Homeಕರ್ನಾಟಕಅಧಿಕ ಶೈಕ್ಷಣಿಕ ಅರ್ಹತೆಯಿದ್ದರೂ ಪೊಲೀಸ್ ಪೇದೆಗಳಾಗಿರುವ ರಾಜ್ಯದ ಯುವತಿಯರು

ಅಧಿಕ ಶೈಕ್ಷಣಿಕ ಅರ್ಹತೆಯಿದ್ದರೂ ಪೊಲೀಸ್ ಪೇದೆಗಳಾಗಿರುವ ರಾಜ್ಯದ ಯುವತಿಯರು

- Advertisement -
- Advertisement -

ಮೈಸೂರಿನಲ್ಲಿ ನಡೆದ ಪೊಲೀಸ್ ತರಬೇತಿ ಅಕಾಡೆಮಿಯ ಆರನೇ ಬ್ಯಾಚ್‌ನಲ್ಲಿ ತರಬೇತಿ ಮುಗಿಸಿ ಮಂಗಳವಾರ ನಡೆದ ನಿರ್ಗಮನ ಪಥ ಸಂಚಲನ ಸಮಾರಂಭದಲ್ಲಿ ಭಾಗವಹಿಸಿದ್ದ ಒಟ್ಟು 242 ಮಹಿಳೆಯರಲ್ಲಿ, 38 ಮಂದಿ ಸ್ನಾತಕೋತ್ತರ ಪದವೀಧರರಾಗಿದ್ದರೆ, 182 ಮಂದಿ ಪದವೀಧರರಾಗಿದ್ದಾರೆ.

ಹೌದು, ಪೊಲೀಸ್ ಪೇದೆ ಹುದ್ದೆಗೆ ಕನಿಷ್ಠ ವಿದ್ಯಾರ್ಹತೆ ಪಿಯುಸಿಯಾಗಿತ್ತು. ಆದರೆ, ಪದವಿ ಮತ್ತು ಸ್ನಾತಕೋತ್ತರ ಪದವಿ ಪಡೆದಿರುವ ಹೆಚ್ಚಿನ ಅಭ್ಯರ್ಥಿಗಳು ಈ ಹುದ್ದೆಗಳಿಗೆ ಪರೀಕ್ಷೆ ಬರೆದು ಉತ್ತೀರ್ಣರಾಗಿ ಎಂಟು ತಿಂಗಳ ಅವಧಿಯ ತರಬೇತಿಯನ್ನು ಪಡೆದಿದ್ದಾರೆ.

ಇದರಲ್ಲಿ 13 ಕಾನ್ಸ್‌ಟೇಬಲ್‌ಗಳು ಎಂಎ ಪದವಿ ಪಡೆದಿದ್ದರೆ, ಇತರರು ಎಂಎಸ್‌ಸಿ ಮತ್ತು ಎಂಕಾಂ ಪದವೀಧರರು. ಅಲ್ಲದೆ, 14 ಎಂಜಿನಿಯರಿಂಗ್ ಮುಗಿಸಿದ್ದರೆ, 06 ಮಂದಿ ಬಿಬಿಎ ಮತ್ತು ಬಿಸಿಎ ಪದವೀಧರರು ಸೇರಿದ್ದಾರೆ. ಸರ್ಕಾರಿ ನೌಕರಿ ಪಡೆಯುವುದು ತೀವ್ರ ಅವಶ್ಯಕತೆಯೋ ಅಥವಾ ಪೊಲೀಸ್ ಪಡೆಯಲ್ಲಿ ಕೆಲಸ ಮಾಡುವ ಉತ್ಸಾಹ ಇದಕ್ಕೆ ಕಾರಣವೋ ತಿಳಿಯದಾಗಿದೆ.

