Homeಕರ್ನಾಟಕಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರಕ್ಕೆ ಛೀಮಾರಿ

ಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರಕ್ಕೆ ಛೀಮಾರಿ

- Advertisement -
- Advertisement -

ರಾಜ್ಯದಲ್ಲಿ ಆರಂಭವಾದ ಹಿಜಾಬ್ ವಿವಾದ ಕರಾವಳಿಯನ್ನೂ ದಾಟಿ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲೂ ಸದ್ದು ಮಾಡುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮತ್ತು ಯುಎಇ ರಾಜಕುಮಾರಿ ಮೊದಲಾದವರು ಈ ಘಟನೆಯನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ನೆರೆಯ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶದ ಹಲವಾರು ಸುದ್ದಿ ಮಾಧ್ಯಮಗಳು ರಾಜ್ಯದ ಪ್ರಕರಣವನ್ನು ಮತ್ತು ಇದರ ಬೆನ್ನಿಗೆ ಶಾಲಾ ಕಾಲೇಜಿನಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಹಿಜಾಬ್ ನಿಷೇಧಿಸಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿವೆ.

ತಮಿಳುನಾಡಿನ ಅರನ್ ಸೈ, ಸವುಕ್ಕು ಶಂಕರ್, ರೆಡ್ಪಿಕ್ಸ್, ತಮಿಳ್ ಪೊಕ್ಕಿಶಮ್, ಕೇರಳದ ನ್ಯೂಸ್ ಇಂಡಿಯಾ ಮಲಯಾಳಂ, ಮೀಡಿಯಾ ಒನ್ ಟಿವಿ, ಆಂಧ್ರಪ್ರದೇಶದ 10ಟಿವಿ ನ್ಯೂಸ್ ತೆಲುಗು, ಎಚ್‌ಎಂಟಿವಿ ತೆಲುಗು ನ್ಯೂಸ್ ಚಾನೆಲ್‌ಗಳು (ಡಿಜಿಟಲ್-ಯೂಟ್ಯೂಬ್ ಮೀಡಿಯಾಗಳೂ ಸೇರಿ) ಸೇರಿದಂತೆ ದಕ್ಷಿಣ ರಾಜ್ಯಗಳ ಹಲವು ಮಾಧ್ಯಮಗಳು ಕರ್ನಾಟಕದ ಈ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ವಿಷಾದ ಪಡಿಸಿವೆ.

ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಸರಿಯೇ..? ಎಂಬ ಕಾರ್ಯಕ್ರಮ ಮೂಲಕ ತಮ್ಮ ಅಭಿಪ್ರಾಯವನ್ನು ಮುಂದಿಟ್ಟಿರುವ ’ಅರನ್‌ ಸೈ’ ಎಂಬ ತಮಿಳು ಸುದ್ದಿ ಮಾಧ್ಯಮ, “ಸಂವಿಧಾನ ಕಲಂ 14 ಮತ್ತು 25ರ ಅಡಿಯಲ್ಲಿ ಪ್ರತಿಯೊಬ್ಬ ಭಾರತೀಯನಿಗೂ ತನ್ನ ಧರ್ಮವನ್ನು ಅನುಸರಿಸುವ ಮತ್ತು ಆಚರಿಸುವ ಹಕ್ಕು ನೀಡಲಾಗಿದೆ. ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸುವುದು ಅಥವಾ ಧರಿಸದೆ ಇರುವುದು ಸೇರಿದಂತೆ ಎಲ್ಲಾ ಧರ್ಮಗಳ ಖಾಸಗಿ ಆಚರಣೆಗಳು ಈ ಹಕ್ಕಿನ ಅಡಿಯಲ್ಲೇ ಬರುತ್ತದೆ ಮತ್ತು ಅದು ಅವರಿಗೆ ಬಿಟ್ಟ ವಿಚಾರ” ಎಂದು ಹೇಳಿದೆ.

ಇದನ್ನೂ ಓದಿ: ‘ರಾಜ್ಯವು ನಿಯಂತ್ರಣದಲ್ಲಿದೆ’: ‘ಹಿಜಾಬ್‌‌’ ವಿಚಾರಣೆಯ ಸಮಯ ನ್ಯಾಯಾಲಯಕ್ಕೆ ತಿಳಿಸಿದ ರಾಜ್ಯ ಸರ್ಕಾರ!

“ಈ ವಿಚಾರದಲ್ಲಿ ಅನ್ಯ ಕೋಮಿನವರ ಹಸ್ತಕ್ಷೇಪಕ್ಕೆ ಅವಕಾಶ ಇಲ್ಲ. ಆದರೆ, ಕರ್ನಾಟಕದಲ್ಲಿ ನಡೆಯುತ್ತಿರುವುದು ಏನು? ಹಿಜಾಬ್‌ಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಶುದ್ಧ ಕೋಮುವಾದವಲ್ಲವೇ? ದ್ವೇಷ ರಾಜಕಾರಣವಲ್ಲವೇ? ವಿದ್ಯಾರ್ಥಿಗಳ ಎದೆಗೆ ನಂಜು ಬಿತ್ತುವ ಕೆಲಸವಲ್ಲವೇ? ಇದೇ ಶಾಲೆಗಳಲ್ಲಿ ಸರಸ್ವತಿ ಪೋಟೋ ಪ್ರತಿಮೆ ಇಡುವುದನ್ನು ಸರಸ್ವತಿ-ಗಣಪತಿ ಪೂಜೆಯನ್ನು ಇಷ್ಟು ವರ್ಷಗಳ ಕಾಲ ಮುಸ್ಲಿಂ ವಿದ್ಯಾರ್ಥಿಗಳು ಪ್ರಶ್ನೆ ಮಾಡಿರಲಿಲ್ಲ. ಅಣ್ಣ ತಮ್ಮಂದಿರಂತೆ ಸ್ನೇಹಿತರಂತೆ ಇದ್ದವರ ನಡುವೆ ಧರ್ಮದ ಕಾರಣಕ್ಕೆ ಬಿರುಕು ಮೂಡುವಂತೆ ಮಾಡಿರುವುದು ಸರಿಯೇ?” ಎಂದು ’ಅರನ್‌ ಸೈ’ ಪ್ರಶ್ನಿಸಿದೆ.

