Homeಮುಖಪುಟವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆ

ವೆಬ್‌ಸೀರೀಸ್‌: ಕರ್ನಾಟಕ ಪೊಲೀಸರಿಂದ ಖಾಸಗಿತನದ ಉಲ್ಲಂಘನೆ; ಮೊದಲ ಸಂಚಿಕೆಗೆ ಹೈಕೋರ್ಟ್‌ ತಡೆ

ಈ ರೀತಿಯ ಘಟನೆ ಅಮೆರಿಕ ಅಥವಾ ಯೂರೋಪ್‌‌ನಲ್ಲಿ ಆಗಿದ್ದರೆ ಕೋಟ್ಯಂತರ ರೂಪಾಯಿ ದಂಡವನ್ನು ಆರೋಪಿಗಳಿಗೆ ಪೊಲೀಸ್‌ ಇಲಾಖೆ ಕಟ್ಟಬೇಕಾಗಿತ್ತು ಎಂದು ವೆಬ್‌ಸೀರೀಸ್‌ ನೋಡಿದವರು ಟೀಕಿಸಿದ್ದಾರೆ.

- Advertisement -
- Advertisement -

ನೆಟ್‌ಪ್ಲಿಕ್ಸ್‌ನಲ್ಲಿ ಬಿಡುಗಡೆಯಾಗಿರುವ ‘ಕ್ರೈಮ್‌ ಸ್ಟೋರೀಸ್‌: ಇಂಡಿಯಾ ಡೆಟೆಕ್ಟೀವ್ಸ್‌’ ಸಾಕ್ಷ್ಯಚಿತ್ರ ಸರಣಿಯ ಮೊದಲ ಸಂಚಿಕೆಯ ಪ್ರಸಾರವನ್ನು ತಡೆ ಹಿಡಿಯಲು ಕರ್ನಾಟಕ ಹೈಕೋರ್ಟ್‌ ಸೂಚಿಸಿದೆ.

ನೆಟ್‌ಪ್ಲಿಕ್‌ ಇಂಟರ್‌ಟೈನ್‌ಮೆಂಟ್‌ ಸರ್ವೀಸ್‌ ಇಂಡಿಯಾ ಪ್ರೈವೇಟ್‌ ಲಿಮಿಟೆಡ್‌ ಓಟಿಟಿಯಲ್ಲಿ ಈ ಸಾಕ್ಷ್ಯಚಿತ್ರ ಸರಣಿ ಬಿಡುಗಡೆಯಾಗಿದ್ದು, ಕರ್ನಾಟಕದಲ್ಲಿ ನಡೆದ ಅಪರಾಧ ಪ್ರಕರಣಗಳ ಕುರಿತು ಚಿತ್ರೀಕರಿಸಲಾಗಿದೆ. ಒಟ್ಟು ನಾಲ್ಕು ಸಂಚಿಕೆಗಳನ್ನು ಬಿಡುಗಡೆ ಮಾಡಲಾಗಿದ್ದು, ಒಂದೊಂದು ಸಂಚಿಕೆಯೂ ಒಂದೊಂದು ನೈಜ ಘಟನೆಯನ್ನು ಆಧರಿಸಿವೆ.

ಮೊದಲ ಸಂಚಿಕೆಯು ‘ಎ ಮರ್ಡರ್‌ ಮದರ್‌’ ಎಂದಿದ್ದು, ಅದಕ್ಕೆ ಜಸ್ಟೀಸ್‌ ಬಿ.ಎಂ.ಶ್ಯಾಮ್‌ ಪ್ರಸಾದ್‌ ಅಕ್ಟೋಬರ್‌ 1ರಂದು ಮಧ್ಯಂತರ ತಡೆಯಾಜ್ಞೆಯನ್ನು ಹೊರಡಿಸಿದ್ದಾರೆ.

ಕೆ.ಆರ್‌.ಪುರಂ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ 2020ರ ಫೆಬ್ರುವರಿಯಲ್ಲಿ ನಡೆದ 54 ವರ್ಷದ ನಿರ್ಮಲಾ ಚಂದ್ರಶೇಖರ್‌ ಕೊಲೆ ಪ್ರಕರಣದ ಸಹ ಆರೋಪಿ, ಬೆಂಗಳೂರಿನ ನಿವಾಸಿ ಶ್ರೀಧರ್‌ ರಾವ್ ಎಸ್‌ (28) ಅವರು ‘ಎ ಮರ್ಡರ್‌ ಮದರ್‌’ ಸಂಚಿಕೆಯನ್ನು ಪ್ರಶ್ನಿಸಿ ಹೈಕೋರ್ಟ್ ಮೆಟ್ಟಿಲೇರಿದ್ದಾರೆ.

