Homeಕರ್ನಾಟಕಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರಕ್ಕೆ ಛೀಮಾರಿ

ಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರಕ್ಕೆ ಛೀಮಾರಿ

- Advertisement -
- Advertisement -

ರಾಜ್ಯದಲ್ಲಿ ಆರಂಭವಾದ ಹಿಜಾಬ್ ವಿವಾದ ಕರಾವಳಿಯನ್ನೂ ದಾಟಿ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲೂ ಸದ್ದು ಮಾಡುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮತ್ತು ಯುಎಇ ರಾಜಕುಮಾರಿ ಮೊದಲಾದವರು ಈ ಘಟನೆಯನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ನೆರೆಯ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶದ ಹಲವಾರು ಸುದ್ದಿ ಮಾಧ್ಯಮಗಳು ರಾಜ್ಯದ ಪ್ರಕರಣವನ್ನು ಮತ್ತು ಇದರ ಬೆನ್ನಿಗೆ ಶಾಲಾ ಕಾಲೇಜಿನಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಹಿಜಾಬ್ ನಿಷೇಧಿಸಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿವೆ.

ತಮಿಳುನಾಡಿನ ಅರನ್ ಸೈ, ಸವುಕ್ಕು ಶಂಕರ್, ರೆಡ್ಪಿಕ್ಸ್, ತಮಿಳ್ ಪೊಕ್ಕಿಶಮ್, ಕೇರಳದ ನ್ಯೂಸ್ ಇಂಡಿಯಾ ಮಲಯಾಳಂ, ಮೀಡಿಯಾ ಒನ್ ಟಿವಿ, ಆಂಧ್ರಪ್ರದೇಶದ 10ಟಿವಿ ನ್ಯೂಸ್ ತೆಲುಗು, ಎಚ್‌ಎಂಟಿವಿ ತೆಲುಗು ನ್ಯೂಸ್ ಚಾನೆಲ್‌ಗಳು (ಡಿಜಿಟಲ್-ಯೂಟ್ಯೂಬ್ ಮೀಡಿಯಾಗಳೂ ಸೇರಿ) ಸೇರಿದಂತೆ ದಕ್ಷಿಣ ರಾಜ್ಯಗಳ ಹಲವು ಮಾಧ್ಯಮಗಳು ಕರ್ನಾಟಕದ ಈ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ವಿಷಾದ ಪಡಿಸಿವೆ.

ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಸರಿಯೇ..? ಎಂಬ ಕಾರ್ಯಕ್ರಮ ಮೂಲಕ ತಮ್ಮ ಅಭಿಪ್ರಾಯವನ್ನು ಮುಂದಿಟ್ಟಿರುವ ’ಅರನ್‌ ಸೈ’ ಎಂಬ ತಮಿಳು ಸುದ್ದಿ ಮಾಧ್ಯಮ, “ಸಂವಿಧಾನ ಕಲಂ 14 ಮತ್ತು 25ರ ಅಡಿಯಲ್ಲಿ ಪ್ರತಿಯೊಬ್ಬ ಭಾರತೀಯನಿಗೂ ತನ್ನ ಧರ್ಮವನ್ನು ಅನುಸರಿಸುವ ಮತ್ತು ಆಚರಿಸುವ ಹಕ್ಕು ನೀಡಲಾಗಿದೆ. ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸುವುದು ಅಥವಾ ಧರಿಸದೆ ಇರುವುದು ಸೇರಿದಂತೆ ಎಲ್ಲಾ ಧರ್ಮಗಳ ಖಾಸಗಿ ಆಚರಣೆಗಳು ಈ ಹಕ್ಕಿನ ಅಡಿಯಲ್ಲೇ ಬರುತ್ತದೆ ಮತ್ತು ಅದು ಅವರಿಗೆ ಬಿಟ್ಟ ವಿಚಾರ” ಎಂದು ಹೇಳಿದೆ.

ಇದನ್ನೂ ಓದಿ: ‘ರಾಜ್ಯವು ನಿಯಂತ್ರಣದಲ್ಲಿದೆ’: ‘ಹಿಜಾಬ್‌‌’ ವಿಚಾರಣೆಯ ಸಮಯ ನ್ಯಾಯಾಲಯಕ್ಕೆ ತಿಳಿಸಿದ ರಾಜ್ಯ ಸರ್ಕಾರ!

“ಈ ವಿಚಾರದಲ್ಲಿ ಅನ್ಯ ಕೋಮಿನವರ ಹಸ್ತಕ್ಷೇಪಕ್ಕೆ ಅವಕಾಶ ಇಲ್ಲ. ಆದರೆ, ಕರ್ನಾಟಕದಲ್ಲಿ ನಡೆಯುತ್ತಿರುವುದು ಏನು? ಹಿಜಾಬ್‌ಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಶುದ್ಧ ಕೋಮುವಾದವಲ್ಲವೇ? ದ್ವೇಷ ರಾಜಕಾರಣವಲ್ಲವೇ? ವಿದ್ಯಾರ್ಥಿಗಳ ಎದೆಗೆ ನಂಜು ಬಿತ್ತುವ ಕೆಲಸವಲ್ಲವೇ? ಇದೇ ಶಾಲೆಗಳಲ್ಲಿ ಸರಸ್ವತಿ ಪೋಟೋ ಪ್ರತಿಮೆ ಇಡುವುದನ್ನು ಸರಸ್ವತಿ-ಗಣಪತಿ ಪೂಜೆಯನ್ನು ಇಷ್ಟು ವರ್ಷಗಳ ಕಾಲ ಮುಸ್ಲಿಂ ವಿದ್ಯಾರ್ಥಿಗಳು ಪ್ರಶ್ನೆ ಮಾಡಿರಲಿಲ್ಲ. ಅಣ್ಣ ತಮ್ಮಂದಿರಂತೆ ಸ್ನೇಹಿತರಂತೆ ಇದ್ದವರ ನಡುವೆ ಧರ್ಮದ ಕಾರಣಕ್ಕೆ ಬಿರುಕು ಮೂಡುವಂತೆ ಮಾಡಿರುವುದು ಸರಿಯೇ?” ಎಂದು ’ಅರನ್‌ ಸೈ’ ಪ್ರಶ್ನಿಸಿದೆ.

