Homeಕರ್ನಾಟಕಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರಕ್ಕೆ ಛೀಮಾರಿ

ಹಿಜಾಬ್ ವಿವಾದ: ತಮಿಳುನಾಡು, ಕೇರಳ, ಆಂಧ್ರದ ಮಾಧ್ಯಮಗಳಲ್ಲಿ ರಾಜ್ಯ ಸರ್ಕಾರಕ್ಕೆ ಛೀಮಾರಿ

- Advertisement -
- Advertisement -

ರಾಜ್ಯದಲ್ಲಿ ಆರಂಭವಾದ ಹಿಜಾಬ್ ವಿವಾದ ಕರಾವಳಿಯನ್ನೂ ದಾಟಿ ರಾಷ್ಟ್ರ-ಅಂತಾರಾಷ್ಟ್ರೀಯ ಮಟ್ಟದಲ್ಲೂ ಸದ್ದು ಮಾಡುತ್ತಿದೆ. ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ, ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಮತ್ತು ಯುಎಇ ರಾಜಕುಮಾರಿ ಮೊದಲಾದವರು ಈ ಘಟನೆಯನ್ನು ಖಂಡಿಸಿ ಹೇಳಿಕೆ ನೀಡಿದ್ದಾರೆ. ಈ ಎಲ್ಲಾ ಬೆಳವಣಿಗೆಗಳ ನಡುವೆ ನೆರೆಯ ತಮಿಳುನಾಡು, ಕೇರಳ ಮತ್ತು ಆಂಧ್ರಪ್ರದೇಶದ ಹಲವಾರು ಸುದ್ದಿ ಮಾಧ್ಯಮಗಳು ರಾಜ್ಯದ ಪ್ರಕರಣವನ್ನು ಮತ್ತು ಇದರ ಬೆನ್ನಿಗೆ ಶಾಲಾ ಕಾಲೇಜಿನಲ್ಲಿ ಸಮವಸ್ತ್ರವನ್ನು ಕಡ್ಡಾಯಗೊಳಿಸಿ ಹಿಜಾಬ್ ನಿಷೇಧಿಸಿರುವ ರಾಜ್ಯ ಸರ್ಕಾರದ ನಡೆಯನ್ನು ಖಂಡಿಸಿವೆ.

ತಮಿಳುನಾಡಿನ ಅರನ್ ಸೈ, ಸವುಕ್ಕು ಶಂಕರ್, ರೆಡ್ಪಿಕ್ಸ್, ತಮಿಳ್ ಪೊಕ್ಕಿಶಮ್, ಕೇರಳದ ನ್ಯೂಸ್ ಇಂಡಿಯಾ ಮಲಯಾಳಂ, ಮೀಡಿಯಾ ಒನ್ ಟಿವಿ, ಆಂಧ್ರಪ್ರದೇಶದ 10ಟಿವಿ ನ್ಯೂಸ್ ತೆಲುಗು, ಎಚ್‌ಎಂಟಿವಿ ತೆಲುಗು ನ್ಯೂಸ್ ಚಾನೆಲ್‌ಗಳು (ಡಿಜಿಟಲ್-ಯೂಟ್ಯೂಬ್ ಮೀಡಿಯಾಗಳೂ ಸೇರಿ) ಸೇರಿದಂತೆ ದಕ್ಷಿಣ ರಾಜ್ಯಗಳ ಹಲವು ಮಾಧ್ಯಮಗಳು ಕರ್ನಾಟಕದ ಈ ಬೆಳವಣಿಗೆ ಪ್ರಜಾಪ್ರಭುತ್ವಕ್ಕೆ ಮಾರಕ ಎಂದು ವಿಷಾದ ಪಡಿಸಿವೆ.

