Homeಮುಖಪುಟವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆ

ವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆ

ಈ ರೀತಿಯ ಘಟನೆ ಅಮೆರಿಕ ಅಥವಾ ಯೂರೋಪ್‌‌ನಲ್ಲಿ ಆಗಿದ್ದರೆ ಕೋಟ್ಯಂತರ ರೂಪಾಯಿ ದಂಡವನ್ನು ಆರೋಪಿಗಳಿಗೆ ಪೊಲೀಸ್‌ ಇಲಾಖೆ ಕಟ್ಟಬೇಕಾಗಿತ್ತು ಎಂದು ವೆಬ್‌ಸೀರೀಸ್‌ ನೋಡಿದವರು ಟೀಕಿಸಿದ್ದಾರೆ.

- Advertisement -
- Advertisement -

ನೆಟ್‌ಪ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿರುವ ‘ಕ್ರೈಮ್‌ ಸ್ಟೋರೀಸ್‌: ಇಂಡಿಯಾ ಡೆಟೆಕ್ಟೀವ್ಸ್‌’ ಸಾಕ್ಷ್ಯಚಿತ್ರ ಸರಣಿಯ ಮೊದಲ ಸಂಚಿಕೆಯ ಪ್ರಸಾರವನ್ನು ತಡೆ ಹಿಡಿಯಲು ಕರ್ನಾಟಕ ಹೈಕೋರ್ಟ್‌ ಸೂಚಿಸಿದೆ.

ನೆಟ್‌ಪ್ಲಿಕ್‌ ಇಂಟರ್‌ಟೈನ್‌ಮೆಂಟ್‌ ಸರ್ವೀಸ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಓಟಿಟಿಯಲ್ಲಿ ಈ ಸಾಕ್ಷ್ಯಚಿತ್ರ ಸರಣಿ ಬಿಡುಗಡೆಯಾಗಿದ್ದು, ಕರ್ನಾಟಕದಲ್ಲಿ ನಡೆದ ಅಪರಾಧ ಪ್ರಕರಣಗಳ ಕುರಿತು ಚಿತ್ರೀಕರಿಸಲಾಗಿದೆ. ಒಟ್ಟು ನಾಲ್ಕು ಸಂಚಿಕೆಗಳನ್ನು ಬಿಡುಗಡೆ ಮಾಡಲಾಗಿದ್ದು, ಒಂದೊಂದು ಸಂಚಿಕೆಯೂ ಒಂದೊಂದು ನೈಜ ಘಟನೆಯನ್ನು ಆಧರಿಸಿವೆ.

ಮೊದಲ ಸಂಚಿಕೆಯು ‘ಎ ಮರ್ಡರ್‌ ಮದರ್‌’ ಎಂದಿದ್ದು, ಅದಕ್ಕೆ ಜಸ್ಟೀಸ್‌ ಬಿ.ಎಂ.ಶ್ಯಾಮ್‌ ಪ್ರಸಾದ್‌ ಅಕ್ಟೋಬರ್‌ 1ರಂದು ಮಧ್ಯಂತರ ತಡೆಯಾಜ್ಞೆಯನ್ನು ಹೊರಡಿಸಿದ್ದಾರೆ.

