Homeಕರ್ನಾಟಕಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರಕ್ಕೆ ಛೀಮಾರಿ

ಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರಕ್ಕೆ ಛೀಮಾರಿ

- Advertisement -
- Advertisement -

ರಾಜ್ಯದಲ್ಲಿ ಆರಂಭವಾದ ಹಿಜಾಬ್ ವಿವಾದ ಕರಾವಳಿಯನ್ನೂ ದಾಟಿ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲೂ ಸದ್ದು ಮಾಡುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮತ್ತು ಯುಎಇ ರಾಜಕುಮಾರಿ ಮೊದಲಾದವರು ಈ ಘಟನೆಯನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ನೆರೆಯ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶದ ಹಲವಾರು ಸುದ್ದಿ ಮಾಧ್ಯಮಗಳು ರಾಜ್ಯದ ಪ್ರಕರಣವನ್ನು ಮತ್ತು ಇದರ ಬೆನ್ನಿಗೆ ಶಾಲಾ ಕಾಲೇಜಿನಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಹಿಜಾಬ್ ನಿಷೇಧಿಸಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿವೆ.

ತಮಿಳುನಾಡಿನ ಅರನ್ ಸೈ, ಸವುಕ್ಕು ಶಂಕರ್, ರೆಡ್ಪಿಕ್ಸ್, ತಮಿಳ್ ಪೊಕ್ಕಿಶಮ್, ಕೇರಳದ ನ್ಯೂಸ್ ಇಂಡಿಯಾ ಮಲಯಾಳಂ, ಮೀಡಿಯಾ ಒನ್ ಟಿವಿ, ಆಂಧ್ರಪ್ರದೇಶದ 10ಟಿವಿ ನ್ಯೂಸ್ ತೆಲುಗು, ಎಚ್‌ಎಂಟಿವಿ ತೆಲುಗು ನ್ಯೂಸ್ ಚಾನೆಲ್‌ಗಳು (ಡಿಜಿಟಲ್-ಯೂಟ್ಯೂಬ್ ಮೀಡಿಯಾಗಳೂ ಸೇರಿ) ಸೇರಿದಂತೆ ದಕ್ಷಿಣ ರಾಜ್ಯಗಳ ಹಲವು ಮಾಧ್ಯಮಗಳು ಕರ್ನಾಟಕದ ಈ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ವಿಷಾದ ಪಡಿಸಿವೆ.

ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಸರಿಯೇ..? ಎಂಬ ಕಾರ್ಯಕ್ರಮ ಮೂಲಕ ತಮ್ಮ ಅಭಿಪ್ರಾಯವನ್ನು ಮುಂದಿಟ್ಟಿರುವ ’ಅರನ್‌ ಸೈ’ ಎಂಬ ತಮಿಳು ಸುದ್ದಿ ಮಾಧ್ಯಮ, “ಸಂವಿಧಾನ ಕಲಂ 14 ಮತ್ತು 25ರ ಅಡಿಯಲ್ಲಿ ಪ್ರತಿಯೊಬ್ಬ ಭಾರತೀಯನಿಗೂ ತನ್ನ ಧರ್ಮವನ್ನು ಅನುಸರಿಸುವ ಮತ್ತು ಆಚರಿಸುವ ಹಕ್ಕು ನೀಡಲಾಗಿದೆ. ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸುವುದು ಅಥವಾ ಧರಿಸದೆ ಇರುವುದು ಸೇರಿದಂತೆ ಎಲ್ಲಾ ಧರ್ಮಗಳ ಖಾಸಗಿ ಆಚರಣೆಗಳು ಈ ಹಕ್ಕಿನ ಅಡಿಯಲ್ಲೇ ಬರುತ್ತದೆ ಮತ್ತು ಅದು ಅವರಿಗೆ ಬಿಟ್ಟ ವಿಚಾರ” ಎಂದು ಹೇಳಿದೆ.

ಇದನ್ನೂ ಓದಿ: ‘ರಾಜ್ಯವು ನಿಯಂತ್ರಣದಲ್ಲಿದೆ’: ‘ಹಿಜಾಬ್‌‌’ ವಿಚಾರಣೆಯ ಸಮಯ ನ್ಯಾಯಾಲಯಕ್ಕೆ ತಿಳಿಸಿದ ರಾಜ್ಯ ಸರ್ಕಾರ!