ಕರ್ನಾಟಕದಲ್ಲಿ ಹಿಜಾಬ್ ನಿಷೇಧ ಸರಿಯೇ..? ಎಂಬ ಕಾರ್ಯಕ್ರಮ ಮೂಲಕ ತಮ್ಮ ಅಭಿಪ್ರಾಯವನ್ನು ಮುಂದಿಟ್ಟಿರುವ ’ಅರನ್‌ ಸೈ’ ಎಂಬ ತಮಿಳು ಸುದ್ದಿ ಮಾಧ್ಯಮ, “ಸಂವಿಧಾನ ಕಲಂ 14 ಮತ್ತು 25ರ ಅಡಿಯಲ್ಲಿ ಪ್ರತಿಯೊಬ್ಬ ಭಾರತೀಯನಿಗೂ ತನ್ನ ಧರ್ಮವನ್ನು ಅನುಸರಿಸುವ ಮತ್ತು ಆಚರಿಸುವ ಹಕ್ಕು ನೀಡಲಾಗಿದೆ. ಮುಸ್ಲಿಂ ಹೆಣ್ಣು ಮಕ್ಕಳು ಹಿಜಾಬ್ ಧರಿಸುವುದು ಅಥವಾ ಧರಿಸದೆ ಇರುವುದು ಸೇರಿದಂತೆ ಎಲ್ಲಾ ಧರ್ಮಗಳ ಖಾಸಗಿ ಆಚರಣೆಗಳು ಈ ಹಕ್ಕಿನ ಅಡಿಯಲ್ಲೇ ಬರುತ್ತದೆ ಮತ್ತು ಅದು ಅವರಿಗೆ ಬಿಟ್ಟ ವಿಚಾರ” ಎಂದು ಹೇಳಿದೆ.

ಇದನ್ನೂ ಓದಿ: ‘ರಾಜ್ಯವು ನಿಯಂತ್ರಣದಲ್ಲಿದೆ’: ‘ಹಿಜಾಬ್‌‌’ ವಿಚಾರಣೆಯ ಸಮಯ ನ್ಯಾಯಾಲಯಕ್ಕೆ ತಿಳಿಸಿದ ರಾಜ್ಯ ಸರ್ಕಾರ!

“ಈ ವಿಚಾರದಲ್ಲಿ ಅನ್ಯ ಕೋಮಿನವರ ಹಸ್ತಕ್ಷೇಪಕ್ಕೆ ಅವಕಾಶ ಇಲ್ಲ. ಆದರೆ, ಕರ್ನಾಟಕದಲ್ಲಿ ನಡೆಯುತ್ತಿರುವುದು ಏನು? ಹಿಜಾಬ್‌ಗೆ ವಿರೋಧ ವ್ಯಕ್ತಪಡಿಸುತ್ತಿರುವುದು ಶುದ್ಧ ಕೋಮುವಾದವಲ್ಲವೇ? ದ್ವೇಷ ರಾಜಕಾರಣವಲ್ಲವೇ? ವಿದ್ಯಾರ್ಥಿಗಳ ಎದೆಗೆ ನಂಜು ಬಿತ್ತುವ ಕೆಲಸವಲ್ಲವೇ? ಇದೇ ಶಾಲೆಗಳಲ್ಲಿ ಸರಸ್ವತಿ ಪೋಟೋ ಪ್ರತಿಮೆ ಇಡುವುದನ್ನು ಸರಸ್ವತಿ-ಗಣಪತಿ ಪೂಜೆಯನ್ನು ಇಷ್ಟು ವರ್ಷಗಳ ಕಾಲ ಮುಸ್ಲಿಂ ವಿದ್ಯಾರ್ಥಿಗಳು ಪ್ರಶ್ನೆ ಮಾಡಿರಲಿಲ್ಲ. ಅಣ್ಣ ತಮ್ಮಂದಿರಂತೆ ಸ್ನೇಹಿತರಂತೆ ಇದ್ದವರ ನಡುವೆ ಧರ್ಮದ ಕಾರಣಕ್ಕೆ ಬಿರುಕು ಮೂಡುವಂತೆ ಮಾಡಿರುವುದು ಸರಿಯೇ?” ಎಂದು ’ಅರನ್‌ ಸೈ’ ಪ್ರಶ್ನಿಸಿದೆ.