ಕೆ.ಆರ್‌.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2020ರ ಫೆಬ್ರುವರಿಯಲ್ಲಿ ನಡೆದ 54 ವರ್ಷದ ನಿರ್ಮಲಾ ಚಂದ್ರಶೇಖರ್‌ ಕೊಲೆ ಪ್ರಕರಣದ ಸಹ ಆರೋಪಿ, ಬೆಂಗಳೂರಿನ ನಿವಾಸಿ ಶ್ರೀಧರ್‌ ರಾವ್ ಎಸ್‌ (28) ಅವರು ‘ಎ ಮರ್ಡರ್‌ ಮದರ್‌’ ಸಂಚಿಕೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಅರ್ಜಿದಾರರು (ಸಹ ಆರೋಪಿ ಶ್ರೀಧರ್‌ ರಾವ್‌) ಮತ್ತು ಪ್ರಮುಖ ಆರೋಪಿ ಅಮೃತ ಚಂದ್ರಶೇಖರ್ ವಿರುದ್ಧದ ತನಿಖೆಯ ದೃಶ್ಯಗಳನ್ನು ಈ ಸರಣಿ ಒಳಗೊಂಡಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಆರೋಪಿ ಅಮೃತಾ ತನ್ನ ತಾಯಿಯನ್ನು ಕೊಂದು, ಸಹೋದರನನ್ನೂ ಕೊಲ್ಲಲು ಯತ್ನಿಸಿ ಬಳಿಕ ಸಹಆರೋಪಿ (ಅರ್ಜಿದಾರ) ಜೊತೆ ಅಂಡಮಾನ್‌ ನಿಕೋಬಾರ್‌ಗೆ ಫೆಬ್ರುವರಿ 2ರಂದು ವಿಮಾನ ಹತ್ತಿದ್ದರು ಎಂದು ಸಂಚಿಕೆಯಲ್ಲಿ ನಿರೂಪಿಸಲಾಗಿದೆ.

ಇದನ್ನೂ ಓದಿರಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

“ಅರ್ಜಿದಾರನು ಕಳೆದ ವರ್ಷದ ಫೆಬ್ರುವರಿಯಲ್ಲಿ ಬಂಧನಕ್ಕೆ ಒಳಗಾಗಿದ್ದಾಗ ಆತನ ಎಲ್ಲ ಚಲನವಲನಗಳನ್ನು ರೆಕಾರ್ಡ್‌ ಮಾಡಿಕೊಳ್ಳಲು, ವಿವಿಧ ಅಧಿಕಾರಿಗಳ ಸಂದರ್ಶನ ನಡೆಸಲು ಮಿನ್‌ನೌ ಫಿಲ್ಮ್ಸ್‌‌ನ ಕ್ಲೈರೇ ಗುಡ್‌ಲಾಸ್‌ ಮತ್ತು ಆಕೆಯ ತಂಡಕ್ಕೆ ಪೊಲೀಸರು ಅಧಿಕಾರ ನೀಡಿದ್ದಾರೆ” ಎಂದು ಅರ್ಜಿದಾರರು ಆರೋಪಿಸಿದ್ದಾರೆ.

“ಯಾವುದೇ ಅಧಿಕೃತ ಅನುಮತಿ ಇಲ್ಲದೇ ವಿಡಿಯೋ ಚಿತ್ರೀಕರಣ ಮಾಡಲಾಯಿತು, ಹೇಳಿಕೆಯನ್ನು ಪಡೆಯಲಾಯಿತು. ಮಿನ್‌ನೌ ಫಿಲ್ಮ್ಸ್‌ನವರ ಪತ್ರದ ಮೇಲೆ ಪೊಲೀಸರು ಬಲವಂತವಾಗಿ ಸಹಿ ಪಡೆದಿದ್ದಾರೆ” ಎಂದು ಅರ್ಜಿದಾರರು ಕೋರ್ಟ್‌‌ಗೆ ತಿಳಿಸಿದ್ದಾರೆ.

ವೆಬ್‌ ಸೀರೀಸ್‌ಗೆ ಆಕ್ಷೇಪ: ಕೀಲಾರ ನಾಗೇಗೌಡರ ಆಕ್ಷೇಪ

ಸದರಿ ವೆಬ್‌ ಸೀರೀಸ್‌ ಕುರಿತು, ನೆಟ್‌ಪ್ಲಿಕ್ಸ್‌ನ ಹಲವು ಬಳಕೆದಾರರು ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿದ್ದಾರೆ. ಇಂತಹ ವೆಬ್‌ ಸೀರೀಸ್‌ಗಳನ್ನು ನೋಡಿ ಹೊಗಳುವಾಗ ಮುನ್ನ ಎಚ್ಚರಿಕೆ ವಹಿಸಬೇಕು ಎಂದು ಪ್ರಜ್ಞಾವಂತರು ಅಭಿಪ್ರಾಯ ತಾಳಿದ್ದಾರೆ.