“ಈ ವಿಚಾರದಲ್ಲಿ ಅನ್ಯ ಕೋಮಿನವರ ಹಸ್ತಕ್ಷೇಪಕ್ಕೆ ಅವಕಾಶ ಇಲ್ಲ. ಆದರೆ, ಕರ್ನಾಟಕದಲ್ಲಿ ನಡೆಯುತ್ತಿರುವುದು ಏನು? ಹಿಜಾಬ್‌ಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಶುದ್ಧ ಕೋಮುವಾದವಲ್ಲವೇ? ದ್ವೇಷ ರಾಜಕಾರಣವಲ್ಲವೇ? ವಿದ್ಯಾರ್ಥಿಗಳ ಎದೆಗೆ ನಂಜು ಬಿತ್ತುವ ಕೆಲಸವಲ್ಲವೇ? ಇದೇ ಶಾಲೆಗಳಲ್ಲಿ ಸರಸ್ವತಿ ಪೋಟೋ ಪ್ರತಿಮೆ ಇಡುವುದನ್ನು ಸರಸ್ವತಿ-ಗಣಪತಿ ಪೂಜೆಯನ್ನು ಇಷ್ಟು ವರ್ಷಗಳ ಕಾಲ ಮುಸ್ಲಿಂ ವಿದ್ಯಾರ್ಥಿಗಳು ಪ್ರಶ್ನೆ ಮಾಡಿರಲಿಲ್ಲ. ಅಣ್ಣ ತಮ್ಮಂದಿರಂತೆ ಸ್ನೇಹಿತರಂತೆ ಇದ್ದವರ ನಡುವೆ ಧರ್ಮದ ಕಾರಣಕ್ಕೆ ಬಿರುಕು ಮೂಡುವಂತೆ ಮಾಡಿರುವುದು ಸರಿಯೇ?” ಎಂದು ’ಅರನ್‌ ಸೈ’ ಪ್ರಶ್ನಿಸಿದೆ.

ಮತ್ತೊಂದು ಚಾನೆಲ್ ಆದ ‘ತಮಿಳ್ ಪೊಕ್ಕಿಶಂ’, “ಕರ್ನಾಟಕದಲ್ಲಿ ಮತಾಂಧ ರಾಜಕಾರಣ ಹೊಸದೇನಲ್ಲ. ಮತೀಯತೆ ಮುಂದಿಟ್ಟು ರಾಜಕಾರಣ ಮಾಡುವ ದೊಡ್ಡ ಪರಂಪರೆಯೇ ಕರ್ನಾಟಕಕ್ಕೆ ಇದೆ. ಇನ್ನೂ ಈ ಹಿಂದೆ 2009 ರಲ್ಲಿ ಬಂಟ್ವಾಳದ ಎಸ್ವಿಎಸ್ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿರುದ್ಧ ಅಲ್ಲಿನ ಬಲಪಂಥೀಯ ಸಂಘಟನೆಗಳು ಹೋರಾಟ ನಡೆಸಿದ್ದವು, 2016 ರಲ್ಲಿ ಬಳ್ಳಾರಿಯ ಶಿವರಾಮ ಕಾರಂತ ಮತ್ತು ಶ್ರೀನಿವಾಸ ಎಂಬ ಸರ್ಕಾರಿ ಕಾಲೇಜುಗಳಲ್ಲೂ ಹಿಜಾಬ್ ವಿರುದ್ಧ ಹೋರಾಟ ನಡೆಸಲಾಗಿತ್ತು. ಆದರೆ, ಈ ಹೋರಾಟಗಳು ಯಶಸ್ವಿಯಾಗಿರಲಿಲ್ಲ. ಆದರೆ, ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರಾಗುತ್ತಿದ್ದಂತೆ ಇಂತಹ ಹೋರಾಟಗಳು ಮತ್ತೆ ತಲೆ ಎತ್ತುತ್ತಿರುವುದು ವಿಪರ್ಯಾಸ” ಎಂದು ಅಭಿಪ್ರಾಯಪಟ್ಟಿದೆ.

ಸ್ವತಃ ತಮಿಳುನಾಡು ಆರ್‌ಎಸ್‌ಎಸ್ ಮುಖಂಡ ರಾಮಸುಬ್ರಮಣ್ಯಂ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದು, “ಅನ್ಯ ಕೋಮಿನ ಖಾಸಗಿ ಧಾರ್ಮಿಕ ಆಚರಣೆಯನ್ನು ಗೌರವಿಸಬೇಕಾದದ್ದು ಮತ್ತು ಅವರ ಧಾರ್ಮಿಕ ಹಕ್ಕುಚ್ಯುತಿ ಆಗದಂತೆ ತಡೆಯುವುದು ಎಲ್ಲಾ ಹಿಂದುಗಳ ಕರ್ತವ್ಯ. ಆದರೆ, ಹಿಜಾಬ್ ವಿಚಾರಕ್ಕೆ ಕರ್ನಾಟಕದಲ್ಲಿ ನಡೆಯುತ್ತಿರುವುದು ತೀರಾ ಕ್ಷುಲ್ಲಕ” ಎಂದು ಮಾಧ್ಯಮಗಳ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಪುರುಷರ ಸಾಕ್ಷರತಾ ಪ್ರಮಾಣಕ್ಕೆ ಹೋಲಿಸಿದರೆ, ಮಹಿಳಾ ಸಾಕ್ಷತರಾ ಪ್ರಮಾಣ ತೀರಾ ಹಿಂದುಳಿದಿದೆ. ಹಿಂದೂ ಮಹಿಳೆಯರ ಸಾಕ್ಷರತಾ ಪ್ರಮಾಣ ಶೇ. 55.97 ರಷ್ಟಾಗಿದ್ದರೆ, ಮುಸ್ಲಿಂ ಮಹಿಳೆಯರ ಸಾಕ್ಷರತಾ ಪ್ರಮಾಣ ಕೇವಲ 51.89 ಮಾತ್ರ. ಹಿಜಾಬ್ ಸುತ್ತಲಿನ ರಾಜಕಾರಣದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಮಸ್ಯೆಯಾಗುತ್ತಿರುವುದು ಶೋಚನೀಯ.