ಮತ್ತೊಂದು ಚಾನೆಲ್ ಆದ ‘ತಮಿಳ್ ಪೊಕ್ಕಿಶಂ’, “ಕರ್ನಾಟಕದಲ್ಲಿ ಮತಾಂಧ ರಾಜಕಾರಣ ಹೊಸದೇನಲ್ಲ. ಮತೀಯತೆ ಮುಂದಿಟ್ಟು ರಾಜಕಾರಣ ಮಾಡುವ ದೊಡ್ಡ ಪರಂಪರೆಯೇ ಕರ್ನಾಟಕಕ್ಕೆ ಇದೆ. ಇನ್ನೂ ಈ ಹಿಂದೆ 2009 ರಲ್ಲಿ ಬಂಟ್ವಾಳದ ಎಸ್ವಿಎಸ್ ಪದವಿಪೂರ್ವ ಕಾಲೇಜಿನಲ್ಲಿ ಹಿಜಾಬ್ ವಿರುದ್ಧ ಅಲ್ಲಿನ ಬಲಪಂಥೀಯ ಸಂಘಟನೆಗಳು ಹೋರಾಟ ನಡೆಸಿದ್ದವು, 2016 ರಲ್ಲಿ ಬಳ್ಳಾರಿಯ ಶಿವರಾಮ ಕಾರಂತ ಮತ್ತು ಶ್ರೀನಿವಾಸ ಎಂಬ ಸರ್ಕಾರಿ ಕಾಲೇಜುಗಳಲ್ಲೂ ಹಿಜಾಬ್ ವಿರುದ್ಧ ಹೋರಾಟ ನಡೆಸಲಾಗಿತ್ತು. ಆದರೆ, ಈ ಹೋರಾಟಗಳು ಯಶಸ್ವಿಯಾಗಿರಲಿಲ್ಲ. ಆದರೆ, ಕರ್ನಾಟಕ ವಿಧಾನಸಭೆ ಚುನಾವಣೆ ಹತ್ತಿರಾಗುತ್ತಿದ್ದಂತೆ ಇಂತಹ ಹೋರಾಟಗಳು ಮತ್ತೆ ತಲೆ ಎತ್ತುತ್ತಿರುವುದು ವಿಪರ್ಯಾಸ” ಎಂದು ಅಭಿಪ್ರಾಯಪಟ್ಟಿದೆ.

ಸ್ವತಃ ತಮಿಳುನಾಡು ಆರ್‌ಎಸ್‌ಎಸ್ ಮುಖಂಡ ರಾಮಸುಬ್ರಮಣ್ಯಂ ಸುದ್ದಿವಾಹಿನಿಯೊಂದಕ್ಕೆ ಸಂದರ್ಶನ ನೀಡಿದ್ದು, “ಅನ್ಯ ಕೋಮಿನ ಖಾಸಗಿ ಧಾರ್ಮಿಕ ಆಚರಣೆಯನ್ನು ಗೌರವಿಸಬೇಕಾದದ್ದು ಮತ್ತು ಅವರ ಧಾರ್ಮಿಕ ಹಕ್ಕುಚ್ಯುತಿ ಆಗದಂತೆ ತಡೆಯುವುದು ಎಲ್ಲಾ ಹಿಂದುಗಳ ಕರ್ತವ್ಯ. ಆದರೆ, ಹಿಜಾಬ್ ವಿಚಾರಕ್ಕೆ ಕರ್ನಾಟಕದಲ್ಲಿ ನಡೆಯುತ್ತಿರುವುದು ತೀರಾ ಕ್ಷುಲ್ಲಕ” ಎಂದು ಮಾಧ್ಯಮಗಳ ಮುಂದೆ ಅಸಮಾಧಾನ ವ್ಯಕ್ತಪಡಿಸಿದ್ದಾರೆ.

ದೇಶದಲ್ಲಿ ಪುರುಷರ ಸಾಕ್ಷರತಾ ಪ್ರಮಾಣಕ್ಕೆ ಹೋಲಿಸಿದರೆ, ಮಹಿಳಾ ಸಾಕ್ಷತರಾ ಪ್ರಮಾಣ ತೀರಾ ಹಿಂದುಳಿದಿದೆ. ಹಿಂದೂ ಮಹಿಳೆಯರ ಸಾಕ್ಷರತಾ ಪ್ರಮಾಣ ಶೇ. 55.97 ರಷ್ಟಾಗಿದ್ದರೆ, ಮುಸ್ಲಿಂ ಮಹಿಳೆಯರ ಸಾಕ್ಷರತಾ ಪ್ರಮಾಣ ಕೇವಲ 51.89 ಮಾತ್ರ. ಹಿಜಾಬ್ ಸುತ್ತಲಿನ ರಾಜಕಾರಣದಲ್ಲಿ ಹೆಣ್ಣು ಮಕ್ಕಳ ಶಿಕ್ಷಣಕ್ಕೆ ಸಮಸ್ಯೆಯಾಗುತ್ತಿರುವುದು ಶೋಚನೀಯ.


ಇದನ್ನೂ ಓದಿ: Hijab Live | ವಿದ್ಯಾರ್ಥಿನಿಯರನ್ನು ಪ್ರತ್ಯೇಕ ಕೊಠಡಿಯಲ್ಲಿ ಕೂರಿಸಿಲ್ಲ ಎಂದು ಕೋರ್ಟ್‌ನಲ್ಲಿ ಸುಳ್ಳು ಹೇಳಿದ ರಾಜ್ಯ ಸರ್ಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...