Homeಮುಖಪುಟವಯಸ್ಕ ಪೋಷಕರ ಆರೈಕೆ ಮಕ್ಕಳ ಹೊಣೆ: ಹೈಕೋರ್ಟ್

ವಯಸ್ಕ ಪೋಷಕರ ಆರೈಕೆ ಮಕ್ಕಳ ಹೊಣೆ: ಹೈಕೋರ್ಟ್

- Advertisement -
- Advertisement -

ವಯಸ್ಸಾದ ಪೋಷಕರನ್ನು ಆರೈಕೆ ಮಾಡುವ ಜವಾಬ್ದಾರಿ ಮಕ್ಕಳ ಮೇಲಿದೆ ಎಂದು ಕರ್ನಾಟಕ ಹೈಕೋರ್ಟ್ ಹೇಳಿದೆ.

ಮುಖ್ಯ ನ್ಯಾಯಮೂರ್ತಿ ಪಿ.ಬಿ.ವರಾಳೆ ಮತ್ತು ನ್ಯಾಯಮೂರ್ತಿ ಕೃಷ್ಣ ಎಸ್‌.ದೀಕ್ಷಿತ್‌ ಅವರಿದ್ದ ವಿಭಾಗೀಯ ಪೀಠ ಈ ಮಹತ್ವದ ಆದೇಶವನ್ನು ಹೊರಡಿಸಿದ್ದು, ತಂದೆಯಿಂದ ಆಸ್ತಿಯನ್ನು ಉಡುಗೊರೆಯಾಗಿ ಪಡೆದ ನಂತರ ಹಲ್ಲೆ ನಡೆಸಿ ಮನೆಯಿಂದ ಹೊರಹಾಕಿದ್ದ ಪುತ್ರಿ ಮತ್ತು ಅಳಿಯನ ವರ್ತನೆಯನ್ನು ಗಮನಿಸಿದ್ದರು.

ಪೋಷಕರನ್ನು ನೋಡಿಕೊಳ್ಳುವುದು ಮಕ್ಕಳ ಹೊಣೆಗಾರಿಕೆ ಹೊರತು ದಯೆಯ ವಿಚಾರವಲ್ಲ. ವೃದ್ಧಾಪ್ಯದಲ್ಲಿ ಹೆತ್ತವರನ್ನು ಆರೈಕೆ ಮಾಡುವುದು ಮಕ್ಕಳ ಶಾಸನಬದ್ಧ ಜವಾಬ್ದಾರಿ. ಪೋಷಕರು ಆಸ್ತಿಯನ್ನು ಉಡುಗೊರೆಯಾಗಿ ನೀಡಿದಾಗ ಮಕ್ಕಳ ಮೇಲೆ ಈ ಜವಾಬ್ದಾರಿ ಮತ್ತಷ್ಟು ಹೆಚ್ಚಾಗಲಿದೆ ಎಂದು ಕೋರ್ಟ್‌ ಹೇಳಿದೆ.

ಪ್ರಕರಣದಲ್ಲಿ ಪೋಷಕರ ಆಸ್ತಿಯನ್ನು ಉಡುಗೊರೆಯಾಗಿ ಪಡೆದುಕೊಂಡ ಪುತ್ರಿ ನಂತರ ಅವರನ್ನು ಆರೈಕೆ ಮಾಡದೆ, ಪೋಷಕರ ಮೇಲೆ ಹಲ್ಲೆ ನಡೆಸಿ ಮನೆಯಿಂದ ಹೊರಹಾಕಿರುವುದನ್ನು ಕೋರ್ಟ್‌ ಗಮನಿಸಿದೆ. ಪೋಷಕರಿಗೆ ಮಕ್ಕಳು ಕಿರುಕುಳ ನೀಡುವ ಪ್ರಕರಣಗಳು ಅನೇಕ ಕಾರಣಗಳಿಂದ ಬೆಳಕಿಗೆ ಬರುತ್ತಿಲ್ಲ. ಇಂತಹ ವಿಷಯಗಳಲ್ಲಿ ನ್ಯಾಯಾಲಯಗಳು, ಅಧಿಕಾರಿಗಳು ಮತ್ತು ನ್ಯಾಯಮಂಡಳಿಗಳು ಜಾಗರೂಕತೆಯಿಂದ ಕೆಲಸ ಮಾಡಬೇಕು ಎಂದು ವಿಭಾಗೀಯ ಪೀಠ ತನ್ನ ಆದೇಶದಲ್ಲಿ ತಿಳಿಸಿದೆ.