ಇದನ್ನೂ ಓದಿ: Hijab Live | ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿಲ್ಲ ಎಂದು ಕೋರ್ಟ್‌ನಲ್ಲಿ ಸುಳ್ಳು ಹೇಳಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...

ಏಕರೂಪ ನಾಗರಿಕ ಸಂಹಿತೆಯನ್ನು ಸಂಸತ್ತಿನ ಬದಲು ರಾಜ್ಯಗಳ ಮೂಲಕವೇ ಜಾರಿಗೆ ಅಮಿತ್ ಶಾ ಮುಂದಾಗಿದ್ದೇಕೆ?

ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರು ಸೆಪ್ಟೆಂಬರ್ 13ರಂದು ಮುಂಬೈನಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ, 2029ರ ಲೋಕಸಭಾ ಚುನಾವಣೆಗೂ ಮುನ್ನ ಬಿಜೆಪಿ ಮತ್ತು ಎನ್‌ಡಿಎ ಆಡಳಿತವಿರುವ ಎಲ್ಲಾ 21 ರಾಜ್ಯಗಳಲ್ಲಿ ಏಕರೂಪ ನಾಗರಿಕ...

ದಿಶಾ ಸಾಲಿಯಾನ್ ಸಾವಿನ ಪ್ರಕರಣ : ಸಿಬಿಐ ಎಫ್ಐಆರ್‌ನಲ್ಲಿ ಆದಿತ್ಯ ಠಾಕ್ರೆ, ರಿಯಾ ಚಕ್ರವರ್ತಿ ಸೇರಿದಂತೆ ಹಲವರ ಹೆಸರು

ಬಾಂಬೆ ಹೈಕೋರ್ಟ್ ಆದೇಶದ ಮೇರೆಗೆ, ಕೇಂದ್ರೀಯ ತನಿಖಾ ದಳವು (ಸಿಬಿಐ) ನಟ ಸುಶಾಂತ್ ಸಿಂಗ್ ರಜಪೂತ್ ಅವರ ಮಾಜಿ ಮ್ಯಾನೇಜರ್ ದಿಶಾ ಸಾಲಿಯಾನ್ ಅವರ ನಿಗೂಢ ಸಾವಿಗೆ ಸಂಬಂಧಿಸಿದಂತೆ ಸೋಮವಾರ(ಸೆ.14) ಎಫ್‌ಐಆರ್ ದಾಖಲಿಸಿದೆ. ಶಿವಸೇನೆ...

ಟಿ. ನರಸೀಪುರ ಇನ್ಸ್‌ಪೆಕ್ಟರ್‌ ಧನಂಜಯ್‌ ಹೇಳಿದ್ದರಲ್ಲಿ ತಪ್ಪೇನಿದೆ? ಸಾರ್ವಜನಿಕರಿಂದ ಬೆಂಬಲ

ಮಸೀದಿಗಳ ಮುಂಭಾಗ ಯಾವುದೇ ಪ್ರಚೋದನಕಾರಿ ಕೃತ್ಯಗಳಿಗೆ ಆಸ್ಪದ ನೀಡದೆ, ರಾತ್ರಿ 10:30ರ ಒಳಗಾಗಿ ಡಿಜೆ ಸದ್ದಿಲ್ಲದೆ ನಿಯಮಾನುಸಾರ ಮೆರವಣಿಗೆ ಮುಗಿಸಲು ಕಟ್ಟುನಿಟ್ಟಿನ ಕ್ರಮ ಕೈಗೊಂಡ ಇನ್ಸ್‌ಪೆಕ್ಟರ್ ಧನಂಜಯ್ ಅವರ ಪರವಾಗಿ ಈಗ ಸಾಮಾಜಿಕ...