಸೈಟಿ ಕಮಿಟಿಯು (LawSoc) ಉಮರ್ ಖಾಲಿದ್ ಅವರ ಜೈಲುವಾಸದ ಕುರಿತು ಲಲಿತ್ ವಾಚಾನಿ ನಿರ್ಮಿಸಿರುವ 'ಪ್ರಿಸನರ್ ನಂ. 626710...