ಮತ್ತೊಂದು ಚಾನೆಲ್ ಆದ ‘ತಮಿಳ್ ಪೊಕ್ಕಿಶಂ’, “ಕರ್ನಾಟಕದಲ್ಲಿ ಮತಾಂಧ ರಾಜಕಾರಣ ಹೊಸದೇನಲ್ಲ. ಮತೀಯತೆ ಮುಂದಿಟ್ಟು ರಾಜಕಾರಣ ಮಾಡುವ ದೊಡ್ಡ ಪರಂಪರೆಯೇ ಕರ್ನಾಟಕಕ್ಕೆ ಇದೆ. ಇನ್ನೂ ಈ ಹಿಂದೆ 2009 ರಲ್ಲಿ ಬಂಟ್ವಾಳದ ಎಸ್ವಿಎಸ್ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿರುದ್ಧ ಅಲ್ಲಿನ ಬಲಪಂಥೀಯ ಸಂಘಟನೆಗಳು ಹೋರಾಟ ನಡೆಸಿದ್ದವು, 2016 ರಲ್ಲಿ ಬಳ್ಳಾರಿಯ ಶಿವರಾಮ ಕಾರಂತ ಮತ್ತು ಶ್ರೀನಿವಾಸ ಎಂಬ ಸರ್ಕಾರಿ ಕಾಲೇಜುಗಳಲ್ಲೂ ಹಿಜಾಬ್ ವಿರುದ್ಧ ಹೋರಾಟ ನಡೆಸಲಾಗಿತ್ತು. ಆದರೆ, ಈ ಹೋರಾಟಗಳು ಯಶಸ್ವಿಯಾಗಿರಲಿಲ್ಲ. ಆದರೆ, ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರಾಗುತ್ತಿದ್ದಂತೆ ಇಂತಹ ಹೋರಾಟಗಳು ಮತ್ತೆ ತಲೆ ಎತ್ತುತ್ತಿರುವುದು ವಿಪರ್ಯಾಸ” ಎಂದು ಅಭಿಪ್ರಾಯಪಟ್ಟಿದೆ.

ಸ್ವತಃ ತಮಿಳುನಾಡು ಆರ್‌ಎಸ್‌ಎಸ್ ಮುಖಂಡ ರಾಮಸುಬ್ರಮಣ್ಯಂ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದು, “ಅನ್ಯ ಕೋಮಿನ ಖಾಸಗಿ ಧಾರ್ಮಿಕ ಆಚರಣೆಯನ್ನು ಗೌರವಿಸಬೇಕಾದದ್ದು ಮತ್ತು ಅವರ ಧಾರ್ಮಿಕ ಹಕ್ಕುಚ್ಯುತಿ ಆಗದಂತೆ ತಡೆಯುವುದು ಎಲ್ಲಾ ಹಿಂದುಗಳ ಕರ್ತವ್ಯ. ಆದರೆ, ಹಿಜಾಬ್ ವಿಚಾರಕ್ಕೆ ಕರ್ನಾಟಕದಲ್ಲಿ ನಡೆಯುತ್ತಿರುವುದು ತೀರಾ ಕ್ಷುಲ್ಲಕ” ಎಂದು ಮಾಧ್ಯಮಗಳ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಪುರುಷರ ಸಾಕ್ಷರತಾ ಪ್ರಮಾಣಕ್ಕೆ ಹೋಲಿಸಿದರೆ, ಮಹಿಳಾ ಸಾಕ್ಷತರಾ ಪ್ರಮಾಣ ತೀರಾ ಹಿಂದುಳಿದಿದೆ. ಹಿಂದೂ ಮಹಿಳೆಯರ ಸಾಕ್ಷರತಾ ಪ್ರಮಾಣ ಶೇ. 55.97 ರಷ್ಟಾಗಿದ್ದರೆ, ಮುಸ್ಲಿಂ ಮಹಿಳೆಯರ ಸಾಕ್ಷರತಾ ಪ್ರಮಾಣ ಕೇವಲ 51.89 ಮಾತ್ರ. ಹಿಜಾಬ್ ಸುತ್ತಲಿನ ರಾಜಕಾರಣದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಮಸ್ಯೆಯಾಗುತ್ತಿರುವುದು ಶೋಚನೀಯ.


ಇದನ್ನೂ ಓದಿ: Hijab Live | ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿಲ್ಲ ಎಂದು ಕೋರ್ಟ್‌ನಲ್ಲಿ ಸುಳ್ಳು ಹೇಳಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...