ಬರಹಗಾರ ನಾಗೇಗೌಡ ಕೀಲಾರ ಶಿವಲಿಂಗಯ್ಯ ಅವರು ತಮ್ಮ ಫೇಸ್‌ಬುಕ್‌ನಲ್ಲಿ ಆಕ್ಷೇಪ ಎತ್ತಿದ್ದಾರೆ. “ಕರ್ನಾಟಕ ಪೊಲೀಸ್‌ನವರದು ಒಂದು detective web series Netflixನಲ್ಲಿ ಬಂದಿದೆ ಅಂತ ಕುತೂಹಲದಿಂದ ಮೊದಲ ಎಪಿಸೋಡ್ ನೋಡಿದೆ. ಇದರಲ್ಲಿ ಯಾವುದೇ detective ಅಂಶಗಳು ಇರಲಿಲ್ಲ. ಇದೊಂದು open and shut case ಆಗಿತ್ತು” ಎಂದಿದ್ದಾರೆ.

ಮುಂದುವರಿದು, “ಬಡವರ ಮನೆ ಮಕ್ಕಳು ಈ ಮರ್ಡರ್‌‌ನಲ್ಲಿ ಆರೋಪಿಗಳು ಆಗಿರುವುದರಿಂದ ಪೊಲೀಸ್‌ನವರು ಆ ಆರೋಪಿಗಳ ಘನತೆಗೆ ಯಾವುದೇ ಬೆಲೆ ಕೊಡದೇ ಅವರನ್ನು ಈ ವೆಬ್‌ ಸೀರೀಸ್‌ನಲ್ಲಿ ತೋರಿಸಲು ಅವಕಾಶ ಕಲ್ಪಿಸಿದ್ದಾರೆ. ಆರೋಪಿಗಳ privacy ಹಕ್ಕುಗಳನ್ನು ಉಲ್ಲಂಘಿಸಿ ಅವರ ಮೆಸೇಜ್, ಬ್ಯಾಂಕ್ ಖಾತೆಯ ವಿವರಗಳು, ವೈಯಕ್ತಿಕ ವಿಚಾರಗಳು ಎಲ್ಲವನ್ನೂ web seriesನಲ್ಲಿ ತೋರಿಸಿದ್ದಾರೆ. ಇದಕ್ಕೆ ನಮ್ಮ ಕರ್ನಾಟಕ ಪೊಲೀಸ್‌‌ನವರು ಅವಕಾಶ ಕೊಟ್ಟಿದ್ದಾರೆ” ಎಂದಿದ್ದಾರೆ.

“ಈ ಮರ್ಡರ್‌‌ನಲ್ಲಿ ಬರುವ ಒಬ್ಬ ಆರೋಪಿ ಇವರ ಪ್ರಕಾರವೇ ನಿರಪರಾಧಿಯಾದರೂ ಇವನ ಮೇಲೆ ಕರ್ನಾಟಕ ಪೋಲಿಸ್‌‌ನವರು ಮರ್ಡರ್ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಈ ರೀತಿಯದ್ದು ಅಮೆರಿಕ ಅಥವಾ ಯೂರೋಪ್‌‌ನಲ್ಲಿ ಆಗಿದ್ದರೆ ಕೋಟ್ಯಂತರ ರೂಪಾಯಿ ದಂಡವನ್ನು ಆರೋಪಿಗಳಿಗೆ ಪೊಲೀಸ್‌ ಇಲಾಖೆ ಕಟ್ಟಬೇಕಾಗಿತ್ತು. ಜೊತೆಗೆ ಈ ಪೊಲೀಸ್‌‌ ಅಧಿಕಾರಿಗಳು ಕೆಲಸ ಕಳೆದುಕೊಳ್ಳುತ್ತಿದ್ದರು. ಇವರಿಗೆ ಅವರ PF, pension ಕೂಡ ಸಿಗುತ್ತಿರಲಿಲ್ಲ. ಆದರೆ ಭಾರತದಲ್ಲಿ ಬಡವರ ಮನೆ ಮಕ್ಕಳು ಅಂದರೆ ಯಾವುದೇ ಗೌರವ ಇಲ್ಲ. ನನ್ನ ಅಭಿಪ್ರಾಯದಲ್ಲಿ ಕರ್ನಾಟಕ ಪೊಲೀಸ್‌ನವರು ಆರೋಪಿಗಳಿಗೆ ಸಾರ್ವಜನಿಕ ಕ್ಷಮೆ ಕೇಳಿ ಒಂದು ದೊಡ್ಡ ಮೊತ್ತದ ದಂಡ ಕಟ್ಟಿಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