ಅರ್ಜಿದಾರರು (ಸಹ ಆರೋಪಿ ಶ್ರೀಧರ್‌ ರಾವ್‌) ಮತ್ತು ಪ್ರಮುಖ ಆರೋಪಿ ಅಮೃತ ಚಂದ್ರಶೇಖರ್ ವಿರುದ್ಧದ ತನಿಖೆಯ ದೃಶ್ಯಗಳನ್ನು ಈ ಸರಣಿ ಒಳಗೊಂಡಿದೆ ಎಂದು ಅರ್ಜಿಯಲ್ಲಿ ತಿಳಿಸಲಾಗಿದೆ.

ಆರೋಪಿ ಅಮೃತಾ ತನ್ನ ತಾಯಿಯನ್ನು ಕೊಂದು, ಸಹೋದರನನ್ನೂ ಕೊಲ್ಲಲು ಯತ್ನಿಸಿ ಬಳಿಕ ಸಹಆರೋಪಿ (ಅರ್ಜಿದಾರ) ಜೊತೆ ಅಂಡಮಾನ್‌ ನಿಕೋಬಾರ್‌ಗೆ ಫೆಬ್ರುವರಿ 2ರಂದು ವಿಮಾನ ಹತ್ತಿದ್ದರು ಎಂದು ಸಂಚಿಕೆಯಲ್ಲಿ ನಿರೂಪಿಸಲಾಗಿದೆ.

ಇದನ್ನೂ ಓದಿರಿ: ಕನ್ನಡದ ಮೊದಲ ಲೆಸ್ಬಿಯನ್ ಚಿತ್ರ ’ನಾನು ಲೇಡಿಸ್’ ತಸ್ವೀರ್ ದಕ್ಷಿಣ ಏಷ್ಯಾ ಚಿತ್ರೋತ್ಸವಕ್ಕೆ ಆಯ್ಕೆ

“ಅರ್ಜಿದಾರನು ಕಳೆದ ವರ್ಷದ ಫೆಬ್ರುವರಿಯಲ್ಲಿ ಬಂಧನಕ್ಕೆ ಒಳಗಾಗಿದ್ದಾಗ ಆತನ ಎಲ್ಲ ಚಲನವಲನಗಳನ್ನು ರೆಕಾರ್ಡ್‌ ಮಾಡಿಕೊಳ್ಳಲು, ವಿವಿಧ ಅಧಿಕಾರಿಗಳ ಸಂದರ್ಶನ ನಡೆಸಲು ಮಿನ್‌ನೌ ಫಿಲ್ಮ್ಸ್‌‌ನ ಕ್ಲೈರೇ ಗುಡ್‌ಲಾಸ್‌ ಮತ್ತು ಆಕೆಯ ತಂಡಕ್ಕೆ ಪೊಲೀಸರು ಅಧಿಕಾರ ನೀಡಿದ್ದಾರೆ” ಎಂದು ಅರ್ಜಿದಾರರು ಆರೋಪಿಸಿದ್ದಾರೆ.

“ಯಾವುದೇ ಅಧಿಕೃತ ಅನುಮತಿ ಇಲ್ಲದೇ ವಿಡಿಯೋ ಚಿತ್ರೀಕರಣ ಮಾಡಲಾಯಿತು, ಹೇಳಿಕೆಯನ್ನು ಪಡೆಯಲಾಯಿತು. ಮಿನ್‌ನೌ ಫಿಲ್ಮ್ಸ್‌ನವರ ಪತ್ರದ ಮೇಲೆ ಪೊಲೀಸರು ಬಲವಂತವಾಗಿ ಸಹಿ ಪಡೆದಿದ್ದಾರೆ” ಎಂದು ಅರ್ಜಿದಾರರು ಕೋರ್ಟ್‌‌ಗೆ ತಿಳಿಸಿದ್ದಾರೆ.