ಈ 242 ಕಾನ್ಸ್‌ಟೇಬಲ್‌ಗಳಲ್ಲಿ 214 ಜನರು ಗ್ರಾಮೀಣ ಪ್ರದೇಶಗಳಿಂದ ಬಂದವರು, 28 ಮಂದಿ ನಗರ ಭಾಗಗಳವರು. ಅವರನ್ನು ಈಗ ಚಾಮರಾಜನಗರ, ಮೈಸೂರು, ತುಮಕೂರು, ಕೊಡಗು, ರಾಯಚೂರು, ಮಂಗಳೂರು, ಕಲಬುರಗಿ ಮತ್ತು ರಾಜ್ಯದ ಇತರ ಪೊಲೀಸ್ ಘಟಕಗಳಿಗೆ ನೇಮಿಸಲಾಗಿದೆ.

ಇದನ್ನೂ ಓದಿ: ಭಾರತದಲ್ಲಿ ಉತ್ಪಾದನೆ ನಿಲ್ಲಿಸಲಿರುವ ‘ಫೋರ್ಡ್‌​ ಮೋಟಾರ್ಸ್‌’: 4 ಸಾವಿರ ಉದ್ಯೋಗಿಗಳ ಸ್ಥಿತಿ ಅತಂತ್ರ

ಈ ಹೊಸ ನೇಮಕಾತಿಗಳಲ್ಲಿ ಶೈಕ್ಷಣಿಕವಾಗಿ ವಿಶ್ವವಿದ್ಯಾನಿಲಯದ ಟಾಪರ್‌ಗಳೂ ಸೇರಿದ್ದಾರೆ. ಆಲ್ ರೌಂಡ್ ಬೆಸ್ಟ್ ಟ್ರೇನಿ ಪ್ರಶಸ್ತಿಯನ್ನು ಪಡೆದ ಲತಾ ಎಂ ಅವರು ಬಿಎ ಪದವಿಯಲ್ಲಿ ತನ್ನ ಜಿಲ್ಲೆಗೆ ಟಾಪರ್‌ ಆಗಿದ್ದರು. ಗುಂಡಿನ ಸ್ಪರ್ಧೆಯಲ್ಲಿ ಕ್ರಮವಾಗಿ ಪ್ರಥಮ, ದ್ವಿತೀಯ ಮತ್ತು ತೃತೀಯ ಬಹುಮಾನ ಪಡೆದ ಸುಜಾತ ಎಸ್ ಬಿರಾದಾರ್, ಚಂದ್ರಕಲಾ ಬಿರಾದಾರ ಮತ್ತು ಚಿತ್ರಾ ಜಿ ತಮ್ಮ ತಮ್ಮ ಹಳ್ಳಿಯ ಮೊದಲ ಪೊಲೀಸ್ ಉದ್ಯೋಗ ಪಡೆದ ಯುವತಿಯರು.

ನಿರ್ಗಮನ ಪಥ ಸಂಚಲನದಲ್ಲಿ ಭಾಗವಹಿಸಿದ ಗೃಹ ಸಚಿವ ಆರಗ ಜ್ಞಾನೇಂದ್ರ ಅವರು ಪೊಲೀಸ್ ಇಲಾಖೆಯಲ್ಲಿ ಹೆಚ್ಚು ಅರ್ಹ ಮಹಿಳೆಯರು ಉದ್ಯೋಗಗಳನ್ನು ತೆಗೆದುಕೊಳ್ಳುತ್ತಿರುವುದನ್ನು ಕಂಡು ಸಂತಸ ವ್ಯಕ್ತಪಡಿಸಿದ್ದಾರೆ.

ಇದು ಒಳ್ಳೆಯ ಸಂಕೇತವಾಗಿದ್ದರೂ, ಹೆಚ್ಚಿನವರು ಇತರ ಸ್ಪರ್ಧಾತ್ಮಕ ಅಥವಾ ಅಂತರ-ವಿಭಾಗದ ಪರೀಕ್ಷೆಗಳನ್ನು ತೆಗೆದುಕೊಂಡು, ಈ ಹುದ್ದೆಗಳನ್ನು ಮತ್ತೆ ಖಾಲಿ ಮಾಡಿ ಹೋಗುತ್ತಾರೆ ಎಂದು ಹಿರಿಯ ಪೊಲೀಸ್ ಅಧಿಕಾರಿಗಳು ಹೇಳಿದ್ದಾರೆ.