“ದುರಂತ ಏನು ಅಂದರೆ ಕರ್ನಾಟಕದ ಒಂದಷ್ಟು ಸಿನಿಮಾ ಪ್ರಿಯರು ಇದೊಂದು ಅದ್ಭುತ ವೆಬ್ series ಅಂತ ಒಂದು ಕ್ಲಬ್ ಹೌಸ್ ಚರ್ಚೆ ಕೂಡ ನಡೆಸಿದರು. ಆ ಚರ್ಚೆಯಲ್ಲಿ ತಮ್ಮನ್ನು ತಾವೇ ಸಿನಿಮಾ ವಿಮರ್ಶಕರು ಅಂತ ಕರೆಸಿಕೊಳ್ಳುವವರು ಒಂದು ಘನವಾದ ಚರ್ಚೆ ಕೂಡ ಮಾಡಿದ್ದು ಅಲ್ಲದೇ ಮಾನವ ಹಕ್ಕುಗಳನ್ನು ಉಲ್ಲಂಘಿಸಿದ ಆ ಪೊಲೀಸ್‌ ಅಧಿಕಾರಿಗಳನ್ನು ಆ ಚರ್ಚೆಗೆ ಕರೆಸಿ ಹೊಗಳಿದ್ದೇ ಹೊಗಳಿದ್ದು. ಇಂತಹ ಮೂರ್ಖ ಸಿನಿಮಾ ವಿಮರ್ಶಕರಿಗೆ ವ್ಯಕ್ತಿ ಘನತೆ, ಮಾನವ ಹಕ್ಕುಗಳು, ನಮ್ಮ ನೆಲದ ಕಾನೂನಿನ ಬಗ್ಗೆ ಕಿಂಚಿತ್ತೂ ತಿಳಿವಳಿಕೆ ಇಲ್ಲ” ಎಂದು ವಿಷಾದಿಸಿದ್ದಾರೆ.

ದಯಾ ಗಂಗನಘಟ್ಟ ಅವರು ಪ್ರತಿಕ್ರಿಯಿಸಿ, “ಜಾಳು ಜಾಳು ಡೈಲಾಗ್ಸ್, ಆದರೆ ವಾಸ್ತವವಾಗಿಯೂ ಪೊಲೀಸ್ ವ್ಯವಸ್ಥೆ ಇದಕ್ಕಿಂತ ಹದಗೆಟ್ಟಿರೋದು ವಿಷಾದ” ಎಂದಿದ್ದಾರೆ.

ರಿಯಾಜ್‌ ಎಂಬುವವರು ಪ್ರತಿಕ್ರಿಯಿಸಿ, “ಸಾರ್ವಜನಿಕ ಸೇವಕರಾಗಿ ಇರಬೇಕಾದ ಪೊಲೀಸರನ್ನು ಹುಲಿ ಸಿಂಹ ಅಂತಾ ಮಿತಿಗಿಂತ ಹೆಚ್ಚು ಹೊಗಳಿ ಅಟ್ಟಕೇರಿಸಿ ಅವರ ಕಾನೂನು ಬಾಹಿರ (ಕಸ್ಟಡಿ ಸಾವು, ಎನ್ ಕೌಂಟರ್, ಸುಳ್ಳು ಕೇಸುಗಳು) ಕೃತ್ಯಗಳನ್ನು ಈ ಪರಿ ಸರ್ಮಥಿಸುವ ಮನಸ್ಥಿತಿ ಭಾರತದಲ್ಲಿ ಮಾತ್ರ ಇರಬಹುದೇನೋ, ಅನುಮಾನ” ಎಂದಿದ್ದಾರೆ.