ವೆಬ್‌ ಸೀರೀಸ್‌ಗೆ ಆಕ್ಷೇಪ: ಕೀಲಾರ ನಾಗೇಗೌಡರ ಆಕ್ಷೇಪ

ಸದರಿ ವೆಬ್‌ ಸೀರೀಸ್‌ ಕುರಿತು, ನೆಟ್‌ಪ್ಲಿಕ್ಸ್‌ನ ಹಲವು ಬಳಕೆದಾರರು ಆಕ್ಷೇಪ ವ್ಯಕ್ತಪಡಿಸಿ ಸಾಮಾಜಿಕ ಮಾಧ್ಯಮಗಳಲ್ಲಿ ಬರೆದಿದ್ದಾರೆ. ಇಂತಹ ವೆಬ್‌ ಸೀರೀಸ್‌ಗಳನ್ನು ನೋಡಿ ಹೊಗಳುವಾಗ ಮುನ್ನ ಎಚ್ಚರಿಕೆ ವಹಿಸಬೇಕು ಎಂದು ಪ್ರಜ್ಞಾವಂತರು ಅಭಿಪ್ರಾಯ ತಾಳಿದ್ದಾರೆ.

ಬರಹಗಾರ ನಾಗೇಗೌಡ ಕೀಲಾರ ಶಿವಲಿಂಗಯ್ಯ ಅವರು ತಮ್ಮ ಫೇಸ್‌ಬುಕ್‌ನಲ್ಲಿ ಆಕ್ಷೇಪ ಎತ್ತಿದ್ದಾರೆ. “ಕರ್ನಾಟಕ ಪೊಲೀಸ್‌ನವರದು ಒಂದು detective web series Netflixನಲ್ಲಿ ಬಂದಿದೆ ಅಂತ ಕುತೂಹಲದಿಂದ ಮೊದಲ ಎಪಿಸೋಡ್ ನೋಡಿದೆ. ಇದರಲ್ಲಿ ಯಾವುದೇ detective ಅಂಶಗಳು ಇರಲಿಲ್ಲ. ಇದೊಂದು open and shut case ಆಗಿತ್ತು” ಎಂದಿದ್ದಾರೆ.

ಮುಂದುವರಿದು, “ಬಡವರ ಮನೆ ಮಕ್ಕಳು ಈ ಮರ್ಡರ್‌‌ನಲ್ಲಿ ಆರೋಪಿಗಳು ಆಗಿರುವುದರಿಂದ ಪೊಲೀಸ್‌ನವರು ಆ ಆರೋಪಿಗಳ ಘನತೆಗೆ ಯಾವುದೇ ಬೆಲೆ ಕೊಡದೇ ಅವರನ್ನು ಈ ವೆಬ್‌ ಸೀರೀಸ್‌ನಲ್ಲಿ ತೋರಿಸಲು ಅವಕಾಶ ಕಲ್ಪಿಸಿದ್ದಾರೆ. ಆರೋಪಿಗಳ privacy ಹಕ್ಕುಗಳನ್ನು ಉಲ್ಲಂಘಿಸಿ ಅವರ ಮೆಸೇಜ್, ಬ್ಯಾಂಕ್ ಖಾತೆಯ ವಿವರಗಳು, ವೈಯಕ್ತಿಕ ವಿಚಾರಗಳು ಎಲ್ಲವನ್ನೂ web seriesನಲ್ಲಿ ತೋರಿಸಿದ್ದಾರೆ. ಇದಕ್ಕೆ ನಮ್ಮ ಕರ್ನಾಟಕ ಪೊಲೀಸ್‌‌ನವರು ಅವಕಾಶ ಕೊಟ್ಟಿದ್ದಾರೆ” ಎಂದಿದ್ದಾರೆ.

