Homeಕರ್ನಾಟಕಅಧಿಕ ಶೈಕ್ಷಣಿಕ ಅರ್ಹತೆಯಿದ್ದರೂ ಪೊಲೀಸ್ ಪೇದೆಗಳಾಗಿರುವ ರಾಜ್ಯದ ಯುವತಿಯರು

ಅಧಿಕ ಶೈಕ್ಷಣಿಕ ಅರ್ಹತೆಯಿದ್ದರೂ ಪೊಲೀಸ್ ಪೇದೆಗಳಾಗಿರುವ ರಾಜ್ಯದ ಯುವತಿಯರು

- Advertisement -
- Advertisement -

ಮೈಸೂರಿನಲ್ಲಿ ನಡೆದ ಪೊಲೀಸ್ ತರಬೇತಿ ಅಕಾಡೆಮಿಯ ಆರನೇ ಬ್ಯಾಚ್‌ನಲ್ಲಿ ತರಬೇತಿ ಮುಗಿಸಿ ಮಂಗಳವಾರ ನಡೆದ ನಿರ್ಗಮನ ಪಥ ಸಂಚಲನ ಸಮಾರಂಭದಲ್ಲಿ ಭಾಗವಹಿಸಿದ್ದ ಒಟ್ಟು 242 ಮಹಿಳೆಯರಲ್ಲಿ, 38 ಮಂದಿ ಸ್ನಾತಕೋತ್ತರ ಪದವೀಧರರಾಗಿದ್ದರೆ, 182 ಮಂದಿ ಪದವೀಧರರಾಗಿದ್ದಾರೆ.

ಹೌದು, ಪೊಲೀಸ್ ಪೇದೆ ಹುದ್ದೆಗೆ ಕನಿಷ್ಠ ವಿದ್ಯಾರ್ಹತೆ ಪಿಯುಸಿಯಾಗಿತ್ತು. ಆದರೆ, ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿರುವ ಹೆಚ್ಚಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಪರೀಕ್ಷೆ ಬರೆದು ಉತ್ತೀರ್ಣರಾಗಿ ಎಂಟು ತಿಂಗಳ ಅವಧಿಯ ತರಬೇತಿಯನ್ನು ಪಡೆದಿದ್ದಾರೆ.

ಇದರಲ್ಲಿ 13 ಕಾನ್ಸ್‌ಟೇಬಲ್‌ಗಳು ಎಂಎ ಪದವಿ ಪಡೆದಿದ್ದರೆ, ಇತರರು ಎಂಎಸ್‌ಸಿ ಮತ್ತು ಎಂಕಾಂ ಪದವೀಧರರು. ಅಲ್ಲದೆ, 14 ಎಂಜಿನಿಯರಿಂಗ್ ಮುಗಿಸಿದ್ದರೆ, 06 ಮಂದಿ ಬಿಬಿಎ ಮತ್ತು ಬಿಸಿಎ ಪದವೀಧರರು ಸೇರಿದ್ದಾರೆ. ಸರ್ಕಾರಿ ನೌಕರಿ ಪಡೆಯುವುದು ತೀವ್ರ ಅವಶ್ಯಕತೆಯೋ ಅಥವಾ ಪೊಲೀಸ್ ಪಡೆಯಲ್ಲಿ ಕೆಲಸ ಮಾಡುವ ಉತ್ಸಾಹ ಇದಕ್ಕೆ ಕಾರಣವೋ ತಿಳಿಯದಾಗಿದೆ.

ಈ 242 ಕಾನ್ಸ್‌ಟೇಬಲ್‌ಗಳಲ್ಲಿ 214 ಜನರು ಗ್ರಾಮೀಣ ಪ್ರದೇಶಗಳಿಂದ ಬಂದವರು, 28 ಮಂದಿ ನಗರ ಭಾಗಗಳವರು. ಅವರನ್ನು ಈಗ ಚಾಮರಾಜನಗರ, ಮೈಸೂರು, ತುಮಕೂರು, ಕೊಡಗು, ರಾಯಚೂರು, ಮಂಗಳೂರು, ಕಲಬುರಗಿ ಮತ್ತು ರಾಜ್ಯದ ಇತರ ಪೊಲೀಸ್ ಘಟಕಗಳಿಗೆ ನೇಮಿಸಲಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಉತ್ಪಾದನೆ ನಿಲ್ಲಿಸಲಿರುವ ‘ಫೋರ್ಡ್‌​ ಮೋಟಾರ್ಸ್‌’: 4 ಸಾವಿರ ಉದ್ಯೋಗಿಗಳ ಸ್ಥಿತಿ ಅತಂತ್ರ

ಈ ಹೊಸ ನೇಮಕಾತಿಗಳಲ್ಲಿ ಶೈಕ್ಷಣಿಕವಾಗಿ ವಿಶ್ವವಿದ್ಯಾನಿಲಯದ ಟಾಪರ್‌ಗಳೂ ಸೇರಿದ್ದಾರೆ. ಆಲ್ ರೌಂಡ್ ಬೆಸ್ಟ್ ಟ್ರೇನಿ ಪ್ರಶಸ್ತಿಯನ್ನು ಪಡೆದ ಲತಾ ಎಂ ಅವರು ಬಿಎ ಪದವಿಯಲ್ಲಿ ತನ್ನ ಜಿಲ್ಲೆಗೆ ಟಾಪರ್‌ ಆಗಿದ್ದರು. ಗುಂಡಿನ ಸ್ಪರ್ಧೆಯಲ್ಲಿ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ಪಡೆದ ಸುಜಾತ ಎಸ್ ಬಿರಾದಾರ್, ಚಂದ್ರಕಲಾ ಬಿರಾದಾರ ಮತ್ತು ಚಿತ್ರಾ ಜಿ ತಮ್ಮ ತಮ್ಮ ಹಳ್ಳಿಯ ಮೊದಲ ಪೊಲೀಸ್ ಉದ್ಯೋಗ ಪಡೆದ ಯುವತಿಯರು.

ನಿರ್ಗಮನ ಪಥ ಸಂಚಲನದಲ್ಲಿ ಭಾಗವಹಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪೊಲೀಸ್ ಇಲಾಖೆಯಲ್ಲಿ ಹೆಚ್ಚು ಅರ್ಹ ಮಹಿಳೆಯರು ಉದ್ಯೋಗಗಳನ್ನು ತೆಗೆದುಕೊಳ್ಳುತ್ತಿರುವುದನ್ನು ಕಂಡು ಸಂತಸ ವ್ಯಕ್ತಪಡಿಸಿದ್ದಾರೆ.

ಇದು ಒಳ್ಳೆಯ ಸಂಕೇತವಾಗಿದ್ದರೂ, ಹೆಚ್ಚಿನವರು ಇತರ ಸ್ಪರ್ಧಾತ್ಮಕ ಅಥವಾ ಅಂತರ-ವಿಭಾಗದ ಪರೀಕ್ಷೆಗಳನ್ನು ತೆಗೆದುಕೊಂಡು, ಈ ಹುದ್ದೆಗಳನ್ನು ಮತ್ತೆ ಖಾಲಿ ಮಾಡಿ ಹೋಗುತ್ತಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.


ಇದನ್ನೂ ಓದಿ: #NationalUnemploymentDay | ಪ್ರಧಾನಿ ಜನ್ಮದಿನದಂದೆ ಉದ್ಯೋಗ ಕೇಳಿದ ದೇಶದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...