ಏನಿದು ಪ್ರಕರಣ?

2018ರ ಸೆ.28ರಂದು ತುಮಕೂರಿನ ಗುಬ್ಬಿ ತಾಲೂಕಿನ ಬಸವಪಟ್ಟಣದ ಆರ್.ಕವಿತಾ ಅವರಿಗೆ ತಂದೆ ರಾಜಶೇಖರಯ್ಯ ತಮ್ಮ ಆಸ್ತಿಯನ್ನು ಉಡುಗೊರೆಯಾಗಿ ನೀಡಿದ್ದರು. ಇದಾದ ಕೆಲ ದಿನಗಳ ಬಳಿಕ ನಮ್ಮನ್ನು ಸರಿಯಾಗಿ ನೊಡಿಕೊಳ್ಳುತ್ತಿಲ್ಲ ಮತ್ತು ಮನೆ ನಿರ್ಮಾಣಕ್ಕೆ 10 ಲಕ್ಷ ಹಣ ತೆಗೆದುಕೊಂಡಿದ್ದಾರೆ ಎಂದು ಪೋಷಕರು ಉಪವಿಭಾಗಾಧಿಕಾರಿ ಕಚೇರಿಗೆ ದೂರು ನೀಡಿದ್ದರು.

ಆದರೆ ಕವಿತಾ, ತಂದೆ ರಾಜಶೇಖರಯ್ಯ ಮತ್ತು ತಾಯಿ ನಿರ್ಮಲಾ ಅವರನ್ನು ಆರೈಕೆ ಮಾಡುತ್ತಿದ್ದೇವೆ. ತಂದೆಯ ವೈದ್ಯಕೀಯ ಚಿಕಿತ್ಸೆಗಾಗಿ 30 ಲಕ್ಷ ಹಣವನ್ನು ಖರ್ಚು ಮಾಡಿದ್ದೇವೆ ಎಂದು ಹೇಳಿದ್ದರು.

ಪೋಷಕರ ಮೇಲೆ ಹಲ್ಲೆ ನಡೆಸಿ ಮನೆಯಿಂದ ಹೊರಹಾಕಿದ್ದನ್ನು ಗಮನಿಸಿದ ಉಪವಿಭಾಗಾಧಿಕಾರಿ ಆಸ್ತಿ ಉಡುಗೊರೆ ಕ್ರಯವನ್ನು ಅಮಾನ್ಯಗೊಳಿಸಿದ್ದರು. ಈ ಆದೇಶ ಪ್ರಶ್ನಿಸಿ ಕವಿತಾ ಹೈಕೋರ್ಟ್‍ಗೆ ತಕರಾರು ಅರ್ಜಿ ಸಲ್ಲಿಸಿದ್ದರು. ಅದನ್ನು ಏಕ ಸದಸ್ಯ ನ್ಯಾಯಪೀಠ 2021ರ ಸೆ.11ರಂದು ವಜಾಗೊಳಿಸಿತ್ತು. ಇದರಿಂದ ಕವಿತಾ ವಿಭಾಗೀಯ ಪೀಠಕ್ಕೆ ಮೇಲ್ಮನವಿ ಸಲ್ಲಿಸಿದ್ದರು.

ಇದನ್ನು ಓದಿ: ಮಹಿಳಾ ಪತ್ರಕರ್ತೆ ಜೊತೆ ಅನುಚಿತ ವರ್ತನೆ: ಬಿಜೆಪಿ ನಾಯಕ ಸುರೇಶ್‌ ಗೋಪಿಗೆ ಸಮನ್ಸ್‌

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...