“ಈ ಮರ್ಡರ್‌‌ನಲ್ಲಿ ಬರುವ ಒಬ್ಬ ಆರೋಪಿ ಇವರ ಪ್ರಕಾರವೇ ನಿರಪರಾಧಿಯಾದರೂ ಇವನ ಮೇಲೆ ಕರ್ನಾಟಕ ಪೋಲಿಸ್‌‌ನವರು ಮರ್ಡರ್ ಆರೋಪ ಪಟ್ಟಿ ಸಲ್ಲಿಕೆ ಮಾಡಿದ್ದಾರೆ. ಈ ರೀತಿಯದ್ದು ಅಮೆರಿಕ ಅಥವಾ ಯೂರೋಪ್‌‌ನಲ್ಲಿ ಆಗಿದ್ದರೆ ಕೋಟ್ಯಂತರ ರೂಪಾಯಿ ದಂಡವನ್ನು ಆರೋಪಿಗಳಿಗೆ ಪೊಲೀಸ್‌ ಇಲಾಖೆ ಕಟ್ಟಬೇಕಾಗಿತ್ತು. ಜೊತೆಗೆ ಈ ಪೊಲೀಸ್‌‌ ಅಧಿಕಾರಿಗಳು ಕೆಲಸ ಕಳೆದುಕೊಳ್ಳುತ್ತಿದ್ದರು. ಇವರಿಗೆ ಅವರ PF, pension ಕೂಡ ಸಿಗುತ್ತಿರಲಿಲ್ಲ. ಆದರೆ ಭಾರತದಲ್ಲಿ ಬಡವರ ಮನೆ ಮಕ್ಕಳು ಅಂದರೆ ಯಾವುದೇ ಗೌರವ ಇಲ್ಲ. ನನ್ನ ಅಭಿಪ್ರಾಯದಲ್ಲಿ ಕರ್ನಾಟಕ ಪೊಲೀಸ್‌ನವರು ಆರೋಪಿಗಳಿಗೆ ಸಾರ್ವಜನಿಕ ಕ್ಷಮೆ ಕೇಳಿ ಒಂದು ದೊಡ್ಡ ಮೊತ್ತದ ದಂಡ ಕಟ್ಟಿಕೊಡಬೇಕು” ಎಂದು ಒತ್ತಾಯಿಸಿದ್ದಾರೆ.

“ದುರಂತ ಏನು ಅಂದರೆ ಕರ್ನಾಟಕದ ಒಂದಷ್ಟು ಸಿನಿಮಾ ಪ್ರಿಯರು ಇದೊಂದು ಅದ್ಭುತ ವೆಬ್ series ಅಂತ ಒಂದು ಕ್ಲಬ್ ಹೌಸ್ ಚರ್ಚೆ ಕೂಡ ನಡೆಸಿದರು. ಆ ಚರ್ಚೆಯಲ್ಲಿ ತಮ್ಮನ್ನು ತಾವೇ ಸಿನಿಮಾ ವಿಮರ್ಶಕರು ಅಂತ ಕರೆಸಿಕೊಳ್ಳುವವರು ಒಂದು ಘನವಾದ ಚರ್ಚೆ ಕೂಡ ಮಾಡಿದ್ದು ಅಲ್ಲದೇ ಮಾನವ ಹಕ್ಕುಗಳನ್ನು ಉಲ್ಲಂಘಿಸಿದ ಆ ಪೊಲೀಸ್‌ ಅಧಿಕಾರಿಗಳನ್ನು ಆ ಚರ್ಚೆಗೆ ಕರೆಸಿ ಹೊಗಳಿದ್ದೇ ಹೊಗಳಿದ್ದು. ಇಂತಹ ಮೂರ್ಖ ಸಿನಿಮಾ ವಿಮರ್ಶಕರಿಗೆ ವ್ಯಕ್ತಿ ಘನತೆ, ಮಾನವ ಹಕ್ಕುಗಳು, ನಮ್ಮ ನೆಲದ ಕಾನೂನಿನ ಬಗ್ಗೆ ಕಿಂಚಿತ್ತೂ ತಿಳಿವಳಿಕೆ ಇಲ್ಲ” ಎಂದು ವಿಷಾದಿಸಿದ್ದಾರೆ.

ದಯಾ ಗಂಗನಘಟ್ಟ ಅವರು ಪ್ರತಿಕ್ರಿಯಿಸಿ, “ಜಾಳು ಜಾಳು ಡೈಲಾಗ್ಸ್, ಆದರೆ ವಾಸ್ತವವಾಗಿಯೂ ಪೊಲೀಸ್ ವ್ಯವಸ್ಥೆ ಇದಕ್ಕಿಂತ ಹದಗೆಟ್ಟಿರೋದು ವಿಷಾದ” ಎಂದಿದ್ದಾರೆ.

ರಿಯಾಜ್‌ ಎಂಬುವವರು ಪ್ರತಿಕ್ರಿಯಿಸಿ, “ಸಾರ್ವಜನಿಕ ಸೇವಕರಾಗಿ ಇರಬೇಕಾದ ಪೊಲೀಸರನ್ನು ಹುಲಿ ಸಿಂಹ ಅಂತಾ ಮಿತಿಗಿಂತ ಹೆಚ್ಚು ಹೊಗಳಿ ಅಟ್ಟಕೇರಿಸಿ ಅವರ ಕಾನೂನು ಬಾಹಿರ (ಕಸ್ಟಡಿ ಸಾವು, ಎನ್ ಕೌಂಟರ್, ಸುಳ್ಳು ಕೇಸುಗಳು) ಕೃತ್ಯಗಳನ್ನು ಈ ಪರಿ ಸರ್ಮಥಿಸುವ ಮನಸ್ಥಿತಿ ಭಾರತದಲ್ಲಿ ಮಾತ್ರ ಇರಬಹುದೇನೋ, ಅನುಮಾನ” ಎಂದಿದ್ದಾರೆ.

