Homeಕರ್ನಾಟಕಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರಕ್ಕೆ ಛೀಮಾರಿ

ಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರಕ್ಕೆ ಛೀಮಾರಿ

- Advertisement -
- Advertisement -

ರಾಜ್ಯದಲ್ಲಿ ಆರಂಭವಾದ ಹಿಜಾಬ್ ವಿವಾದ ಕರಾವಳಿಯನ್ನೂ ದಾಟಿ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲೂ ಸದ್ದು ಮಾಡುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮತ್ತು ಯುಎಇ ರಾಜಕುಮಾರಿ ಮೊದಲಾದವರು ಈ ಘಟನೆಯನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ನೆರೆಯ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶದ ಹಲವಾರು ಸುದ್ದಿ ಮಾಧ್ಯಮಗಳು ರಾಜ್ಯದ ಪ್ರಕರಣವನ್ನು ಮತ್ತು ಇದರ ಬೆನ್ನಿಗೆ ಶಾಲಾ ಕಾಲೇಜಿನಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಹಿಜಾಬ್ ನಿಷೇಧಿಸಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿವೆ.

ತಮಿಳುನಾಡಿನ ಅರನ್ ಸೈ, ಸವುಕ್ಕು ಶಂಕರ್, ರೆಡ್ಪಿಕ್ಸ್, ತಮಿಳ್ ಪೊಕ್ಕಿಶಮ್, ಕೇರಳದ ನ್ಯೂಸ್ ಇಂಡಿಯಾ ಮಲಯಾಳಂ, ಮೀಡಿಯಾ ಒನ್ ಟಿವಿ, ಆಂಧ್ರಪ್ರದೇಶದ 10ಟಿವಿ ನ್ಯೂಸ್ ತೆಲುಗು, ಎಚ್‌ಎಂಟಿವಿ ತೆಲುಗು ನ್ಯೂಸ್ ಚಾನೆಲ್‌ಗಳು (ಡಿಜಿಟಲ್-ಯೂಟ್ಯೂಬ್ ಮೀಡಿಯಾಗಳೂ ಸೇರಿ) ಸೇರಿದಂತೆ ದಕ್ಷಿಣ ರಾಜ್ಯಗಳ ಹಲವು ಮಾಧ್ಯಮಗಳು ಕರ್ನಾಟಕದ ಈ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ವಿಷಾದ ಪಡಿಸಿವೆ.

ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಸರಿಯೇ..? ಎಂಬ ಕಾರ್ಯಕ್ರಮ ಮೂಲಕ ತಮ್ಮ ಅಭಿಪ್ರಾಯವನ್ನು ಮುಂದಿಟ್ಟಿರುವ ’ಅರನ್‌ ಸೈ’ ಎಂಬ ತಮಿಳು ಸುದ್ದಿ ಮಾಧ್ಯಮ, “ಸಂವಿಧಾನ ಕಲಂ 14 ಮತ್ತು 25ರ ಅಡಿಯಲ್ಲಿ ಪ್ರತಿಯೊಬ್ಬ ಭಾರತೀಯನಿಗೂ ತನ್ನ ಧರ್ಮವನ್ನು ಅನುಸರಿಸುವ ಮತ್ತು ಆಚರಿಸುವ ಹಕ್ಕು ನೀಡಲಾಗಿದೆ. ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸುವುದು ಅಥವಾ ಧರಿಸದೆ ಇರುವುದು ಸೇರಿದಂತೆ ಎಲ್ಲಾ ಧರ್ಮಗಳ ಖಾಸಗಿ ಆಚರಣೆಗಳು ಈ ಹಕ್ಕಿನ ಅಡಿಯಲ್ಲೇ ಬರುತ್ತದೆ ಮತ್ತು ಅದು ಅವರಿಗೆ ಬಿಟ್ಟ ವಿಚಾರ” ಎಂದು ಹೇಳಿದೆ.

ಇದನ್ನೂ ಓದಿ: ‘ರಾಜ್ಯವು ನಿಯಂತ್ರಣದಲ್ಲಿದೆ’: ‘ಹಿಜಾಬ್‌‌’ ವಿಚಾರಣೆಯ ಸಮಯ ನ್ಯಾಯಾಲಯಕ್ಕೆ ತಿಳಿಸಿದ ರಾಜ್ಯ ಸರ್ಕಾರ!

“ಈ ವಿಚಾರದಲ್ಲಿ ಅನ್ಯ ಕೋಮಿನವರ ಹಸ್ತಕ್ಷೇಪಕ್ಕೆ ಅವಕಾಶ ಇಲ್ಲ. ಆದರೆ, ಕರ್ನಾಟಕದಲ್ಲಿ ನಡೆಯುತ್ತಿರುವುದು ಏನು? ಹಿಜಾಬ್‌ಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಶುದ್ಧ ಕೋಮುವಾದವಲ್ಲವೇ? ದ್ವೇಷ ರಾಜಕಾರಣವಲ್ಲವೇ? ವಿದ್ಯಾರ್ಥಿಗಳ ಎದೆಗೆ ನಂಜು ಬಿತ್ತುವ ಕೆಲಸವಲ್ಲವೇ? ಇದೇ ಶಾಲೆಗಳಲ್ಲಿ ಸರಸ್ವತಿ ಪೋಟೋ ಪ್ರತಿಮೆ ಇಡುವುದನ್ನು ಸರಸ್ವತಿ-ಗಣಪತಿ ಪೂಜೆಯನ್ನು ಇಷ್ಟು ವರ್ಷಗಳ ಕಾಲ ಮುಸ್ಲಿಂ ವಿದ್ಯಾರ್ಥಿಗಳು ಪ್ರಶ್ನೆ ಮಾಡಿರಲಿಲ್ಲ. ಅಣ್ಣ ತಮ್ಮಂದಿರಂತೆ ಸ್ನೇಹಿತರಂತೆ ಇದ್ದವರ ನಡುವೆ ಧರ್ಮದ ಕಾರಣಕ್ಕೆ ಬಿರುಕು ಮೂಡುವಂತೆ ಮಾಡಿರುವುದು ಸರಿಯೇ?” ಎಂದು ’ಅರನ್‌ ಸೈ’ ಪ್ರಶ್ನಿಸಿದೆ.