ಇದನ್ನೂ ಓದಿ: #NationalUnemploymentDay | ಪ್ರಧಾನಿ ಜನ್ಮದಿನದಂದೆ ಉದ್ಯೋಗ ಕೇಳಿದ ದೇಶದ ಜನತೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ದೆಹಲಿ ವಿವಿ ಚುನಾವಣಾ ಫಲಿತಾಂಶ: ABVPಯನ್ನು ಸೋಲಿಸಬಹುದಾಗಿದ್ದ ಚುನಾವಣೆಯಲ್ಲಿ ಕಾಂಗ್ರೆಸ್ ಮಾಡಿಕೊಂಡ ಎಡವಟ್ಟು

ಜಂತರ್ ಮಂತರ್‌ನಲ್ಲಿ ಲಕ್ಷಾಂತರ ವಿದ್ಯಾರ್ಥಿಗಳು ಬೀದಿಗಿಳಿದು ನಡೆಸಿದ ಧರಣಿ ಹಾಗೂ ಇನ್‌ಸ್ಟಾಗ್ರಾಮ್‌ ನಂತಹ ಡಿಜಿಟಲ್ ವೇದಿಕೆಗಳಲ್ಲಿ ಹರಿದಾಡಿದ ರೀಲ್ಸ್‌ಗಳು ಬಿಜೆಪಿಯ ಜನಪ್ರಿಯತೆ ಕುಸಿದಿರುವುದನ್ನು ಬಿಂಬಿಸಿದ್ದವು. ಕ್ಯಾಂಪಸ್‌ಗಳಲ್ಲಿ ಬಿಜೆಪಿ ಮತ್ತು ಎಬಿವಿಪಿ ಕಾರ್ಯಕರ್ತರ ದಬ್ಬಾಳಿಕೆ,...

ಐಐಟಿ ಬಾಂಬೆ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಪ್ರಕರಣ: ಜಾತಿ ನಿಂದನೆ, ಬೆದರಿಕೆ ಆರೋಪ: ಪ್ರಾಧ್ಯಾಪಕರ ವಿರುದ್ಧವೂ ಎಫ್‌ಐಆರ್

ಮುಂಬೈ: ಐಐಟಿ ಬಾಂಬೆ ಕ್ಯಾಂಪಸ್‌ನಲ್ಲಿ ಎರಡನೇ ವರ್ಷದ ವಿದ್ಯಾರ್ಥಿ ಸಾಹಿಲ್ ವಕೋಡ್ ಆತ್ಮಹತ್ಯೆ ಮಾಡಿಕೊಂಡ ಪ್ರಕರಣ ಇದೀಗ ಗಂಭೀರ ತಿರುವು ಪಡೆದುಕೊಂಡಿದ್ದು, ವಿದ್ಯಾರ್ಥಿಯ ಕುಟುಂಬ ಮಾಡಿರುವ ಜಾತಿ ಆಧಾರಿತ ನಿಂದನೆ, ಕಿರುಕುಳ ಮತ್ತು...

SIR : ಕೇಜ್ರಿವಾಲ್, ಧನಕರ್, ಅಡ್ವಾಣಿಗೂ ಬಂತು ಚುನಾವಣಾ ಆಯೋಗದ ನೋಟಿಸ್

ದೇಶದ ರಾಜಧಾನಿ ದೆಹಲಿಯಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯು ಭಾರೀ ವಿವಾದಕ್ಕೆ ಹಾಗೂ ಸಾರ್ವಜನಿಕ ಆತಂಕಕ್ಕೆ ಕಾರಣವಾಗಿದೆ. ದೆಹಲಿಯ ಒಟ್ಟು ಮತದಾರರ ಪೈಕಿ ಬರೋಬ್ಬರಿ ಶೇಕಡಾ 50ರಷ್ಟು...