ಮತ್ತೊಂದು ಚಾನೆಲ್ ಆದ ‘ತಮಿಳ್ ಪೊಕ್ಕಿಶಂ’, “ಕರ್ನಾಟಕದಲ್ಲಿ ಮತಾಂಧ ರಾಜಕಾರಣ ಹೊಸದೇನಲ್ಲ. ಮತೀಯತೆ ಮುಂದಿಟ್ಟು ರಾಜಕಾರಣ ಮಾಡುವ ದೊಡ್ಡ ಪರಂಪರೆಯೇ ಕರ್ನಾಟಕಕ್ಕೆ ಇದೆ. ಇನ್ನೂ ಈ ಹಿಂದೆ 2009 ರಲ್ಲಿ ಬಂಟ್ವಾಳದ ಎಸ್ವಿಎಸ್ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿರುದ್ಧ ಅಲ್ಲಿನ ಬಲಪಂಥೀಯ ಸಂಘಟನೆಗಳು ಹೋರಾಟ ನಡೆಸಿದ್ದವು, 2016 ರಲ್ಲಿ ಬಳ್ಳಾರಿಯ ಶಿವರಾಮ ಕಾರಂತ ಮತ್ತು ಶ್ರೀನಿವಾಸ ಎಂಬ ಸರ್ಕಾರಿ ಕಾಲೇಜುಗಳಲ್ಲೂ ಹಿಜಾಬ್ ವಿರುದ್ಧ ಹೋರಾಟ ನಡೆಸಲಾಗಿತ್ತು. ಆದರೆ, ಈ ಹೋರಾಟಗಳು ಯಶಸ್ವಿಯಾಗಿರಲಿಲ್ಲ. ಆದರೆ, ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರಾಗುತ್ತಿದ್ದಂತೆ ಇಂತಹ ಹೋರಾಟಗಳು ಮತ್ತೆ ತಲೆ ಎತ್ತುತ್ತಿರುವುದು ವಿಪರ್ಯಾಸ” ಎಂದು ಅಭಿಪ್ರಾಯಪಟ್ಟಿದೆ.

ಸ್ವತಃ ತಮಿಳುನಾಡು ಆರ್‌ಎಸ್‌ಎಸ್ ಮುಖಂಡ ರಾಮಸುಬ್ರಮಣ್ಯಂ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದು, “ಅನ್ಯ ಕೋಮಿನ ಖಾಸಗಿ ಧಾರ್ಮಿಕ ಆಚರಣೆಯನ್ನು ಗೌರವಿಸಬೇಕಾದದ್ದು ಮತ್ತು ಅವರ ಧಾರ್ಮಿಕ ಹಕ್ಕುಚ್ಯುತಿ ಆಗದಂತೆ ತಡೆಯುವುದು ಎಲ್ಲಾ ಹಿಂದುಗಳ ಕರ್ತವ್ಯ. ಆದರೆ, ಹಿಜಾಬ್ ವಿಚಾರಕ್ಕೆ ಕರ್ನಾಟಕದಲ್ಲಿ ನಡೆಯುತ್ತಿರುವುದು ತೀರಾ ಕ್ಷುಲ್ಲಕ” ಎಂದು ಮಾಧ್ಯಮಗಳ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಪುರುಷರ ಸಾಕ್ಷರತಾ ಪ್ರಮಾಣಕ್ಕೆ ಹೋಲಿಸಿದರೆ, ಮಹಿಳಾ ಸಾಕ್ಷತರಾ ಪ್ರಮಾಣ ತೀರಾ ಹಿಂದುಳಿದಿದೆ. ಹಿಂದೂ ಮಹಿಳೆಯರ ಸಾಕ್ಷರತಾ ಪ್ರಮಾಣ ಶೇ. 55.97 ರಷ್ಟಾಗಿದ್ದರೆ, ಮುಸ್ಲಿಂ ಮಹಿಳೆಯರ ಸಾಕ್ಷರತಾ ಪ್ರಮಾಣ ಕೇವಲ 51.89 ಮಾತ್ರ. ಹಿಜಾಬ್ ಸುತ್ತಲಿನ ರಾಜಕಾರಣದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಮಸ್ಯೆಯಾಗುತ್ತಿರುವುದು ಶೋಚನೀಯ.


ಇದನ್ನೂ ಓದಿ: Hijab Live | ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿಲ್ಲ ಎಂದು ಕೋರ್ಟ್‌ನಲ್ಲಿ ಸುಳ್ಳು ಹೇಳಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...