ಇದನ್ನೂ ಓದಿ: ಚಲನಚಿತ್ರ 2020: ಸ್ಟ್ರೀಮ್ ಸಿನಿಮಾ ಕುಗ್ಗಿದ ಪರದೆ, ಹಿಗ್ಗಿದ ಮಾರುಕಟ್ಟೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...

‘ಬೀಬಿ ನೀನು ಅಡಗಿಕೊಳ್ಳಲು ಸಾಧ್ಯವಿಲ್ಲ’: ವಾಷಿಂಗ್ಟನ್‌ ಗೆ ಭೇಟಿ ನೀಡಿದ ನೆತನ್ಯಾಹು ವಿರುದ್ಧ ಜನಾಕ್ರೋಶ: ಐಸಿಸಿ ವಾರಂಟ್ ನಿರ್ಲಕ್ಷಿಸಿ ಟ್ರಂಪ್ ಆತಿಥ್ಯ

ಇಸ್ರೇಲ್ ಪ್ರಧಾನಿ ಬೆಂಜಮಿನ್ ನೆತನ್ಯಾಹು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರೊಂದಿಗಿನ ಮಾತುಕತೆಗಾಗಿ ವಾಷಿಂಗ್ಟನ್ ಡಿಸಿಗೆ ಭೇಟಿ ನೀಡುತ್ತಿದ್ದಂತೆಯೇ, ರಾಜಧಾನಿಯಾದ್ಯಂತ ಅವರ ವಿರುದ್ಧ ಕಟು ಆಕ್ರೋಶ ಮತ್ತು ಪ್ರತಿಭಟನೆಗಳ ಕಾವು ತೀವ್ರಗೊಂಡಿದೆ. ಅಂತರರಾಷ್ಟ್ರೀಯ...

SIR: ಕರ್ನಾಟಕದಲ್ಲಿ 43 ಲಕ್ಷಕ್ಕೂ ಹೆಚ್ಚು ಜನರಿಂದ ಸಿಗದ ಸಹಿ ಮಾಡಿದ ನಮೂನೆ; ಕರಡು ಪಟ್ಟಿಯಿಂದ ಹೆಸರು ಕೈಬಿಡುವ ಭೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಪ್ರಮುಖ ಮೈಲಿಗಲ್ಲುಗಳನ್ನು ತಲುಪಿದ್ದು, ರಾಜ್ಯಾದ್ಯಂತ ಶೇಕಡಾ 77ರಷ್ಟು ಗಣತಿ ನಮೂನೆಗಳು ಡಿಜಿಟಲೀಕರಣಗೊಂಡಿವೆ. ಆದಾಗ್ಯೂ, ರಾಜ್ಯದ 43.24 ಲಕ್ಷಕ್ಕೂ ಹೆಚ್ಚು ಮತದಾರರು...

ನೀಟ್‌ ಪ್ರತಿಭಟನೆಯಲ್ಲಿ ಉಮರ್ ಖಾಲಿದ್‌ಗೆ ಬೆಂಬಲ; ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ ಗೋವಾ ಪೊಲೀಸರು

ಗೋವಾದ ಪಣಜಿಯಲ್ಲಿ ನಡೆದ ನೀಟ್-ಯುಜಿ ಪ್ರತಿಭಟನೆಯಲ್ಲಿ ಉಮರ್ ಖಾಲಿದ್ ಪರ ಘೋಷಣೆಗಳನ್ನು ಕೂಗಿದ ಕೆಲವು ವಿದ್ಯಾರ್ಥಿಗಳ ಪ್ರತಿಭಟನೆ ಹಿಂದಿನ ಹಣಕಾಸು ಮತ್ತು ಉದ್ದೇಶದ ಬಗ್ಗೆ ಗೋವಾ ಪೊಲೀಸರು ಸಂಘಟಕರನ್ನು ವಿಚಾರಣೆಗೆ ಒಳಪಡಿಸಿದ್ದಾರೆ ಎಂದು...