SIR: ನೋಟಿಸ್ ನೀಡಿದರೆ ಸಾಲದು, ಹೊರಗಿಟ್ಟ ಮತದಾರರ ಲೆಕ್ಕ ಕೊಡಿ ಚುನಾವಣಾ ಆಯೋಗಕ್ಕೆ ಜಾಗೃತ ಕರ್ನಾಟಕ ಒತ್ತಾಯ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ವಿಶೇಷ ತೀವ್ರ ಪರಿಷ್ಕರಣೆ (SIR) ಪ್ರಕ್ರಿಯೆಯ ಭಾಗವಾಗಿ ಲಕ್ಷಾಂತರ ಮತದಾರರಿಗೆ ನೋಟಿಸ್ ಜಾರಿ ಮಾಡಿ ವಿಚಾರಣೆಗಳನ್ನು ನಡೆಸಿದ ನಂತರ, ಅಂತಿಮವಾಗಿ ಎಷ್ಟು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ ಕೈಬಿಡಲಾಗಿದೆ...

ಗಣೇಶ ಮೆರವಣಿಗೆ ಡಿಜೆ ವಿಚಾರಕ್ಕೆ ಗಲಾಟೆ : ದಲಿತರ ಮೇಲೆ ಹಲ್ಲೆ, ಜಾತಿ ನಿಂದನೆ; 31 ಜನರ ಮೇಲೆ ಎಫ್‌ಐಆರ್

ಗಣೇಶ ಮೆರವಣಿಗೆಯ ಡಿಜೆ ವಿಚಾರಕ್ಕೆ ನಡೆದ ಗಲಾಟೆಯಲ್ಲಿ ದಲಿತರ ಮೇಲೆ ಹಲ್ಲೆ ನಡೆಸಿ, ಜಾತಿ ನಿಂದನೆ ಮಾಡಿದ ಆರೋಪದ ಮೇಲೆ 31 ಜನರ ವಿರುದ್ಧ ಕೊಪ್ಪಳದ ಮುನಿರಾಬಾದ್ ಪೊಲೀಸ್ ಠಾಣೆಯಲ್ಲಿ ಎಫ್‌ಐಆರ್ ದಾಖಲಾಗಿದೆ....

ಚಿಕ್ಕಬಳ್ಳಾಪುರ: ಮೂಲ ಗಣಿತ, ಕನ್ನಡ ಬಾರದ 7ನೇ ತರಗತಿ ವಿದ್ಯಾರ್ಥಿಗಳು: 180 ಶಿಕ್ಷಕರಿಗೆ ನೋಟಿಸ್‌ ಜಾರಿ

ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ 7ನೇ ತರಗತಿಯ ಕೆಲವು ವಿದ್ಯಾರ್ಥಿಗಳಿಗೆ ಮೂಲ ಗಣಿತದ ಲೆಕ್ಕಗಳನ್ನು ಮಾಡಲು ಮತ್ತು ಕನ್ನಡ ಅಕ್ಷರಗಳನ್ನು ಬರೆಯಲು ಬರುವುದಿಲ್ಲ ಎಂಬುದು ತಿಳಿದುಬಂದ ಹಿನ್ನೆಲೆಯಲ್ಲಿ ಶಿಕ್ಷಣ ಇಲಾಖೆಯು 180 ಸರ್ಕಾರಿ ಶಾಲೆಗಳ ಶಿಕ್ಷಕರಿಗೆ...

ಕರಾವಳಿಯನ್ನು ‘ಕೋಮುವಾದದ ಪ್ರಯೋಗಶಾಲೆ’ ಮಾಡಿದ್ದ ಬಿಜೆಪಿಗೆ ನಮ್ಮ ಅಭಿವೃದ್ಧಿ ಕಂಡು ಅಸ್ತಿತ್ವದ ಭಯ: ಪ್ರಿಯಾಂಕ್ ಖರ್ಗೆ

ಮಂಗಳೂರಿನಲ್ಲಿ ನಡೆದ ವಿಶೇಷ ಸಚಿವ ಸಂಪುಟ ಸಭೆ ಹಾಗೂ ಕರಾವಳಿಯ ಮೂರು ಜಿಲ್ಲೆಗಳಿಗೆ ₹32,611 ಕೋಟಿ ಮೊತ್ತದ ಅಭಿವೃದ್ಧಿ ಯೋಜನೆಗಳಿಗೆ ಅನುಮೋದನೆ ನೀಡಿರುವುದನ್ನು ಬಿಜೆಪಿ ಟೀಕಿಸಿರುವ ಬೆನ್ನಲ್ಲೇ, ಗೃಹ ಸಚಿವ ಪ್ರಿಯಾಂಕ್ ಖರ್ಗೆ...