ಮತ್ತೊಂದು ಚಾನೆಲ್ ಆದ ‘ತಮಿಳ್ ಪೊಕ್ಕಿಶಂ’, “ಕರ್ನಾಟಕದಲ್ಲಿ ಮತಾಂಧ ರಾಜಕಾರಣ ಹೊಸದೇನಲ್ಲ. ಮತೀಯತೆ ಮುಂದಿಟ್ಟು ರಾಜಕಾರಣ ಮಾಡುವ ದೊಡ್ಡ ಪರಂಪರೆಯೇ ಕರ್ನಾಟಕಕ್ಕೆ ಇದೆ. ಇನ್ನೂ ಈ ಹಿಂದೆ 2009 ರಲ್ಲಿ ಬಂಟ್ವಾಳದ ಎಸ್ವಿಎಸ್ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿರುದ್ಧ ಅಲ್ಲಿನ ಬಲಪಂಥೀಯ ಸಂಘಟನೆಗಳು ಹೋರಾಟ ನಡೆಸಿದ್ದವು, 2016 ರಲ್ಲಿ ಬಳ್ಳಾರಿಯ ಶಿವರಾಮ ಕಾರಂತ ಮತ್ತು ಶ್ರೀನಿವಾಸ ಎಂಬ ಸರ್ಕಾರಿ ಕಾಲೇಜುಗಳಲ್ಲೂ ಹಿಜಾಬ್ ವಿರುದ್ಧ ಹೋರಾಟ ನಡೆಸಲಾಗಿತ್ತು. ಆದರೆ, ಈ ಹೋರಾಟಗಳು ಯಶಸ್ವಿಯಾಗಿರಲಿಲ್ಲ. ಆದರೆ, ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರಾಗುತ್ತಿದ್ದಂತೆ ಇಂತಹ ಹೋರಾಟಗಳು ಮತ್ತೆ ತಲೆ ಎತ್ತುತ್ತಿರುವುದು ವಿಪರ್ಯಾಸ” ಎಂದು ಅಭಿಪ್ರಾಯಪಟ್ಟಿದೆ.

ಸ್ವತಃ ತಮಿಳುನಾಡು ಆರ್‌ಎಸ್‌ಎಸ್ ಮುಖಂಡ ರಾಮಸುಬ್ರಮಣ್ಯಂ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದು, “ಅನ್ಯ ಕೋಮಿನ ಖಾಸಗಿ ಧಾರ್ಮಿಕ ಆಚರಣೆಯನ್ನು ಗೌರವಿಸಬೇಕಾದದ್ದು ಮತ್ತು ಅವರ ಧಾರ್ಮಿಕ ಹಕ್ಕುಚ್ಯುತಿ ಆಗದಂತೆ ತಡೆಯುವುದು ಎಲ್ಲಾ ಹಿಂದುಗಳ ಕರ್ತವ್ಯ. ಆದರೆ, ಹಿಜಾಬ್ ವಿಚಾರಕ್ಕೆ ಕರ್ನಾಟಕದಲ್ಲಿ ನಡೆಯುತ್ತಿರುವುದು ತೀರಾ ಕ್ಷುಲ್ಲಕ” ಎಂದು ಮಾಧ್ಯಮಗಳ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಪುರುಷರ ಸಾಕ್ಷರತಾ ಪ್ರಮಾಣಕ್ಕೆ ಹೋಲಿಸಿದರೆ, ಮಹಿಳಾ ಸಾಕ್ಷತರಾ ಪ್ರಮಾಣ ತೀರಾ ಹಿಂದುಳಿದಿದೆ. ಹಿಂದೂ ಮಹಿಳೆಯರ ಸಾಕ್ಷರತಾ ಪ್ರಮಾಣ ಶೇ. 55.97 ರಷ್ಟಾಗಿದ್ದರೆ, ಮುಸ್ಲಿಂ ಮಹಿಳೆಯರ ಸಾಕ್ಷರತಾ ಪ್ರಮಾಣ ಕೇವಲ 51.89 ಮಾತ್ರ. ಹಿಜಾಬ್ ಸುತ್ತಲಿನ ರಾಜಕಾರಣದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಮಸ್ಯೆಯಾಗುತ್ತಿರುವುದು ಶೋಚನೀಯ.


ಇದನ್ನೂ ಓದಿ: Hijab Live | ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿಲ್ಲ ಎಂದು ಕೋರ್ಟ್‌ನಲ್ಲಿ ಸುಳ್ಳು ಹೇಳಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...