ಇದನ್ನೂ ಓದಿ: ಚಲನಚಿತ್ರ 2020: ಸ್ಟ್ರೀಮ್ ಸಿನಿಮಾ ಕುಗ್ಗಿದ ಪರದೆ, ಹಿಗ್ಗಿದ ಮಾರುಕಟ್ಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...

ಗದಗ | ಮನುವಾದದ ಜಾರಿಗೆ ಎಸ್‌ಐಆರ್‌ ಹೇರಿಕೆ : ಡಾ.ಇಸಾಬೆಲ್ಲ ಝೇವಿಯರ್

ದೇಶದಲ್ಲಿ ಮನುವಾದ ಜಾರಿಗೆ ತರುವುದು ಆರ್‌ಎಸ್‌ಎಸ್‌-ಸಂಘಪರಿವಾರದ ಮೂಲ ಉದ್ದೇಶ, ಅದಕ್ಕಾಗಿ ಜನರ ಮೇಲೆ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ಯಂತಹ ಹೊಸ ಹೊಸ ಪ್ರಕ್ರಿಯೆಗಳನ್ನು ಹೇರಲಾಗುತ್ತಿದೆ ಎಂದು ಸಾಮಾಜಿಕ ಹೋರಾಟಗಾರ್ತಿ...

ಸಂವಿಧಾನ ವಿರೋಧಿ ‘SIR’ಗೆ ಹರಿಹರದಲ್ಲಿ ತೀವ್ರ ವಿರೋಧ: ಜನಜಾಗೃತಿ ಜಾಥಾದ ಮೂಲಕ ಕೇಂದ್ರ ಸರ್ಕಾರದ ವಿರುದ್ಧ ನಾಗರಿಕರ ಆಕ್ರೋಶ

ದಾವಣಗೆರೆ ಜಿಲ್ಲೆಯ ಹರಿಹರ ತಾಲ್ಲೂಕಿನಲ್ಲಿ ಇತ್ತೀಚೆಗೆ ಕೇಂದ್ರ ಚುನಾವಣಾ ಆಯೋಗದ 'SIR' (ವಿಶೇಷ ಗುರುತಿನ ಪರಿಶೀಲನೆ/ಮರುಪರಿಶೀಲನಾ ಕ್ರಮ) ಯೋಜನೆ ವಿರುದ್ಧ ಬೃಹತ್ ಜನಜಾಗೃತಿ ಜಾಥಾ ಯಶಸ್ವಿಯಾಗಿ ಸಂಚರಿಸಿತು. ಸಾರ್ವಜನಿಕರಲ್ಲಿ ಈ ಯೋಜನೆಯ ಕುರಿತು...

“ಎಸ್ಐಆರ್ ಮೂಲಕ ಮನುವಾದದ ಜಾರಿಗೆ ಕುತಂತ್ರ ರೂಪಿಸುತ್ತಿರುವ ಬಿಜೆಪಿ ಗೆಲ್ಲಲು ಬಿಡುವುದಿಲ್ಲ”:  ಮೈಸೂರಿನಲ್ಲಿ ಜನಾಕ್ರೋಶ

2026 ಜೂನ್ 16 ರಂದು ಹುಣುಸೂರು, ಹೆಚ್.ಡಿ ಕೋಟೆ, ಮೈಸೂರಿನಲ್ಲಿ ಸಾಗಿದ ಎಸ್ಐಆರ್ ವಿರೋಧಿ ಕರ್ನಾಟಕ ಜಾಥಾಕ್ಕೆ ಹುಣುಸೂರಿನ ಸಂವಿಧಾನ ಸರ್ಕಲ್ ನಿಂದ ಅಭೂತಪೂರ್ವ ಬೆಂಬಲ ಸಿಕ್ಕಿತು. ಬೆಳಗ್ಗೆ 8 ಗಂಟೆ ಸುಮಾರಿಗೆ ಎಸ್ಐಆರ್...