KPSC ಅಕ್ರಮ: ಮೀಟರ್ ಬಡ್ಡಿ ದಂಧೆಯಿಂದ ಕೆಪಿಎಸ್‌ಸಿ ಅಧ್ಯಕ್ಷ ಸ್ಥಾನದವರೆಗೆ – ಅಧ್ಯಕ್ಷ ಸಾಹುಕಾರ್ ಬಿಜೆಪಿ ಅವಧಿಯಲ್ಲಿ ನೇಮಕ, ಕಾಂಗ್ರೆಸ್ ಆಡಳಿತದಲ್ಲಿ ರಕ್ಷಣೆ

ಶಿವಶಂಕರಪ್ಪ ಸಾಹುಕಾರ್ ಅವರ ಈ ಇಡೀ ಕಥನವು ಕರ್ನಾಟಕದ ಕಾರ್ಯಾಂಗ ಮತ್ತು ರಾಜಕೀಯ ವ್ಯವಸ್ಥೆಯಲ್ಲಿ ಭ್ರಷ್ಟಾಚಾರ ಎಷ್ಟು ಆಳವಾಗಿ ಬೇರೂರಿದೆ ಎಂಬುದಕ್ಕೆ ಸಾಕ್ಷಿಯಾಗಿದೆ. ಬಿಜೆಪಿ ಸರ್ಕಾರವು ನಿಯಮಗಳನ್ನು ಗಾಳಿಗೆ ತೂರಿ, ಒಬ್ಬ ಕನಿಷ್ಠ...

ಟಿಎಂಸಿ ಪಕ್ಷದ ಹೆಸರು, ಚಿಹ್ನೆ ಫ್ರೀಝ್ : ಚು. ಆಯೋಗದ ಆದೇಶ ಪ್ರಶ್ನಿಸಿ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ತೃಣಮೂಲಕ ಕಾಂಗ್ರೆಸ್ (ಟಿಎಂಸಿ) ಪಕ್ಷದ ಚಿಹ್ನೆ ಮತ್ತು ಹೆಸರನ್ನು ಭಾರತೀಯ ಚುನಾವಣಾ ಆಯೋಗ ಫ್ರೀಝ್ ಮಾಡಿರುವುದನ್ನು ಪ್ರಶ್ನಿಸಿ, ಪಕ್ಷದ ಸಂಸ್ಥಾಪಕಿ ಹಾಗೂ ಪಶ್ಚಿಮ ಬಂಗಾಳದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಸುಪ್ರೀಂ ಕೋರ್ಟ್‌...

ನಂದಿಗ್ರಾಮದ ಬೆನ್ನಲ್ಲೇ ರೆಜಿನಗರ ಅಭ್ಯರ್ಥಿಯಿಂದಲೂ ನಾಮಪತ್ರ ವಾಪಸ್ : ಬಂಗಾಳ ಉಪ ಚುನಾವಣೆ ಕಣದಲ್ಲಿ ಮಮತಾ ಬ್ಯಾನರ್ಜಿ ಬಣಕ್ಕೆ ಮತ್ತೊಂದು ಹಿನ್ನಡೆ

ಪಶ್ಚಿಮ ಬಂಗಾಳದ ಉಪಚುನಾವಣಾ ಕಣದಲ್ಲಿ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರಿಗೆ ಮತ್ತೊಂದು ಹಿನ್ನಡೆಯಾಗಿದೆ. ನಂದಿಗ್ರಾಮದ ಬಳಿಕ ರೆಜಿನಗರ ವಿಧಾನಸಭಾ ಕ್ಷೇತ್ರದಲ್ಲೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಅಭ್ಯರ್ಥಿ ತನ್ನ ನಾಮಪತ್ರವನ್ನು ವಾಪಸ್ ಪಡೆದಿದ್ದಾರೆ...